ಮೆಟ್ರೋ ದರ ಏರಿಕೆ: ಡಿ ಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಅಸಮಾಧಾನ ಎದ್ದಿದೆ. ಈ ಬಗ್ಗೆ ಮಾತನಾಡಿರುವ ಡಿ.ಸಿ.ಎಂ. ಡಿ. ಕೆ. ಶಿವಕುಮಾರ್ ಅವರು ಮೆಟ್ರೋ ದರ ಪರಿಷ್ಕರಣೆಗೆ ಸಂಬಂಧಿಸಿದ ಹಾಗೆ ಮಾತನಾಡುತ್ತೇವೆ. ಯಾವ ಕಾರಣಕ್ಕೂ ಜನರಿಗೆ ಸಮಸ್ಯೆಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳ‌ ಮೂಲಕ ಮೆಟ್ರೋ ದರ ಏರಿಕೆಯಾಗಿದೆ ಎನ್ನುವುದನ್ನು ನೋಡಿದ್ದೇನೆ. ಈ ಬಗ್ಗೆ ನಮ್ಮನ್ನು ಯಾರೂ ಸಂಪರ್ಕಿಸಿಲ್ಲ. ಕೇಂದ್ರ ಸರ್ಕಾರದ ಚೇರ್ಮನ್ ಮೆಟ್ರೋ ಚೇರ್ಮನ್ ಆಗಿದ್ದಾರೆ. ಇಂದು ಅಥವಾ ನಾಳೆ ಅವರೊಂದಿಗೆ ಮಾತುಕತೆ […]

ಮೆಟ್ರೋ ದರ ಏರಿಕೆ: ಡಿ ಕೆ ಶಿವಕುಮಾರ್ ಹೇಳಿದ್ದೇನು? Read More »

ಕುದ್ಮಾರು ಶಾಲೆ: ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ

ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ MRPL CRS ಫಂಡ್ ನ 15 ಲಕ್ಷ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುವ ಮುನ್ನವೇ ಸಂಸದರಿಂದ ಉದ್ಘಾಟನೆ ಆಗುವಂತೆ ಆಗಲಿ. ಈ ಕಾರ್ಯಕ್ಕೆ ಎಲ್ಲರೂ ಸಹಕರಿಸಿ ಒಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಭಾರತೀಯ

ಕುದ್ಮಾರು ಶಾಲೆ: ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ Read More »

ಜೈಲಿನಲ್ಲಿದ್ದ ಉಗ್ರ ಅನಾರೋಗ್ಯದಿಂದ ಸಾವು

ಆರು ವರ್ಷಗಳಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಉಗ್ರ ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತನಾಗಿದ್ದ ಸಾಧಿಕ್ ಪಾಷಾ (47) ಅನಾರೋಗ್ಯದಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಸಾದಿಕ್ ಪಾಷಾ ಕಳೆದ ಆರು ತಿಂಗಳಿಂದ ಲೋ ಬಿಪಿ ಹಾಗೂ ಹೈ ಶುಗರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ

ಜೈಲಿನಲ್ಲಿದ್ದ ಉಗ್ರ ಅನಾರೋಗ್ಯದಿಂದ ಸಾವು Read More »

ಮೆಟ್ರೋ ದರ ಏರಿಕೆಯಲ್ಲಿ ಕೇಂದ್ರವನ್ನೇಕೆ ದೂಷಿಸುವುದು?: ರಾಜ್ಯ ಸರ್ಕಾರಕ್ಕೆ HDK ಪ್ರಶ್ನೆ

ಬೆಂಗಳೂರು: ಮೆಟ್ರೋ ದರ ಏರಿಕೆ ಖಂಡಿಸಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ ಏರಿಕೆ ಮಾಡಿದರೆ ಜನರು ಸಂತೋಷದಿಂದ ಎಲ್ಲವನ್ನೂ ಕೊಡುತ್ತಾರೆ ಎನ್ನುವುದು ಮುಖ್ಯಮಂತ್ರಿಗಳ ಭ್ರಮೆ ಎಂದು ಅವರು ತಿಳಿಸಿದ್ದಾರೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರದ ಪಾಲು 20% ಇದೆ ಎಂದು ದರ ಏರಿಕೆಯನ್ನು ಕೇಂದ್ರ ಸರ್ಕಾರದ ತಲೆಗೆ ಕಟ್ಟುವುದು ಸರಿಯಲ್ಲ. ಹೆಚ್ಚಿನ ಹಣ ರಾಜ್ಯ ಸರ್ಕಾರವೇ ಈ ಯೋಜನೆಗೆ ಬಳಸಿದೆ ಎಂದಾದ ಮೇಲೆ ದರ ನಿಗದಿ ಮಾಡುವ

ಮೆಟ್ರೋ ದರ ಏರಿಕೆಯಲ್ಲಿ ಕೇಂದ್ರವನ್ನೇಕೆ ದೂಷಿಸುವುದು?: ರಾಜ್ಯ ಸರ್ಕಾರಕ್ಕೆ HDK ಪ್ರಶ್ನೆ Read More »

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ:ರಾಜ್ಯ ಮಾಧ್ಯಮ ವಕ್ತಾರರಾಗಿ ಪತ್ರಕರ್ತ ಯೂಸುಫ್ ರೆಂಜಲಾಡಿ

ಪುತ್ತೂರು: ನಾಡು-ನುಡಿ ಹಾಗೂ ಸರಕಾರಿ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ರಾಜ್ಯಾದ್ಯಂತ ನಡೆಯುತ್ತಿರುವ `ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದ ಕರ್ನಾಟಕ ರಾಜ್ಯ ಮಾಧ್ಯಮ ವಕ್ತಾರರಾಗಿ ಪುತ್ತೂರಿನ ಪತ್ರಕರ್ತ ಯೂಸುಫ್ ರೆಂಜಲಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಪತ್ರಿಕೋಧ್ಯಮದ ಜೊತೆಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಯೂಸುಫ್ ರೆಂಜಲಾಡಿಯವರು ಕಳೆದ 12 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2 ಅವಧಿಗೆ ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ರೆಂಜಲಾಡಿ ಕೆವೈಎಂಎ ಅಧ್ಯಕ್ಷರಾಗಿ, ಸರ್ವೆ ಸೌಹಾರ್ದ

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ:ರಾಜ್ಯ ಮಾಧ್ಯಮ ವಕ್ತಾರರಾಗಿ ಪತ್ರಕರ್ತ ಯೂಸುಫ್ ರೆಂಜಲಾಡಿ Read More »

ತುಮಕೂರಿನ ನಾಲ್ವರು ಬಿಹಾರದಲ್ಲಿ ನಿಗೂಢವಾಗಿ ಸಾವು

ಧರ್ಮಶಾಲೆಯಲ್ಲಿ ಮೂರು ದಿನದಿಂದ ಕೊಳೆಯುತ್ತಿದ್ದವು ಶವಗಳು ನಳಂದ : ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರು ಶುಕ್ರವಾರ ಬಿಹಾರದ ನಳಂದ ಜಿಲ್ಲೆಯ ರಾಜಗೀರ್‌ನ ಧರ್ಮಶಾಲೆಯೊಂದರಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಶವಗಳಾಗಿ ಪತ್ತೆಯಾಗಿದ್ದಾರೆ. ಶವಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಪ್ರಕರಣದ ತನಿಖೆಗಾಗಿ ಕರ್ನಾಟಕ ಪೊಲೀಸರ ತಂಡ ಬಿಹಾರಕ್ಕೆ ತೆರಳಿದೆ. ಮೃತರನ್ನು ತಾಯಿ ಜಿ.ಆರ್.ಸುಮಂಗಲಾ (78), ಮಗ ಜಿ.ಆರ್.ನಾಗಪ್ರಸಾದ್ (50) ಹಾಗೂ ಆಕೆಯ ಇಬ್ಬರು ಪುತ್ರಿಯರಾದ ಜಿ.ಆರ್.ಶಿಲ್ಪಾ (48) ಹಾಗೂ ಜಿ.ಆರ್‌.ಶ್ರುತಾ (43) ಎಂದು ಗುರುತಿಸಲಾಗಿದೆ. ಸುಮಂಗಲಾ,

ತುಮಕೂರಿನ ನಾಲ್ವರು ಬಿಹಾರದಲ್ಲಿ ನಿಗೂಢವಾಗಿ ಸಾವು Read More »

ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ಮಂಗಳೂರು : ಕಾರಿನಲ್ಲಿ ಗಾಂಜಾ ತುಂಬಿಸಿಕೊಂಡು‌ ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಮುಡಿಪು ಬಳಿ ಬಂಧಿಸಿ‌ ಅಪಾರ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನೌಶಾದ್ ಮತ್ತು ಇಬ್ರಾಹಿಂ ಎಂದು‌ ಗುರುತಿಸಲಾಗಿದೆ. ಆರೋಪಿಗಳು ಮೇಲ್ಕಾರ್ – ಸಜೀಪ – ಬೋಳಿಯಾರು ಮಾರ್ಗವಾಗಿ ಗಾಂಜಾದ ಕಟ್ಟುಗಳನ್ನು ತೆಗೆದುಕೊಂಡು ಮುಡಿಪು ಮತ್ತು ಕೇರಳ ರಾಜ್ಯಕ್ಕೆ ಮಾರಾಟ ಮಾಡಲು ತರುತ್ತಿದ್ದಾರೆಂದು ಮಾಹಿತಿ ಬಂದ‌ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸರು ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ.

ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ Read More »

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (91) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ನಿಧನರಾದರು. 1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಅಪ್ಪಣ್ಣ ಹೆಗ್ಡೆ 1960ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಬಳಿಕ ಅಧ್ಯಕ್ಷರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಪ್ಪಣ್ಣ ಹೆಗ್ಡೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರಲ್ಲದೆ ಸುದೀರ್ಘ ಕಾಲ ಬಸ್ರೂರಿನ ಶ್ರೀ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ Read More »

ಭಾರತದ ಸುಂಕ ಕಡಿತ ಒಪ್ಪಂದಕ್ಕೆ ಟ್ರಂಪ್‌ ಅಂಕಿತ

ಭಾರತ-ಅಮೆರಿಕ 500 ಶತಕೋಟಿ ಡಾಲರ್‌ ವ್ಯಾಪಾರ ಒಪ್ಪಂದ ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಕ್ಕೆ ಅಂಕಿತ ಬಿದ್ದಿದೆ. ರಷ್ಯಾ ತೈಲ ಖರೀದಿ ಹಿನ್ನೆಲೆ ಭಾರತದ ಆಮದು ಸರಕುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ 25% ಸುಂಕ ಕಡಿತಗೊಳಿಸುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದಾರೆ. ಅಮೆರಿಕ ಮತ್ತು ಭಾರತದ ನಡುವೆ 500 ಶತಕೋಟಿ ಡಾಲರ್‌ ಒಪ್ಪಂದವಾಗಿದ್ದು, ಈ ಹಿನ್ನೆಲೆ ಭಾರತದ ಮೇಲಿನ ಮೂಲ ಸುಂಕವನ್ನು 25% ನಿಂದ 15%ಗೆ ಇಳಿಕೆ ಮಾಡಲಾಗಿತ್ತು. ಇದೀಗ

ಭಾರತದ ಸುಂಕ ಕಡಿತ ಒಪ್ಪಂದಕ್ಕೆ ಟ್ರಂಪ್‌ ಅಂಕಿತ Read More »

ಕಡಬ: ಅರಣ್ಯ ಇಲಾಖೆಯ ನೆಡುತೋಪು ಬೆಂಕಿಗಾಹುತಿ

ಎರಡು ಎಕರೆ ಪ್ರದೇಶದ ಮರ-ಗಿಡ ಸುಟ್ಟು ಕರಕಲು ಕಡಬ : ತಾಲೂಕಿನ ಕಾಯ್ಮಣ ಗ್ರಾಮದ ಮುಂಗ್ಲಿಮಜಲು ಪದವು ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ನೆಡುತೋಪು ಹಾಗೂ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾದ ಘಟನೆ ಶುಕ್ರವಾರ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿರುವುದಾಗಿ ಅಂದಾಜಿಸಲಾಗಿದ್ದು, ಮಧ್ಯಾಹ್ನದ ಧಗಧಗಿಸುವ ಬಿಸಿಲಿನ ಸಂದರ್ಭದಲ್ಲಿ ಬೆಂಕಿ ಬಿದ್ದು ಅರಣ್ಯ ಪ್ರದೇಶವನ್ನು ಆವರಿಸಿಕೊಂಡಿದೆ, ಮುಂಗ್ಲಿಮಜಲು, ಪದವು ಪ್ರದೇಶದಲ್ಲಿ ಅರಣ್ಯ ಇಲಾಖೆಯವರು ನಾಟಿ ಮಾಡಿರುವ ನೆಡುತೋಪಿನ ಹಣ್ಣು ಹಂಪಲುಗಳ ಗಿಡಗಳು

ಕಡಬ: ಅರಣ್ಯ ಇಲಾಖೆಯ ನೆಡುತೋಪು ಬೆಂಕಿಗಾಹುತಿ Read More »

error: Content is protected !!
Scroll to Top