ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಗಿಡಗಳಿಂದ ತುಲಾಭಾರ ಸೇವೆ | ವಿನೂತನ ಪರಂಪರೆಗೆ ನಾಂದಿ ಹಾಡಿದ ತುಲಾಭಾರ ಸೇವೆ

ಮಂಗಳೂರು: ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಗಿಡಗಳಿಂದ ವಿಶಿಷ್ಟವಾದ ತುಲಾಭಾರ ಸೇವೆ ಸಲ್ಲಿಸುವ ಮೂಲಕ ವಿನೂತನ ಪರಂಪರೆಗೆ ನಾಂದಿ ಹಾಡಲಾಯಿತು. ಹಿರಿಯ ವಿದ್ವಾಂಸ ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ತನ್ನ ನಿವಾಸದಲ್ಲಿ ಸ್ವಾಮೀಜಿಯವರಿಗೆ ವೃಕ್ಷ, ಬೀಜ, ಸಸಿಗಳಿಂದ ಕೂಡಿದ ಹಲಸು, ಮಾವು, ಹರಿವೆ, ಅಲಸಂಡೆ, ಹಾಗಲ, ತುಂಬೆ ಮುಂತಾದ ಸಸಿಗಳಿಂದ ತುಲಾಭಾರ ನೆರವೇರಿತು. ಪ್ರದೀಪ್ ಕುಮಾರ್ ಕಲ್ಕೂರ ಸಹಿತ ಭಕ್ತರೂ ತುಲಾಭಾರ ಸಸಿಗಳನ್ನು ತಂದಿದ್ದರು. ತುಲಾಭಾರದ ಬಳಿಕ ಈ ಗಿಡಗಳನ್ನು ಭಕ್ತರಿಗೆ […]

ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಗಿಡಗಳಿಂದ ತುಲಾಭಾರ ಸೇವೆ | ವಿನೂತನ ಪರಂಪರೆಗೆ ನಾಂದಿ ಹಾಡಿದ ತುಲಾಭಾರ ಸೇವೆ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಸವಣೂರು :  ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2023-24ನೆ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಇವರು ನೆರವೇರಿಸಿದರು. ಬಳಿಕ ಮಾತನಾಡಿದ,ಸೀತಾರಾಮ ರೈ ಅವರು,ಪ್ರಜಾಪ್ರಭುತ್ವದ ಅರಿವು ವಿದ್ಯಾರ್ಥಿಗಳಿಗೆ ಆಗಬೇಕಾದರೆ ವಿದ್ಯಾರ್ಥಿ ಸಂಘಗಳು ಸಕ್ರಿಯರಾಗಬೇಕು. ಇಂತಹ ಸಂಘಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಾಯಕತ್ವವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದರು. ಮುಖ್ಯ ಅತಿಥಿ ಆಲಂಕಾರು ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನವೀನ್ ರೈ ಅವರು ಮಾತನಾಡಿ ವಿದ್ಯಾರ್ಥಿ ಸಂಘಗಳು ನಾಯಕತ್ವವನ್ನು ಮೈಗೂಡಿಸಿಕೊಳ್ಳಲು ಅತ್ಯಂತ ಸಶಕ್ತವಾದ ವೇದಿಕೆಯಾಗಿದೆ,ನಾಯಕತ್ವ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ Read More »

ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ಹೋದ ಮಹಿಳೆ ವಿದ್ಯುತ್ ಕಂಬ ಹಿಡಿದು ವಿದ್ಯುತ್ ಶಾಕ್‍ಗೆ ಬಲಿ

ಹೊಸದಿಲ್ಲಿ: ಪುತ್ತೂರು: ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದ ಮಹಿಳೆಯೊಬ್ಬರು ವಿದ್ಯುತ್ ಆಘಾತದಿಂದ ಮೃತಪಟ್ಟ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಮೃತಪಟ್ಟವರು. ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳೊಂದಿಗೆ ಬೆಳಿಗ್ಗೆ 5.30 ರ ಸುಮಾರಿ ರೈಲು ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಸಾಕ್ಷಿ ಅಹುಜಾ ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದಿದ್ದಾರೆ. ಈ ಸಂದರ್ಭ ಭಾರೀ ಪ್ರಮಾಣದ ವಿದ್ಯುತ್‍ ಪ್ರವಹಿಸಿ

ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ಹೋದ ಮಹಿಳೆ ವಿದ್ಯುತ್ ಕಂಬ ಹಿಡಿದು ವಿದ್ಯುತ್ ಶಾಕ್‍ಗೆ ಬಲಿ Read More »

ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆ

ಪುತ್ತೂರು: ಪ್ರಸ್ತುತ ಡ್ರಗ್ಸ್  ಸೇವನೆಯಿಂದ ಶೇಕಡಾ 70ರಷ್ಟು ಜನ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಇತ್ತೀಚಿನ ಯುವಜನಾಂಗ  ಈ ವಿಚಾರವಾಗಿ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಪುತ್ತೂರು ಘಟಕದ ಡಿವೈಎಸ್ಪಿ ಗಾನ ಪಿ ಕುಮಾರ್ ಹೇಳಿದರು. ಅವರು ಪೊಲೀಸ್ ಇಲಾಖೆ, ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ಐಕ್ಯುಎಸಿ  ಜಂಟಿ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ನಾವು ತೆಗೆದುಕೊಳ್ಳುವ  ಮಾತ್ರೆ, ವಿಕ್ಸ್, ಜ್ಯೂಸ್ ಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ

ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆ Read More »

ಬಂಟ್ವಾಳ ನೀರಪಾದೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶಿಲಾನ್ಯಾಸ

ಬಂಟ್ವಾಳ: ಬಂಟ್ವಾಳ ನೀರಪಾದೆ ಬಾಳ್ತಿಲ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ ಹಾಗೂ ಜೀರ್ಣೋದ್ಧಾರ ಸೇವಾ ಸಮಿತಿ ವತಿಯಿಂದ ನೀರಪಾದೆಯಲ್ಲಿ ನಾರಾಯಣ ಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಸೂರ್ಯೋದಯದ ಶುಭ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ನಿಡ್ಯೆ ಅವರ ಮುಂದಾಳತ್ವ ದಲ್ಲಿ ವೇ.ಮೂ. ಕೇಶವ ಶಾಂತಿಯವರಿಂದ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶಿಲಾನ್ಯಾಸ ನಡೆಯಿತು. ಅತಿಥಿಗಳಾಗಿ ಸಮಿತಿಯ ಗೌರವ ಅಧ್ಯಕ್ಷ ಡಾ | ಪ್ರಭಾಕರ ಭಟ್ ಕಲ್ಲಡ್ಕ , ಸೂರ್ಯನಾರಾಯಣ ಭಟ್ ಕಲಾಶ್ರಯ ದಾಸಕೋಡಿ , ಮಾಜಿ

ಬಂಟ್ವಾಳ ನೀರಪಾದೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶಿಲಾನ್ಯಾಸ Read More »

ದೇವಸ್ಥಾನದ ಒಳಗೆ ಅನ್ಯಮತೀಯರಿಂದ ಕ್ಯಾಮರಾ ಬಳಕೆ | ಸೂಕ್ತ ಕ್ರಮ ಕೈಗೊಳ್ಳುವಂತೆ ಪುತ್ತಿಲ ಪರಿವಾರದಿಂದ ಮನವಿ

ಪುತ್ತೂರು: ಹಿಂದೂ ದೇವಸ್ಥಾನದ ಒಳಗೆ ಅನ್ಯಮತೀಯರು ಪ್ರವೇಶಿಸಿದ್ದು, ದೇವಸ್ಥಾನದ ಒಳಗೆ ಕ್ಯಾಮರಾ ಬಳಕೆ ನಿಷೇಧವಾಗಿದ್ದರೂ ಭಾವಚಿತ್ರ ತೆಗೆಯುತ್ತಿರುವುದು ಭಕ್ತರ ಗಮನಕ್ಕೆ ಬಂದಿದ್ದು ಪುತ್ತಿಲ ಪರಿವಾರ ತೀವ್ರವಾಗಿ ಖಂಡಿಸಿದೆ. ಭಾವಚಿತ್ರ ತೆಗೆದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯಾದರೆ ದೇವಸ್ಥಾನದ ಆಡಳಿತ ಮಂಡಳಿ ನೇರ ಹೊಣೆಯಾಗಿರುತ್ತದೆ ಎಂದು ತಿಳಿಸಿದೆ. ದೇವಸ್ಥಾನದಲ್ಲಿನ ಹಾಗೂ ಭಕ್ತರ ನಂಬಿಕೆಗೆ ಧಕ್ಕೆಯಾದಲ್ಲಿ ಪುತ್ತಿಲ ಪರಿವಾರದಿಂದ ತೀವ್ರ ಹೋರಾಟ ನಡೆಸಲಾಗುವುದು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪುತ್ತಿಲ

ದೇವಸ್ಥಾನದ ಒಳಗೆ ಅನ್ಯಮತೀಯರಿಂದ ಕ್ಯಾಮರಾ ಬಳಕೆ | ಸೂಕ್ತ ಕ್ರಮ ಕೈಗೊಳ್ಳುವಂತೆ ಪುತ್ತಿಲ ಪರಿವಾರದಿಂದ ಮನವಿ Read More »

ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಮುಸ್ತಫಾ ಕೆಂಪಿ ನಿಧನ

ಪುತ್ತೂರು: ಉಪ್ಪಿನಂಗಡಿ ಮಾಲೀಕ್ ಜುಮ್ಮಾ ಮಸೀದಿ ಅಧ್ಯಕ್ಷ, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಮುಸ್ತಫಾ ಕೆಂಪಿ (49) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರನ್ನು ಕೆಲ ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಮಾಜಿಕ, ಧಾರ್ಮಿಕ ಸಂಘಟನೆಗಳು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದರು. ಉಪ್ಪಿನಂಗಡಿ ಗ್ರಾಪಂ ಮಾಜಿ ಸದಸ್ಯರಾಗಿ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾಗಿ, ಪುತ್ತೂರು ತಾಲೂಕು ಜಮಾಅತ್ ಉಪಾಧ್ಯಕ್ಷರಾಗಿ, ಮಾಡನ್ನೂರು ಹುದಾ ಇಸ್ಲಾಮಿಕ್ ಅಕಾಡೆಮಿ ಉಪಾಧ್ಯಕ್ಷರಾಗಿ, ಕಮ್ಮಾಡಿ

ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಮುಸ್ತಫಾ ಕೆಂಪಿ ನಿಧನ Read More »

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಈಶಾನ್ -ಫ್ರಾನ್ಸ್ ಗೆ

ಪುತ್ತೂರು: ಫ್ರಾನ್ಸ್ ನ ಪ್ಯಾರಿಸ್ ನಲ್ಲಿ ಜೂ.27ರಿಂದ ಜು.17ರ ತನಕ ನಡೆಯಲಿರುವ ಜಾಗತಿಕ ಮಟ್ಟದ ಆಹ್ವಾನಿತರ ಕೂಟ ಮತ್ತು ಅಂತಾರಾಷ್ಟ್ರೀಯ “ಹಿಪ್ ಹಾಪ್” ಡಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಲು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಈಶಾನ್ ಆಯ್ಕೆಯಾಗಿದ್ದು, ನಾಳೆ (ಜೂ.27)ರಂದು ಭಾಗವಹಿಸಲು ಫ್ರಾನ್ಸ್ ಗೆ ತೆರಳುವನು. Lock is not Joke ಎಂಬ ಅಂತಾರಾಷ್ಟ್ರೀಯ ಖ್ಯಾತಿಯ ಡಾನ್ಸ್ ಅಸೋಸಿಯನ್ ವತಿಯಿಂದ ಆಯೋಜಿಸಲ್ಪಡುವ ಈ ಸ್ಪರ್ಧೆಯಲ್ಲಿ ಜಗತ್ತಿನಾದ್ಯಂತ 40ದೇಶಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಿದ್ದು, ಭಾರತದಿಂದ ಭಾಗವಹಿಸುತ್ತಿರುವ ಏಕೈಕ

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಈಶಾನ್ -ಫ್ರಾನ್ಸ್ ಗೆ Read More »

ಮಂಗಳೂರು-ದುಬೈ ವಿಮಾನ ಯಾನ ದರ ಏರಿಕೆ | ರಜೆಯ ಸಮಯ ಬಳಕೆ ಮಾಡಿಕೊಂಡ ಇಂಡಿಯೋ ಮತ್ತು ಏರ್​ ಇಂಡಿಯಾ ಎಕ್ಸ್​ಪ್ರೆಸ್

ಮಂಗಳೂರು: ಮಂಗಳೂರು-ದುಬೈ ವಿಮಾನಯಾನ ದರ ಏರಿಕೆಯಾಗಿದ್ದು, ಈ ಮೂಲಕ ಕರಾವಳಿ ಭಾಗದಿಂದ ಉದ್ಯೋಗಕ್ಕೆಂದು ದುಬೈನಲ್ಲಿ ತೆರಳುವವರಿಗೆ ಶಾಕ್​ ಎದುರಾಗಿದೆ. ಬಕ್ರೀದ್​ ರಜೆಯಲ್ಲಿ ಊರಿಗೆ ಮರಳಬೇಕು ಎಂದುಕೊಂಡಿರುವ ಮಧ್ಯಮವರ್ಗದ ಭಾರತೀಯರು ವಿಮಾನಯಾನದ ದರ ಕೇಳಿ ಸುಸ್ತಾಗಿದ್ದಾರೆ. ದುಬೈನಲ್ಲಿ ಸೆಖೆ ವಿಪರೀತಗೊಳ್ಳುವ ಹಿನ್ನೆಲೆಯಲ್ಲಿ ಹಲವೆಡೆ ಬೇಸಿಗೆ ರಜೆ ಆರಂಭಗೊಂಡಿದೆ, ಅಲ್ಲದೇ ಬಕ್ರೀದ್​ ಹಬ್ಬ ಬೇರೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ಅನೇಕರು ವೆಕೇಷನ್​ನಲ್ಲಿ ಊರಿಗೆ ಮರಳುವ ಸಿದ್ಧತೆಯಲ್ಲಿದ್ದಾರೆ. ಆದರೆ ಏಕಾಏಕಿ ಏರಿಕೆಗೊಂಡಿರುವ ವಿಮಾನಯಾನ ದರದಿಂದ ಊರಿಗೆ ಬರುವ ನಿರ್ಧಾರದಿಂದ ಹಿಂದೆ ಸರಿಯುವಂತಾಗಿದೆ.ದುಬೈ

ಮಂಗಳೂರು-ದುಬೈ ವಿಮಾನ ಯಾನ ದರ ಏರಿಕೆ | ರಜೆಯ ಸಮಯ ಬಳಕೆ ಮಾಡಿಕೊಂಡ ಇಂಡಿಯೋ ಮತ್ತು ಏರ್​ ಇಂಡಿಯಾ ಎಕ್ಸ್​ಪ್ರೆಸ್ Read More »

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ

ಪುತ್ತೂರು: ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಸೋಮವಾರ ಪತ್ತೆಯಾಗಿದೆ. ಸುಮಾರು 40 ರಿಂದ 50 ವರ್ಷ ಪ್ರಾಯದ ಶವ ಗುರುತಿಸಲು ಅಸಾಧ್ಯವಾದ ಸ್ಥಿತಿಯಲ್ಲಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಧರ್ಮಸ್ಥಳ ಠಾಣಾ ಸಬ್‍ ಇನ್‍ ಸ್ಪೆಕ್ಟರ್ ಅನಿಲ್ ಕುಮಾರ್ ಡಿ., ಸಿಬ್ಬಂದಿ್ಗಳು ಪರಿಶೀಲನೆ ನಡೆಸಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಶವ ಪರೀಕ್ಷೆಗಾಗಿ ಸಾಗಿಸಲಾಗಿದೆ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ Read More »

error: Content is protected !!
Scroll to Top