ಪುತ್ತೂರಿನಲ್ಲಿ ಕನ್ನಡಭವನ ನಿರ್ಮಾಣ- ಶಾಸಕ ಅಶೋಕ್ ರೈ ಭರವಸೆ | ಕನ್ನಡ ಮಾಧ್ಯಮದಲ್ಲಿ 100 ಅಂಕ ಪಡೆದ ಕನ್ನಡ ಪ್ರತಿಭೆಗಳನ್ನು ಗೌರವಿಸುವ ವಿನೂತನ ಕಾರ್ಯಕ್ರಮ

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ವತಿಯಿಂದ 2022-23 ನೇ ಸಾಲಿನ 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ 100 ಅಂಕ ಪಡೆದ ಕನ್ನಡ ಪ್ರತಿಭೆಗಳನ್ನು ಗೌರವಿಸುವ ವಿನೂತನ ಕಾರ್ಯಕ್ರಮ ಶನಿವಾರ ಪುತ್ತೂರು ಕೋ-ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಕನ್ನಡನಾಡಿನಲ್ಲಿ ಕನ್ನಡಕ್ಕಾಗಿ ಕೆಲಸ ಮಾಡಿ ಕನ್ನಡಕ್ಕೆ ತಮ್ಮದೇ ರೀತಿಯ ಕೊಡುಗೆಯನ್ನು ನೀಡಿದವರನ್ನು ಗೌರವಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಕನ್ನಡ ಮಾಧ್ಯಮದಲ್ಲಿ ಹೆಚ್ಚು […]

ಪುತ್ತೂರಿನಲ್ಲಿ ಕನ್ನಡಭವನ ನಿರ್ಮಾಣ- ಶಾಸಕ ಅಶೋಕ್ ರೈ ಭರವಸೆ | ಕನ್ನಡ ಮಾಧ್ಯಮದಲ್ಲಿ 100 ಅಂಕ ಪಡೆದ ಕನ್ನಡ ಪ್ರತಿಭೆಗಳನ್ನು ಗೌರವಿಸುವ ವಿನೂತನ ಕಾರ್ಯಕ್ರಮ Read More »

ಶಾಖಾ ಪ್ರಬಂಧಕರು, ಸಿಬ್ಬಂದಿ ವರ್ಗದವರ ಪ್ರಾಮಾಣಿಕ ಮತ್ತು ಅವಿರತ ಪರಿಶ್ರಮದಿಂದ ಸಂಘ ಬೆಳೆದು ಬಂದಿದೆ : ಚಿದಾನಂದ ಬೈಲಾಡಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ಸಂಘದ ಸದಸ್ಯರಿಗೆ ಶೇ.13 ಡಿವಿಡೆಂಡ್

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದ.ಕ. ಜಿಲ್ಲೆಗೆ ಪುತ್ತೂರು ತಾಲೂಕು ಕೇಂದ್ರ ಸ್ಥಾನವಾಗಿದ್ದು, ಮೊಳಹಳ್ಳಿ ಶಿವರಾಯರಂತಹ ಹಿರಿಯ ಸಹಕಾರಿ. ದುರೀಣರ ದೂರದೃಷ್ಟಿಯಿಂದ ಮತ್ತೂರಿನಲ್ಲಿ ಇವತ್ತು ಸಾಕಷ್ಟು ಸಹಕಾರ ಸಂಸ್ಥೆಗಳು ಬೆಳೆದು ನಿಂತಿದೆ ಈ ಹಿನ್ನಲೆಯಲ್ಲಿ ಹೆಚ್ಚು ಜನಸಂಖ್ಯೆಯುಳ್ಳ ಗೌಡ ಸಮುದಾಯದ ಸಂಘಟನೆಯು ಹಲವಾರು ದಶಕದ ಹಿಂದೆಯೇ ಪ್ರಾರಂಭಗೊಂಡಿದ್ದು, ಡಿ.ವಿ

ಶಾಖಾ ಪ್ರಬಂಧಕರು, ಸಿಬ್ಬಂದಿ ವರ್ಗದವರ ಪ್ರಾಮಾಣಿಕ ಮತ್ತು ಅವಿರತ ಪರಿಶ್ರಮದಿಂದ ಸಂಘ ಬೆಳೆದು ಬಂದಿದೆ : ಚಿದಾನಂದ ಬೈಲಾಡಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ಸಂಘದ ಸದಸ್ಯರಿಗೆ ಶೇ.13 ಡಿವಿಡೆಂಡ್ Read More »

ಸರಕಾರದ ಗ್ಯಾರಂಟಿ ಯೋಜನೆಗಳನ್ನು ಮತವಾಗಿ ಪರಿವರ್ತಿಸಿ: ಶಾಸಕ ಅಶೋಕ್ ರೈ  | ವಿಟ್ಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ವಿಟ್ಲ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನ ನೆಮ್ಮದಿಯಲ್ಲಿದ್ದಾರೆ, ಸರಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ದೊರೆಯುತ್ತಿದೆ, ಈ ಯೋಜನೆಗಳು ಜನರಿಗೆ ಪ್ರಯೋಜನವಾಗಿದ್ದು ಜನ ಸರಕರದ ಯೋಜನೆಗೆ ಬೆಂಬಲ ನೀಡುತ್ತಿದ್ದಾರೆ, ಕಾರ್ಯಕರ್ತರು ಪ್ರತೀ ಮನೆಗೆ ತೆರಳಿ ಕಾಂಗ್ರೆಸ್ ಸಾಧನೆಯನ್ನು ತಿಳಿಸಿ ಅದನ್ನು ಮತವಾಗಿ ಪರಿವರ್ತನೆ ಮಾಡಬೇಕಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಬೆಲೆ

ಸರಕಾರದ ಗ್ಯಾರಂಟಿ ಯೋಜನೆಗಳನ್ನು ಮತವಾಗಿ ಪರಿವರ್ತಿಸಿ: ಶಾಸಕ ಅಶೋಕ್ ರೈ  | ವಿಟ್ಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ Read More »

ಆ.2 : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸೌಜನ್ಯ ನ್ಯಾಯಕ್ಕಾಗಿ ಹಕ್ಕೊತ್ತಾಯ | ಕಾಲ್ನಡಿಗೆ ಜಾಥಾ

ಕಡಬ : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸೌಜನ್ಯ ನ್ಯಾಯಕ್ಕಾಗಿ ಹಕ್ಕೊತ್ತಾಯ ಕಾಲ್ನಡಿಗೆ ಜಾಥಾ ಆ.2 ರಂದು ಕಡಬದಲ್ಲಿ ನಡೆಯಲಿದೆ. ಶನಿವಾರ ಕಡಬ ತಾಲೂಕು ಒಕ್ಕಲಿಗ ಗೌಡ ಸಂಘದ ವತಿಯಿಂದ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯಿಸಲಾಯಿತು. ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆ.2 : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸೌಜನ್ಯ ನ್ಯಾಯಕ್ಕಾಗಿ ಹಕ್ಕೊತ್ತಾಯ | ಕಾಲ್ನಡಿಗೆ ಜಾಥಾ Read More »

ದರ್ಬೆ ಪ್ರಶಾಂತ್ ಮಹಲ್‍ ನಲ್ಲಿ ಮೇಳೈಸಿದ “ಆಟಿಡೊಂಜಿ ದಿನ” | ಜನಮನ ಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು, 49 ಬಗೆಯ ಖಾದ್ಯಗಳು

ಪುತ್ತೂರು: ಸವಣೂರು ಸೀತಾರಾಮ ರೈ ಅವರ ಮುಂದಾಳುತ್ವದಲ್ಲಿ ತುಳು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೊಳಗೊಂಡ “ಆಟಿಡೊಂಜಿ ದಿನ” ಕಾರ್ಯಕ್ರಮ ಶನಿವಾರ ದರ್ಬೆ ಪ್ರಶಾಂತ್ ಮಹಲ್‍ ನ ಸನ್ನಿಧಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಆಟಿದ ಅಟಿಲ್ ನಲ್ಲಿ 49 ಬಗೆಯ ಖಾದ್ಯಗಳು ನೆರೆದಿದ್ದವರ ಬಾಯಿ ಚಪ್ಪರಿಸುವಂತೆ ಮಾಡಿತು. ಕಾರ್ಯಕ್ರಮದ ಆರಂಭದಲ್ಲಿ ಹಿರಿಯರ ಆಟಿ ತಿಂಗಳ ಸುಂದರ ಆಟವಾಗಿರುವ “ಚೆನ್ನಮಣೆ” ಆಟವನ್ನು ಮಹಿಳೆಯರು ಹಾಗೂ ಪುರುಷರು ಆಟವಾಡುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಕಳೆಯನ್ನು ಒದಗಿಸಲಾಯಿತು. ಪುರುಷರಕಟ್ಟೆ, ಗುರುಕುಲ ಕಲಾ ಕೇಂದ್ರದ ಮಕ್ಕಳಿಂದ

ದರ್ಬೆ ಪ್ರಶಾಂತ್ ಮಹಲ್‍ ನಲ್ಲಿ ಮೇಳೈಸಿದ “ಆಟಿಡೊಂಜಿ ದಿನ” | ಜನಮನ ಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು, 49 ಬಗೆಯ ಖಾದ್ಯಗಳು Read More »

ಸೌಜನ್ಯ ಕೊಲೆ ಪ್ರಕರಣ | ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗ ಯುವ ಗೌಡ ಸಂಘದ ವತಿಯಿಂದ ಆ.1 ರಂದು ಸುಳ್ಯದಲ್ಲಿ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಕೆಗೆ ನಿರ್ಧಾರ

ಸುಳ್ಯ: ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರು ತನಿಖೆಗೆ ಒಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸಲು ಸುಳ್ಯದ ಗೌಡರ ಯುವ ಸೇವಾ ಸಂಘ ಒತ್ತಾಯಿಸಿದ್ದು, ಆ.1ರಂದು ಸುಳ್ಯದಲ್ಲಿ ವಾಹನ ಜಾಥಾ ನಡೆಸಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರರ ಮೂಲಕ ಸರಕಾರವನ್ನು ಒತ್ತಾಯಿಸಲು ನಿರ್ಧರಿಸಿದೆ. ಶನಿವಾರ ಸುಳ್ಯ ಪ್ರೆಸ್ರ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಟಾರ್ ಮಾತನಾಡಿ, ಬೆಳ್ತಂಗಡಿ ಸೌಜನ್ಯ ಹತ್ಯೆ ಪ್ರಕರಣ 2011

ಸೌಜನ್ಯ ಕೊಲೆ ಪ್ರಕರಣ | ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗ ಯುವ ಗೌಡ ಸಂಘದ ವತಿಯಿಂದ ಆ.1 ರಂದು ಸುಳ್ಯದಲ್ಲಿ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಕೆಗೆ ನಿರ್ಧಾರ Read More »

ಆಯ್ಕೆ ಅಸಿಂಧು ಕೋರಿ ಅರ್ಜಿ : ಸಿದ್ದರಾಮಯ್ಯಗೆ ಕೋರ್ಟ್ ನೋಟಿಸ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿ ಮತದಾರರಿಗೆ ಆಮಿಷವೊಡ್ಡಿ ಗೆದ್ದಿರುವ ಆರೋಪದಡಿ ವರುಣಾ ಕ್ಷೇತ್ರದ ಶಾಸಕ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ನೀಡಿದೆ. ಸೆಪ್ಟೆಂಬರ್ 1ಕ್ಕೆ ವಿಚಾರಣೆ ಮುಂದೂಡಿ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಆದೇಶ ನೀಡಿದರು. ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123(2) ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್‌ ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ

ಆಯ್ಕೆ ಅಸಿಂಧು ಕೋರಿ ಅರ್ಜಿ : ಸಿದ್ದರಾಮಯ್ಯಗೆ ಕೋರ್ಟ್ ನೋಟಿಸ್ Read More »

ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‍ಇ ಪಠ್ಯಕ್ರಮ : ಪ್ರಧಾನಿ ಮೋದಿ

ನವದೆಹಲಿ: ಮುಂಬರುವ ದಿನಗಳಲ್ಲಿ ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು. ಇದಕ್ಕಾಗಿ 22 ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ನವದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶವನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರ ಇದೆ. ದೇಶವು ಮುಂದುವರಿಯುತ್ತಿರುವ ಗುರಿಯಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಮಾತೃಭಾಷೆಯ ಅಧ್ಯಯನದೊಂದಿಗೆ, ಈಗ

ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‍ಇ ಪಠ್ಯಕ್ರಮ : ಪ್ರಧಾನಿ ಮೋದಿ Read More »

ಮಾಂತೂರು ಅಂಗನವಾಡಿ ಕೇಂದ್ರದ ಹೊರಾಂಗಣ ಉದ್ಘಾಟನೆ

ಸವಣೂರು : ಸವಣೂರು ಗ್ರಾಮ ಪಂಚಾಯಿತಿ ಅನುದಾನದಲ್ಲಿ ನಿರ್ಮಾಣಗೊಂಡ ಮಂತೂರು ಅಂಗನವಾಡಿ ಕೇಂದ್ರದ ಹೊರಂಗಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು ಸವಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜೀವಿ ವಿ ಶೆಟ್ಟಿ ಉದ್ಘಾಟಿಸಿದರು.  ಬಾಲವಿಕಾಸ ಸಮಿತಿ ಅಧ್ಯಕ್ಷೆ ರುಬೀನಾ ಸಭೆಯ ಅಧ್ಯಕ್ಷತೆ ವಹಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ  ಪುಷ್ಪ, ಇಡನ್ ಗ್ಲೋಬ್ಲೆಲ್ ಸ್ಕೂಲ್ ಟ್ರಸ್ಟಿ ಅಬ್ದುಲ್ ಖಾದರ್ ಮಂತೂರು  ,ಅಲ್ನೂರ್ ಮುಸ್ಲಿಂ ಯೂಥ್ ಫೆಡರೇಶನ್ ಅಧ್ಯಕ್ಷ ಝಕರಿಯ ಮಂತೂರು, ಸವಣೂರು ಮೊಗರು ಶಾಲಾ ಮುಖ್ಯ ಶಿಕ್ಷಕಿಜುಸ್ತಿನಾ

ಮಾಂತೂರು ಅಂಗನವಾಡಿ ಕೇಂದ್ರದ ಹೊರಾಂಗಣ ಉದ್ಘಾಟನೆ Read More »

ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ | ನರಿಮೊಗರು ಸಾಂದೀಪನಿ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು:  ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ನಿಖಿತಾ ಎ.ಎಂ. ರಿಧಮಿಕ್ ವಿಭಾಗದಲ್ಲಿ ಪ್ರಥಮ, 7ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯ ದ್ವಿತೀಯ ಸ್ಥಾನ ಪಡೆದು ಆಗಸ್ಟ್ 17 ಹಾಗೂ 18 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ | ನರಿಮೊಗರು ಸಾಂದೀಪನಿ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top