ಮಿತ್ತೂರು ಬಳಿ ರಸ್ತೆಗೆ ಉರುಳಿದ ಮರ | ಸಂಚಾರದಲ್ಲಿ ವ್ಯತ್ಯಯ

ಪುತ್ತೂರು: ಮಿತ್ತೂರು ಕುಕ್ಕರೆಬೆಟ್ಟು ಬಳಿ ಸೋಮವಾರ ಮಧ್ಯಾಹ್ನ ಭಾರೀ ಮಳೆಗೆ ಮರ ರಸ್ತೆಗೆ ಉರುಳಿ ಬಿದ್ದು ಪುತ್ತೂರು ಮಾಣಿ ನಡುವಣ ವಾಹನ ಸಂಚಾರ ಸ್ಥಗಿತಗೊಂಡಿತು. ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಮರ ಬಿದ್ದ ಪರಿಣಾಮ ಪುತ್ತೂರು ಮಾಣಿ ನಡುವಣ ಓಡಾಟ ನಡೆಸುವವರಿಗೆ ತೊಂದರೆ ಉಂಟಾಯಿತು. ವಾಹನಗಳು ಮುರ ಮತ್ತು ಇತರೆ ಮಾರ್ಗಗಳ ಮೂಲಕ ಸಂಚರಿಸಿತು.

ಮಿತ್ತೂರು ಬಳಿ ರಸ್ತೆಗೆ ಉರುಳಿದ ಮರ | ಸಂಚಾರದಲ್ಲಿ ವ್ಯತ್ಯಯ Read More »

ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಬಂದಿದ್ದ ವ್ಯಕ್ತಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು ನೀರುಪಾಲು |ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ | ನೀರಿಗೆ ಬಿದ್ದ ವೀಡಿಯೋ ಇಲ್ಲಿದೆ

ಉಡುಪಿ : ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಕೊಲ್ಲೂರಿಗೆ ಆಗಮಿಸಿದ್ದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿ ನೀರುಪಾಲಾಗಿರುವ ಘಟನೆ ಭಾನುವಾರ ಮಧ್ಯಾಹ್ನ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಕೆ.ಎಚ್. ನಗರದ ಸುಣ್ಣದಹಳ್ಳಿ ನಿವಾಸಿ ಶರತ್ ಕುಮಾರ್ (23) ನೀರುಪಾಲಾದ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ತನ್ನ ಸ್ನೇಹಿತರೊಂದಿಗೆ ಕೊಲ್ಲೂರಿಗೆ ಕಾರಿನಲ್ಲಿ ಕೊಲ್ಲೂರಿಗೆ ಆಗಮಿಸಿದ್ದರು. ಈ ವೇಳೆ ಶರತ್ ತನ್ನ ಸ್ನೇಹಿತರ ಜತೆಗೂಡಿ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದ ವೀಕ್ಷಣೆಗೆ ತೆರಳಿದ್ದರು. ಶರತ್ ಜಲಪಾತದ ಬಳಿಯಲ್ಲಿದ್ದ ಬಂಡೆ ಹತ್ತಿ‌ ನಿಂತಿದ್ದು,

ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಬಂದಿದ್ದ ವ್ಯಕ್ತಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು ನೀರುಪಾಲು |ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ | ನೀರಿಗೆ ಬಿದ್ದ ವೀಡಿಯೋ ಇಲ್ಲಿದೆ Read More »

ಚಾರ್ಮಾಡಿ ಘಾಟಿ ಬಿದಿರುತಳ ಸಮೀಪ ಗುಡ್ಡ ಕುಸಿತ | ವಾಹನ ಸಂಚಾರಕ್ಕೆ ಸಮಸ್ಯೆ

ಚಾರ್ಮಾಡಿ : ಸುರಿಯುತ್ತಿರುವ ಭಾರೀ ಮಳೆಗೆ ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವಿಭಾಗದ ಬಿದಿರುತಳ ಆಲೇಖಾನ್ ನಡುವಿನ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಗುಡ್ಡದ ಮಣ್ಣು ಕುಸಿತಗೊಂಡು ರಸ್ತೆಗೂ ಬಂದು ಬಿದ್ದು ವಾಹನಗಳು ಸಂಚರಿಸಲು ಅನಾನುಕೂಲವಾಯಿತು. ಇದರಿಂದ ಘಾಟಿ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಮುಂದುವರಿಯಿತು. ಗುಡ್ಡ ಕುಸಿದ್ದ ಉಂಟಾದ ಸ್ಥಳದ ಪಕ್ಕದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಯಾಗುತ್ತಿದ್ದು, ಈ ರಸ್ತೆ ಇಲ್ಲಿ ತೀವ್ರ

ಚಾರ್ಮಾಡಿ ಘಾಟಿ ಬಿದಿರುತಳ ಸಮೀಪ ಗುಡ್ಡ ಕುಸಿತ | ವಾಹನ ಸಂಚಾರಕ್ಕೆ ಸಮಸ್ಯೆ Read More »

ಬಿರುಕುಬಿಟ್ಟ ಅರಿಯಡ್ಕ ಹಿಪ್ರಾ ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ | 100 ವರ್ಷಗಳ ಹಿಂದಿನ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿ

ಪುತ್ತೂರು: ಭಾರೀ ಮಳೆಗೆ ಅರಿಯಡ್ಕ ಸರಕಾರಿ ಹಿ ಪ್ರಾ ಶಾಲಾ ಕಟ್ಟಡದ ಗೋಡೆ ಬಿರುಕುಬಿಟ್ಟಿದ್ದು ಕುಸಿಯುವ ಭೀತಿಯಲ್ಲಿದ್ದು ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ. ಶತಮಾನಗಳ ಇತಿಹಾಸ ಹೊಂದಿರುವ ಅರಿಯಡ್ಕ ಶಾಲೆಯಲ್ಲಿ ಒಂದರಿಂದ ಏನೇ ತರಗತಿ ತನಕ ವಿದ್ಯಾರ್ಥಿಗಳಿದ್ದು ಒಂದೇ ಕಟ್ಟಡದಲ್ಲಿ 2, 3 ನೇ ತರಗತಿ ತನಕ ಕ್ಲಾಸ್‌ಗಳು ನಡೆಯುತ್ತಿದ್ದು ಅದೇ ಕಟ್ಟಡದ ಗೋಡೆ ಬಿರುಕುಬಿಟ್ಟಿದೆ. ಗೋಡೆ ಬಿರುಕುಬಿಟ್ಟಿರುವ ಕಾರಣ ಕಟ್ಟಡದ ಮಾಡು, ಪಕ್ಕಾಸುಗಳು ಕುಸಿತಗೊಂಡಿದ್ದು ಮುರಿದು ಬೀಳುವ ಹಂತದಲ್ಲಿದೆ. ಭಾನುವಾರ ಈ ಘಟನೆ ನಡೆದಿದ್ದು ಇಂದು ತರಗತಿಗೆ

ಬಿರುಕುಬಿಟ್ಟ ಅರಿಯಡ್ಕ ಹಿಪ್ರಾ ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ | 100 ವರ್ಷಗಳ ಹಿಂದಿನ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿ Read More »

ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡದ ಜಿಲ್ಲಾಡಳಿತ | ಅಪಾಯಕಾರಿ ಸ್ಥಿತಿಯಲ್ಲಿ ತೆರಳಬೇಕಾದ ವಿದ್ಯಾರ್ಥಿಗಳು

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿಯ ಹೆದ್ದಾರಿ ಜಲಾವೃತಗೊಂಡಿದ್ದು, ಪರೀಕ್ಷೆಗೆ ಹಾಜರಾದ ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಪರಿಸ್ಥಿತಿಯಲ್ಲಿ ಪರೀಕ್ಷೆಗೆ ಹಾಜರಾಗಬೇಕಾಗಿ ಬಂತು. ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಭಾರೀ ಮಳೆ ಇದ್ದರೂ ಮುಂದೂಡಿಕೆ ಆಗಿರಲಿಲ್ಲ. ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್‍ ಎಸ್‍ ಕಾಲೇಜಿಗೆ ಪರೀಕ್ಷೆ ಕೇಂದ್ರಗಳತ್ತ ಬಂದಿದ್ದಾರೆ. ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಿ ಎಂಬ ಆಗ್ರಹ ವ್ಯಕ್ತವಾಗಿತ್ತು.

ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡದ ಜಿಲ್ಲಾಡಳಿತ | ಅಪಾಯಕಾರಿ ಸ್ಥಿತಿಯಲ್ಲಿ ತೆರಳಬೇಕಾದ ವಿದ್ಯಾರ್ಥಿಗಳು Read More »

ಪುತ್ತೂರಿನಲ್ಲಿ ಮೇಳೈಸಿದ “ತುಳುನಾಡ ಬಂಟೆರೆ ಪರ್ಬ-2023” | ಅನಾವರಣಗೊಂಡ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು

ಪುತ್ತೂರು:.ಯುವ ಬಂಟರು ಸಮಾಜದಲ್ಲಿ ಶಕ್ತಿಯಾಗಿ ಬೆಳೆಯಬೇಕು. ಇದಕ್ಕೆ ಪುತ್ತೂರು ಯುವ ಬಂಟರ ನೇತೃತ್ವದಲ್ಲಿ ಜರಗಿದ ಅದ್ದೂರಿ  ಕಾರ್ಯಕ್ರಮ ಬಂಟೆರೆ ಪರ್ಬ ಮಾದರಿಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಭಾನುವಾರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್‌ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿದ ‘ತುಳುನಾಡ ಬಂಟೆರೆ ಪರ್ಬ-2023 ‘ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಂಟರ ಪರವಾಗಿ ಯಾವುದೇ ಸರಕಾರ ಈತನಕ ಬೆಂಬಲ ನೀಡಿಲ್ಲ.ರಾಜ್ಯದ ಈಗಿನ ಸರಕಾರ

ಪುತ್ತೂರಿನಲ್ಲಿ ಮೇಳೈಸಿದ “ತುಳುನಾಡ ಬಂಟೆರೆ ಪರ್ಬ-2023” | ಅನಾವರಣಗೊಂಡ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು Read More »

ಕಡಬ ಐಐಸಿಟಿ ವಿದ್ಯಾಸಂಸ್ಥೆಯಿಂದ ನರ್ಸರಿ ಶಿಕ್ಷಕಿ ತರಬೇತಿ ಕೋರ್ಸ್‍ಗೆ ಚಾಲನೆ

ಕಡಬ: ಕಳೆದ 9 ವರ್ಷಗಳಿಂದ ಕಡಬದಲ್ಲಿ ಕಡಬದಲ್ಲಿ ವೃತ್ತಿಪರ ಕೋರ್ಸ್ ಗಳನ್ನು ಅಭ್ಯರ್ಥಿಗಳಿಗೆ ನೀಡಿ ಉದ್ಯೋಗದ ದಾರಿಯನ್ನು ಕಲ್ಪಿಸುತ್ತಿರುವ ಐಐಸಿಟಿ (IICT) ವಿದ್ಯಾ ಸಂಸ್ಥೆ ಇದೀಗ ಮತ್ತೊಂದು ತರಬೇತಿ ಕೋರ್ಸ್ ಆರಂಭಿಸಿದೆ. ಕಂಪ್ಯೂಟರ್ ತರಗತಿ, ಟುಟೋರಿಯಲ್, ಟ್ಯೂಷನ್ ಕ್ಲಾಸ್, ನವೋದಯ ತರಬೇತಿ, ಅಬಾಕಸ್  ಶಿಕ್ಷಣ ನೀಡುತ್ತಿದ್ದ ಸಂಸ್ಥೆ ಈಗ ಬಹಳಷ್ಟು ಬೇಡಿಕೆಯನ್ನು ಹೊಂದಿರುವ ನರ್ಸರಿ( ಮೊಂಟೆಸ್ಸರಿ) ಶಿಕ್ಷಕಿ ಕೋರ್ಸ್‌ಅನ್ನು ಆರಂಭಿಸುತ್ತಿದೆ. ಈ ಮೂಲಕ ಕಡಬ ಸೇರಿದಂತೆ ವಿವಿಧ ತಾಲೂಕಿನ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ. ಹೊಸ ಕೋರ್ಸ್

ಕಡಬ ಐಐಸಿಟಿ ವಿದ್ಯಾಸಂಸ್ಥೆಯಿಂದ ನರ್ಸರಿ ಶಿಕ್ಷಕಿ ತರಬೇತಿ ಕೋರ್ಸ್‍ಗೆ ಚಾಲನೆ Read More »

ಕ.ಸಾ.ಪ ಪುತ್ತೂರು ಗ್ರಾಮ ಸಾಹಿತ್ಯ ಸಂಭ್ರಮ -7 |  ಗ್ರಾಮೀಣ ಪ್ರತಿಭೆಗಳಿಗೆ  ವೇದಿಕೆ ನೀಡುವ ದೃಢಸಂಕಲ್ಪ ಪುತ್ತೂರು ಕ.ಸಾ.ಪ ದಿಂದ : ಪ್ರಶಾಂತ್. ಎನ್.

ಪುತ್ತೂರು: ತಾಲೂಕಿನ ಗ್ರಾಮೀಣ ಪ್ರದೇಶದ ಶಾಲಾ ಕಾಲೇಜುಗಳಲ್ಲಿರುವ   ಅನೇಕ ಉದಯೋನ್ಮುಖ ಸಾಹಿತಿಗಳಿಗೆ ಮತ್ತು ಗ್ರಾಮದ ಸಾಹಿತ್ಯ  ಕ್ಷೇತ್ರದ ಸಾಧಕರನ್ನು ಗುರುತಿಸಿ ಸಾಹಿತ್ಯ ವೇದಿಕೆ ನೀಡುವ ನಿಟ್ಟಿನಲ್ಲಿ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮವನ್ನು ಕ ಸಾ ಪ ಪುತ್ತೂರು  ಹಮ್ಮಿಕೊಂಡಿರುವುದು ಶ್ಲಾಘನೀಯ. ಇಂತಹಾ ಸಮಾಜ ಮುಖಿ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಸದಾ ಬೆಂಬಲವಾಗಿ ನಿಲ್ಲುತ್ತದೆ ಎಂದು ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಎನ್ ಹೇಳಿದರು. ನೆಕ್ಕಿಲಾಡಿ ಗ್ರಾಮದ ಸ. ಹಿ. ಪ್ರಾ ಶಾಲೆಯಲ್ಲಿ ಪುತ್ತೂರು

ಕ.ಸಾ.ಪ ಪುತ್ತೂರು ಗ್ರಾಮ ಸಾಹಿತ್ಯ ಸಂಭ್ರಮ -7 |  ಗ್ರಾಮೀಣ ಪ್ರತಿಭೆಗಳಿಗೆ  ವೇದಿಕೆ ನೀಡುವ ದೃಢಸಂಕಲ್ಪ ಪುತ್ತೂರು ಕ.ಸಾ.ಪ ದಿಂದ : ಪ್ರಶಾಂತ್. ಎನ್. Read More »

ಆಯಾ ತಾಲೂಕಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡಿ’ – ತಹಸೀಲ್ದಾರ್‌ಗಳಿಗೆ ಡಿಸಿ ಆದೇಶ

ಪುತ್ತೂರು :  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಪುತ್ತೂರು, ಬಂಟ್ವಾಳ ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾ‌ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿರುವುದಿಲ್ಲ ಎಂದು ಡಿಸಿ ತಿಳಿಸಿದ್ದಾರೆ. ಕಡಬ ತಾಲೂಕಿನಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ

ಆಯಾ ತಾಲೂಕಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡಿ’ – ತಹಸೀಲ್ದಾರ್‌ಗಳಿಗೆ ಡಿಸಿ ಆದೇಶ Read More »

ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಬೈಕ್‍ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ‍ಘಟನೆ ಭಾನುವಾರ ನಡೆದಿದೆ. ಸೇಡಿಯಾಪು ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಮೃತಪಟ್ಟವರು ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top