ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದಿಂದ ಸ್ವಚ್ಛತಾ ಕಾರ್ಯ

ಪುತ್ತೂರು: ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ರೆಂಜಿಲಾಡಿಯಿಂದ ತಿಂಗಳಾಡಿ ವರೆಗೆ ರಸ್ತೆ ಬದಿಗಳಲ್ಲಿರುವ ಕಸ ಕಡ್ಡಿಗಳನ್ನು ಹೆಕ್ಕಿ ಶ್ರಮದಾನದ ಮೂಲಕ ಸ್ವಚ್ಚಗೊಳಿಸಲಾಯಿತು. ಶ್ರಮದಾನದಲ್ಲಿ ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದ ಗೌರವಾಧ್ಯಕ್ಷ ಸುಂದರ ಬಲ್ಯಾಯ, ಅಧ್ಯಕ್ಷ ಹರೀಶ್ ಪೈ, ಪದ್ಮಯ್ಯ ನಾಯ್ಕ,ಅಶೋಕ್ ನಾಯ್ಕ, ತಿಮ್ಮಪ್ಪ ನಾಯ್ಕ, ಪ್ರವೀಣ್, ಪ್ರದೀಪ್, ದೀಕ್ಷಿತ್, ನವೀನ್ ಬಾಳಾಯ, ನವೀನ್ ಎಲಿಯ, ಪುರುಷೋತ್ತಮ ಆಚಾರ್ಯ, ಅರುಣ್, ಮೋಕ್ಷಿತ್, ಭರತ್, ಜಗನ್ನಾಥ್ ಬಾಳಾಯ, ಪ್ರೇಮಚಂದ್ರ, ನಾರಾಯಣ ಬಲ್ಯಾಯ ಮತ್ತಿತರರು ಪಾಲ್ಗೊಂಡಿದ್ದರು.

ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದಿಂದ ಸ್ವಚ್ಛತಾ ಕಾರ್ಯ Read More »

ಒಡಿಶಾ ರೈಲು ದುರಂತ: ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ | ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲು

ಬಾಲಸೋರ್: ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳದ ಭೀಕರತೆ ಪರಿಶೀಲನೆ ಮಾಡಿ, ಘಟನೆಯ ಬಗ್ಗೆ ಮಾಹಿತಿ‌ ಪಡೆದುಕೊಂಡರು. ಇನ್ನೊಂದೆಡೆ, ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಗಾಯಾಳುಗಳ ಜೀವ ಉಳಿಸಲು ರಕ್ತದ ಅವಶ್ಯಕತೆಯೂ ಹೆಚ್ಚುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ಸ್ಪಂದನೆ ವ್ಯಕ್ತವಾಗಿದ್ದು, ರಕ್ತದಾನ ಮಾಡಲು ಜನರು ಸಾಲಿನಲ್ಲಿ ಜನರು ನಿಂತಿರುವ ದೃಶ್ಯವೂ ಕಂಡುಬಂದಿದೆ.

ಒಡಿಶಾ ರೈಲು ದುರಂತ: ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ | ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲು Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಭಾರತೀಯ ಪರಂಪರಾ ದಿನಾಚರಣೆ

ಪುತ್ತೂರು: ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಭಾರತೀಯ ಪರಂಪರಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಖ್ಯಾತ ಚಿಂತಕರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿ, ಪ್ರಪಂಚದ ಇತರೆ ದೇಶಗಳಿಗೆ ಹೋಲಿಸಿದಾಗ ನಮ್ಮ ದೇಶ ಅವಿಚ್ಛಿನ್ನವಾದ ಸಾಂಸೃತಿಕ ವೈಭವವನ್ನು ಹೊಂದಿದೆ. ರೋಮಾಂಚಕ ಇತಿಹಾಸ, ಶ್ರೀಮಂತ ಸಂಸ್ಕೃತಿ, ಅದ್ಭುತ ಸ್ಮಾರಕಗಳು ಮತ್ತು ಪರಂಪರೆಯನ್ನು ಹೊಂದಿರುವ ದೇಶ ಭಾರತ. ಸಿಂಧೂ ಬಯಲಿನ ನಾಗರಿಕತೆಯನ್ನು ನಾಗರಿಕತೆಗಳ ತೊಟ್ಟಿಲು ಎನ್ನುತ್ತಾರೆ.  ಅದಕ್ಕೆ ತಕ್ಕಂತೆ ನಮ್ಮ ಭಾರತದ ಶ್ರೇಷ್ಠ ಪರಂಪರೆ ಬೆಳೆದುಬಂದಿದೆ ಎಂದು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಭಾರತೀಯ ಪರಂಪರಾ ದಿನಾಚರಣೆ Read More »

ಕೇರಳದಲ್ಲಿ ಸಹೋದರನ ಕೊಲೆ | ಕೊಲೆ ಆರೋಪಿ ಪುತ್ತೂರಿನಲ್ಲಿ ಪೊಲೀಸ್ ವಶ

ಪುತ್ತೂರು : ಕೊಲೆ ಆರೋಪಿಯೋರ್ವನನ್ನು ಪೊಲೀಸರು ಕೊಂಬೆಟ್ಟು ಬಳಿ ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿಯು ಕೇರಳದಲ್ಲಿ ಸಹೋದರನನ್ನು ಕೊಲೆಗೈದು ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ತಿಳಿದ ಕೇರಳ ಪೊಲೀಸರು ಪುತ್ತೂರಿಗೆ ಆಗಮಿಸಿದ್ದರು. ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಸಹಕರಿಸಿದ್ದು, ಆರೋಪಿಯು ದೇವಸ್ಥಾನದ ಸಮೀಪವಿರುವ ಚರಂಡಿಗಳಲ್ಲೆಲ್ಲಾ ಬಿದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ನಗರ ಠಾಣಾ ಪೊಲೀಸರು, ಕೇರಳ ಪೊಲೀಸರ ಜೊತೆ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು…

ಕೇರಳದಲ್ಲಿ ಸಹೋದರನ ಕೊಲೆ | ಕೊಲೆ ಆರೋಪಿ ಪುತ್ತೂರಿನಲ್ಲಿ ಪೊಲೀಸ್ ವಶ Read More »

ದೂರ ಶಿಕ್ಷಣ ಇನ್ನು ಹತ್ತಿರ | ಶಿಕ್ಷಣ ಪಡೆಯುವ ನಿಮ್ಮ ಕನಸು ಪ್ರೇರಣಾದಲ್ಲಿ ನನಸು! | ವಯಸ್ಸಿನ ಅಂಜಿಕೆ ಬೇಡ, ಸದಾವಕಾಶದ ಬಾಗಿಲು ತೆರೆದ ಪ್ರೇರಣಾ

ಪುತ್ತೂರು: ಶಿಕ್ಷಣ ಪಡೆಯುವ ವಯಸ್ಸಲ್ಲಿ ಶಿಕ್ಷಣ ಪಡೆದಿಲ್ಲವೇ? ಕೆಲಸದ ಒತ್ತಡದಿಂದ ಶಿಕ್ಷಣದಿಂದ ದೂರ ಉಳಿದಿರುವಿರೇ? ಹೀಗಿದ್ದು, ವಿದ್ಯಾಭ್ಯಾಸ ಮುಂದುವರಿಸುವ ಅಪೇಕ್ಷೆ ನಿಮ್ಮದಾಗಿದ್ದರೆ ಪುತ್ತೂರಿನ ಪ್ರೇರಣಾ ಸಂಸ್ಥೆಗೆ ಭೇಟಿ ನೀಡಿ. ವಿದ್ಯಾಭ್ಯಾಸ ಪಡೆಯುವುದು ಎಲ್ಲರ ಬಯಕೆಯೂ ಹೌದು. ಅದರಲ್ಲೂ ಅನಿವಾರ್ಯ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗಿ ಕೆಲಸಕ್ಕೆ ಸೇರಿದವರು ಕಾಲೇಜನ್ನು, ಕಾಲೇಜು ವಿದ್ಯಾರ್ಥಿಗಳನ್ನು ನೋಡಿ ತಾವು ಶಿಕ್ಷಣ ಮುಂದುವರಿಸಬೇಕು ಎಂದು ಅಪೇಕ್ಷೆ ಪಡುತ್ತಿರುತ್ತಾರೆ. ಆದರೆ ಅದು ಹೇಗೆ ಎಂದು ತಿಳಿಯದು. ಆದ್ದರಿಂದ ಶಿಕ್ಷಣ ಪಡೆಯಬೇಕೆಂಬ ಕನಸು ಕನಸಾಗಿಯೇ ಉಳಿದಿರುತ್ತದೆ. ಆದರೆ

ದೂರ ಶಿಕ್ಷಣ ಇನ್ನು ಹತ್ತಿರ | ಶಿಕ್ಷಣ ಪಡೆಯುವ ನಿಮ್ಮ ಕನಸು ಪ್ರೇರಣಾದಲ್ಲಿ ನನಸು! | ವಯಸ್ಸಿನ ಅಂಜಿಕೆ ಬೇಡ, ಸದಾವಕಾಶದ ಬಾಗಿಲು ತೆರೆದ ಪ್ರೇರಣಾ Read More »

ಜನಸಾಮಾನ್ಯರಿಗೆ ತೊಂದರೆ ನೀಡಿದಲ್ಲಿ ಅಧಿಕಾರಿಗಳ ಎತ್ತಂಗಡಿ : ಶಾಸಕ ಅಶೋಕ್ ಕುಮಾರ್ ರೈ | ಪುತ್ತೂರಿನಲ್ಲಿ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನಾ ಸಮಾರಂಭ

ಪುತ್ತೂರು: ಭ್ರಷ್ಟಾಚಾರ ಇಟ್ಟುಕೊಂಡು ಪುತ್ತೂರಿಗೆ ಬರುವ ಯಾವುದೇ ಅಧಿಕಾರಿಗಳು ಜನಸಾಮಾನ್ಯರಲ್ಲಿ ಹಣಕ್ಕಾಗಿ ಕೈಯೊಡ್ಡಿದರೆ ಅವರನ್ನು ಒಂದೇ ವಾರದಲ್ಲಿ ಇಲ್ಲಿಂದ ಎತ್ತಂಗಡಿ ಮಾಡುವ ಕೆಲಸ ಮಾಡಲಿದ್ದೇನೆ. ಹೀಗೆಂದು ಹೇಳಿದರು ಪುತ್ತೂರು ವಿಧಾನಸಭಾ ಶಾಸಕ ಅಶೋಕ್ ಕುಮಾರ್ ರೈ ಪುತ್ತೂರಿನಲ್ಲಿ ಕಾಂಗ್ರೆಸ್ ವತಿಯಿಂದ ನಗರದ ಪುರಭವನದಲ್ಲಿ ಶನಿವಾರ ನಡೆದ ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಪುತ್ತೂರು ಕ್ಷೇತ್ರದಲ್ಲಿ ಯಾವುದೇ ಅಧಿಕಾರಿಗಳಿಂದ ನಾವು ಅಪೇಕ್ಷೆ ಪಡುವುದು ಬಡವರಿಗೆ ಸೇವೆ ನೀಡುವುದನ್ನು. ಅದನ್ನು ಬಿಟ್ಟು ಬಡವರನ್ನು, ಜನಸಾಮಾನ್ಯರ ಕೆಲಸಕ್ಕಾಗಿ ಅಲೆದಾಡಿಸುವ

ಜನಸಾಮಾನ್ಯರಿಗೆ ತೊಂದರೆ ನೀಡಿದಲ್ಲಿ ಅಧಿಕಾರಿಗಳ ಎತ್ತಂಗಡಿ : ಶಾಸಕ ಅಶೋಕ್ ಕುಮಾರ್ ರೈ | ಪುತ್ತೂರಿನಲ್ಲಿ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನಾ ಸಮಾರಂಭ Read More »

ಬಿಜೆಪಿ ಬೆಂಬಲಿತ ಗ್ರಾ.ಪಂ. ಮಾಜಿ ಸದಸ್ಯ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಮಾಜಿ ಅಧ್ಯಕ್ಷ ರಮೇಶ್ ರೈ ಡಿಂಬ್ರಿ ಅವರು ಜೂ. ೩ರಂದು ಪುರಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಸಂಚಾಲಕರಾಗಿ, ಅಧ್ಯಕ್ಷರಾಗಿ ೧೨ ವರ್ಷ ಕಾರ್ಯ ನಿರ್ವಹಿಸಿದ್ದ ರಮೇಶ್ ರೈ ಅವರು ಬಳಿಕ ಆರ್ಯಾಪು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದರು. ಕುರಿಯ ಉಳ್ಳಾಲ ಶ್ರೀ

ಬಿಜೆಪಿ ಬೆಂಬಲಿತ ಗ್ರಾ.ಪಂ. ಮಾಜಿ ಸದಸ್ಯ ಕಾಂಗ್ರೆಸ್ ಸೇರ್ಪಡೆ Read More »

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತç ಉಪನ್ಯಾಸಕ ಡಾ. ಶ್ರೀಶ ಭಟ್ ಹೇಳಿದರು. ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ  ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ  ಅವರು ಮಾತನಾಡಿದರು. ಹೂವಿಗೆ ಪರಿಮಳವಿದ್ದಂತೆ ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ Read More »

ರೈಲುಗಳು ಮುಖಾಮುಖಿ ಢಿಕ್ಕಿ: ಸಾವು – ನೋವು

ಬಾಲಸೋರ್: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ರೈಲುಗಳೆರಡು ಮುಖಾಮುಖಿ ಡಿಕ್ಕಿ‌ ಹೊಡೆದಿದ್ದು, ಸಾವು – ನೋವಿನ ಪ್ರಮಾಣ ಹೆಚ್ಚಿದೆ. ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಸೂಪರ್‌ಫಾಸ್ಟ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ. ಈ ರೈಲಿನಲ್ಲಿದ್ದ ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಅಪಘಾತದ ಸ್ಥಳಕ್ಕೆ ತಂಡಗಳನ್ನು ಕಳುಹಿಸಲಾಗಿದೆ ಎಂದು

ರೈಲುಗಳು ಮುಖಾಮುಖಿ ಢಿಕ್ಕಿ: ಸಾವು – ನೋವು Read More »

ಇತಿಹಾಸ ಪುಟ ಸೇರಿದ ಜಿಡೆಕಲ್ಲಿನ ಹಾಲು ಶೀಥಲೀಕರಣ ಘಟಕ | ಕಾರ್ಯ ಸ್ಥಗಿತ

ಪುತ್ತೂರು:ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ಕಳೆದ 30 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಹಾಲು ಶೀಥಲೀಕರಣ ಕೇಂದ್ರ ಸ್ಥಗಿತಗೊಂಡಿದ್ದು, ಪುತ್ತೂರಿನ ಬೃಹತ್ ಸಂಸ್ಥೆಯೊಂದು ಇತಿಹಾಸ ಪುಟ ಸೇರಲಿದೆ ಎಪಿಎಂಸಿ ಪ್ರಾಂಗಣದಲ್ಲಿ ಕಾರ್ಯಾಚರಿಸುತ್ತಿದ್ದ ಹಾಲು ಶೀಥಲೀಕರಣ ಕೇಂದ್ರವನ್ನು 1992 ರಲ್ಲಿ ಜಿಡೆಕಲ್ಲಿನಲ್ಲಿ ಆರು ಎಕರೆ ಜಾಗದಲ್ಲಿ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಬಳಿಕ ಸುಸಜ್ಜಿತ ಕಟ್ಟಡದಲ್ಲಿ ಕಳೆದ 30 ವರ್ಷಗಳಿಂದ ಯಾವುದೇ ಅಡೆತಡೆಯಿಲ್ಲದೆ ಕಾರ್ಯಾಚರಿಸುತ್ತಾ ಬಂದಿತ್ತು. ಈ ಘಟಕದಲ್ಲಿ ದಿನವಹಿ 50 ಸಾವಿರ ಲೀಟರ್ ಹಾಲು ಶೀಥಲೀಕರಣಗೊಳಿಸುವ ಮೂರು ಬೃಹತ್ ಟ್ಯಾಂಕ್

ಇತಿಹಾಸ ಪುಟ ಸೇರಿದ ಜಿಡೆಕಲ್ಲಿನ ಹಾಲು ಶೀಥಲೀಕರಣ ಘಟಕ | ಕಾರ್ಯ ಸ್ಥಗಿತ Read More »

error: Content is protected !!
Scroll to Top