ಮಳೆ, ಬೆಳೆಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ

ಪುತ್ತೂರು: ಪುತ್ತೂರು ಕ್ಷೇತ್ರದ ಜನತೆಗಾಗಿ ಮತ್ತು ಮಳೆ,ಬೆಳೆ ಗಾಗಿ ಪುತ್ತೂರು ಶಾಸಕ ಅಶೋಕ್ ರೈಯವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಿದರು.‌ ಮಳೆಗಾಲ ಆರಂಭವಾಗಿ ತಿಂಗಳು ಕಳೆಯುತ್ತಾ ಬಂದಿದೆ ಆದರೆ ಇನ್ನೂ ಸಮೃದ್ದವಾಗಿ ಮಳೆ ಬಂದಿಲ್ಲ. ಕೇತ್ರದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಬೆಳೆ ಬಂದು ಜನರಿಗೆ ನೆಮ್ಮದಿಯನ್ನು ಕರುಣಿಸುವಂತೆ ದೇವರಲ್ಲಿ ಪ್ರಾರ್ಥಿಸಿಕೊಂಡರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಮುರಳೀದರ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರ್ , ದೇವಸ್ಥಾನದ […]

ಮಳೆ, ಬೆಳೆಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಯ 50 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲಾನ್ ತಯಾರಿ | ಶಾಸಕರ ನೇತೃತ್ವದಲ್ಲಿ ಸಭೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮುಂದಿನ ನಡೆಯ ಕುರಿತು ಸಭೆ ಭಾನುವಾರ ದೇವಸ್ಥಾನದ ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ ಯೋಜನೆಗಳಾದ ದೇವಸ್ಥಾನದ ಎದುರಿನ ರಥಬೀದಿ ಕೊನೆಯಲ್ಲಿ ಮಹಾದ್ವಾರ ಧಾರ್ಮಿಕ ಶಿಕ್ಷಣ ಕೇಂದ್ರ, ವೇದಪಾಠ ಶಾಲೆ ಕಟ್ಟಡ, ಯಾತ್ರಿ ನಿವಾಸ್, ರಥ ಮಂದಿರ ಹೀಗೆ ಸುಮಾರು 45 ಪ್ರಾಜೆಕ್ಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಯ 50 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲಾನ್ ತಯಾರಿ | ಶಾಸಕರ ನೇತೃತ್ವದಲ್ಲಿ ಸಭೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತದ ಬೆಳೆಗೆ ಬೀಜ ಬಿತ್ತನೆ ಮೂಲಕ ಚಾಲನೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳದ ಮೂರು ವರ್ಷಗಳ ಹಿಂದೆ ಆರಂಭಿಸಿದ ಹಡಿಲು ಗದ್ದೆಯಲ್ಲಿ ಬಿತ್ತನೆ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಯಿತು. ದೇವಸ್ಥಾನದ ಸುಮಾರು ಎರಡು ಎಕ್ರೆ ಜಾಗದಲ್ಲಿ ಏಣೇಲು ಬೇಸಾಯಕ್ಕೆ ಶಾಸಕ ಅಶೋಕ್ ಕುಮಾರ್ ರೈ ಬೀಜ ಬಿತ್ತುವ ಮೂಲಕ ಚಾಲನೆ ನೀಡಿದರು. 2021 ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಯೋಜನೆಯಂತೆ ತಾಲೂಕಿನಲ್ಲಿ ಹಲವು ದೇವಸ್ಥಾನಗಳ ಗದ್ದೆ ಸೇರಿದಂತೆ ಇನ್ನಿತರ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಈ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತದ ಬೆಳೆಗೆ ಬೀಜ ಬಿತ್ತನೆ ಮೂಲಕ ಚಾಲನೆ Read More »

ಸಾವಿರಕ್ಕೂ ಅಧಿಕ ಮಹಿಳೆಯರ ಗುಂಪಿನಿಂದ ಸೇನಾ ನೆಲೆಯ ಮೇಲೆ ದಾಳಿ | ಸೆರೆಯಲ್ಲಿದ್ದ 12 ಬಂಡುಕೋರರ ಬಿಡುಗಡೆ

ಇಂಫಾಲ : ಮಹಿಳೆಯರ ಗುಂಪೊಂದು ಸೇನಾ ನೆಲೆಗೆ ಮುತ್ತಿಗೆ ಹಾಕಿ ಸೈನಿಕರ ಸೆರೆ ಹಿಡಿದಿದ್ದ 12 ಬಂಡುಕೋರರನ್ನು ಬಿಡಿಸಿಕೊಂಡು ಹೋದ ಘಟನೆ ಮಣಿಪುರದಲ್ಲಿ ನಡೆದಿದೆ. ಪೂರ್ವ ಇಂಫಾಲದ ಇಥಾಮ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು 1200 ಕ್ಕೂ ಮಿಕ್ಕಿ ಮಹಿಳೆಯರ ಗುಂಪು ಸೇನಾ ಪಡೆಯನ್ನು ಸುತ್ತುವರಿದಿದ್ದು, ಬಂಡುಕೋರರನ್ನು ಬಿಡುವಂತೆ ಒತ್ತಾಯಿಸಿದೆ. ಹೆಚ್ಚಿನ ಅನಾಹುತ ತಪ್ಪಿಸಲು ಸೇವೆ ಅವರನ್ನು ಬಿಟ್ಟು ಕಳುಹಿಸಿದೆ ಎಂದು ಸೇನೆ ಟ್ವಿಟರ್ ಮೂಲಕ ತಿಳಿಸಿದೆ. ಮೆಟಾಯಿ ಬಂಡುಕೋರರ ಗುಂಪಿಗೆ ಸೇರಿದ 12

ಸಾವಿರಕ್ಕೂ ಅಧಿಕ ಮಹಿಳೆಯರ ಗುಂಪಿನಿಂದ ಸೇನಾ ನೆಲೆಯ ಮೇಲೆ ದಾಳಿ | ಸೆರೆಯಲ್ಲಿದ್ದ 12 ಬಂಡುಕೋರರ ಬಿಡುಗಡೆ Read More »

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವೇದವೃತ ಭಂಡಾರಿಗೆ ಎರಡು ಬೆಳ್ಳಿ ಪದಕ

ಪುತ್ತೂರು : ಬೆಂಗಳೂರಿನಲ್ಲಿ ನಡದ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ವೇದವೃತ ಭಂಡಾರಿ ಚಿಲ್ಮೆತ್ತಾರು ಎರಡು ಬೆಳ್ಳಿ ಪದಕ ಪಡೆದುಕೊಂಡಿದ್ದಾನೆ. 4X50m ಮಿಡ್ಲೆ ರಿಲೇ ಹಾಗೂ 4x25m Manikan curry  ವಿಭಾಗಗಳಲ್ಲಿ ಸ್ಪರ್ಧಿಸಿ ಎರಡು ಬೆಳ್ಳಿ  ಪದಕಗಳನ್ನು ಪಡೆದುಕೊಂಡಿರುತ್ತಾನೆ. ಬಾಲವನ ಈಜು ಕೊಳದಲ್ಲಿ ಈಜು ತರಬೇತಿಯನ್ನು ರೋಹಿತ್.ಪಿ ಮತ್ತು ದೀಕ್ಷಿತ್ ಅವರಿಂದ ಪಡೆದಿರುತ್ತಾನೆ. ಈತ ಚಿಲ್ಮೆತ್ತಾರು ಸಂತೋಷ್ ಭಂಡಾರಿ ಮತ್ತು ಮೀನಾಕ್ಷಿ ಎಸ್.ಭಂಡಾರಿ ದಂಪತಿ ಪುತ್ರ

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವೇದವೃತ ಭಂಡಾರಿಗೆ ಎರಡು ಬೆಳ್ಳಿ ಪದಕ Read More »

ಮನೆಯಲ್ಲೇ ಗಾಂಜಾ ಬೆಳೆ ಬೆಳೆದ ವಿದ್ಯಾರ್ಥಿಗಳು | ಐದು ಮಂದಿಯ ಬಂಧನ

ಶಿವಮೊಗ್ಗ :   ವೈದ್ಯಕೀಯ ವಿಧ್ಯಾಭ್ಯಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ತಾವು ವಾಸವಿದ್ದ ಬಾಡಿಗೆ ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಇದೀಗ ಶಿವಮೊಗ್ಗ ಪೊಲೀಸರು 5 ಮಂದಿ ಎಂಬಿಬಿಎಸ್ ವಿಧ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಅಬ್ದುಲ್ ಖಯ್ಯಂ, ಅರ್ಪಿತಾ, ವಿಘ್ನರಾಜ್, ವಿನೋದ್ ಕುಮಾರ್, ಪಾಂಡಿದೊರೈ ಬಂಧಿತ ಆರೋಪಿಗಳು. ಅಬ್ದುಲ್ ಖಯ್ಯಂ, ವಿಘ್ನರಾಜ್ ಹಾಗೂ ಅರ್ಪಿತಾ ಶಿವಮೊಗ್ಗದ ಶಿವಗಂಗಾ ಲೇಔಟ್ ನಲ್ಲಿ ವಾಸಕ್ಕೆ ಬಾಡಿಗೆ ಮನೆ ಪಡೆದಿದ್ದರು. ಅದೇ ಮನೆಯಲ್ಲೇ ಹೂ

ಮನೆಯಲ್ಲೇ ಗಾಂಜಾ ಬೆಳೆ ಬೆಳೆದ ವಿದ್ಯಾರ್ಥಿಗಳು | ಐದು ಮಂದಿಯ ಬಂಧನ Read More »

ನಾಳೆ (ಜೂ.26) : ಸಂಘ ಪರಿವಾರ ಸಂಘಟನೆಗಳ ಬೈಠಕ್ | ಹಿಂದೂ ಸಂಘಟಕ ಅರುಣ್‌ಕುಮಾರ್‌ಪುತ್ತಿಲ ಅವರ ವಿಚಾರ ಚರ್ಚೆಗೆ ಬರುವ ಸಾಧ್ಯತೆ

ದ.ಕ.ಜಿಲ್ಲಾ ವ್ಯಾಪ್ತಿಯ ಸಂಘ ಪರಿವಾರ ಸಂಘಟನೆಗಳ ಸಮನ್ವಯ ಬೈಠಕ್‌ಜೂ.26ರಂದು ಮಂಗಳೂರಿನಲ್ಲಿ ನಡೆಯಲಿದೆ. ಸುಮಾರು ಒಂದು ವರ್ಷದ ಬಳಿಕ ಸಭೆ ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುವ ಈ ಬೈಠಕ್‌ನಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಮಟ್ಟದ ಪ್ರಮುಖರು ಭಾಗವಹಿಸಲಿದ್ದಾರೆ. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ಕಟೀಲ್‌ಸಹಿತ ಬಿಜೆಪಿ ಹಾಗೂ ಸಂಘಪರಿವಾರದ 25ಕ್ಕೂ ಅಧಿಕ ಸಂಘಟನೆಗಳ 100ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ.ಬಿಜೆಪಿಯಿಂದ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಹಪ್ರಭಾರಿ, ಸಂಘಟನಾ ಕಾರ್ಯದರ್ಶಿಗಳು ಸೇರಿದಂತೆ ಇತರೆ ಪರಿವಾರ ಸಂಘಟನೆಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸ್ತರದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ದ.ಕ

ನಾಳೆ (ಜೂ.26) : ಸಂಘ ಪರಿವಾರ ಸಂಘಟನೆಗಳ ಬೈಠಕ್ | ಹಿಂದೂ ಸಂಘಟಕ ಅರುಣ್‌ಕುಮಾರ್‌ಪುತ್ತಿಲ ಅವರ ವಿಚಾರ ಚರ್ಚೆಗೆ ಬರುವ ಸಾಧ್ಯತೆ Read More »

ಮುಸ್ಲಿಂ ಸಮುದಾಯ ಒಕ್ಕೂಟದಿಂದ ಯು.ಟಿ.ಖಾದರ್, ಅಶೋಕ್ ರೆ‘ಗೆ ಸನ್ಮಾನ

ಪುತ್ತೂರು : ಯುವಕ ಸಮುದಾಯ ಸಮಾಜ ಕಟ್ಟುವವಲ್ಲಿ ನಿರತರಾಗಬೇಕೇ ಹೊರತು ಬಿಕ್ಕಟ್ಟು ಸೃಷ್ಠಿಸಬಾರದು. ಅದೇ ರೀತಿ ಸಮಸ್ಯೆಯನ್ನು ಬಗೆಹರಿಸಬೇಕು ಹೊರತು ಸಮಸ್ಯೆಯನ್ನು ಸೃಷ್ಠಿಸುವ ಕೆಲಸ ಮಾಡಬಾರದು ಎಂದು ನೂತನ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಪುತ್ತೂರಿನ ಮುಸ್ಲಿಂ ಸಮುದಾಯ ಒಕ್ಕೂಟದ ವತಿಯಿಂದ ಶನಿವಾರ ಸಂಜೆ ಇಲ್ಲಿನ ಪುರಭವನದಲ್ಲಿ ನೂತನ ಸ್ಪೀಕರ್ ಯು.ಟಿ. ಖಾದರ್ ಮತ್ತು ಶಾಸಕ ಅಶೋಕ್ ಕುಮಾರ್ ರೆ‘ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಯುವ ಸಮುದಾಯ ಉತ್ತಮ ನಡೆಯೊಂದಿಗೆ ಮುಂದುವರಿದಲ್ಲಿ ಸಮಾಜ

ಮುಸ್ಲಿಂ ಸಮುದಾಯ ಒಕ್ಕೂಟದಿಂದ ಯು.ಟಿ.ಖಾದರ್, ಅಶೋಕ್ ರೆ‘ಗೆ ಸನ್ಮಾನ Read More »

ಅಬುದಾಬಿ ಲಾಟರಿಯಲ್ಲಿ 45 ಕೋಟಿ ಗೆದ್ದ  ಸುಳ್ಯದ ಯುವಕ

 ಸುಳ್ಯ  ಅಬುದಾಬಿಯಲ್ಲಿ ನೆಲೆಸಿರುವ ಸುಳ್ಯ ಗಾಂಧಿ ನಗರ ನಿವಾಸಿಯೊಬ್ಬರು ಲಾಟರಿಯ ಯಲ್ಲಿ 45 ಕೋಟಿ ಗೆದ್ದಿದ್ದಾರೆ. ಗಾಂಧಿನಗರ ಶಾಲಾ ಹಿಂಬದಿ ನಿವಾಸಿ ಇರ್ಫಾನ್ (ಇರ್ಪೂ)  ಬಿಗ್ ಟಿಕೆಟ್ ಡ್ರಾದಲ್ಲಿ 20 ಮಿಲಿಯ ಅಂದರೆ 45 ಕೋಟಿ ಗೆದ್ದಿದ್ದಾರೆ ಇವರು ಗಾಂಧಿ ನಗರ ಹೈಸ್ಕೂಲ್ ನಲ್ಲಿ SSLC ಪಡೆದು ಅಬುದಾಬಿಯ ಪ್ರತಿಷ್ಠಿತ ಮೊಬೈಲ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಅಬುದಾಬಿ ಲಾಟರಿಯಲ್ಲಿ 45 ಕೋಟಿ ಗೆದ್ದ  ಸುಳ್ಯದ ಯುವಕ Read More »

ಇಂದು ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಚಾನೆಲ್‍ ನೊಂದಿಗೆ

ಪುತ್ತೂರು: ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಚಾನೆಲ್ ನೊಂದಿಗಿನ ಮಾತುಕತೆ  ಇಂದು ಸಂಜೆ 5.57 ಕ್ಕೆ ಪ್ರಸಾರಗೊಳ್ಳಲಿದೆ. ವಿಧಾನಸಭಾ ಚುನಾವಣೆ ಬಳಿಕ ಅರುಣ್ ಕುಮಾರ್ ಪುತ್ತಿಲರು ಖ್ಯಾತಿ ಗಳಿಸುತ್ತಿದ್ದು, ಹೊರ ಜಿಲ್ಲೆಗಳಲ್ಲೂ ತನ್ನ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅವರ ಸಂದರ್ಶನ ಹೆಚ್ಚಿನ ಮಹತ್ವ ಪಡೆದುಕೊಳ್ಳಲಿದೆ.

ಇಂದು ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಚಾನೆಲ್‍ ನೊಂದಿಗೆ Read More »

error: Content is protected !!
Scroll to Top