ಎರಡೂವರೆ ವರ್ಷದಲ್ಲಿ ಅಗದ ಕೆಲಸ ಮೂರೇ ದಿನದಲ್ಲಿ ನಡೆದೇ ಹೋಯ್ತು | ಅಶೋಕ್ ರೈಗೆ ಓಟು ಹಾಕದೆ ತಪ್ಪು ಮಾಡಿದೆ ಎಂದ ನಾಗರಿಕ

ಪುತ್ತೂರು; ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿರುವ ವ್ಯಕ್ತಿಯೋರ್ವರು ತನ್ನ ಮನೆಯ ಬಳಿ ಇರುವ ಹಂಪನ್ನು ತೆಗೆದು ಬಿಡಿ ರಾತ್ರಿ ವಾಹನಗಳ ಜಂಪ್‌ಗೆ ನಿದ್ದೆ ಬರುತ್ತಿಲ್ಲ ಎಂದು ಕಚೇರಿಗೆ, ಮಾಜಿ ಶಾಸಕರ ಕಚೇರಿಗೆ ಅಲೆದಾಡಿ ಅಲೆದಾಡಿ ಸಾಕಾಗಿ ಹೋಗಿ ಕೊನೆಗೆ ಪುತ್ತೂರಿನ ಶಾಸಕರಾದ ಅಶೋಕ್ ರೈ ಬಳಿ ಹೇಳಿಕೊಂಡಾಗ ಮೂರೇ ದಿನದಲ್ಲಿ ಹಂಪನ್ನು ತೆರವು ಮಾಡಲಾಗಿದೆ. ಶಾಸಕರ ಅಧಿಕಾರದ ಪವರನ್ನು ಕಂಡ ಆ ವ್ಯಕ್ತಿ ನಾನು ಅಶೋಕ್ ರೈಗೆ ಓಟು ಹಾಕದೆ ತಪ್ಪು ಮಾಡಿದೆ ಎಂದು ತನ್ನ ಸ್ನೇಹಿತರಲ್ಲಿ ಹೇಳಿಕೊಂಡಿದ್ದು […]

ಎರಡೂವರೆ ವರ್ಷದಲ್ಲಿ ಅಗದ ಕೆಲಸ ಮೂರೇ ದಿನದಲ್ಲಿ ನಡೆದೇ ಹೋಯ್ತು | ಅಶೋಕ್ ರೈಗೆ ಓಟು ಹಾಕದೆ ತಪ್ಪು ಮಾಡಿದೆ ಎಂದ ನಾಗರಿಕ Read More »

ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

ತೆಲಂಗಾಣ : ತೆಲಂಗಾಣದಲ್ಲಿ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಮಗು ಗಂಭೀರ ಗಾಯಗೊಂಡಿದೆ. ತೆಲಂಗಾಣದ ಕಾಮರೆಡ್ಡಿ ಗಾಂಧಾರಿ ಮಂಡಲದ ಮುಧೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಯಿ ದಾಳಿಯಿಂದ ಬಾಲಕನ ತಲೆ ಹಾಗೂ ಹೊಟ್ಟೆಗೆ ಗಾಯವಾಗಿದೆ. ಗ್ರಾಮದ ಫಂಕ್ಷನ್ ಹಾಲ್‍ನ ಹೊರಗಡೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದೆ. ಗಾಯಗೊಂಡು ನೋವಿನಿಂದ ನರಳುತ್ತಿದ್ದ ಬಾಲಕನನ್ನು ಕಂಡು ಸ್ಥಳೀಯರು ನಾಯಿಯಿಂದ ಬಿಡಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟದಲ್ಲಿ 7ನೇ ಸ್ಥಾನ

ಪುತ್ತೂರು : ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ದೆಹಲಿಯಲ್ಲಿ ನಡೆಸಿದ  66ನೇ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿದ್ಯಾಭಾರತಿಯನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಏಳನೇ ಸ್ಥಾನವನ್ನು ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದೆ. ತಂಡದಲ್ಲಿ ವಿದ್ಯಾರ್ಥಿಗಳಾದ ಪವನ್, ಗುರುಪ್ರಸಾದ್, ಭರತ್, ಅಶ್ವಿತ್ ಭಂಡಾರಿ, ನಂದನ್, ಮಂಜುನಾಥ, ಸಾತ್ವಿಕ್, ಪವನ್ ಕುಮಾರ್, ಶ್ರೀನಿಶ್, ಜೀವನ್ ಭಾಗವಹಿಸಿದ್ದರು. ಕಾಲೇಜಿನ  ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್,  ಡಾ. ಜ್ಯೋತಿ ,ಯತೀಶ್ ಬಾರ್ತಿಕುಮೆರ್ ಹಾಗೂ ಕಾರ್ತಿಕ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟದಲ್ಲಿ 7ನೇ ಸ್ಥಾನ Read More »

ಮನೆಯೊಳಗೆ ಬಿದ್ದು ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ | ಮನೆಗೆ ಭೇಟಿ ನೀಡಿ ಶಾಸಕರಿಂದ ಸಾಂತ್ವನ

ಪುತ್ತೂರು: ಅನಾರೋಗ್ಯದಿಂದಿದ್ದ ಮೆಸ್ಕಾಂ ಪವರ್‌ಮ್ಯಾನ್ ಮನೆಯೊಳಗೆ ಕುಸಿದು ಬಿದ್ದು ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು ಮೃತರ ಮನೆಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕುರಿಯ ಗ್ರಾಮದ ಇಡಬೆಟ್ಟು ಕುಂಡಕೋರಿ ನಿವಾಸಿ ಕುಂಡ ಮೇರ ಎಂಬವರ ಪುತ್ರ ಕುಂಬ್ರದಲ್ಲಿ ಮೆಸ್ಕಾಂ ಪವರ್‌ಮ್ಯಾನ್ ಆಗಿ ಕರ್ತವ್ಯದಲ್ಲಿರುವ ಉಮೇಶ್ ಕುಂಡಕೋರಿ (42) ರವರು ಕೆಲದಿನಗಳಿಂದ ಅನಾರೋಗ್ಯ  ಪೀಡಿತರಾಗಿದ್ದು ಜೂ. 12 ರಂದು ರಾತ್ರಿ ಮನೆಯೊಳಗೆ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ

ಮನೆಯೊಳಗೆ ಬಿದ್ದು ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ | ಮನೆಗೆ ಭೇಟಿ ನೀಡಿ ಶಾಸಕರಿಂದ ಸಾಂತ್ವನ Read More »

ಪುತ್ತೂರು ಪತ್ರಿಕಾಭವನದಲ್ಲಿ ಕ್ಷಯಮುಕ್ತ ಭಾರತ ಮಾಹಿತಿ ಶಿಬಿರ

ಪುತ್ತೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುತ್ತೂರು ಕ್ಷಯರೋಗ ಚಿಕಿತ್ಸಾ ಘಟಕ ., ರಾಷ್ಟ್ರೀಯ ಕ್ಷಯ ನಿರ್ಮೂಲನಾ ಸಮಿತಿ ಹಾಗೂ ತಾಲೂಕು ಕಾರ್ಯನಿರತ ಪತ್ರಕರ್ತ ರ ಸಂಘದ ವತಿಯಿಂದ ಕ್ಷಯಮುಕ್ತ ಭಾರತ-ಮಾಹಿತಿ ಶಿಬಿರ ಮಂಗಳವಾರ ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶಿಬಿರ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಒತ್ತಡದ ಧಾವಂತದಿಂದ ಪತ್ರಕರ್ತರು ತಮ್ಮ ಜೀವನ ಗೊನೆಗೊಳಿಸುವ ತನಕದ ಪರಿಸ್ಥಿತಿ ಉಂಟಾಗಿದೆ. ಕಳೆದ ಕೋವಿಡ್ ಸಂದರ್ಭದಲ್ಲಿ ಹಲವಾರು

ಪುತ್ತೂರು ಪತ್ರಿಕಾಭವನದಲ್ಲಿ ಕ್ಷಯಮುಕ್ತ ಭಾರತ ಮಾಹಿತಿ ಶಿಬಿರ Read More »

ಪೊಲೀಸ್ ದೌರ್ಜನ್ಯಕ್ಕೊಳಗಾದವರಿಗೆ ಪುತ್ತಿಲ ಪರಿವಾರದಿಂದ ಒಂದು ಲಕ್ಷ ರೂ. ಸಹಾಯಧನ

ಪುತ್ತೂರು: ಚುನಾವಣೆ ಕಳೆದ ನಂತರ ಬ್ಯಾನರ್ ವಿಷಯಕ್ಕೆ ಸಂಬಂಧಿಸಿದಂತೆ  ಅಮಾನುಷವಾಗಿ ಪೊಲೀಸ್ ದೌರ್ಜನ್ಯಕ್ಕೊಳಕ್ಕಾದ ಕಾರ್ಯಕರ್ತರನ್ನು ಪುತ್ತಿಲ ಪರಿವಾರದ ವತಿಯಿಂದ ಅವರ ಮನೆಗೆ ಭೇಟಿಯಾಗಿ ಆರೋಗ್ಯ ವಿಚಾರಿಸಲಾಯಿತು. ಈಗಾಗಲೇ ಆಸ್ಪತ್ರೆಯ ಹಾಗೂ ಇತರ ಖರ್ಚು  ವೆಚ್ಚ  ನೀಡಲಾಗಿದ್ದು, ದೌರ್ಜನ್ಯಕ್ಕೊಳಕ್ಕಾದವರು ಕೆಲ ತಿಂಗಳು ಕೆಲಸಕ್ಕೆ ಹೋಗಲು ಧ್ಯವಾಗದಿರುವುದರಿಂದ  ಅವರ ದೈನಂದಿನ ಖರ್ಚು ವೆಚ್ಚಗಳಿಗಾಗಿ ಈ ಸಂದರ್ಭ ಪುತ್ತಿಲ ಪರಿವಾರದ ವತಿಯಿಂದ ಸಂಗ್ರಹಿಸಿದ ಒಂದು ಲಕ್ಷ ರೂಪಾಯಿ ನೀಡಲಾಯಿತು.  ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ,  ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ

ಪೊಲೀಸ್ ದೌರ್ಜನ್ಯಕ್ಕೊಳಗಾದವರಿಗೆ ಪುತ್ತಿಲ ಪರಿವಾರದಿಂದ ಒಂದು ಲಕ್ಷ ರೂ. ಸಹಾಯಧನ Read More »

ನಾಳೆ (ಜೂ.14) : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ

ಪುತ್ತೂರು: ಕೊಳ್ತಿಗೆ ಗ್ರಾಮದ ಪಾಲ್ತಾಡಿ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಅನುಜ್ಞಾ ಕಲಶ ಜೂ.14 ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8.30 ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಅನುಜ್ಞಾ ಕಲಶ ಪೂಜೆ, ಮಧ್ಯಾಹ್ನ 11.10 ರ ಸಿಂಹಲಗ್ನ ಶುಭ ಮುಹೂರ್ತದಲ್ಲಿ ಶ್ರೀ ದೇವರಿಗೆ ಅನುಜ್ಞಾ ಪ್ರಾರ್ಥನೆ, ಅನುಜ್ಞಾ ಕಲಶಾಭಿಷೇಕ ನಡೆಯಲಿದೆ. 12.30 ರಿಂದ ಮಹಾಪೂಜೆ,

ನಾಳೆ (ಜೂ.14) : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ Read More »

ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಹಾಯಧನ ವಿತರಣೆ

ಸುಳ್ಯ: ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಕಳೆದ 6 ವರ್ಷಗಳಿಂದ ದಾನಿಗಳ ಸಹಕಾರದಲ್ಲಿ ಹಲವಾರು ಬಡ ಜನರ ಕಷ್ಟಕ್ಕೆ ನೇರವಾಗುತ್ತಿದ್ದು, ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿದಾನದಲ್ಲಿ  ಅಂಗವೈಕಲ್ಯದಿಂದ ಬಲಳುತ್ತಿರುವ ಹರೀಶ್. ಕೆ ಎಂಬ ಚಿತ್ರಕಲಾವಿದನಿಗೆ ಸಹಾಯ ಧನವಾಗಿ 10200 ರೂ ಚೆಕ್ಕನ್ನು ಹಸ್ತಾಂತರಿಸಿದರು. ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಹಾಗೂ ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರಾ ಸಂದರ್ಭದಲ್ಲಿ ಜಲ ಶ್ರೀ ಪ್ರತಿಷ್ಠಾನ ಕಡ್ಲಾರು ಅವರ ಸಹಕಾರದಲ್ಲಿ ಅಶಕ್ತ ಕಲಾವಿದರಿಗೆ ನೆರವಾಗಲು ನಡೆಸಿದ

ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಹಾಯಧನ ವಿತರಣೆ Read More »

ಪುತ್ತಿಲ ಪರಿವಾರ ನಿಯೋಗದಿಂದ ವಿಟ್ಲ ಕನ್ಯಾನ ಭಾರತ್ ಸೇವಾ ಆಶ್ರಮಕ್ಕೆ ಭೇಟಿ

ವಿಟ್ಲ: ವಿಟ್ಲ ಕನ್ಯಾನದಲ್ಲಿರುವ ಭಾರತ್ ಸೇವಾ ಆಶ್ರಮಕ್ಕೆ ಪುತ್ತಿಲ ಪರಿವಾರದ ನಿಯೋಗ ಭೇಟಿ  ನೀಡಿ ಪುತ್ತಿಲ ಪರಿವಾರದ ವತಿಯಿಂದ ರೂ. 25000 ದೇಣಿಗೆಯನ್ನು ನೀಡಲಾಯಿತು. ಈ ಆಶ್ರಮದಲ್ಲಿರುವ ಜನಸಂಘ ಕಾಲದಿಂದಲೂ ನಿಶ್ವಾರ್ಥ ಸೇವೆಯನ್ನು ಸಲ್ಲಿಸಿರುವ ಹಿಂದೂ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಗ್ರಂಥಗಳ ಬಗ್ಗೆ ಅಪಾರ ಪಾಂಡಿತ್ಯವನ್ನು ಹೊಂದಿರುವ ಶಶಿಕಾಂತ್ ಬೋರ್ಕರ್ ಇವರನ್ನು ಸನ್ಮಾನಿಸಿ ವೈಯಕ್ತಿಕ ನೆಲೆಯಲ್ಲಿ ರೂ.20000 ನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ,  ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತಾ ಹಾಗೂ

ಪುತ್ತಿಲ ಪರಿವಾರ ನಿಯೋಗದಿಂದ ವಿಟ್ಲ ಕನ್ಯಾನ ಭಾರತ್ ಸೇವಾ ಆಶ್ರಮಕ್ಕೆ ಭೇಟಿ Read More »

ರಾಷ್ಟ್ರಮಟ್ಟದ 18ನೇ ರಾಷ್ಟ್ರೀಯ ಜೀವರಕ್ಷಕ ಈಜು ಪಂದ್ಯಾಟದಲ್ಲಿ ಲಿಖಿತ್ ರಾಮಚಂದ್ರರಿಗೆ 4 ಚಿನ್ನ, 1 ಬೆಳ್ಳಿ ಪದಕ

ಪುತ್ತೂರು: ಸಂತ ಫಿಲೋಮಿನಾ ಆಂಗ್ಲಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಲಿಖಿತ್ ರಾಮಚಂದ್ರ ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿರುವ ರೇ  ಸೆಂಟರ್ ಈಜುಕೊಳದಲ್ಲಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಭಾರಿಗೆ  “ರೆಸ್ಕ್ಯೂ ಇಂಡಿಯಾ -2023” ಹೆಸರಿನಲ್ಲಿ ನಡೆದ ರಾಷ್ಟ್ರಮಟ್ಟದ 18ನೇ ರಾಷ್ಟ್ರೀಯ ಜೀವರಕ್ಷಕ ಈಜು ಪಂದ್ಯಾಟದಲ್ಲಿ ಭಾಗವಹಿಸಿ 4 ಚಿನ್ನ ಮತ್ತು 1 ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಅವರು ಪುತ್ತೂರಿನ ಶಿವರಾಮ ಕಾರಂತ ಭಾಲಾವನದ ಈಜುಕೊಳದಲ್ಲಿ ಈಜು ತರಬೇತುದಾರ ಪಾರ್ಥ ವಾರಣಾಸಿ ನಿರ್ದೇಶನದಲ್ಲಿ ಜೀವ ರಕ್ಷಕ ಈಜು ತರಬೇತುದಾರ

ರಾಷ್ಟ್ರಮಟ್ಟದ 18ನೇ ರಾಷ್ಟ್ರೀಯ ಜೀವರಕ್ಷಕ ಈಜು ಪಂದ್ಯಾಟದಲ್ಲಿ ಲಿಖಿತ್ ರಾಮಚಂದ್ರರಿಗೆ 4 ಚಿನ್ನ, 1 ಬೆಳ್ಳಿ ಪದಕ Read More »

error: Content is protected !!
Scroll to Top