ಏ.5 ರಿಂದ 7 : ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ಸಮರ್ಪಣೆಯಾದ ಹೊರೆಕಾಣಿಕೆ

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಏ.5 ರಿಂದ 7 ರ ತನಕ ನಡೆಯುವ ಜಾತ್ರೋತ್ಸವದ ಅಂಗವಾಗಿ ಹೊರೆಕಾಣಿಕೆ ಸಮರ್ಪಣೆ ಮಂಗಳವಾರ ನಡೆಯಿತು. ಸಂಜೆ ಕೊಡಿಪಾಡಿ ಶಾಲೆ, ಆನಾಜೆ, ಅರ್ಕ, ಓಜಾಲ, ಹನಿಯೂರು, ಪಲ್ಲತ್ತಾರು ಮೂಲಕ ಹಸಿರುವಾಣಿ ಮೆರವಣಿಗೆ ಸಾಗಿ ಬಂದ ಮೆರವಣಿಗೆಗೆ ಚೆಂಡೆ, ವಾದ್ಯಗಳು, ಮುತ್ತು ಕೊಡೆಗಳು ಮೆರೆಗು ನೀಡಿತು. ಬಳಿಕ ತೆಂಕಿಲ ಧೀಶಕ್ತಿ ಮಹಿಳಾ ಯಕ್ಷ ಬಳಗದಿಂದ ಹಲಸಿನಮಕ್ಕಿ ನರಸಿಂಹ ಶಾಸ್ತ್ರೀ ವೀರಚಿತ “ಶ್ರೀರಾಮ ದರ್ಶನ” ಯಕ್ಷಗಾನ ತಾಳಮದ್ದಳೆ ಜರಗಿತು. ರಾತ್ರಿ ಶ್ರೀ ಮಹಾಗಣಪತಿ […]

ಏ.5 ರಿಂದ 7 : ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ಸಮರ್ಪಣೆಯಾದ ಹೊರೆಕಾಣಿಕೆ Read More »

ನೀಲಿ ಚಿತ್ರದ ನಟಿಗೆ ಹಣ ವರ್ಗಾವಣೆ ಪ್ರಕರಣ : ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್‌ ಬಂಧನ

ನ್ಯೂಯಾರ್ಕ್: ನೀಲಿಚಿತ್ರ ನಟಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನವಾಗಿದೆ. ಟ್ರಂಪ್‌ ವಿರುದ್ಧ ಕೇಳಿಬಂದ ಆರೋಪ ತನಿಖೆ ನಡೆಸಲು ಸೂಕ್ತವಾಗಿದೆ ಎಂದು ಇತ್ತೀಚೆಗೆ ಗ್ರ್ಯಾಂಡ್‌ ಜ್ಯೂರಿ ಶಿಫಾರಸು ಮಾಡಿದ್ದ ಹಿನ್ನೆಲೆಯಲ್ಲಿ ಭಾರಿ ಬಿಗಿಭದ್ರತೆಯೊಂದಿಗೆ ಟ್ರಂಪ್‌ ಮಂಗಳವಾರ ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್ ನ್ಯಾಯಾಲಯಕ್ಕೆ ಹಾಜರಾದರು. ಈ ವೇಳೆ ಅವರನ್ನು ಬಂಧಿಸಿದ ಪೊಲೀಸರು ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು,. ಲೈಂಗಿಕ ಪ್ರಕರಣ ಮುಚ್ಚಿಡಲು ಹಣ ನೀಡಿದ್ದೂ ಸೇರಿದಂತೆ ಹಣ ವಂಚನೆಯ 30ಕ್ಕೂ ಹೆಚ್ಚು ದೋಷಾರೋಪಗಳನ್ನು

ನೀಲಿ ಚಿತ್ರದ ನಟಿಗೆ ಹಣ ವರ್ಗಾವಣೆ ಪ್ರಕರಣ : ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್‌ ಬಂಧನ Read More »

ಸಂಜೀವ ಮಠಂದೂರೇ ನಮ್ಮ ನಾಯಕರು | ಪುತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡದಿದ್ದರೆ ಹೋರಾಟದ ಎಚ್ಚರಿಕೆ | ಗೌಡ ಸಮುದಾಯದ ಪ್ರಾತಿನಿಧ್ಯಕ್ಕೆ ಒತ್ತಾಯ | ಒಕ್ಕಲಿಗ ಗೌಡ ಸಮುದಾಯದ ಮುಖಂಡರಿಂದ ನಿರ್ಮಲಾನಂದ ಶ್ರೀಗಳ ಭೇಟಿ

ಪುತ್ತೂರು: ಮುಂಬರುವ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನೇ ಶಾಸಕ ಅಭ್ಯರ್ಥಿಯಾಗಿ ಘೋಷಿಸಬೇಕು. ಸಂಜೀವ ಮಠಂದೂರು ಅವರನ್ನು ಹೊರತುಪಡಿಸಿ ಯಾರನ್ನೇ ಶಾಸಕ ಅಭ್ಯರ್ಥಿ ಎಂದು ಘೋಷಿಸಿದರೂ ಅದು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವುದು ಖಂಡಿತಾ ಎಂದು ಒಕ್ಕಲಿಗ ಗೌಡ ಸಮುದಾಯದ ಮುಖಂಡರು ಆದಿಚುಂಚನಗಿರಿ ಕ್ಷೇತ್ರದ ಪೀಠಾಧಿಪತಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಗಮನಕ್ಕೆ ತಂದಿದ್ದಾರೆ. ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತನಾಡಿದ ಒಕ್ಕಲಿಗ ಗೌಡ

ಸಂಜೀವ ಮಠಂದೂರೇ ನಮ್ಮ ನಾಯಕರು | ಪುತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡದಿದ್ದರೆ ಹೋರಾಟದ ಎಚ್ಚರಿಕೆ | ಗೌಡ ಸಮುದಾಯದ ಪ್ರಾತಿನಿಧ್ಯಕ್ಕೆ ಒತ್ತಾಯ | ಒಕ್ಕಲಿಗ ಗೌಡ ಸಮುದಾಯದ ಮುಖಂಡರಿಂದ ನಿರ್ಮಲಾನಂದ ಶ್ರೀಗಳ ಭೇಟಿ Read More »

ಸಿಕ್ಕಿಂ : ಭಾರಿ ಹಿಮಪಾತದಿಂದಾಗಿ 6 ಸಾವು – 25 ಮಂದಿ ಪ್ರವಾಸಿಗರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ

ಗ್ಯಾಂಗ್ಟಕ್: ಸಿಕ್ಕಿಂನ ನಾಥುಲಾ ಪ್ರದೇಶದಲ್ಲಿ ಮಂಗಳವಾರ ಭಾರಿ ಹಿಮಪಾತ ಸಂಭವಿಸಿ ಆರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ರಾಜಧಾನಿ ಗ್ಯಾಂಗ್ಟಕ್‌ನ ಆಸ್ಪತ್ರೆಗೆ ಕರೆತರಲಾಗುತ್ತಿದೆ ಮತ್ತು 22ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.ಹಿಮದಡಿ ಸಿಲುಕಿರುವವರ ರಕ್ಷಣೆ ಮತ್ತು ರಸ್ತೆ ತೆರವು ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ.ನಾಥುಲಾ ಪಾಸ್ ಚೀನಾದ ಗಡಿಯಲ್ಲಿದ್ದು, ಅದರ ರಮಣೀಯ ಸೌಂದರ್ಯದಿಂದಾಗಿ ಪ್ರಮುಖ ಪ್ರವಾಸಿ ತಾಣವಾಗಿದೆ. ಜವಾಹರಲಾಲ್ ನೆಹರು ಮಾರ್ಗದ 14ನೇ ಮೈಲಿಗಲ್ಲು

ಸಿಕ್ಕಿಂ : ಭಾರಿ ಹಿಮಪಾತದಿಂದಾಗಿ 6 ಸಾವು – 25 ಮಂದಿ ಪ್ರವಾಸಿಗರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ Read More »

ಓರ್ವ ಗುರು ಹೇಗಿರಬೇಕು ಎಂದರೆ…

ದೇಶದ ಭವಿಷ್ಯ ತರಗತಿ ಕೋಣೆಯಲ್ಲಿ ರೂಪುಗೊಳ್ಳುತ್ತದೆ. ಇಂಥ ಭವಿಷ್ಯದ ಪ್ರಜೆಗಳನ್ನು ರೂಪಿಸುವ ಹೊಣೆ ಹೊತ್ತ ಶಿಕ್ಷಕನ ಜವಾಬ್ದಾರಿ ಬಹಳ ದೊಡ್ಡದು. ಆದರ್ಶ ಶಿಕ್ಷಕನಿಂದ ಮಾತ್ರ ಉತ್ತಮ ಪ್ರಜೆಗಳನ್ನು ರೂಪಿಸಲು ಸಾಧ್ಯ. ಈ ಹಿನ್ನೆಲೆಯಲ್ಲಿ ಪಾಠ ಮಾಡಲು ತರಗತಿ ಕೋಣೆಯೊಳಗೆ ಕಾಲಿಡುವ ಮೊದಲು ಪ್ರತಿಯೊಬ್ಬ ಶಿಕ್ಷಕ ಮಾಡಿಕೊಳ್ಳಬೇಕಾದ ಸಂಕಲ್ಪ ಇದು… 1) ನನ್ನ ಶಾಲೆ ನನಗೆ ದೇವಸ್ಥಾನ. ನಾನು ಅದನ್ನು ಅಷ್ಟೇ ಪಾವಿತ್ರ್ಯದ ಭಾವನೆಯಿಂದ ನೋಡುತ್ತೇನೆ. 2) ಶಿಕ್ಷಕ ವೃತ್ತಿ ಬೇರೆ ವೃತ್ತಿಗಳ ಹಾಗೆ ಅಲ್ಲ. ನನ್ನ ವೃತ್ತಿ

ಓರ್ವ ಗುರು ಹೇಗಿರಬೇಕು ಎಂದರೆ… Read More »

ಶ್ರೀ ಭಗವಾನ್ ಮಹಾವೀರ ಜಯಂತಿ ದಿನಾಚರಣೆ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಚರಣೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಮಂಗಳವಾರ ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಂಗಣದಲ್ಲಿ ಶ್ರೀ ಭಗವಾನ್ ಮಹಾವೀರ ಜಯಂತಿ ದಿನಾಚರಣೆ ನಡೆಯಿತು. ಭಗವಾನ್ ಮಹಾವೀರ ಅವರ ಭಾವಚಿತ್ರದ ಎದುರು ದೀಪ ಪ್ರಜ್ವಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಪುಷ್ಪಾರ್ಚನೆ ಮಾಡಿ ಮಾತನಾಡಿದ ಸಹಾಯಕ ಆಯುಕ್ತ ಗಿರೀಶ್ ನಂದನ್, ಭಗವಾನ್ ಮಹಾವೀರರು ಸತ್ಯ, ಅಹಿಂಸಾ, ತತ್ವಾದರ್ಶಗಳು ವಿಶ್ವಕ್ಕೆ ಮಾದರಿ. ಅವರು ನೀಡಿರುವ ಶಾಂತಿಯ ಸಂದೇಶ ಜಗತ್ತಿಗೆ ಮಾದರಿ. ಅದನ್ನು ನಾವು ಪಾಲನೆ ಮಾಡುವುದು ಇಂದಿನ ಅಗತ್ಯ ಎಂದರು.

ಶ್ರೀ ಭಗವಾನ್ ಮಹಾವೀರ ಜಯಂತಿ ದಿನಾಚರಣೆ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಚರಣೆ Read More »

ಶೇ. 80ರಷ್ಟು ಜನರಿಗೆ ಹಲ್ಲಿನ ಸಮಸ್ಯೆ | ದಂತ ಚಿಕಿತ್ಸಾ ಶಿಬಿರದಲ್ಲಿ ಡಾ. ಅರವಿಂದ್

ಪುತ್ತೂರು: ಸಮಾಜದಲ್ಲಿ ಶೇಕಡಾ 80ರಷ್ಟು ಜನ ಒಂದಲ್ಲ ಒಂದು ರೀತಿಯ ಹಲ್ಲಿನ ಸಮಸ್ಯೆಯಿಂದ ಬಳಲುತ್ತಾರೆ. ಆದರೆ ಅದು ತೀವ್ರತೆಯ ಮಟ್ಟಕ್ಕೆ ತಲಪುವವರೆಗೆ ಸುಮ್ಮನಿರುತ್ತಾರೆ ಎಂದು ಸುಳ್ಯದ ಕೆವಿಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ಡಾ.ಅರವಿಂದ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಹಾಗೂ ಯೂತ್ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಪುತ್ತೂರು ಪೂರ್ವ ಮತ್ತು ಸುಳ್ಯದ ಕೆವಿಜಿ ದಂತ ವೈದ್ಯಕೀಯ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ

ಶೇ. 80ರಷ್ಟು ಜನರಿಗೆ ಹಲ್ಲಿನ ಸಮಸ್ಯೆ | ದಂತ ಚಿಕಿತ್ಸಾ ಶಿಬಿರದಲ್ಲಿ ಡಾ. ಅರವಿಂದ್ Read More »

ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್ ಮಾಡಿ ಗೊಂದಲ ಸೃಷ್ಟಿಸಿದ ಕಿಡಿಗೇಡಿಗಳು‌

ಏಪ್ರಿಲ್ 8ರಂದು ಅಭ್ಯರ್ಥಿ ಪಟ್ಟಿ ಬಿಡುಗಡೆ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮ ಹಂತಕ್ಕೆ ಬಂದಿದ್ದು, ಇಂದಿನಿಂದ ಎರಡು ದಿನ ನಡೆಯಲಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಾಮಾಜಿ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು

ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್ ಮಾಡಿ ಗೊಂದಲ ಸೃಷ್ಟಿಸಿದ ಕಿಡಿಗೇಡಿಗಳು‌ Read More »

ದೇವಸ್ಥಾನದ ಪುನರ್‌ನಿರ್ಮಾಣದ ಸಂದರ್ಭ ಬೃಹತ್​ ಪಾಣಿಪೀಠ ಗೋಚರ

ಪುತ್ತೂರು : ಮೂರು ದಿನಗಳ ಹಿಂದೆ ದೇವಸ್ಥಾನದ ಪುಷ್ಕರಣಿ ಮಧ್ಯೆ ಇರುವ ಕಟ್ಟೆಯ ಕೆಳಭಾಗದ ವರುಣ ದೇವರ ವಿಗ್ರಹದ ಬಳಿ ಭೂಗರ್ಭದಲ್ಲಿ ನೀಲಿ-ಬಿಳಿ ಮಿಶ್ರಿತ ಹುಡಿ ಮಣ್ಣಿನೊಂದಿಗೆ ಅಂಟಿಕೊಂಡಿದ್ದ ವರುಣ ದೇವರ ವಿಗ್ರಹದ ಪಾಣಿಪೀಠ ಕಂಡುಬಂದಿತ್ತು. ಇದೀಗ ಅದರ ಕೆಳಗೇ ಬೃಹತ್ ಪಾಣಿಪೀಠ ಪತ್ತೆಯಾಗಿದೆ. ದೇವಸ್ಥಾನದ ಪುಷ್ಕರಣಿಯ ಮಧ್ಯೆ ಇರುವ ಕಟ್ಟೆಯ ಪುನರ್ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಕೆರೆಯ ಮಧ್ಯ ಭಾಗದ ಕಟ್ಟೆಯ ಸುತ್ತ ಕಾಫರ್ ಡ್ರಾಜ್ ಮಾಡಿ ಒಳಗಿನ ನೀರನ್ನು ಹೊರತೆಗೆದಾಗ ಶ್ರೀವರುಣ

ದೇವಸ್ಥಾನದ ಪುನರ್‌ನಿರ್ಮಾಣದ ಸಂದರ್ಭ ಬೃಹತ್​ ಪಾಣಿಪೀಠ ಗೋಚರ Read More »

ಕೆಂಪು ಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ಅವಘಡ ತಪ್ಪಿಸಿದ ಮಹಿಳೆ

ಮಂಗಳೂರು : ರೈಲು ಹಳಿ ಮೇಲೆ ಮರ ಬಿದ್ದದ್ದನ್ನು ಗಮನಿಸಿದ ಮಹಿಳೆಯೊಬ್ಬರು ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿರುವ ಘಟನೆ ಪಡೀಲ್‌ – ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರದಲ್ಲಿ ಏ 04 ರಂದು ನಡೆದಿದೆ. ಚಂದ್ರಾವತಿ (70) ಎಂಬವರೇ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿ ಹಲವಾರು ಪ್ರಯಾಣಿಕರ ಪ್ರಾಣವನ್ನು ಉಳಿಸಿದ ಮಹಿಳೆ. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು ಹಳಿಗೆ ಮರ ಬಿದ್ದಿದ್ದು, ಅದೇ ಸಮಯಕ್ಕೆ ಮಂಗಳೂರಿನಿಂದ ಮುಂಬಯಿಗೆ ಮತ್ಸ್ಯಗಂಧ

ಕೆಂಪು ಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ಅವಘಡ ತಪ್ಪಿಸಿದ ಮಹಿಳೆ Read More »

error: Content is protected !!
Scroll to Top