ಕಡಬ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಕಡಬ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಎ. 8 ರಂದು ಸಂಭವಿಸಿದೆ. ಬೆಳ್ಯಪ್ಪ ಗೌಡ(75) ಎಂಬವರೇ ಮೃತ ವ್ಯಕ್ತಿ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಎ. 8 ರಂದು ದನದ ಕೊಟ್ಟಿಗೆಯ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ತೊಕ್ಕೊಟ್ಟು : ವ್ಯಾಪಾರಿ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ : ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10 ರಂದು ಬೆಳಗ್ಗೆ ಸಂಭವಿಸಿರುತ್ತದೆ. ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಇವರು ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿದ್ದರು. ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್‌ಗಳಿಗೆ ಸಂಬಂಧಿಸಿದ ಹೊಲಿಗೆ ನೂಲು ಸೇರಿದಂತೆ ಇತರ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ ಮನೆಯಿಂದ

ತೊಕ್ಕೊಟ್ಟು : ವ್ಯಾಪಾರಿ ನೇಣು ಬಿಗಿದು ಆತ್ಮಹತ್ಯೆ Read More »

ಇಂದಿನಿಂದ ಶ್ರೀ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿ | ಪೇಟೆ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ದೇವರು ಪೇಟೆ ಸವಾರಿಗೆ ತೆರಳುವ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇಂದಿನಿಂದ ಸಂಜೆ ವೇಳೆಗೆ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಉತ್ಸವ ನಡೆದು, ದೇವಸ್ಥಾನದ ಕಟ್ಟೆಯಲ್ಲಿ ಕಟ್ಟೆಪೂಜೆ ನಡೆದು ಬಳಿಕ ಶ್ರೀ ದೇವರು ನಿಗದಿತ ಕಟ್ಟೆ ಪೂಜೆಗಾಗಿ ಪೇಟೆ ಸವಾರಿಗೆ ತೆರಳುವರು. ಈ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ನಗರಸಭೆ ವತಿಯಿಂದ ಈ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದು, ದೇವರು ಯಾವೆಲ್ಲಾ ಪ್ರದೇಶಕ್ಕೆ ಕಟ್ಟೆಪೂಜೆಗೆ

ಇಂದಿನಿಂದ ಶ್ರೀ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿ | ಪೇಟೆ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ Read More »

1.999 ಕೆಜಿ ಗಾಂಜಾ ವಶ : ಯುವಕನ ಬಂಧನ

ಮಂಗಳೂರು : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಏ. 10 ರಂದು ಮರಕಡ್ಡದ ಪಡುಶೆಡ್ಡೆ ರಸ್ತೆ ಬದಿಯಲ್ಲಿ ಸಂಛವಿಸಿದೆ.ಬಂಧಿತ ಆರೋಪಿಯನ್ನು ಮಲ್ಪೆ ನಿವಾಸಿ ಸುಹಾನ್ ಎಸ್ ಪೂಜಾರಿ (23) ಎಂದು ಗುರುತಿಸಲಾಗಿದೆ. ಸುಹಾನ್ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ್ಡದ ಪಡುಶೆಡ್ಡೆ ಬಳಿ ರಸ್ತೆ ಬದಿ ಸ್ಕೂಟರ್‌ನಲ್ಲಿ ಕುಳಿತು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.ಆತನಿಂದ 1.999 ಕೆಜಿ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಅನ್ನು ಪೊಲೀಸರು ಜಪ್ತಿ

1.999 ಕೆಜಿ ಗಾಂಜಾ ವಶ : ಯುವಕನ ಬಂಧನ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಧ್ವಜಾರೋಹಣದ ಮೂಲಕ ಚಾಲನೆ | ಇತಿಹಾಸದಲ್ಲಿ ಪ್ರಥಮ ಬಾರಿಗೆ ಶ್ರೀ ವರುಣ ದೇವರ ಪೂಜೆಯೊಂದಿಗೆ ಜಾತ್ರೆ ಆರಂಭ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಸೋಮವಾರ ಬೆಳಿಗ್ಗೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಂಟೆ 9.25 ರ ನಂತರದ ವೃಷಭ ಲಗ್ನ ಸುಮುಹೂರ್ತದಲ್ಲಿ ಭಕ್ತಾದಿಗಳ ಜಯ ಘೋಷದೊಂದಿಗೆ ಧ್ವಜಾರೋಹಣ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ವಿವಿಧ ವೈದಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ಸೋಮವಾರ ಮುಂಜಾನೆಯಿಂದಲೇ ಸೀಮೆಯ ಭಕ್ತಾದಿಗಳು ಫಲಪುಷ್ಪ, ಸೀಯಾಳ, ವಿವಿಧ ಹಸಿರುವಾಣಿಯನ್ನು ಶ್ರೀ ದೇವಸ್ಥಾನಕ್ಕೆ ಒತ್ತಾಯಿಸಿದರು. ಬಳಿಕ ಧ್ವಜಸ್ತಂಭದ ಕಟ್ಟೆಗೆ ಹಸಿರುವಾಣಿಯನ್ನು ಕಟ್ಟಿ ಶೃಂಗರಿಸಲಾಯಿತು. ಮಧ್ಯಾಹ್ನ ಮಹಾಪೂಜೆ

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಧ್ವಜಾರೋಹಣದ ಮೂಲಕ ಚಾಲನೆ | ಇತಿಹಾಸದಲ್ಲಿ ಪ್ರಥಮ ಬಾರಿಗೆ ಶ್ರೀ ವರುಣ ದೇವರ ಪೂಜೆಯೊಂದಿಗೆ ಜಾತ್ರೆ ಆರಂಭ Read More »

ಮಠಂದೂರು ಪರ ಕಾರ್ಯಕರ್ತರ ಒಲವು | ಅಭ್ಯರ್ಥಿಯಾಗಿ ಘೋಷಣೆಯಾದರೆ ಫೀಲ್ಡಿಗಿಳಿದು ಕೆಲಸಕ್ಕೆ ಉತ್ಸುಕ | ಗೆಲುವಿಗೆ ಕಾರಣವಾಗಲಿದೆ ಅಭಿವೃದ್ಧಿ ಪರ ಕಾರ್ಯ

ಪುತ್ತೂರು: ಹಾಲಿ ಶಾಸಕ ಸಂಜೀವ ಮಠಂದೂರು ಪರ ಕಾರ್ಯಕರ್ತರ ಒಲವು ಮತ್ತೆ ಹೆಚ್ಚಾಗಿದೆ. ಪಕ್ಷ ಸಂಜೀವ ಮಠಂದೂರು ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದರೆ, ಗೆಲುವಿಗಾಗಿ ಶ್ರಮ ಹಾಕುತ್ತೇವೆ ಎಂದು ಉಪ್ಪಿನಂಗಡಿ ಭಾಗದ ಬಿಜೆಪಿ ಕಾರ್ಯಕರ್ತರು ಅಭಿಪ್ರಾಯಿಸಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಲ್ಲಸಲ್ಲದ ಅಪವಾದಗಳನ್ನು ಹಾಕಿ, ಮತದಾರರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಸಂಜೀವ ಮಠಂದೂರು ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ, ಈ ರೀತಿಯಲ್ಲಿ ತೇಜೊವಧೆ ಮಾಡುವುದು ತರವಲ್ಲ. ಓರ್ವ ಶಾಸಕನಾಗಿ ತನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ್ದಾರೆ.

ಮಠಂದೂರು ಪರ ಕಾರ್ಯಕರ್ತರ ಒಲವು | ಅಭ್ಯರ್ಥಿಯಾಗಿ ಘೋಷಣೆಯಾದರೆ ಫೀಲ್ಡಿಗಿಳಿದು ಕೆಲಸಕ್ಕೆ ಉತ್ಸುಕ | ಗೆಲುವಿಗೆ ಕಾರಣವಾಗಲಿದೆ ಅಭಿವೃದ್ಧಿ ಪರ ಕಾರ್ಯ Read More »

ಪ್ರಪಾತಕ್ಕೆ ಬಿದ್ದ ಬೈಕ್ – ಹಿಂಬದಿ ಸವಾರ ಮೃತ್ಯು

ಬಂಟ್ವಾಳ : ಬೈಕ್ ಪ್ರಪಾತಕ್ಕೆ ಬಿದ್ದು, ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಏ. 10 ರ ಮುಂಜಾವಿನ ವೇಳೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.ಯಶೋಧರ(25) ಎಂಬವರೇ ಮೃತ ದುರ್ದೈವಿ. ಚಿಕ್ಕಮಗಳೂರು ನಿವಾಸಿಯಾದ ಇವರು ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬೈಕ್ ಚಲಾಯಿಸುತ್ತಿದ್ದ ಈತನ ಸ್ನೇಹಿತ ಅವಿನಾಶ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ. ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿ ಸ್ನೇಹಿತನ

ಪ್ರಪಾತಕ್ಕೆ ಬಿದ್ದ ಬೈಕ್ – ಹಿಂಬದಿ ಸವಾರ ಮೃತ್ಯು Read More »

ನಂದಿನಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅಮುಲ್ ಗೆ ವಿರೋಧ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್

ಹಾಸನ : ಕನ್ನಡಿಗರ ಅಸ್ಮಿತೆಯಾದ ನಂದಿನಿ ಹಾಲು ಮತ್ತು ನಂದಿನಿ ಹಾಲಿನ ಉತ್ಪನ್ನಗಳನ್ನು ಬದಿಗೆ ತಳ್ಳಿ ಗುಜರಾತ್ ಮೂಲದ ಅಮುಲ್ ಹಾಲು ಕರ್ನಾಟಕದಲ್ಲಿ ಪಾರುಪತ್ಯ ಸ್ಥಾಪಿಸಲು ನೋಡುತ್ತಿದೆ. ಇದಕ್ಕೆ ಬಿಜೆಪಿ ಸರ್ಕಾರ ಸಹಕಾರ ನೀಡುತ್ತಿದೆ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ನಾಯಕರು ಹಾಗೂ ಜನಸಾಮಾನ್ಯರ ಒಂದು ವರ್ಗ ಭಾರೀ ವಿರೋಧ ವ್ಯಕ್ತಪಡಿಸುತ್ತಿದೆ. ನಂದಿನಿ ವರ್ಸಸ್ ಅಮುಲ್ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಜಟಾಪಟಿ ನಡೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಸಚಿವರುಗಳು ಸ್ಪಷ್ಟನೆ ನೀಡಿದರೂ ವಿರೋಧ

ನಂದಿನಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅಮುಲ್ ಗೆ ವಿರೋಧ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್ Read More »

ರಂಗಭೂಮಿ ದಿಗ್ಗಜೆ, ರಾಷ್ಟ್ರ ರಾಜಧಾನಿಯ ಐಕಾನಿಕ್ : ಜಲಬಾಲ ವೈದ್ಯ ವಿಧಿವಶ

ಅಕ್ಷರ ಥಿಯೇಟರ್‌ನ ಸಹ ಸಂಸ್ಥಾಪಕಿ, ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ದೆಹಲಿ : ರಂಗಭೂಮಿ ದಿಗ್ಗಜೆ ಮತ್ತು ರಾಷ್ಟ್ರ ರಾಜಧಾನಿಯ ಐಕಾನಿಕ್ ಅಕ್ಷರ ಥಿಯೇಟರ್‌ನ ಸಹ ಸಂಸ್ಥಾಪಕಿ ಜಲಬಾಲ ವೈದ್ಯ ಅವರು ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಪುತ್ರಿ ಮತ್ತು ರಂಗಭೂಮಿ ನಿರ್ದೇಶಕಿ ಅನಸೂಯಾ ವೈದ್ಯ ಶೆಟ್ಟಿ ಅವರು ತಿಳಿಸಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಜಲಬಾಲ ವೈದ್ಯ(86) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.ಭಾರತೀಯ ಲೇಖಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುರೇಶ್ ವೈದ್ಯ ಮತ್ತು ಇಂಗ್ಲಿಷ್ ಶಾಸ್ತ್ರೀಯ ಗಾಯಕಿ

ರಂಗಭೂಮಿ ದಿಗ್ಗಜೆ, ರಾಷ್ಟ್ರ ರಾಜಧಾನಿಯ ಐಕಾನಿಕ್ : ಜಲಬಾಲ ವೈದ್ಯ ವಿಧಿವಶ Read More »

ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಒಂದೇ ಪಟ್ಟಿಯಲ್ಲಿ 175 ಅಭ್ಯರ್ಥಿಗಳ ಹೆಸರು ಬೆಂಗಳೂರು : ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಇಂದು ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ನಿನ್ನೆ ತಡರಾತ್ರಿ ವರೆಗೆ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಒಂದೇಟಿಗೆ 175 ಅಭ್ಯರ್ಥಿಗಳ ಪಟ್ಟಿಯನ್ನ ರೆಡಿ ಮಾಡಿದ್ದಾರೆ. ಯಾರಿಗೆ ಕೊಡಬೇಕು? ಯಾರಿಗೆ ಕೊಡಬಾರದು.? ಬಂಡಾಯ ಶಮನ ಮಾಡುವುದು ಹೇಗೆ? ಸರ್ವೆ ರಿಪೋರ್ಟ್ ಏನು ಹೇಳುತ್ತದೆ ಹೀಗೆ ಎಲ್ಲವನ್ನೂ ಅಳೆದು ತೂಗಿ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದು,

ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

error: Content is protected !!
Scroll to Top