ಫಿಲೋಮಿನಾ ಕಾಲೇಜಿನ ನಿವೃತ್ತ ಪ್ರೊ. ಟಿ.ಓ.ಜೋನ್ ನಿಧನ

ಪುತ್ತೂರು : ಮಾಯಿದೇ ದೇವುಸ್ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರೊ.ಟಿ.ಓ.ಜೋನ್ (80) ನಿಧನರಾಗಿದ್ದಾರೆ. ಕೇರಳದ ಕೊಟ್ಟಾಯಂ ನಿವಾಸಿಯಾಗಿರುವ ಅವರು ಅಸೌಖ್ಯದಿಂದ ಕೇರಳದಲ್ಲಿ ನಿಧನರಾಗಿದ್ದಾರೆ. 1979-80 ರಲ್ಲಿ ರಸಾಯನಶಾಸ್ತ್ರ ವಿಭಾಗದಲ್ಲಿ ಸೇವೆಗೆ ಸೇರಿದ್ದು, ಸುಮಾರು 33 ವರ್ಷಗಳ ಕಾಲ ಕಾಲೇಜಿನಲ್ಲಿ ಸೇವೆ ಸಲ್ಲಿಸಿ 2012 ರಲ್ಲಿ ನಿವೃತ್ತಿ ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಫಿಲೋಮಿನಾ ಕಾಲೇಜಿನ ನಿವೃತ್ತ ಪ್ರೊ. ಟಿ.ಓ.ಜೋನ್ ನಿಧನ Read More »

ಪ್ರಜಾಪ್ರಭುತ್ವದ ಯಶಸ್ಸಿನ ಜತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ : ಪೊಲೀಸ್ ಉಪನಿರೀಕ್ಷಕ ೀರಯ್ಯ ದೂಂತೂರು | ಸುಳ್ಯ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ

ಸುಳ್ಯ: ಪ್ರಜಾಪ್ರಭುತ್ವದ ಯಶಸ್ಸಿನ ಜತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದ್ದು, ಪ್ರತಿಯೊಂದು ವರದಿಗಳೂ ಕಾನೂನಿನ ಚೌಕಟ್ಟಿನಲ್ಲಿ ಮತ್ತು ಮಾನವೀಯ ನೆಲೆಗಟ್ಟಿನಲ್ಲಿದ್ದರೆ ಸಮಾಜದ ಸುಧಾರಣೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಬಲ್ಲುದು ಎಂದು ಸುಳ್ಯ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕ ಈರಯ್ಯ ದೂಂತೂರು ಅಭಿಪ್ರಾಯಪಟ್ಟಿದ್ದಾರೆ‌. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆದ‌ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಪತ್ರಿಕೆಗಳು ಜ್ಞಾನದ ದೊಡ್ಡ ಭಂಡಾರ. ಸ್ಪರ್ಧಾತ್ಮಕ ಪರೀಕ್ಷೆಗಳ

ಪ್ರಜಾಪ್ರಭುತ್ವದ ಯಶಸ್ಸಿನ ಜತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ : ಪೊಲೀಸ್ ಉಪನಿರೀಕ್ಷಕ ೀರಯ್ಯ ದೂಂತೂರು | ಸುಳ್ಯ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ Read More »

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ಪರೀಕ್ಷಾ ಕಾರ್ಯಗಾರ

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವ್ಯವಹಾರ ಅಧ್ಯಯನ ವಿಷಯದ ಪರೀಕ್ಷಾ ಮಾದರಿ ಬಗ್ಗೆ ಕಾರ್ಯಗಾರ ಕಾಲೇಜಿನಲ್ಲಿ ನಡೆಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀಧರ್ ಶೆಟ್ಟಿಗಾರ್  ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ  ಪರೀಕ್ಷಾ ಮಾದರಿ, ಅಂಕಗಳು, ಉತ್ತರ ಬರೆಯುವ ಕೌಶಲ್ಯಗಳ ಬಗ್ಗೆ ತರಬೇತಿ ನೀಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಉಷಾ ಪಿ ಎಂ, ಭಾಗ್ಯಶ್ರೀ, ಗ್ರೀಷ್ಮ ಹಾಗೂ ದೇವಿಪ್ರಸಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ಪರೀಕ್ಷಾ ಕಾರ್ಯಗಾರ Read More »

ಕೊಯಿಲಾ ಫಾರಂ: ಪಾಳುಬಿದ್ದ ಭೂಮಿಯಲ್ಲಿ ಖಾಸಗಿಯವರಿಗೆ ಉದ್ಯಮಕ್ಕೆ ಅವಕಾಶ | ಪಶುಸಂಗೋಪನಾ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ

ಪುತ್ತೂರು: ಪ್ರತ್ತೂರು ತಾಲ್ಲೂಕಿನ ಕೊಯಿಲಾ ಗ್ರಾಮದ ಪಾಳು ಬಿದ್ದಿರುವ ೬೮೦ ಎಕರೆ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ ಮೇಲೆ ಪೌಲ್ಟ್ರಿಫಾರಂ, ಕುರಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ ಮಾಡಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಕಳೆದ ಎರಡು ವಆರದ ಹಿಂದೆ ಪಶುಸಂಗೋಪನಾ ಸಚಿವರಿಗೆ ಶಾಸಕರಾದ ಅಶೋಕ್ ರೈ ಮನವಿ ನೀಡಿದ್ದು ಜು.3 ರಂದು ಅವರನ್ನು ಎರಡನೇ ಬಾರಿಗೆ ಖುದ್ದಾಗಿ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

ಕೊಯಿಲಾ ಫಾರಂ: ಪಾಳುಬಿದ್ದ ಭೂಮಿಯಲ್ಲಿ ಖಾಸಗಿಯವರಿಗೆ ಉದ್ಯಮಕ್ಕೆ ಅವಕಾಶ | ಪಶುಸಂಗೋಪನಾ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ Read More »

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ | ಕಟ್ಟೆಚ್ಚರದಿಂದ ಇರುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ

ಪುತ್ತೂರು: ಮುಂದಿನ ಕೆಲವು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಬಗ್ಗೆ ಹವಾಮಾನ ಇಲಾಖೆ ಸೂಚನೆಯನ್ನು ನೀಡಿದ್ದು ಈ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆಚ್ಚರದಿಂದ ಇರುವಂತೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ ನೀಡಿದ್ದಾರೆ. ಮಳೆ ಈ ಬಾರಿ ತಡವಾಗಿ ಆರಂಭಗೊಂಡಿದ್ದರೂ ಜುಲೈ ಪ್ರಾರಂಭದಲ್ಲೇ ಹೆಚ್ಚಿನ ಮಳೆಯಾಗುತ್ತಿದೆ. ಮುಂದಿನ ಒಂದು ವಾರಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳಯಾಗಲಿದೆ. ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಯಾವುದೇ ಅನಾಹುತಗಳು ಸಂಭವಿಸುವ ಸಾಧ್ಯತೆ ಇದ್ದು ಅಧಿಕಾರಿಗಳು

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ | ಕಟ್ಟೆಚ್ಚರದಿಂದ ಇರುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ Read More »

ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‍ ಗಳ ಬೆಲೆ ಏರಿಕೆ | ಏಳು ರೂಪಾಯಿಗಳಷ್ಟು ಹೆಚ್ಚಿಸಿದ ತೈಲ ಮಾರುಕಟ್ಟೆ ಕಂಪೆನಿ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಏಳು ರೂಪಾಯಿ ಹೆಚ್ಚಿಸಿದ್ದು, ಇಂದಿನಿಂದ ಜಾರಿಗೆ ಬರಲಿವೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಪ್ರತಿ ಸಿಲಿಂಡರ್‌ಗೆ 1,773 ರೂ.ನಿಂದ 1,780 ರೂ.ಗೆ ಏರಿಕೆಯಾಗಿದೆ. ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕೊನೆಯ ಬಾರಿಗೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಳೆದ ವರ್ಷದ ಸೆಪ್ಟೆಂಬರ್ 1 ರಂದು 91.50 ರೂ.ಗಳಷ್ಟು ಕಡಿಮೆ ಮಾಡಲಾಗಿತ್ತು. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 2022 ರ ಆಗಸ್ಟ್ 1 ರಂದು

ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‍ ಗಳ ಬೆಲೆ ಏರಿಕೆ | ಏಳು ರೂಪಾಯಿಗಳಷ್ಟು ಹೆಚ್ಚಿಸಿದ ತೈಲ ಮಾರುಕಟ್ಟೆ ಕಂಪೆನಿ Read More »

ಜು.23 : ನಿಡ್ಪಳ್ಳಿ, ಆರ್ಯಾಪು ಗ್ರಾಪಂಗಳ ಉಪ ಚುನಾವಣೆ

ಪುತ್ತೂರು : ಗ್ರಾಮ ಪಂಚಾಯತ್‍ಗಳಲ್ಲಿ ತೆರವಾದ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಎ ಮತ್ತು 308 ಎಬಿ ಅನ್ವಯ ದಿನಾಂಕ ನಿಗದಿಗೊಳಿಸಿ ವೇಳಾಪಟ್ಟಿ ಪ್ರಕಟಿಸಿದೆ. ಪುತ್ತೂರು ತಾಲೂಕಿನ ನಿಡ್ಪಳ್ಳಿ ಹಾಗೂ ಆರ್ಯಾಪು ಗ್ರಾಪಂಗಳಲ್ಲಿ ತೆರವಾದ ಒಂದೊಂದು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಆರ್ಯಾಪು ಗ್ರಾಪಂನ ವಾರ್ಡ್2 (ಹಿಂದುಳಿದ ವರ್ಗ ಎ ಮೀಸಲು) ಕ್ಷೇತ್ರದಿಂದ ಚುನಾಯಿತರಾಗಿದ್ದ ನಿವೃತ್ತ ಎಸ್‍.ಐ.ರುಕ್ಮಯ್ಯ ಮೂಲ್ಯ ಹಾಗೂ ನಿಡ್ಪಳ್ಳಿ

ಜು.23 : ನಿಡ್ಪಳ್ಳಿ, ಆರ್ಯಾಪು ಗ್ರಾಪಂಗಳ ಉಪ ಚುನಾವಣೆ Read More »

ಸೌಜನ್ಯ ಹತ್ಯೆ ಪ್ರಕರಣದ ನಿಜವಾದ ಆರೋಪಿಗಳ ಪತ್ತೆಗೆ ದೈವದ ಮೊರೆ ಹೋದ ಸೌಜನ್ಯ ಕುಟುಂಬ | 6 ತಿಂಗಳೊಳಗೆ ಶಿಕ್ಷೆಯಾದ್ರೆ ಕಾನತ್ತೂರು ದೈವ, ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಹರಕೆ

ಬೆಳ್ತಂಗಡಿ: ಧರ್ಮಸ್ಥಳದ ಸಮೀಪ ನೇತ್ರಾವತಿಯ ಪಕ್ಕದ ಕಾಡಿನಲ್ಲಿ ಭೀಕರ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾಗಿದ್ದ ಸೌಜನ್ಯ ಹತ್ಯೆ ಪ್ರಕರಣಕ್ಕೆ 11 ವರ್ಷಗಳ ಬಳಿಕ ಪ್ರಕರಣದ ತನಿಖೆ ಮರು ಜೀವ ಪಡೆದುಕೊಳ್ಳುತ್ತಿದೆ. ಸಿಬಿಐ ವಿಶೇಷ ಕೋರ್ಟ್ ನಲ್ಲಿ, ಆರೋಪಿ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ಬರುತ್ತಲೇ ನಿಜವಾದ ಅಪರಾಧಿ ಯಾರು ಅನ್ನುವ ಪ್ರಶ್ನೆ ಉದ್ಭವ ಆಗಿದೆ. ಸೌಜನ್ಯ ಪೋಷಕರು ಮತ್ತು ಹೋರಾಟಗಾರರು ಮಾಧ್ಯಮಗಳ ಮುಂದೆ ಬಂದು ತಮ್ಮ ನೋವನ್ನು ಮತ್ತು ಬೇಸರವನ್ನು ಮತ್ತು ನಮ್ಮ ನ್ಯಾಯ ವ್ಯವಸ್ಥೆಯ ಮೇಲಿನ ಒಟ್ಟಾರೆ

ಸೌಜನ್ಯ ಹತ್ಯೆ ಪ್ರಕರಣದ ನಿಜವಾದ ಆರೋಪಿಗಳ ಪತ್ತೆಗೆ ದೈವದ ಮೊರೆ ಹೋದ ಸೌಜನ್ಯ ಕುಟುಂಬ | 6 ತಿಂಗಳೊಳಗೆ ಶಿಕ್ಷೆಯಾದ್ರೆ ಕಾನತ್ತೂರು ದೈವ, ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಹರಕೆ Read More »

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಸಾಧ್ಯತೆ !

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕವಾಗುವ ಸಾಧ್ಯತೆ ಇದೆ. ವಿರೋಧ ಪಕ್ಷದ ನಾಯಕ ಸ್ಥಾನ ಲಿಂಗಾಯತ ಸಮುದಾಯಕ್ಕೆ ಸಿಕ್ಕಿದರೆ, ಅಧ್ಯಕ್ಷ ಸ್ಥಾನ ಒಕ್ಕಲಿಗ ಸಮುದಾಯಕ್ಕೆ ನೀಡಬೇಕಾಗುತ್ತದೆ. ಆ ಹೊತ್ತಿನಲ್ಲಿ ತಮ್ಮ ಆಯ್ಕೆ ಹಿಂದೊಮ್ಮೆ ನಿಕಟವರ್ತಿಯಾಗಿದ್ದ ಶೋಭಾ ಕರಂದ್ಲಾಜೆ ಎಂದು ಯಡಿಯೂರಪ್ಪ ಸೂಚಿಸಿದ್ದಾರೆ. ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶೋಭಾ ಅವರು ಸರ್ಕಾರದ ಮೇಲೆ ಹೆಚ್ಚಿನ ಹಿಡಿತ ಸಾಧಿಸಿದ್ದರು. ಅವರು ಎರಡನೇ ಬಾರಿ ಮುಖ್ಯಮಂತ್ರಿ ಆದಾಗ ಯಡಿಯೂರಪ್ಪ ಅವರ

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಸಾಧ್ಯತೆ ! Read More »

ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ | ಪ್ರೋತ್ಸಾಹಕ ಬಹುಮಾನ

ಪುತ್ತೂರು: ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ಲಭಿಸಿದೆ. ದಿ. ಬಾಲಕೃಷ್ಣ ಮಧುವನ ಅವರ ಸ್ಮರಣಾರ್ಥ ಸರ್ವೋದಯ ಪ್ರೌಢಶಾಲೆ, ಸುಳ್ಯಪದವು ಇಲ್ಲಿ ನಡೆದ ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆಯಲ್ಲಿ ಪ್ರೋತ್ಸಾಹಕ ಬಹುಮಾನ ಲಭಿಸಿದೆ. ಶಾಲೆಯ ವಿದ್ಯಾರ್ಥಿನಿಯರಾದ ಹರಿಣಿ, ಸುಷ್ಮಾ ಮತ್ತು ಮಂಗಳಾದುರ್ಗಾ ಸ್ಪರ್ಧೆಯನ್ನು ಪ್ರತಿನಿಧಿಸಿದ್ದರು.

ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ | ಪ್ರೋತ್ಸಾಹಕ ಬಹುಮಾನ Read More »

error: Content is protected !!
Scroll to Top