ರಾಷ್ಟ್ರವೇ ಮೊದಲು, ಉಳಿದೆಲ್ಲವೂ ನಂತರ – ಕ್ಯಾಪ್ಟನ್ ಪವನ್ ಕುಮಾರ್

ಉಗ್ರರ ಜತೆ ಹೋರಾಡಿ ಪ್ರಾಣ ಕಳೆದುಕೊಂಡಾಗ ಆ ಸೈನಿಕನ ವಯಸ್ಸು ಕೇವಲ 23 ಕಿಸಿಕೊ ರಿಸರ್ವೇಶನ್ ಚಾಹಿಯೆ, ಕಿಸಿಕೋ ಆಜಾದಿ.ಭಾಯಿ ಹಮೇ ಕುಚ್ ನಹೀಂ ಚಾಹಿಯೆ ಬಸ್ ಅಪ್ನಿ ರಜಾಯಿ.(ಕೆಲವರಿಗೆ ಮೀಸಲಾತಿ ಬೇಕು, ಇನ್ನೂ ಕೆಲವರಿಗೆ ಸ್ವಾತಂತ್ರ್ಯ. ಸೋದರ ನನಗೆ ಬೇರೇನೂ ಬೇಡ, ಬೆಚ್ಚನೆ ಹೊದಿಕೆ ಬಿಟ್ಟು)ಆ ಸೈನಿಕ ಹುತಾತ್ಮನಾಗುವ ಕೆಲವು ನಿಮಿಷ ಮೊದಲು ತನ್ನ ಫೇಸ್‌ಬುಕ್ಕಲ್ಲಿ ಬರೆದುಕೊಂಡ ಕವಿತೆಯ ಸಾಲುಗಳು ಇವು. ದೇಶದಲ್ಲಿ ನಡೆದ ಕೆಲವು ಘಟನೆಗಳು ಅವರ ಮನಸನ್ನು ತಲ್ಲಣ ಮಾಡಿದ್ದವು. ಉಗ್ರನ ಪರವಾಗಿ […]

ರಾಷ್ಟ್ರವೇ ಮೊದಲು, ಉಳಿದೆಲ್ಲವೂ ನಂತರ – ಕ್ಯಾಪ್ಟನ್ ಪವನ್ ಕುಮಾರ್ Read More »

ಶಾಸಕ ಸಂಜೀವ ಮಠಂದೂರು ಕುರಿತು ಮಾನಹಾನಿ ವರದಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ

ಪುತ್ತೂರು: ಮಾನಹಾನಿಕರ ವರದಿ ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ಅವರು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಮುದ್ರಣ, ವಿದ್ಯುನ್ಮಾನ, ಡಿಜಿಟಲ್ ಮಾಧ್ಯಮಗಳಲ್ಲಿ ಮಾನಹಾನಿಕರ ವರದಿ ಪ್ರಸಾರ ಮಾಡುವುದು, ವೆಬ್ ಹೋಸ್ಟಿಂಗ್ ಮತ್ತು ಹಂಚಿಕೊಳ್ಳುವುದನ್ನು ನಿಷೇಧಿಸಲು ತಡೆಯಾಜ್ಞೆ ನೀಡುವಂತೆ ಶಾಸಕ ಮಠಂದೂರು ಮೊಕದ್ದಮೆ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಜೂನ್ 26ಕ್ಕೆ ವಿಚಾರಣೆ ಮುಂದೂಡಿದೆ. ತಾನು ವಿಧಾನಸಭಾ ಸದಸ್ಯನಾಗಿದ್ದು, ಕೆಲ‌ ಕಿಡಿಗೇಡಿಗಳು ತನ್ನ ಮಾನಹಾನಿಕರ ಛಾಯಾಚಿತ್ರವನ್ನು

ಶಾಸಕ ಸಂಜೀವ ಮಠಂದೂರು ಕುರಿತು ಮಾನಹಾನಿ ವರದಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ Read More »

ವೈರಲ್ ಫೊಟೋ ಎಡಿಟೆಡ್ ಎಂದ ಸಂತ್ರಸ್ತೆ

ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ಮಹಿಳೆಯ ವೀಡಿಯೋ ಹೇಳಿಕೆ ಇಲ್ಲಿದೆ ನೋಡಿ… ತನ್ನ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ದೂರಿದ ಮಹಿಳೆ.

ವೈರಲ್ ಫೊಟೋ ಎಡಿಟೆಡ್ ಎಂದ ಸಂತ್ರಸ್ತೆ Read More »

ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ : ಅಗ್ನಿಶಾಮಕ ದಳದಿಂದ ಕಾರ್ಯಚರಣೆ

ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿರುವ ಘಟನೆ ವರದಿಯಾಗಿದೆ.ರಸ್ತೆಯ ಎರಡೂ ಭಾಗದಲ್ಲಿದ್ದ ಕಸದ ರಾಶಿಗೆ ಯಾರೋ ಬೆಂಕಿ ಹಾಕಿರಬೇಕು ಎಂದು ಹೇಳಲಾಗುತ್ತಿದ್ದು, ರಸ್ತೆ ತುಂಬಾ ಹೊಗೆ ತುಂಬಿತ್ತು. ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು. ಆದರೆ ಹೇಗೆ ಬೆಂಕಿ ಹತ್ತಿಕೊಂಡಿದೆ ಎಂಬ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.ಬಂಟ್ವಾಳ

ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ : ಅಗ್ನಿಶಾಮಕ ದಳದಿಂದ ಕಾರ್ಯಚರಣೆ Read More »

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ

ದೆಹಲಿ : ಕೇಂದ್ರ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಮಗ ಅನಿಲ್ ಆಂಟನಿ ಎ. 6 ರಂದು ಬಿಜೆಪಿ ಸೇರ್ಪಡೆಯಾದರು. ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ವಿಚಾರವಾಗಿ ಪಕ್ಷದ ನಿಲುವನ್ನು ಟೀಕಿಸಿದ್ದ ಅನಿಲ್ ಆಂಟನಿ, ಜನವರಿಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಅಂದಿನಿಂದಲೂ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ನಿರೀಕ್ಷೆ ವ್ಯಕ್ತವಾಗಿತ್ತು. ಅನಿಲ್ ಆಂಟನಿ ಅವರು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ Read More »

ಶಾಸಕ ಸಂಜೀವ ಮಠಂದೂರು ಅವರ ಮಾನಹಾನಿ | ಕ್ರಮಕೈಗೊಳ್ಳಲು ಶಾಸಕರ ಆಪ್ತ ಸಹಾಯಕರಿಂದ ದೂರು

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರನ್ನು ಹೋಲುವ ಫೊಟೋಗಳನ್ನು ಮಹಿಳೆಯ ಫೊಟೊದೊಂದಿಗೆ ಜೋಡಣೆ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಬಗ್ಗೆ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರ ಆಪ್ತ ಸಹಾಯಕ ವಸಂತ್ ಎಸ್. ದೂರಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯ ಸೈಬರ್ ಕ್ರೈಮ್ ವಿಭಾಗಕ್ಕೆ ನೀಡಿರುವ ದೂರಿನಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರ ಫೊಟೋವನ್ನು ಮಹಿಳೆಯೊಬ್ಬರ ಫೊಟೋದೊಂದಿಗೆ ಎಡಿಟ್

ಶಾಸಕ ಸಂಜೀವ ಮಠಂದೂರು ಅವರ ಮಾನಹಾನಿ | ಕ್ರಮಕೈಗೊಳ್ಳಲು ಶಾಸಕರ ಆಪ್ತ ಸಹಾಯಕರಿಂದ ದೂರು Read More »

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಶ್ರೀ ಗುರು ಸಾರ್ವಭೌಮರ ಬೃಂದಾವನದ 45ನೇ ಪ್ರತಿಷ್ಠಾ ಮಹೋತ್ಸವ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರುಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯ 45ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವ ಗುರುವಾರ ನಡೆಯಿತು. ಮಹೋತ್ಸವದ ಅಂಗವಾಗಿ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ ಪೂಜೆ, ಹೋಮಾದಿಗಳು, ಕಲಶ ಪ್ರತಿಷ್ಠೆ, ಕಲಶಾಭಿಷೇಕ, ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಶ್ರೀಮಠದ ಟ್ರಸ್ಟಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಶ್ರೀ ಗುರು ಸಾರ್ವಭೌಮರ ಬೃಂದಾವನದ 45ನೇ ಪ್ರತಿಷ್ಠಾ ಮಹೋತ್ಸವ Read More »

ಚುನಾವಣಾ ನೀತಿ ಸಂಹಿತೆ ಜ್ಯಾರಿ : ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ನೀತಿ ಸಂಹಿತೆ ಜ್ಯಾರಿಯಲ್ಲಿರುವ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲಾಯಿತು. ಜಿಲ್ಲೆಯ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಾಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರು ಗುರುವಾರ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಚುನಾವಣಾ  ಅಧಿಕಾರಿಗಳು ಉಪಸ್ಥಿತರಿದ್ದರು.

ಚುನಾವಣಾ ನೀತಿ ಸಂಹಿತೆ ಜ್ಯಾರಿ : ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ Read More »

ಎಡಿಟ್ ಫೊಟೋ ವೈರಲ್ | ಠಾಣೆ ಮೆಟ್ಟಿಲೇರಿದ ಸಂತ್ರಸ್ತ ಮಹಿಳೆ

ಪುತ್ತೂರು: ಜನಪ್ರತಿನಿಧಿಯವರ ಫೊಟೋದೊಂದಿಗೆ ತನ್ನ ಫೊಟೋವನ್ನು ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗುತ್ತಿದೆ. ಫೊಟೋ ಎಡಿಟ್ ಮಾಡಿ, ವೈರಲ್ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಖಾಸಗಿ ಫೊಟೋವನ್ನು ಎಡಿಟ್ ಮಾಡಿ, ಜನಪ್ರತಿನಿಧಿಯೊಂದಿಗೆ ಜೋಡಿಸಲಾಗಿದೆ. ಈ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ದೌರ್ಜನ್ಯ ನಡೆಸಲಾಗುತ್ತಿದೆ. ಓರ್ವ ಮಹಿಳೆಯ ಮೇಲೆ ಇಷ್ಟು ದೊಡ್ಡ ಆರೋಪ ಸರಿಯಲ್ಲ. ಇಂತಹ ಘಟನೆಯಿಂದಾಗಿ ತನಗೆ ಹಾಗೂ ತನ್ನ ಮನೆಮಂದಿಗೆ ತೀವ್ರ

ಎಡಿಟ್ ಫೊಟೋ ವೈರಲ್ | ಠಾಣೆ ಮೆಟ್ಟಿಲೇರಿದ ಸಂತ್ರಸ್ತ ಮಹಿಳೆ Read More »

ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮೆದು ಸಾಧ್ಯತೆ | ಬಿಜೆಪಿ ಹೈಕಮಾಂಡ್ ಒಲವು!

ಪುತ್ತೂರು: ಚುನಾವಣೆ ದಿನ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಕಸರತ್ತು ನಡೆಸುತ್ತಿದೆ. ಇದೀಗ ಸಾಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರಾಗಿ, ಎಬಿವಿಪಿ ತಾಲೂಕು ಪ್ರಮುಖ್ ಸೇರಿದಂತೆ ಹಲವು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿರುವ ದಿನೇಶ್ ಮೆದು ಹೆಸರು ಕೇಳಿಬರುತ್ತಿದೆ. ಹಾಲಿ ಶಾಸಕ ಸಂಜೀವ ಮಠಂದೂರು ಅವರ ಹೆಸರು ಚಾಲ್ತಿಯಲ್ಲಿರುವಂತೆ, ಕೊನೆಕ್ಷಣದಲ್ಲಿ ಹೊಸ ಅಭ್ಯರ್ಥಿಗಳತ್ತಲೂ ಬಿಜೆಪಿ ದೃಷ್ಟಿ ಹಾಯಿಸುತ್ತಿದೆ. ಒಂದು ವೇಳೆ ಹೊಸ ಮುಖಗಳನ್ನು ಆಯ್ದುಕೊಂಡದ್ದೇ ಆದರೆ, ಅದರಲ್ಲಿ ದಿನೇಶ್ ಮೆದು ಅವರ ಹೆಸರು ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡಿದೆ.

ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮೆದು ಸಾಧ್ಯತೆ | ಬಿಜೆಪಿ ಹೈಕಮಾಂಡ್ ಒಲವು! Read More »

error: Content is protected !!
Scroll to Top