ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ಕಳವು | ಲಾರಿ ನಿರ್ವಾಹಕ ಪರಾರಿ

ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಣೆಯಲ್ಲಿರುವ ಅಝರ್ ಟ್ರೇಡಿಂಗ್ ಮತ್ತು ಪುತ್ತೂರಿನಲ್ಲಿರುವ ಅಝರ್ ಟ್ರಾನ್ಸ್ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್‌ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ ಲಕ್ಷಾಂತರ ರೂಪಾಯಿ ನಗದು ಕಳವಾಗಿದೆ. ಇದಕ್ಕೆ ಸಂಬಂಧಿಸಿ ಲಾರಿ ನಿರ್ವಾಹಕ ನಾಪತ್ತೆಯಾಗಿದ್ದಾನೆ. ಲಾರಿಯ ಮೂಲಕ ಪುತ್ತೂರಿನಿಂದ ಪೂಣೆಗೆ ಅಡಿಕೆ ಸಾಗಾಟ ಮಾಡಿಸಿ ಜು.18ರಂದು ಲಾರಿ ಹಿಂದಿರುಗುವಾಗ ಪೂಣೆಯ ಅಝರ್ ಟ್ರೇಡಿಂಗ್ ಸಂಸ್ಥೆಯ […]

ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ಕಳವು | ಲಾರಿ ನಿರ್ವಾಹಕ ಪರಾರಿ Read More »

ನರಿಮೊಗರು ಗ್ರಾಪಂಗೆ ಕ್ಯಾರಂ ಬೋರ್ಡ್ ಕೊಡುಗೆ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಕ್ಯಾರಂ ಬೋರ್ಡ್ ಒಂದನ್ನು ಕೊಡುಗೆಯಾಗಿ ನೀಡಲಾಯಿತು. ನರಿಮೊಗ್ರು ಕೈಪಂಗಳ ಬಾರಿಕೆ ಕೋಟಿ ಚೆನ್ನಯ್ಯ ಗೆಳೆಯರ ಬಳಗದ ಮಾಜಿ  ಅಧ್ಯಕ್ಷ, ಭಾರತೀಯ ರೈಲ್ವೆ ಇಲಾಖೆ ಉದ್ಯೋಗಿ ರಾಜೇಶ್ ಗೌಡ ಕೆದ್ಕಾರು ಗ್ರಂಥಾಲಯಕ್ಕೆ ಕ್ಯಾರಂ ಬೋರ್ಡ್ ಕೊಡುಗೆಯಾಗಿ ನೀಡಿದರು. ಈ ಸಂಧರ್ಭದಲ್ಲಿ ನರಿಮೊಗರು ಪಂಚಾಯಿತಿ ಉಪಾಧ್ಯಕ್ಷರಾದ ಸುಧಾಕರ ಕುಲಾಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಯು., ಗ್ರಂಥ ಪಾಲಕ ವರುಣ್ ಕುಮಾರ್ ಎಸ್., ಪಂಚಾಯಿತಿ ಸಿಬ್ಬಂದಿ ಸನತ್ ಕುಮಾರ್ ಉಪಸ್ಥಿತರಿದ್ದರು.

ನರಿಮೊಗರು ಗ್ರಾಪಂಗೆ ಕ್ಯಾರಂ ಬೋರ್ಡ್ ಕೊಡುಗೆ Read More »

ಮಣಿಪುರ ಬೆತ್ತಲೆ ಮೆರವಣಿಗೆ | ಓರ್ವ ಆರೋಪಿ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು

ಹೊಸದಿಲ್ಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತವಾಗಿ ಮೆರವಣಿಗೆ ಮಾಡಿದ ಕರಾಳ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಎಂಬಾತನ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದೆ. ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೊಕ್ಸಿ ಜಿಲ್ಲೆಯಲ್ಲಿ ಮೇ 4ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡ ಮಾಡಲಾಗಿದೆ ಎನ್ನಲಾಗಿದೆ. ಈ ವಿಡಿಯೋ ಈಗ ವೈರಲ್ ಆಗಿ ತೀವ್ರ ಆಕ್ರೋಶಕ್ಕೆ

ಮಣಿಪುರ ಬೆತ್ತಲೆ ಮೆರವಣಿಗೆ | ಓರ್ವ ಆರೋಪಿ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು Read More »

ಆಯುಷ್ ಇಲಾಖೆಯಿಂದ ದ.ಕ.ಜಿಲ್ಲೆಗೆ ಮೂರು ಸಂಚಾರಿ ಕ್ಲಿನಿಕ್

ಪುತ್ತೂರು: ದ.ಕ.ಜಿಲ್ಲಾ ಆಯುಷ್ ಇಲಾಖೆ ಮೂರು ಸಂಚಾರಿ ಕ್ಲಿನಿಕ್‍ ಗಳನ್ನು ಆರಂಭಿಸಲು 2023-24ನೇ ಹಣಕಾಸು ವರ್ಷದಲ್ಲಿ ಸರಕಾರ ಮಂಜೂರು ಮಾಡಿದ್ದು, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕುಗಳ ಒಳಭಾಗಗಳಲ್ಲಿ ಸಂಚರಿಸಲಿದೆ. ಇದರ ಕಾರ್ಯ ಯೋಜನೆಯೊಂದೇ ಬಾಕಿಯಿದ್ದು, ಆಯುಷ್ ಸಂಚಾರಿ ವೈದ್ಯಕೀಯ ಘಟಕದ ವಾಹನಗಳಲ್ಲಿ ವೈದ್ಯರು, ವಿವಿಧೋದ್ದೇಶ ಕಾರ್ಯಕರ್ತೆಯರು ಸಂಚರಿಸಲಿದ್ದಾರೆ. ಕಡಿಮೆ ಸೇವೆಯಲ್ಲಿರುವ ನಿವಾಸಿಗಳ ಹಾಗೂ ಕಾಯ್ದಿರಿಸದ ಮನೆ ಬಾಗಿಲಿಗೆ ಆಯುಷ್ ಆರೋಗ್ಯ ಸೇವೆಯನ್ನು ಒದಗಿಸುವುದು ಸಂಚಾರಿ ವೈದ್ಯಕೀಯ ಘಟಕದ ಉದ್ದೇಶವಾಗಿದೆ. ಸಾಮಾನ್ಯ ಸಾಂಕ್ರಾಮಿಕ ರೋಗಗಳು, ಸಾಂಕ್ರಾಮಿಕವಲ್ಲದ ರೋಗಗಳ

ಆಯುಷ್ ಇಲಾಖೆಯಿಂದ ದ.ಕ.ಜಿಲ್ಲೆಗೆ ಮೂರು ಸಂಚಾರಿ ಕ್ಲಿನಿಕ್ Read More »

ಜು.23 : ಪುತ್ತೂರು ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ

ಪುತ್ತೂರು: ಪುತ್ತೂರು ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಹಾಗೂ ವಾರ್ಷಿಕ ಮಹಾಸಭೆ ಜು.23 ಭಾನುವಾರ ಬೆಳಿಗ್ಗೆ 11 ಕ್ಕೆ ಪುತ್ತೂರು ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಲಾಲ್ ಅವರಿಗೆ

ಜು.23 : ಪುತ್ತೂರು ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ Read More »

ಗ್ರಾಮ ಪಂಚಾಯಿತಿ ಉಪಚುನಾವಣೆ | ಗ್ರಾಪಂ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ

ಮಂಗಳೂರು : ಗ್ರಾಮ ಪಂಚಾಯತ್ ಉಪ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ನಡೆಯುವ ಗ್ರಾಪಂನ 3 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಮುಕ್ತ ದಿನ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು, ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಮಡಂತ್ಯಾರು ಗ್ರಾಪಂಗಳಲ್ಲಿ ಚುನಾವಣೆ/ಉಪಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಜು.21 ರ ಸಂಜೆ 5 ಗಂಟೆಯಿಂದ ಚುನಾವಣೆ ಮುಕ್ತವಾಗುವ ವರೆಗೆ ನಿಷೇಧಿಸಲಾಗಿದೆ. ಎಲ್ಲಾ ವಿವಿಧ ಮದ್ಯದಂಗಡಿ, ಮದ್ಯ ಮಾರಾಟ ಪರವಾನಿಗೆ ಇರುವ ಅಂಗಡಿಗಳನ್ನು ಹಾಗೂ ಮಾರಾಟ

ಗ್ರಾಮ ಪಂಚಾಯಿತಿ ಉಪಚುನಾವಣೆ | ಗ್ರಾಪಂ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ Read More »

ದೃಷ್ಟಿ ವೈಕಲ್ಯ ಮೆಟ್ಟಿ ನಿಂತು ಐಎಎಸ್ ಅಧಿಕಾರಿ ಆದ ಪ್ರಾಂಜಲ್ ಪಾಟೀಲ್ | ಎರಡು ಬಾರಿ ಐಎಎಸ್ ಪರೀಕ್ಷೆಯಲ್ಲಿ ತೇರ್ಗಡೆ

ಭಾರತದ ಅತ್ಯಂತ ಕ್ಲಿಷ್ಟವಾದ ಪರೀಕ್ಷೆ ಅಂದರೆ ಐಎಎಸ್. ಕೇಂದ್ರ ಸರಕಾರದ ಅಧೀನ ಸಂಸ್ಥೆಯಾದ UPSC ನಡೆಸುವ ಈ ಪರೀಕ್ಷೆಯಲ್ಲಿ ಪ್ರತಿ ವರ್ಷ 7ರಿಂದ 8 ಲಕ್ಷ ಯುವಕ-ಯುವತಿಯರು ತಮ್ಮ ಪ್ರತಿಭೆಯನ್ನು ನಿಕಷಕ್ಕೆ ಒಡ್ಡುತ್ತಿದ್ದು, ತೇರ್ಗಡೆ ಆಗುವವರ ಪ್ರಮಾಣ ಶೇ.2-3 ಮಾತ್ರ. ಅಂತಹ ಪರೀಕ್ಷೆಯಲ್ಲಿ ಪೂರ್ಣ ಅಂಧತ್ವ ಇರುವ ಹುಡುಗಿಯೊಬ್ಬಳು ಎರಡು ಬಾರಿ ತೇರ್ಗಡೆಯಾದರು ಅಂದರೆ ನಂಬೋದು ಹೇಗೆ? ಆಕೆಯ ಹೆಸರು ಪ್ರಾಂಜಲ್ ಪಾಟೀಲ್. ಮಹಾರಾಷ್ಟ್ರದ ಉಲ್ಲಾಸ ನಗರದವರು. ಹುಟ್ಟುವಾಗ ಆಕೆಗೆ ಮಸುಕು ಮಸುಕಾಗಿ ಕಾಣುತ್ತಿತ್ತು. ಆರು ವರ್ಷ

ದೃಷ್ಟಿ ವೈಕಲ್ಯ ಮೆಟ್ಟಿ ನಿಂತು ಐಎಎಸ್ ಅಧಿಕಾರಿ ಆದ ಪ್ರಾಂಜಲ್ ಪಾಟೀಲ್ | ಎರಡು ಬಾರಿ ಐಎಎಸ್ ಪರೀಕ್ಷೆಯಲ್ಲಿ ತೇರ್ಗಡೆ Read More »

ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ | ಯಾವ ದಿನಾಂಕದವರೆಗೆ ಸಲ್ಲಿಸಬಹುದು | ಇಲ್ಲಿದೆ ಡಿಟೈಲ್ಸ್

ಬೆಂಗಳೂರು: 2023 – 24ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ  ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿ ಅಡಿಕೆ, ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ ಕಲ್ಪಿಸಿದ್ದು ಜು.31 ರ ತನಕ ರೈತರು ವಿಮೆ ಕಂತನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಎಲ್ಲಾ ರೈತ ಬಾಂಧವರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿರುತ್ತದೆ. ಸಮಯದ ಅಭಾವವಿರುವುದರಿಂದ ರೈತರು ತಮ್ಮ ತಮ್ಮಲ್ಲಿಯೇ ಹೆಚ್ಚಿನ ಪ್ರಚಾರ ಕೈಗೊಂಡು ತಮ್ಮ ತಮ್ಮಲ್ಲಿನ ರೈತರ ವಾಟ್ಸಾಪ್ ಗುಂಪುಗಳಿಗೆ

ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ | ಯಾವ ದಿನಾಂಕದವರೆಗೆ ಸಲ್ಲಿಸಬಹುದು | ಇಲ್ಲಿದೆ ಡಿಟೈಲ್ಸ್ Read More »

ಜು.27 : ಖಾಸಗಿ ವಾಹನಗಳ ಓಡಾಟ ಬಂದ್ | ಇದಕ್ಕೆ ಕಾರಣ ಏನು ? ಇಲ್ಲಿದೆ ಡಿಟೈಲ್ಸ್

ಬೆಂಗಳೂರು : ಜು.26 ರ ಮಧ್ಯರಾತ್ರಿ 12 ರಿಂದ ಜು.27 ರ ಮಧ್ಯರಾತ್ರಿ ತನಕ ರಾಜ್ಯಾದ್ಯಂತ ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್‍ ಗಳು ಓಡಾಟ ನಡೆಸುವುದಿಲ್ಲ. ಜು.27 ರಂದು ಆಟೋ ಕ್ಯಾಬ್‍ ಹಾಗೂ ಖಾಸಗಿ ಬಸ್ ಮಾಲೀಕರು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಓಡಾಟ ನಡೆಸುವುದಿಲ್ಲ. ರಾಜ್ಯ ಸರಕಾರದ ಕೆಲವು ನೀತಿಗಳಿಂದಾಗಿ ಖಾಸಗಿ ಸಾರಿಗೆಗೆ ನಷ್ಟವಾಗುತ್ತಿದೆ. ಈ ಬಗ್ಗೆ ಸರಕಾರವನ್ನು ಎಚ್ಚರಿಸಲು ಖಾಸಗಿ ಸಾರಿಗೆ ವಾಹನಗಳ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆಗೆ

ಜು.27 : ಖಾಸಗಿ ವಾಹನಗಳ ಓಡಾಟ ಬಂದ್ | ಇದಕ್ಕೆ ಕಾರಣ ಏನು ? ಇಲ್ಲಿದೆ ಡಿಟೈಲ್ಸ್ Read More »

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಂಸದ  ನಳಿನ್ ಕುಮಾರ್ ಕಟೀಲ್ ಅವರು ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆಯನ್ನು ನಡೆಸಿದರು. ಸಭೆಯಲ್ಲಿ ಇತ್ತೀಚೆಗಿನ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ  ಉಂಟಾಗಿರುವ ಪಾಟ್ ಹೋಲ್ ಗಳನ್ನು ಮುಚ್ಚಲು ಕೂಡಲೇ  ಕ್ರಮ ಕೈಗೊಳ್ಳುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಶೀಘ್ರದಲ್ಲಿ  ನಡೆಸುವುದಾಗಿ ಸಂಸದರು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ  ತಿಳಿಸಿದರು. ಈ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ Read More »

error: Content is protected !!
Scroll to Top