ಕಾರು-ಟಿಪ್ಪರ್ ಲಾರಿ ನಡುವೆ ಅಪಘಾತ | ನಾಲ್ವರಿಗೆ ಗಂಭೀರ ಗಾಯ

ವಿಟ್ಲ: ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿದೆ. ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದಾಗಿ […]

ಕಾರು-ಟಿಪ್ಪರ್ ಲಾರಿ ನಡುವೆ ಅಪಘಾತ | ನಾಲ್ವರಿಗೆ ಗಂಭೀರ ಗಾಯ Read More »

ಮಳೆಯ ಅವಾಂತರ | ರಸ್ತೆಗೆ ಬಿದ್ದ ಮರ ತೆರವು ಮಾಡಿ ಜವಾಬ್ದಾರಿ ಮೆರೆದ ಪತ್ರಕರ್ತರು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯಿಂದ ಯಾವುದೇ ವಾಹನಗಳು ಮುಂದಕ್ಕೆ ಸಾಗುವಂತಿಲ್ಲ. ಕಳೆದ ಎರಡು ದಿನಗಳಿಂದ ಇದೇ ಪರಿಸ್ಥಿತಿ ಇದ್ದು ಈ ರಸ್ತೆಯಲ್ಲಿ ಸಾಗುವವರು ಬಳ್ಪ ಗ್ರಾಮದಿಂದ ಗುತ್ತಿಗಾರು ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಬೇಕಾಗಿದೆ. ಮಳೆಯ ಈ ಅವಾಂತರದ ವರದಿ ಮಾಡಲು ತೆರಳಿದ್ದ ಟಿವಿ ಮಾದ್ಯಮದವರೂ

ಮಳೆಯ ಅವಾಂತರ | ರಸ್ತೆಗೆ ಬಿದ್ದ ಮರ ತೆರವು ಮಾಡಿ ಜವಾಬ್ದಾರಿ ಮೆರೆದ ಪತ್ರಕರ್ತರು Read More »

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ | ಮಾದಕ ವಸ್ತು ಸೇವನೆ ಶಂಕೆ

ಪುತ್ತೂರು: ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಂಪ್ಯ ಪೊಲೀಸರು ವಿಚಾರಿಸಿದಾಗ ಯುವಕ ಗಾಂಜಾ ಸೇವನೆ ಮಾಡಿ ಈ ರೀತಿ ವರ್ತಿಸಿದ್ದಾನೆ ಎಂದು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇರ್ದೆ ಗ್ರಾಮ ತನ್ನೀರ್ ಮಂಜಿಲ್ ನಿವಾಸಿ ಮೊಹಮ್ಮದ್ ತಪ್ಪಿರ್ (21)ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗ್ರಾಮಾಂತರ ಠಾಣಾ ಎಸ್.ಐ ಧನಂಜಯ ಬಿ.ಸಿ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಇರ್ದೆ ಗ್ರಾಮದ ದೂಮಡ್ಕ ಗೋಳಿಪದವು ಸಮೀಪ

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ | ಮಾದಕ ವಸ್ತು ಸೇವನೆ ಶಂಕೆ Read More »

ಹೆಜ್ಜೇನು ಕಡಿದು ವ್ಯಕ್ತಿಯೋರ್ವರು ಮೃತ್ಯು

ಪುತ್ತೂರು: ಪುತ್ತೂರು: ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೆಜ್ಜೇನು(ಪಿಲಿಕುಡೊಲು)ಕಡಿದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಮಾಯಿಲ ಎಂಬವರ ಪುತ್ರ ಗುರುವ (55)  ಮೃತಪಟ್ಟವರು. ಅವರು ಜು.23ರಂದು ಮಧಾಹ್ನ ಕಟ್ಟಿಗೆಗೆಂದು ಮನೆ ಪಕ್ಕದ ಗುಡ್ಡೆಗೆ ಹೋದವರು ಅರ್ಧ ಗಂಟೆ ಬಿಟ್ಟು ಗುಡ್ಡೆಯಿಂದ ಓಡೋಡಿ ಬಂದಾಗ ಅವರ ಮುಖ, ಕುತ್ತಿಗೆ, ಮೈಯೆಲ್ಲಾಯಾವುದೋ ಊದಿಕೊಂಡಿರುವುದು ಕಂಡು ಬಂದಿತ್ತು. ಈ ಕುರಿತು ಅವರ ತಾಯಿ ವಿಚಾರಿಸಿದಾಗ ಹೆಚ್ಚೇನು

ಹೆಜ್ಜೇನು ಕಡಿದು ವ್ಯಕ್ತಿಯೋರ್ವರು ಮೃತ್ಯು Read More »

ಮುಡಿಪಿನಲ್ಲಿ ಬಸ್-ಕಾರು ಅಪಘಾತ

ಮುಡಿಪು : ಮುಡಿಪು ಜಂಕ್ಷನ್ ನಲ್ಲಿ ಸೋಮವಾರ ರಾತ್ರಿ  ಬಸ್‌ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಯಾವುದೇ ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಎನ್‌ ಎಸ್‌ ಟ್ರಾವೆಲ್ಸ್‌ ಎಂಬ ಬಸ್ಸು ಮಂಗಳೂರಿನಿಂದ ಬಿ ಸಿ ರೋಡಿನತ್ತ ಸಂಚರಿಸುತ್ತಿದ್ದಾಗ, ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭದಲ್ಲಿ ಭಾರತಿ ಶಾಲೆ ಕಡೆಯಿಂದ ಬಂದ ಝೆನ್‌ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸೀದಾ ಬಸ್ಸಿನ ಮುಂಭಾಗಕ್ಕೆ ನುಗ್ಗಿದ್ದು, ಕಾರು ಚಾಲಕ ಪಾರಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ

ಮುಡಿಪಿನಲ್ಲಿ ಬಸ್-ಕಾರು ಅಪಘಾತ Read More »

ಭಾರೀ ಮಳೆಗೆ ಕೊಡಗಿನ ಕರ್ತೋಜೆಯಲ್ಲಿ ಭೂಕುಸಿತ | ಸಂಚಾರದಲ್ಲಿ ವ್ಯತ್ಯಯ

ಪುತ್ತೂರು: ಕೊಡಗಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಭೂಕುಸಿತ ಉಂಟಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯಗೊಂಡಿದೆ. ಕೊಡಗಿನ ಮದೆನಾಡು ಸಮೀಪದ ಕರ್ತೋಜೆಯಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತತದಿಂದಾಗಿ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಈ ಪ್ರದೇಶದಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಸೂಚನೆಯಿದ್ದು, ಆತಂಕ ಉಂಟಾಗಿದೆ. ಭಾರೀ ಮಳೆಯನ್ನು ಲೆಕ್ಕಿಸದೆ ಕೊಡಗು ಜಿಲ್ಲಾಡಳಿತ ಜೆಸಿಬಿ, ಹಿಟಾಚಿ ಯಂತ್ರಗಳನ್ನು ಬಳಸಿ ಕಾರ್ಯಾಚರಣೆಗೆ ಇಳಿದಿದ್ದಾರೆ.

ಭಾರೀ ಮಳೆಗೆ ಕೊಡಗಿನ ಕರ್ತೋಜೆಯಲ್ಲಿ ಭೂಕುಸಿತ | ಸಂಚಾರದಲ್ಲಿ ವ್ಯತ್ಯಯ Read More »

ನಾಳೆ (ಜು.26) : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023”

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ಮತ್ತು ಎಂಸಿಎ ವಿಭಾಗ ಹಾಗೂ ವೆಸ್ಟರ್ನ್ ಆಸ್ಟ್ರೇಲಿಯಾ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-೨೦೨೩ ಜು.26 ಬುಧವಾರ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆಯಲಿದೆ. ಪ್ರಪಂಚದಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟುಗೂಡಿಸಿ, ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬಗ್ಗೆ ಬೆಳಕುಚೆಲ್ಲುವ, ಚರ್ಚೆ ಹಾಗೂ ವಿಚಾರ ವಿನಿಮಯವನ್ನು ನಡೆಸುವ ಉದ್ದೇಶದಿಂದ

ನಾಳೆ (ಜು.26) : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023” Read More »

ಭಾರೀ ಮಳೆ ಹಿನ್ನಲೆ | ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಪುತ್ತೂರು, ಸುಳ್ಯ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ. ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂ. 08257-231231 ನಂಬರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ | ಕಡಬ ತಾಲೂಕಿನಲ್ಲಿ ನಾಳೆಯೂ (ಜು.25) ಶಾಲೆಗಳಿಗೆ ರಜೆ ಘೋಷಣೆ

ಪುತ್ತೂರು : ಭಾರೀ ಮಳೆ ಹಿನ್ನಲೆಯಲ್ಲಿ ಜು.25 ರಂದೂ ಕಡಬ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಕಡಬ ತಹಶೀಲ್ದಾರ್ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಜು.24 ರಂದು ರಜೆ ಘೋಷಿಸಲಾಗಿತ್ತು. ಇದೀಗ ಜು.25 ರಂದು ರಜೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಭಾರೀ ಮಳೆ ಹಿನ್ನಲೆ | ಕಡಬ ತಾಲೂಕಿನಲ್ಲಿ ನಾಳೆಯೂ (ಜು.25) ಶಾಲೆಗಳಿಗೆ ರಜೆ ಘೋಷಣೆ Read More »

ಟ್ವಿಟರ್ ನ ಹೊಸ ಲೋಗೋ ಅನಾವರಣ | ಇನ್ನು ಮುಂದೆ ನೀಲಿ ಹಕ್ಕಿ ಬದಲಿಗೆ ಎಕ್ಸ್ ಲಾಂಛನ

ಸ್ಯಾನ್ ಫ್ರಾನ್ಸಿಸ್ಕೋ : ಟ್ವಿಟರ್ ನ ಲೋಗೋ ಅಧಿಕೃತವಾಗಿ ಬದಲಾವಣೆಯಾಗಿದ್ದು, ಐಕಾನಿಕ್ ನೀಲಿ ಬಣ್ಣದ ಹಕ್ಕಿ ಮಾಯವಾಗಿ ಎಕ್ಸ್ ಲೋಗೋ ಕಾಣಿಸಿಕೊಳ್ಳುತ್ತಿದೆ. ಟ್ವಿಟರ್ ನನ್ನು ಖರೀದಿಸಿರುವ ಎಲೋನ್ ಮಸ್ಕ್‍ ಅಪ್ಲಿಕೇಶನ್ ನ್ನು ರೀಬ್ಯಾಂಡ್ ಮಾಡುವ ಉದ್ದೇಶದಿಂದ ಲೋಗೋ ಹಾಗೂ ಹೆಸರನ್ನು ಬದಲಿಸಲು ಮುಂದಾಗಿದ್ದಾರೆ. ಎಲೋನ್ ಮಸ್ಕ್‍ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಟ್ವಿಟರ್ ನ ಪ್ರಧಾನ ಕಚೇರಿಯಲ್ಲಿ ಸೋಮವಾರ ಎಕ್ಸ್ ಬ್ರ್ಯಾಂಡಿಂಗ್ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಮಸ್ಕ್ ಟ್ವಿಟರ್‍ ನ ನೀಲಿ ಹಕ್ಕಿಗೆ ಗುಡ್ ಬೈ ಹೇಳುವ ಕುರಿತು ಟ್ವೀಟ್

ಟ್ವಿಟರ್ ನ ಹೊಸ ಲೋಗೋ ಅನಾವರಣ | ಇನ್ನು ಮುಂದೆ ನೀಲಿ ಹಕ್ಕಿ ಬದಲಿಗೆ ಎಕ್ಸ್ ಲಾಂಛನ Read More »

error: Content is protected !!
Scroll to Top