ಕೊಳ್ತಿಗೆ: ಮದುರ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶ್ರಮದಾನ

ಪುತ್ತೂರು: ಕೊಳ್ತಿಗೆ ಗ್ರಾಮದ ಡಬ್ಬಡ್ಕ ಮದುರ ಹಳೆ ವಿದ್ಯಾರ್ಥಿ ಸಂಘ ಹಾಗೂ ದುಗ್ಗಳ ಮದುರ  ಫ್ರೆಂಡ್ಸ್ ಸಂಘದ ಜಂಟಿ ಆಶ್ರಯದಲ್ಲಿ ಶ್ರಮದಾನ ನಡೆಯಿತು. ಶ್ರಮದಾನ ಅಂಗವಾಗಿ ದುಗ್ಗಳದಿಂದ ದೊಡ್ಡಡ್ಕ ತನಕ ವಿದ್ಯುತ್ ತಂತಿಗೆ ತಗಲುವ ಮರದ ಗೆಲ್ಲುಗಳು ಹಾಗೂ ರಸ್ತೆ ಬದಿಯ ಗಿಡಗಂಟಿಗಳ ತೆರವು ಕಾರ್ಯಗಳನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಂಜುನಾಥ್ ದುಗ್ಗಳ, ಕಾರ್ಯದರ್ಶಿ ಯಶವಂತ ದುಗ್ಗಳ ಮತ್ತಿತರರು ಪಾಲ್ಗೊಂಡಿದ್ದರು.

ಕೊಳ್ತಿಗೆ: ಮದುರ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶ್ರಮದಾನ Read More »

ಭಾರತದ 1- ಟಾಪ್ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಂ.1

ನವದೆಹಲಿ: ಭಾರತದ 10 ಶ್ರೀಮಂತ ಟಾಪ್ ಶಾಸಕರ ಪಟ್ಟಿಯಲ್ಲಿ ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಂ.1 ಸ್ಥಾನದಲ್ಲಿದ್ದಾರೆ. ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯ ಪ್ರಕಾರ ಅಸೋಸಿಯೇಷನ್ ಭಾರತದಾದ್ಯಂತ ವಿಧಾನಸಭೆಗಳ ಪ್ರತಿ ಸದಸ್ಯರ ಸರಾಸರಿ ಆಸ್ತಿ 13.63 ಕೋಟಿ ರೂ.ಗಳಾಗಿದ್ದರೆ, ಘೋಷಿತ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವವರು ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲದವರಿಗಿಂತ (11.45 ಕೋಟಿ ರೂ.) ಹೆಚ್ಚು (16.36 ಕೋಟಿ ರೂ.) ಹೊಂದಿದ್ದಾರೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 1,413 ಕೋಟಿ ರೂ.ಗಳ ಆಸ್ತಿಯೊಂದಿಗೆ ದೇಶದ ಅತ್ಯಂತ ಶ್ರೀಮಂತ

ಭಾರತದ 1- ಟಾಪ್ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಂ.1 Read More »

ಗಡಿ ನಿಯಂತ್ರಣ ರೇಖೆ ಮೂಲಕ ಒಳ ನುಸುಳಲು ಯತ್ನ | ಇಬ್ಬರು ಭಯೋತ್ಪಾದಕರ ಹತ್ಯೆ

ಕಾಶ್ಮೀರ: ಜಮ್ಮು-ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಮೂಲಕ ಒಳನುಸಲು ಪ್ರಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಇಂದು ಮುಂಜಾನೆ ಹತ್ಯೆ ಮಾಡಿದೆ. ಭಾರತೀಯ ಸೇನೆ, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಚರಣೆ ಸಮಯದಲ್ಲಿ ಭದ್ರತಾ ಪಡೆಗಳು ನಾಲ್ಕು ಎಕೆ ರೈಫಲ್‌ಗಳು, ಆರು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಇತರ ಯುದ್ಧದಂತಹ ಶಸ್ತ್ರಾಸ್ತ್ರ ಮತ್ತು

ಗಡಿ ನಿಯಂತ್ರಣ ರೇಖೆ ಮೂಲಕ ಒಳ ನುಸುಳಲು ಯತ್ನ | ಇಬ್ಬರು ಭಯೋತ್ಪಾದಕರ ಹತ್ಯೆ Read More »

ಕೃತಕ ಗರ್ಭಧಾರಣಾ ಕಾರ್ಯಕರ್ತ ಪ್ರಶಸ್ತಿಗೆ ಸತ್ಯನಾರಾಯಣ ಅಡಿಗ ಆಯ್ಕೆ

ಪುತ್ತೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನೀಡುವ 2022-23ನೇ ಸಾಲಿನ ಪುತ್ತೂರು ತಾಲೂಕಿನ ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತ ಪ್ರಶಸ್ತಿಗೆ ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ ಆಯ್ಕೆಯಾಗಿದ್ದಾರೆ. ಸತ್ಯನಾರಾಯಣ ಅಡಿಗರು ಕಳೆದ 30 ವರ್ಷಗಳಿಂದ ಕೃತಕ ಗರ್ಭಧಾರಣಾ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕುಲಶೇಖರ ಹಾಲು ಒಕ್ಕೂಟದ ಸಮಾಲೋಚನಾ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದ.ಕ.ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ನಿರ್ದೇಶಕರಾದ ನಾರಾಯಣ ನೆಲ್ಲಿತ್ತಿಮಾರ್, ಜಯರಾಮ

ಕೃತಕ ಗರ್ಭಧಾರಣಾ ಕಾರ್ಯಕರ್ತ ಪ್ರಶಸ್ತಿಗೆ ಸತ್ಯನಾರಾಯಣ ಅಡಿಗ ಆಯ್ಕೆ Read More »

ಔಷಧೀಯ ಸಸ್ಯಗಳ ಪರಿಚಯ, ಸಂರಕ್ಷಣೆ | ವಿವೇಕ ಸಂಜೀವಿನಿ ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು: ಗ್ರಾಮ ವಿಕಾಸ ಕಾರ್ಯಕ್ರಮ ಒಂದು ಉತ್ತಮ ಯೋಜನೆಯಾಗಿದ್ದು ಗ್ರಾಮೀಣ ಭಾಗಗಳ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳ ಅಭಿವೃದ್ದಿಗೆ ತುಂಬಾ ಸಹಕಾರಿಯಾಗಿದೆ ಎಂದು ಕುಳ ಗ್ರಾಮದ ಓಜಾಲ ಸರ್ಕಾರಿ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ .ಪಿ ಹೇಳಿದರು ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ಮತ್ತು ಎಂಸಿಎ ವಿಭಾಗದ ಆಶ್ರಯದಲ್ಲಿ ಓಜಾಲ ಪ್ರಾಥಮಿಕ ಶಾಲೆಯಲ್ಲಿ ನಡೆದ ಔಷಧೀಯ ಸಸ್ಯಗಳ ಪರಿಚಯ ಮತ್ತು ಸಂರಕ್ಷಣೆಯ ವಿಶೇಷ ಕಾರ್ಯಕ್ರಮ ವಿವೇಕ ಸಂಜೀವಿನಿಗೆ ಚಾಲನೆ ನೀಡಿ

ಔಷಧೀಯ ಸಸ್ಯಗಳ ಪರಿಚಯ, ಸಂರಕ್ಷಣೆ | ವಿವೇಕ ಸಂಜೀವಿನಿ ಕಾರ್ಯಕ್ರಮಕ್ಕೆ ಚಾಲನೆ Read More »

ಅಪ್ರಾಪ್ತ ಯುವತಿಯರಿಗೆ ಕಿರುಕುಳ | ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು : ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ವ್ಯಕ್ತಿಯೋರ್ವರ ಮೇಲೆ ಫೋಕ್ಲೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳವಾರ ಬೆಳಿಗ್ಗೆ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರು ಮನೆಯಿಂದ ಪುತ್ತೂರಿನ ಕಾಲೇಜಿಗೆ ಬರುತ್ತಿರುವಾಗ ದಾರಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸದರಿ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದು, ಬಾಲಕಿಯರು ಆತನಿಂದ ತಪ್ಪಿಸಿಕೊಂಡು ಕಾಲೇಜಿಗೆ ಬಂದಿದ್ದಾರೆ. ಬಳಿಕ ಕಾಲೇಜಿನ ಉಪನ್ಯಾಸಕಿಗೆ ತಿಳಿಸಿದ್ದಾರೆ. ಉಪನ್ಯಾಸಕಿಯವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್

ಅಪ್ರಾಪ್ತ ಯುವತಿಯರಿಗೆ ಕಿರುಕುಳ | ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು Read More »

ಜೈನ ಮುನಿ ಹತ್ಯೆ ಖಂಡಿಸಿ ಮತ್ತು ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ

ಪುತ್ತೂರು: ಪುತ್ತೂರು: ಜೈನ ಮುನಿ ಹತ್ಯೆ ಖಂಡಿಸಿ ಮತ್ತು ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಮಂಗಳವಾರ ಪುತ್ತೂರು ತಾಲೂಕು ಆಡಳಿತ ಸೌಧದ ಬಳಿಯ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ನಡೆಯಿತು. ಆಂದೋಲನವನ್ನುದ್ದೇಶಿಸಿ ಮಿತ್ರಸೇನ ಅಳದಂಗಡಿ ಮಾತನಾಡಿ, ಪ್ರಸ್ತುತ ವರ್ತಮಾನ ಕಾಲದಲ್ಲಿ ಕಣ್ಣಿಗೆ ಕಾಣುವ ದೇವರು ಆಚಾರ್ಯರು, ಉಪಾಧ್ಯಾಯರು, ಸರ್ವಸಾಧುಗಳು. ಇದರಲ್ಲಿ ಉಪಾಧ್ಯಾಯರಾದಂತಹ ಕಾಮಕುಮಾರ ನಂದಿ ಮಹಾರಾಜ್ ಅವರನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆದರೆ ಮುನಿಗಳು ಯಾರಿಗೂ ತೊಂದರೆ

ಜೈನ ಮುನಿ ಹತ್ಯೆ ಖಂಡಿಸಿ ಮತ್ತು ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ Read More »

ಕೇಂದ್ರ ಸರಕಾರ ಪುರಸ್ಕೃತ ರೈತ ಉತ್ಪಾದಕ ಸಂಸ್ಥೆ | ಜನನಿ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್

ಪುತ್ತೂರು: ಕೇಂದ್ರ ಸರಕಾರದ 10000 ರೈತ  ಉತ್ಪಾದಕ ಸಂಸ್ಥೆಗಳ ರಚನೆ ಮತ್ತು ಉತ್ತೇಜನ ಯೋಜನೆ ಅಡಿಯಲ್ಲಿ ನಬಾರ್ಡ್ ಪ್ರಾಯೋಜಕತ್ವದಲ್ಲಿ ಸ್ಥಾಪನೆಗೊಂಡ ಜನನಿ ರೈತ ಉತ್ಪಾದಕ ಕಂಪನಿ ನಿಯಮಿತ ಪುತ್ತೂರು ಪ್ರಸ್ತುತ ನೆಯ್ತಾಡಿ ಕಮ್ಮಿಂಜೆಯಲ್ಲಿ ಕೇಂದ್ರ ಕಛೇರಿಯನ್ನು ಹೊಂದಿ ವ್ಯವಹಾರ ಪ್ರಕ್ರಿಯೆ ನಡೆಸಿಕೊಂಡು ಬಂದಿದೆ. ಕಂಪನಿಯು ಪುತ್ತೂರು ತಾಲೂಕಿನ 9 ಗ್ರಾಮಗಳನ್ನು ಕೇಂದ್ರವಾಗಿರಿಸಿ ಪ್ರತಿ ಗ್ರಾಮಗಳಿಂದ ನಿರ್ದೇಶಕರನ್ನೊಳಗೊಂಡು, ಸುಮಾರು 500 ರೈತ ಸದಸ್ಯತ್ವ ಹೊಂದಿ ಆಡಳಿತ ಮಂಡಳಿ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಯಲ್ಲಿ ರೈತರಿಗೆ ರಾಸಾಯನಿಕ ರಸಗೊಬ್ಬರಗಳು, ಸಾವಯವ ಗೊಬ್ಬರಗಳು, ಸೋಲಾರ್

ಕೇಂದ್ರ ಸರಕಾರ ಪುರಸ್ಕೃತ ರೈತ ಉತ್ಪಾದಕ ಸಂಸ್ಥೆ | ಜನನಿ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ Read More »

ಹಲವು ತೊಡಕುಗಳನ್ನು ಸರಿಪಡಿಸಿ ಮುಂದಿನ ಕಾಮಗಾರಿ ಆರಂಭ | ರೈಲ್ವೇ ಅಂಡರ್ ಪಾಸ್ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಪುತ್ತೂರು: ಎಪಿಎಂಸಿ ಅಂಡರ್ ಪಾಸ್ ರಸ್ತೆ ಒಂದು ಹಂತದಲ್ಲಿ ಕಾಲಮಿತಿಯೊಳಗೆ ಮುಗಿದಿದ್ದು, ಮುಂದಿನ ಕಾಮಗಾರಿಗಳಿಗೆ ಕೆಲವೊಂದು ತೊಡಕುಗಳಿದ್ದು, ಅದನ್ನು ಸರಿಪಡಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಅವರು ಮಂಗಳವಾರ ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದರು. ರೈಲ್ವೇ ಅಂಡರ್ ಪಾಸ್ ಪುತ್ತೂರಿನ ಬಹುಬೇಡಿಕೆಯಾಗಿದ್ದು, ಕಾಮಗಾರಿ ಮುಗಿದು ಸಂಚಾರಕ್ಕೆ ಈಗಾಗಲೇ ತೆರೆದುಕೊಂಡಿದೆ. ಹಾಗೆಯೇ ಜಿಲ್ಲೆಯ ಹಲವು ಕಡೆಗಳಲ್ಲಿ ಅಂಡರ್ ಪಾಸ್ ಅಥವಾ ಓವರ್ ಬ್ರಿಡ್ಜ್ ನ ಬೇಡಿಕೆಯಿದೆ. ಈ

ಹಲವು ತೊಡಕುಗಳನ್ನು ಸರಿಪಡಿಸಿ ಮುಂದಿನ ಕಾಮಗಾರಿ ಆರಂಭ | ರೈಲ್ವೇ ಅಂಡರ್ ಪಾಸ್ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ Read More »

ಭಕ್ತಕೋಡಿ ಅಂಗನವಾಡಿಗೆ ಕೊಳೆತ ಮೊಟ್ಟೆ ಪೂರೈಕೆ

ಪುತ್ತೂರು: ಅಂಗನವಾಡಿಗಳಿಗೆ ಪೂರೈಕೆಯಾಗಿರುವ ಮೊಟ್ಟೆಗಳ ಪೈಕಿ ಇದೀಗ ಪುತ್ತೂರು ತಾಲೂಕಿನ ಭಕ್ತಕೋಡಿ ಅಂಗನವಾಡಿ ಕೇಂದ್ರಕ್ಕೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ ಎಂದು ತಿಳಿದು ಬಂದಿದೆ. ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಮೊಟ್ಟೆಗಳು ಪೂರೈಕೆಯಾಗುತ್ತಿರುವ ಕುರಿತು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧೀ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈಗಾಗಲೇ ತನಿಕೆಗೆ ಆದೇಶಿಸಿದ್ದಾರೆ. ತನಿಖಾ ವರದಿ ಸಲ್ಲಿಕೆಯಾದ ಬಳಿಕ ಕ್ರಮ ಜರಗಿಸಲಾಗುವುದು ಎಂದು ಅವರು ಈಗಾಗಲೇ ತಿಳಿಸಿದ್ದಾರೆ. ಭಕ್ತಕೋಡಿ ಅಂಗನವಾಡಿಗ ಕೊಳೆತ ಮೊಟ್ಟೆ ಪೂರೈಕೆಯಾಗಿರುವ ಕುರಿತು ಸಿಡಿಪಿಒ ಪ್ರತಿಕ್ರಿಯೆ ನೀಡಿದ್ದು,

ಭಕ್ತಕೋಡಿ ಅಂಗನವಾಡಿಗೆ ಕೊಳೆತ ಮೊಟ್ಟೆ ಪೂರೈಕೆ Read More »

error: Content is protected !!
Scroll to Top