ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಗಿಡಗಳಿಂದ ತುಲಾಭಾರ ಸೇವೆ | ವಿನೂತನ ಪರಂಪರೆಗೆ ನಾಂದಿ ಹಾಡಿದ ತುಲಾಭಾರ ಸೇವೆ
ಮಂಗಳೂರು: ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಗಿಡಗಳಿಂದ ವಿಶಿಷ್ಟವಾದ ತುಲಾಭಾರ ಸೇವೆ ಸಲ್ಲಿಸುವ ಮೂಲಕ ವಿನೂತನ ಪರಂಪರೆಗೆ ನಾಂದಿ ಹಾಡಲಾಯಿತು. ಹಿರಿಯ ವಿದ್ವಾಂಸ ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ತನ್ನ ನಿವಾಸದಲ್ಲಿ ಸ್ವಾಮೀಜಿಯವರಿಗೆ ವೃಕ್ಷ, ಬೀಜ, ಸಸಿಗಳಿಂದ ಕೂಡಿದ ಹಲಸು, ಮಾವು, ಹರಿವೆ, ಅಲಸಂಡೆ, ಹಾಗಲ, ತುಂಬೆ ಮುಂತಾದ ಸಸಿಗಳಿಂದ ತುಲಾಭಾರ ನೆರವೇರಿತು. ಪ್ರದೀಪ್ ಕುಮಾರ್ ಕಲ್ಕೂರ ಸಹಿತ ಭಕ್ತರೂ ತುಲಾಭಾರ ಸಸಿಗಳನ್ನು ತಂದಿದ್ದರು. ತುಲಾಭಾರದ ಬಳಿಕ ಈ ಗಿಡಗಳನ್ನು ಭಕ್ತರಿಗೆ […]










