ವಿದ್ಯಾರ್ಥಿ ದಿಶೆಯಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ವಸಂತ ಕೋನಡ್ಕ | ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ
ಪುತ್ತೂರು: ‘ನಮ್ಮಲ್ಲಿ ನಾವು ಪ್ರಮುಖವಾಗಿ ಐದು ಗುಣಗಳಾದ ಯೋಚನಾ ಸಾಮರ್ಥ್ಯ, ಯೋಜನಾ ಬದ್ಧತೆ, ಸಾಮಾನ್ಯಜ್ಞಾನ, ಸಮಯ ಪ್ರಜ್ಞೆ, ಸಮಾಜಮುಖಿ ಬದುಕು ಇವುಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕಾಗಿದೆ ಎಂದು ಬೆಂಗಳೂರಿನ ವಕೀಲ ವಸಂತ ಕೋನಡ್ಕ ಹೇಳಿದರು. ವಿವೇಕಾನAದ ಕನ್ನಡ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ ಹತ್ತನೇ ತರಗತಿ ಮಕ್ಕಳ ಉತ್ತಮ ಫಲಿತಾಂಶಕ್ಕಾಗಿ ಆಯೋಜಿಸಲಾದ ಸಾಧನಾಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇನ್ನೊರ್ವ ಅತಿಥಿಯಾಗಿ ಪುತ್ತೂರು ಪಿ.ಎಸ್ ಪ್ರೊಜೆಕ್ಟ್ ಮಾಲಕ ಪ್ರತಾಪಸಿಂಹ ವರ್ವ ವಿದ್ಯಾರ್ಥಿಗಳಿಗೆ ನೀಡಿದ ಅಭಿನಂದನಾ ಪತ್ರ, ಸಸ್ಯದ ಕೊಡುಗೆ ಮಾಡಿದ […]










