ಪಾನ್-ಆಧಾರ್ ಲಿಂಕ್ ಮಾಡದವರಿಗೆ ಮತ್ತೊಂದು ಸಿಹಿಸುದ್ದಿ | ಇಲ್ಲಿದೆ ಡಿಟೈಲ್ಸ್

ಬೆಂಗಳೂರು: ಪ್ಯಾನ್ ಕಾರ್ಡನ್ನು ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಲು ಜೂನ್ 30, 2023ರ ವರೆಗೆ ಗಡುವು ನೀಡಲಾಗಿತ್ತು. ಆದರೆ  ಈ ಗಡುವು ಮುಗಿದ ಬೆನ್ನಲ್ಲೇ ಇನ್ನು ಪಾನ್ ಹಾಗೂ ಆಧಾರ್ ಲಿಂಕ್ ಮಾಡದವರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು, ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಸರ್ಕಾರವುಕೊಟ್ಟ ಕೊನೆಯ ದಿನಾಂಕ ಮುಗಿದಿದೆ. ಈ ಗಡುವನ್ನು ಈ ಹಿಂದೆ ಹಲವು ಬಾರಿ ಸರ್ಕಾರ ವಿಸ್ತರಣೆ ಮಾಡಿದ್ದರೂ ಈ ಬಾರಿ ವಿಸ್ತರಿಸಿಲ್ಲ. ಒಬ್ಬ ವ್ಯಕ್ತಿಯು ಇನ್ನೂ ತಮ್ಮ […]

ಪಾನ್-ಆಧಾರ್ ಲಿಂಕ್ ಮಾಡದವರಿಗೆ ಮತ್ತೊಂದು ಸಿಹಿಸುದ್ದಿ | ಇಲ್ಲಿದೆ ಡಿಟೈಲ್ಸ್ Read More »

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಕ್ಕೆ | ಸಂಜೆ ಸತ್ಯಸಾಯಿ ವಿವಿ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವಿಕೆ

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ವಿವಿಯ 2ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸೋಮವಾರ ದೆಹಲಿಯಿಂದ ಐಎಎಫ್​​ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು, ಮಧ್ಯಾಹ್ನ 3.40ಕ್ಕೆ ಹೆಲಿಕಾಪ್ಟರ್‌ ಮೂಲಕ ಮುದ್ದೇನಹಳ್ಳಿ ಗ್ರಾಮದ ಸತ್ಯಸಾಯಿ ಗ್ರಾಮಕ್ಕೆ ಆಗಮಿಸಲಿದ್ದಾರೆ. ರಾಷ್ಟ್ರಪತಿ ಭೇಟಿ ಹಿನ್ನೆಲೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಅಲ್ಲದೆ , ಸಂಜೆ 6 ಗಂಟೆವರೆಗೆ ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಕ್ಕೆ | ಸಂಜೆ ಸತ್ಯಸಾಯಿ ವಿವಿ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವಿಕೆ Read More »

ನಾಳೆ (ಜು.3) : ಶ್ರೀ ಶಾಂತಿಮೊಗರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಕಡಬ: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶ್ರೀ ಶಾಂತಿಮೊಗರು ಸುಬ್ರಮಣ್ಯ ದೇವಸ್ಥಾನದಲ್ಲಿ ಹುಣ್ಣಿಮೆ ಪ್ರಯುಕ್ತ ಪ್ರತಿ ತಿಂಗಳು ನಡೆಯುವಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜು.3 ಸೋಮವಾರ ನಡೆಯಲಿದೆ. ಬೆಳಿಗ್ಗೆ ಸಾರ್ವಜನಿಕ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಜೆ ಶ್ರೀ ದುರ್ಗಾ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.  ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಮನೆಯವರು ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.

ನಾಳೆ (ಜು.3) : ಶ್ರೀ ಶಾಂತಿಮೊಗರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ Read More »

ಝೀ ಕನ್ನಡ ವಾಹಿನಿ ಛೋಟಾ ಚಾಂಪಿಯನ್ ಗೇಮ್ ಶೋನಲ್ಲಿ ಪ್ರಥಮ ಸ್ಥಾನ ಪಡೆದ ಪುಟಾಣಿ ಆತ್ಮಿ ಗೌಡರಿಗೆ ಸನ್ಮಾನ | ಸನ್ಮಾನಿಸಿದ ಅಲಂಕಾರು ಒಕ್ಕಲಿಗ ಗೌಡ ಸೇವಾ ಸಂಘ

ಪುತ್ತೂರು: ಝೀ ಕನ್ನಡ ವಾಹಿನಿಯ ಛೋಟಾ ಚಾಂಪಿಯನ್ ಗೇಮ್ ಶೋ ದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ರಾಮಕುಂಜ ಗ್ರಾಮದ ಸಂಪ್ಯಾಡಿ ನಿವಾಸಿ ಸುಜಿತ್ ಹಾಗೂ ಉಮಾಶ್ರೀ ದಂಪತಿ ಪುತ್ರಿ ಮೂರುವರೆ ವರ್ಷದ ಪುಟಾಣಿ ಆತ್ಮಿ ಗೌಡರನ್ನು ಅಲಂಕಾರು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸಂಪ್ಯಾಡಿಯ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಲಿಂಗಪ್ಪ ಗೌಡ ಕಡೆಂಬ್ಯಾಲ್, ಒಕ್ಕಲಿಗ ಗೌಡ ಸಂಘದ ಆಲಂಕಾರು ವಲಯ ಅಧ್ಯಕ್ಷ ರಾಮಣ್ಣ

ಝೀ ಕನ್ನಡ ವಾಹಿನಿ ಛೋಟಾ ಚಾಂಪಿಯನ್ ಗೇಮ್ ಶೋನಲ್ಲಿ ಪ್ರಥಮ ಸ್ಥಾನ ಪಡೆದ ಪುಟಾಣಿ ಆತ್ಮಿ ಗೌಡರಿಗೆ ಸನ್ಮಾನ | ಸನ್ಮಾನಿಸಿದ ಅಲಂಕಾರು ಒಕ್ಕಲಿಗ ಗೌಡ ಸೇವಾ ಸಂಘ Read More »

ಕುಂಬ್ರದ ವ್ಯಕ್ತಿ ದಿಢೀರ್ ನಾಪತ್ತೆ | ಕುಟುಂಬ ಆತಂಕದಲ್ಲಿ

ಪುತ್ತೂರು : ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಉಮ್ಮರ್ ಎಂಬವರು ದಿಢೀರ್ ನಾಪತ್ತೆಯಾದ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರ ಮಧ್ಯಾಹ್ನ 3 ಗಂಟೆ ವರೆಗೆ ಪುತ್ತೂರಿನಲ್ಲಿದ್ದ ಅವರು ಬಳಿಕ ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಜು.3 ರಂದು ಅವರ ಪುತ್ರನಿಗೆ ಮದುವೆ ನಡೆಯಲಿದ್ದು, ಜು.2 ರಂದು ನಡೆಯಬೇಕಿದ್ದ ಮೆಹೆಂದಿ ರದ್ದು ಮಾಡಿದ್ದಾರೆ. ಇದೀಗ ನಾಪತ್ತೆಯಾಗಿರುವ ಕುರಿತು ಕುಟುಂಬದವರಿಗೆ ಅಘಾತ ಉಂಟು ಮಾಡಿದ್ದು, ಪೊಲೀಸರು ಹುಡುಕಾಟದಲ್ಲಿ ತೊಡಗಿದ್ದಾರೆ.

ಕುಂಬ್ರದ ವ್ಯಕ್ತಿ ದಿಢೀರ್ ನಾಪತ್ತೆ | ಕುಟುಂಬ ಆತಂಕದಲ್ಲಿ Read More »

ಸರ್ವೆ ವಲಯ ಕಾಂಗ್ರೆಸ್‌ನಿಂದ ಕಾಯಕರ್ತರ ಸಭೆ, ಶಾಸಕರಿಗೆ ಸನ್ಮಾನ

ಪುತ್ತೂರು : ಪುತ್ತೂರು ಸಹಿತ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಿದ್ದು, ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಬಂದಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸರ್ವೆ ವಲಯ ಕಾಂಗ್ರೆಸ್ ವತಿಯಿಂದ ಕಲ್ಪನೆ ಸಮುದಾಯಭವನದಲ್ಲಿ ಶನಿವಾರ ನಡೆದ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಶಾಸಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಳೆದ ಹಲವು ವರ್ಷಗಳಿಂದ ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರಿಲ್ಲದ ಕಾರಣ ಕಾರ್ಯಕರ್ತರು ನೋವು, ಯಾತನೆಯನ್ನು ಅನುಭವಿಸುವಂತಾಗಿತ್ತು. ಕಾಂಗ್ರೆಸ್ ಗೆಲ್ಲಲೇಬೇಕು ಎಂದು ಕಳೆದ ಚುನಾವಣೆಯಲ್ಲಿ ಕಾರ್ಯಕರ್ತರ

ಸರ್ವೆ ವಲಯ ಕಾಂಗ್ರೆಸ್‌ನಿಂದ ಕಾಯಕರ್ತರ ಸಭೆ, ಶಾಸಕರಿಗೆ ಸನ್ಮಾನ Read More »

ಮಾಜಿ ಶಾಸಕ ಮಠಂದೂರು ಕಾಲೆಳೆದ ಶಾಸಕ ಅಶೋಕ್ ರೈ

ಪುತ್ತೂರು : ಶಾಸಕನಾಗಿ ನಾನು ಹೊಸ ಒಂದು ತಿಂಗಳು ಕಳೆದಿದೆ ಅಷ್ಟೆ. ಕೃಷಿ ವಿಮಾ ಯೋಜನೆಯ ಬಗ್ಗೆ ಮಾತನಾಡುವಾಗ ಶಬ್ದದಲ್ಲಿ ಎಡವಿರಬಹುದು. ಅದನ್ನೇ ದೊಡ್ಡದು ಮಾಡಿ ಪುತ್ತೂರಿನ ಮಾಜಿ ಶಾಸಕರು ಪುತ್ತೂರಿನ ಶಾಸಕರಿಗೆ ತಿಳುವಳಿಕೆ ಇಲ್ಲ, ರೈತರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದು, ಅವರಿಗೆ ಪುತ್ತೂರು ಕ್ಷೇತ್ರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಲಿ ಎಂದು ಶಾಸಕರಾದ ಅಶೋಕ್ ರೈ ಹೇಳಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ವಿಚಾರಕ್ಕೆ

ಮಾಜಿ ಶಾಸಕ ಮಠಂದೂರು ಕಾಲೆಳೆದ ಶಾಸಕ ಅಶೋಕ್ ರೈ Read More »

ಬನ್ನೂರಿನಲ್ಲಿ ಮೆಡಿಕಲ್ ಕಾಲೇಜಿನ ಸ್ಥಳ ವೀಕ್ಷಣೆ | ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡಿಯೇ ಸಿದ್ದ: ಅಶೋಕ್ ರೈ

ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕು ಎಂಬ ಆಗ್ರಹ ನನಗೆ ಶಾಸಕನಾಗುವ ಮೊದಲೇ ಇತ್ತು, ಅಭಿವೃದ್ದಿಯಾಗುತ್ತಿರುವ ಪುತ್ತೂರಿಗೆ ಈ ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದ್ದು ಕ್ಯಾಬಿನೆಟ್‌ನಲ್ಲಿ ಅನುಮೋದನೆ ಮಾಡಿಸಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿಯೇ ಸಿದ್ದ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಭಾನುವಾರ ಮೆಡಿಕಲ್ ಕಾಲೇಜಿಗೆ ನಿಗಧಿಪಡಿಸಲಾದ ಜಾಗವನ್ನು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ತಿಳಿಸಿದರು. ಸುಮಾರು 40 ಎಕ್ರೆ ಸರಕಾರಿ ಜಾಗವನ್ನು ಕಾಲೇಜು ನಿರ್ಮಾಣಕ್ಕೆ ಕಾಯ್ದಿರಿಸಲಾಗಿದೆ. ದ ಕ

ಬನ್ನೂರಿನಲ್ಲಿ ಮೆಡಿಕಲ್ ಕಾಲೇಜಿನ ಸ್ಥಳ ವೀಕ್ಷಣೆ | ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡಿಯೇ ಸಿದ್ದ: ಅಶೋಕ್ ರೈ Read More »

ಸ್ಯಾಕ್ಸೋಫೋನ್ ಕಲಾವಿದ ಮೂಡಾಯೂರು ಶ್ರೀಧರ ದೇವಾಡಿಗ ನಿಧನ

ಪುತ್ತೂರು: ಸ್ಯಾಕ್ಸೋಫೋನ್ ಕಲಾವಿದ ಮೂಡಾಯೂರು ಶ್ರೀಧರ ದೇವಾಡಿಗ (64) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 50 ವರ್ಷಗಳಿಂದ ಸ್ಯಾಕ್ಸೋಫೋನ್ ವಾದನ ಸೇವೆ ಮಾಡಿಕೊಂಡು ಬಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಮೃತರ ಮನೆಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸ್ಯಾಕ್ಸೋಫೋನ್ ವಾದಕ ಪಿ.ಕೆ.ಗಣೇಶ್ ಮತ್ತಿತರ ಗಣ್ಯರು ತೆರಳಿ ಸಂತಾಪ ಸೂಚಿಸಿದರು.

ಸ್ಯಾಕ್ಸೋಫೋನ್ ಕಲಾವಿದ ಮೂಡಾಯೂರು ಶ್ರೀಧರ ದೇವಾಡಿಗ ನಿಧನ Read More »

ಐಎಸ್ ಉಗ್ರ ಸಂಘಟನೆ ಜತೆ ನಂಟು | ವಿದ್ವಂಸಕ ಕೃತ್ಯ ಎಸಗಲು ಸಂಚು | 9 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ಮಂಗಳೂರು: ಐಎಸ್ ಉಗ್ರ ಸಂಘಟನೆ ಜತೆಗೂಡಿ ದೇಶಾಸ್ಯಂತ ಉಗ್ರ ಚಟುವಟಿಕೆ ನಡೆಸಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ 9 ಮಂದಿ ವಿರುದ್ಧ ಎನ್‍ಐಎ ಆರೋಪ ಪಟ್ಟಿ ಸಲ್ಲಿಸಿದೆ. ಮಾಝ್‍ ಮುನೀರ್ ಅಹಮ್ಮದ್ (23), ಮಹಮ್ಮದ್ ಶಾರೀಕ್ (25), ರಿಶಾನ್ ತಾಜುದ್ದೀನ್ ಶೇಖ್ (22), ವಝೀನ್ ಅಬ್ದುಲ್ ರಹಿಮಾನ್ (22), ಹುಝೈರ್ ಫರ್ಹಾನ್ ಬೇಗ್ (22), ನದೀಮ್ ಅಹಮ್ಮದ್ ಕೆ. (22), ನದೀಮ್ ಫೈಝಲ್ ಎನ್. (27) ಹಾಗೂ ಜಬೀವುಲ್ಲಾ ಎಂಬವರ ಮೇಲೆ ಪೂರಕ ಆರೋಪ ಪಟ್ಟಿ

ಐಎಸ್ ಉಗ್ರ ಸಂಘಟನೆ ಜತೆ ನಂಟು | ವಿದ್ವಂಸಕ ಕೃತ್ಯ ಎಸಗಲು ಸಂಚು | 9 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ Read More »

error: Content is protected !!
Scroll to Top