ಶ್ರೀ ಮಹಾಲಿಂಗೇಶ್ವರ ದೇವರ ಬಸವನ ಕೃತಜ್ಞತೆ

ಪುತ್ತೂರು: ಅನಾರೋಗ್ಯದ ವೇಳೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರನ್ನು ಗುರುತಿಸಿದ ಬಸವ, ಕೃತಜ್ಞತೆ ತೋರಿದ ಭಾವುಕ ಘಟನೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಸೋಮವಾರ ರಾತ್ರಿ ನಡೆಯಿತು. ಸೋಮವಾರದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಆರಂಭವಾಗಿದೆ. ದೇವರ ಉತ್ಸವ, ಸವಾರಿ ಸಂದರ್ಭ ಮುಂಭಾಗದಿಂದ ದೇವರ ಬಸವ ಸಾಗುತ್ತದೆ. ಹೀಗೆ ಸಾಗುವಾಗ ದಾರಿ ಮಧ್ಯೆ ಎದುರಾದ ಪುತ್ತೂರು ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪ್ರಸನ್ನ ಕುಮಾರ್ ಹೆಬ್ಬಾರ್ ಅವರನ್ನು ಗುರುತಿಸಿ, ಕೃತಜ್ಞತಾ ಭಾವದಿಂದ ಪ್ರೀತಿ ತೋರಿಸಿತು. […]

ಶ್ರೀ ಮಹಾಲಿಂಗೇಶ್ವರ ದೇವರ ಬಸವನ ಕೃತಜ್ಞತೆ Read More »

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ

ಸುಳ್ಯ : ಆರು ಬಾರಿ ಶಾಸಕರಾಗಿರುವ ಸಚಿವ ಎಸ್‌.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಬಹಿಷ್ಕರಿಸಲು ಏ. 11 ರಂದು ನಿರ್ಧರಿಸಿದ್ದಾರೆ.ಅರಮನೆಗಯ ಅನ್ನುವ ಪ್ರದೇಶ ಅಂಗಾರ ಅವರ ಕ್ಷೇತ್ರವಾಗಿದ್ದು, ಈ ಊರಿನಲ್ಲೇ ನಡುವೆ ಹರಿಯುವ ಹೊಳೆಗೆ ಸೇತುವೆ ಇಲ್ಲ. ಅಲ್ಲೊಂದು ಸೇತುವೆ ಆಗಬೇಕೆಂದು ಪರಿಸರದ ನಿವಾಸಿಗಳು 30 ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದಾರೆ. ಹೊಳೆ

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ Read More »

ಪುತ್ತೂರಿನಲ್ಲಿ ಒಕ್ಕಲಿಗ ಗೌಡ ಸಮುದಾಯ ಪ್ರಾತಿನಿಧ್ಯಕ್ಕೆ ಒತ್ತಾಯ | ಅವಕಾಶ ನೀಡಿದದ್ದರೆ ಜಿಲ್ಲೆಯ ಒಕ್ಕಲಿಗರು ಒಗ್ಗಟ್ಟಾಗಿ ಸೂಕ್ತ ತೀರ್ಮಾನ | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲೂ ವ್ಯತಿರಿಕ್ತ ಪರಿಣಾಮ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹ

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ಕ್ಷೇತ್ರದಲ್ಲಿ ಶಾಸಕರಾಗಿರುವ ಸಂಜೀವ ಮಠಂದೂರು ಅವರು ಸಮರ್ಥ ನಾಯಕರು. ಆದರೆ ಅವರಿಗೆ ಟಿಕೇಟ್ ನಿರಾಕರಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಟಿಕೇಟ್ ನಿರಾಕರಿಸಲು ಕಾರಣವೇನು? ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ

ಪುತ್ತೂರಿನಲ್ಲಿ ಒಕ್ಕಲಿಗ ಗೌಡ ಸಮುದಾಯ ಪ್ರಾತಿನಿಧ್ಯಕ್ಕೆ ಒತ್ತಾಯ | ಅವಕಾಶ ನೀಡಿದದ್ದರೆ ಜಿಲ್ಲೆಯ ಒಕ್ಕಲಿಗರು ಒಗ್ಗಟ್ಟಾಗಿ ಸೂಕ್ತ ತೀರ್ಮಾನ | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲೂ ವ್ಯತಿರಿಕ್ತ ಪರಿಣಾಮ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹ Read More »

ಶಾಸಕ, ಸಂಸದರ ಮಕ್ಕಳಿಗೆ ಟಿಕೆಟ್‌ ನೀಡಲು ಮೋದಿ ಅಸಮ್ಮತಿಯಿಂದ ಬಿಜೆಪಿ ಪಟ್ಟಿ ವಿಳಂಬ

ಮಗನ ವಿಚಾರದಲ್ಲಿ ಯಡಿಯೂರಪ್ಪಗೆ ಆತಂಕ ಬೆಂಗಳೂರು : ಹಾಲಿ ಶಾಸಕರು ಮತ್ತು ಸಂಸದರ ಮಕ್ಕಳಿಗೆ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ಅಸಮ್ಮತಿ ವ್ಯಕ್ತಪಡಿಸಿರುವುದು ಬಿಜೆಪಿ ಟಿಕೆಟ್‌ ಘೋಷಣೆ ವಿಳಂಬವಾಗಲು ಕಾರಣ ಎಂಬ ಮಾಹಿತಿ ಬಿಜೆಪಿ ಪಾಳಯದಿಂದ ಹೊರಬಿದ್ದಿದೆ. ಭಾನುವಾರವೇ ಘೋಷಣೆಯಾಗಬೇಕಿದ್ದ ಮೊದಲ ಪಟ್ಟಿಯಲ್ಲಿ ಮೋದಿ ಹಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಲು ರಾಜ್ಯ ನಾಯಕರು ಮತ್ತೆ ಚರ್ಚೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲು ಇನ್ನೂ ಒಂದು ಅಥವಾ

ಶಾಸಕ, ಸಂಸದರ ಮಕ್ಕಳಿಗೆ ಟಿಕೆಟ್‌ ನೀಡಲು ಮೋದಿ ಅಸಮ್ಮತಿಯಿಂದ ಬಿಜೆಪಿ ಪಟ್ಟಿ ವಿಳಂಬ Read More »

ನೆಕ್ಕಿಲಾಡಿ: ಬಿಜೆಪಿ ಸ್ಥಾಪನಾ ದಿನಾಚರಣೆ

ಪುತ್ತೂರು: ನೆಕ್ಕಿಲಾಡಿ ಶಕ್ತಿ ಕೇಂದ್ರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಹಿರಿಯರಾದ ಅಪ್ಪಯ್ಯ ಮಣಿಯಾಣಿ, ಜಿಲ್ಲಾ ಸಹಕಾರಿ ಪ್ರಕೋಷ್ಟದ ಸಹಸಂಚಾಲಕ ಕೆ.ವಿ. ಪ್ರಸಾದ್, ಮಂಡಲ ಓಬಿಸಿ ಮೋರ್ಚಾದ ಅಧ್ಯಕ್ಷ ಸುನಿಲ್ ದಡ್ಡು, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುರೇಶ್ ಅತ್ರಮಜಲ್, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುನೀತ್ ಮಾಡತ್ತಾರ್, ಶಕ್ತಿ ಕೇಂದ್ರ ಸಂಚಾಲಕ ಸದಾನಂದ, ಗ್ರಾಮ ಪಂಚಾಯತ್ ಅಧ್ಯಕ್ಷ

ನೆಕ್ಕಿಲಾಡಿ: ಬಿಜೆಪಿ ಸ್ಥಾಪನಾ ದಿನಾಚರಣೆ Read More »

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ : ಅಭಿನಂದನಾ ಸಭೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ, ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಲೆಕ್ಕಪತ್ರ ಮಂಡನೆ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದ ಕಾರ್ಯಕರ್ತ ಬಂಧುಗಳಿಗೆ ಅಭಿನಂದನಾ ಸಭೆ ನಡೆಯಿತು. ಕೋಶಾಧಿಕಾರಿ ನವೀನ್ ರೈ ಶಿಬಿರ ಬ್ರಹ್ಮಕಲಶೋತ್ಸವದ ಲೆಕ್ಕ ಪತ್ರ ಮಂಡಿಸಿದರು. ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಸದಸ್ಯ ಸುಜಯ ತಂತ್ರಿ ಅಭಿನಂದನಾ ಮಾತುಗಳನ್ನಾಡಿ, ಕಾರ್ಯಕರ್ತರ ಉತ್ತಮ ಸಂಘಟನೆ, ನಿಷ್ಠೆಯ ಶ್ರಮ, ಉತ್ತಮ ಬಾಂಧವ್ಯತೆಯಿಂದಾಗಿ ಕ್ಷೇತ್ರದಲ್ಲಿ ಏಳು ದಿನಗಳ ಕಾಲ ನಡೆದ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನೆರವೇರುವಲ್ಲಿ

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ : ಅಭಿನಂದನಾ ಸಭೆ Read More »

ಏ.20 ರಂದು ಈ ವರ್ಷದ ಮೊದಲ ಸೂರ್ಯಗ್ರಹಣ

ಬೆಂಗಳೂರು : ಈ ವರ್ಷದ ಮೊದಲ ಸೂರ್ಯಗ್ರಹಣ ವೈಶಾಖ ಅಮವಾಸ್ಯೆ ದಿನವಾದ ಏ.20 ರಂದು ಸಂಭವಿಸಲಿದೆ. ಅಂಟಾರ್ಟಿಕಾ, ಆಸ್ಟ್ರೇಲಿಯಾ, ದಕ್ಷಿಣ ಹಿಂದೂ ಮಹಾಸಾಗರ, ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ದಕ್ಷಿಣ ಪೆಸಿಫಿಕ್ ಪ್ರದೇಶಗಳಲ್ಲಿ ಗ್ರಹಣ ಗೋಚರಿಸುತ್ತದೆ. ಭಾರತದಲ್ಲಿ ಈ ಗ್ರಹಣ ಗೋಚರಿಸದಿದ್ದರೂ ಜ್ಯೋತಿಶ್ಶಾಸ್ತ್ರದ ಪ್ರಕಾರ ಅದರ ಪರಿಣಾಮ ಇದೆ.2023ರಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣ ಸಂಭವಿಸಲಿದೆ. ಈ ಪೈಕಿ ಮೊದಲ ಗ್ರಹಣ ಏ.20ರದ್ದು. ಗ್ರಹಣ ಬೆಳಗ್ಗೆ 7.04ಕ್ಕೆ ಶುರುವಾಗಿ ಮಧ್ಯಾಹ್ನ 12.29ಕ್ಕೆ ಕೊನೆಗೊಳ್ಳುತ್ತದೆ. ಎರಡನೇ ಸೂರ್ಯಗ್ರಹಣ ಮುಂಬರುವ

ಏ.20 ರಂದು ಈ ವರ್ಷದ ಮೊದಲ ಸೂರ್ಯಗ್ರಹಣ Read More »

ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ

ಪ್ರಯೋಗ ಖಚಿತ-ಬಂಡಾಯ ತಪ್ಪಿಸಲು ತಂತ್ರಗಾರಿಕೆ ದೆಹಲಿ : ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗಿದೆ. ಸೋಮವಾರವೇ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಮತ್ತು 170 ರಿಂದ 180 ಅಭ್ಯರ್ಥಿಗಳ ಹೆಸರು ಈ ಪಟ್ಟಿಯಲ್ಲಿರುತ್ತದೆ ಎಂದು ಹೇಳಲಾಗಿತ್ತು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರೇ ದಿಲ್ಲಿಯಲ್ಲಿ ಸುದ್ದಿಗಾರರಿಗೆ ಇಂದು (ಸೋಮವಾರ) ರಾತ್ರಿಯೊಳಗೆ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದರು.ಆದರೆ ನಿರೀಕ್ಷೆಯಂತೆ ಪಟ್ಟಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಅರುಣಾಚಲ ಪ್ರದೇಶ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ದಿಲ್ಲಿಗೆ ಮರಳುವುದು

ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ Read More »

ಈ ಸಲವೂ ಮಾನ್ಸೂನ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಸ್ಕೈಮೆಟ್‌ ವರದಿಯಲ್ಲಿದೆ ಕಳವಳಕಾರಿ ಅಂಶ ದೆಹಲಿ : ಕಳೆದ ಋತುವಿನಲ್ಲಿ ಮಳೆ ಪ್ರಮಾಣ ಕಡಿಮೆಯಾದ ಪರಿಣಾಮವಾಗಿ ಈ ಬೇಸಿಗೆಯಲ್ಲಿ ಈಗಾಗಲೇ ನದಿ, ಕೆರೆ ತೊರೆಗಳೆಲ್ಲ ಬತ್ತಿ ಹೋಗಿ ನೀರಿಗೆ ಹಾಹಾಕಾರ ಎದ್ದಿದೆ. ಪರಿಸ್ಥಿತಿ ಹೀಗಿರುವಾಗ ಹವಾಮಾನ ಮುನ್ಸೂಚನೆ ನೀಡುವ ಸ್ಕ್ಯಮೇಟ್‌ ಸಂಸ್ಥೆ ಮುಂದಿನ ಮಳೆಗಾಲದಲ್ಲೂ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂಬ ವರದಿಯನ್ನು ನೀಡಿ ಜನರನ್ನು ಆತಂಕಕ್ಕೆ ತಳ್ಳಿದೆ. ಭಾರತದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ಹೇಳಿದೆ.ಮುಂಬರುವ ಮಾನ್ಸೂನ್‌ನಲ್ಲಿ

ಈ ಸಲವೂ ಮಾನ್ಸೂನ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ Read More »

8.50 ಕೋ. ರೂ. ಮೌಲ್ಯದ ಡ್ರಗ್ಸ್ ವಶ – ಐವರು ನೈಜೀರಿಯಾ ಪ್ರಜೆಗಳ ಬಂಧನ

ಬೆಂಗಳೂರು ಪೊಲೀಸರ ಕಾರ್ಯಾಚರಣೆ ಬೆಂಗಳೂರು : ಬೆಂಗಳೂರು ಪೊಲೀಸರು ಇಂದು ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ 8.50 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.ದಕ್ಷಿಣ ವಿಭಾಗದ ವಿವಿ ಪುರಂ ಹಾಗೂ ಜಯನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 5 ಮಂದಿ ನೈಜೀರಿಯಾ ಪ್ರಜೆಗಳು ಸೆರೆಯಾಗಿದ್ದಾರೆ.7.32 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಎಂಡಿಎಂಎ, 1 ಕೆಜಿ 150 ಗ್ರಾಂ ಬ್ರೌನ್‍ಶುಗರ್, 310 ಗ್ರಾಂ ಕೊಕೈನ್‍ನನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವೀಸಾ ಅವಧಿ 3 ವರ್ಷಗಳ ಹಿಂದೆಯೇ

8.50 ಕೋ. ರೂ. ಮೌಲ್ಯದ ಡ್ರಗ್ಸ್ ವಶ – ಐವರು ನೈಜೀರಿಯಾ ಪ್ರಜೆಗಳ ಬಂಧನ Read More »

error: Content is protected !!
Scroll to Top