ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ವಂಚನೆ : 6 ಮಂದಿ ಸೆರೆ

ಸಾಬೂನು ಪ್ಯಾಕೆಟ್‌ ಕೊಟ್ಟು ಹಣ ಕಸಿದು ಪರಾರಿಯಾಗುತ್ತಿದ್ದ ಖದೀಮರು ಉಡುಪಿ : ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ಭರವಸೆ ನೀಡಿ ಹಲವು ವ್ಯಕ್ತಿಗಳಿಗೆ ವಂಚಿಸಿದ ಆರೋಪದಡಿ ಉಡುಪಿ ಪೊಲೀಸರು ಆರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್ ಪೋಲಾಶ್ ಖಾನ್ (42), ಮುಂಬೈ ಮೂಲದ, ಮಹಮ್ಮದ್ ಮಹತಾಬ್ ಬಿಲ್ಲಾಲ್ ಶೇಕ್ (43), ಪಶ್ಚಿಮ ಬಂಗಾಳದ ಮಹಮ್ಮದ್ ಫಿರೋಜ್ (30), ದಿಲ್ಲಿಯಲ್ಲಿ ವಾಸವಾಗಿರುವ ನೂರ್ ಮಹಮ್ಮದ್ (36) ಹರಿಯಾಣದ ಮೀರಜ್ […]

ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ವಂಚನೆ : 6 ಮಂದಿ ಸೆರೆ Read More »

ಪುತ್ತೂರಿನ ಬಹುನಿರೀಕ್ಷಿತ ಜಿಎಲ್ ವನ್ ಮಾಲ್ ಲೋಕಾರ್ಪಣೆ

ಪುತ್ತೂರು: ಬಹುಬೇಡಿಕೆಯ, ಬಹುನಿರೀಕ್ಷಿತ ಜಿಎಲ್ ವನ್ ಮಾಲ್ ಏ. 2ರಂದು ಲೋಕಾರ್ಪಣೆಗೊಂಡಿತು.ಜಿಎಲ್ ಸಮೂಹ ಸಂಸ್ಥೆಗಳ ಕೊಡುಗೆಯಾಗಿರುವ ಜಿಎಲ್ ವನ್ ಮಾಲ್ ನ ಲೋಗೋವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅನಾವರಣಗೊಳಿಸಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರು ಮಾಲ್ ಅನ್ನು ಲೋಕಾರ್ಪಣೆಗೊಳಿಸಿದರು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ದೀಪಪ್ರಜ್ವಲನೆ ಮಾಡಿ, ಮಾಲ್ ಅನ್ನು ಲೋಕಾರ್ಪಣೆಗೊಳಿಸಿದರು. ನಂಬರ್ ವನ್ ಆಗಿಯೇ ಇರಲಿ: ಎಡನೀರು ಶ್ರೀಆಶೀರ್ವಚನ

ಪುತ್ತೂರಿನ ಬಹುನಿರೀಕ್ಷಿತ ಜಿಎಲ್ ವನ್ ಮಾಲ್ ಲೋಕಾರ್ಪಣೆ Read More »

ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಪುನೀತ್‌ ಕೆರೆಹಳ್ಳಿ ನೇತೃತ್ವದ ಗ್ಯಾಂಗ್‌ ಥಳಿಸಿ ಕೊಂದಿದೆ ಎಂಬ ಆರೋಪ ಬೆಂಗಳೂರು : ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡದ ದಾಳಿಗೆ ಸಿಲುಕಿ ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕ ಹತ್ಯೆಯಾಗಿದ್ದಾನೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮಂಡ್ಯ ನಿವಾಸಿ ಇದ್ರೀಸ್ ಪಾಷಾ (39) ಎಂಬವರ ಮೃತದೇಹ ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಪತ್ತೆಯಾಗಿತ್ತು. ಇರ್ಫಾನ್ ಮತ್ತು ಸೈಯದ್

ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು Read More »

ಕಗ್ಗದ ಸಂದೇಶ- ಬದುಕಿನಾಟದಲ್ಲಿ ಧನಾತ್ಮಕ ಮನೋಭಾವದೊಂದಿಗೆ ಆಡಬೇಕು…

ಎಡರು ತೊಡರೆನಲೇಕೆ? ಬಿಡಿಸು ಮತಿಗಾದನಿತ|ದುಡಿ ಕೈಯಿನಾದನಿತ ಪಡುಬಂದ ಪಾಡು||ಬಿಡು ಮಿಕ್ಕುದನು ವಿಧಿಗೆ, ಪಡುಬಂದ ಪಾಡು|ಬಿಡುಗಡೆಗೆ ದಾರಿಯದು?– ಮಂಕುತಿಮ್ಮ||ಬದುಕಿನ ದಾರಿಯಲ್ಲಿ ಎದುರಾಗುವ ಅಡ್ಡಿ ಆತಂಕಗಳ ಬಗ್ಗೆ ಚಿಂತೆ ಮಾಡಬಾರದು. ನಮ್ಮ ತಿಳುವಳಿಕೆಗೆ ಎಷ್ಟು ಸಾಧ್ಯವಾಗುತ್ತದೋ ಅಷ್ಟನ್ನು ನಿವಾರಿಸಿಕೊಳ್ಳಬೇಕು. ನಮ್ಮ ಕೈಯಲ್ಲಿ ಎಷ್ಡು ಸಾಧ್ಯವಾಗುತ್ತದೋ ಅಷ್ಟೂ ಕೆಲಸಗಳನ್ನು ನಿಷ್ಠೆಯಿಂದ ಮಾಡಬೇಕು. ಉಳಿದಿರುವುದನ್ನು ವಿಧಿಗೆ ಬಿಟ್ಟು ನೆಮ್ಮದಿಯಿಂದ ಇರುವುದೇ ಜೀವನದ ಮುಕ್ತಿಯ ಮಾರ್ಗ ಎನ್ನುವುದನ್ನು ಮಾನ್ಯ ಡಿವಿಜಿಯವರು ಈ ಮುಕ್ತಕದಲ್ಲಿ ಹೇಳಿದ್ದಾರೆ. ಬದುಕು ಎನ್ನುವುದು ಸುಖದುಃಖಗಳ ಆಗರ. ಇದು ಪ್ರತಿಯೊಬ್ಬರ ಜೀವನಕ್ಕೂ

ಕಗ್ಗದ ಸಂದೇಶ- ಬದುಕಿನಾಟದಲ್ಲಿ ಧನಾತ್ಮಕ ಮನೋಭಾವದೊಂದಿಗೆ ಆಡಬೇಕು… Read More »

ಭಾರತದ ಉದ್ಯಮ ರಂಗದ ಶಕಪುರುಷ ರತನ್ ಟಾಟಾ

ಚಾರಿಟಿಯಲ್ಲಿಯೂ ಅವರು ಎಲ್ಲರಿಗಿಂತ ಮುಂದೆ ಭಾರತದ ಮಹೋನ್ನತ ಬಿಸಿನೆಸ್ ಮ್ಯಾಗ್ನೆಟ್ ರತನ್ ಟಾಟಾ ಪ್ರಧಾನಮಂತ್ರಿಗಳ ಕೊರೊನ ತುರ್ತು ಪರಿಹಾರ ನಿಧಿಗೆ 1500 ಕೋಟಿ ರೂ. ಕೊಡುಗೆ ನೀಡಿದಾಗ ಎಲ್ಲರೂ ಮೂಗಿನ ಮೇಲೆ ಬೆರಳು ಇಟ್ಟಿದ್ದರು. ಎಷ್ಟೋ ಸಿರಿವಂತರು ಹೃದಯವಂತರು ಆಗಿರುವುದಿಲ್ಲ. ಆದರೆ ರತನ್ ಟಾಟಾ ಅದಕ್ಕೊಂದು ಅಪವಾದ. ಅವರು ತಮ್ಮ ಸಂಪತ್ತಿನ ಶೇ.60-65 ಭಾಗವನ್ನು ಈಗಾಗಲೇ ದಾನ ಮಾಡಿಯಾಗಿದೆ. ಬೇರೆ ಕಾರ್ಪೊರೇಟ್ ಕಂಪೆನಿಗಳು ತಮ್ಮ ಸಿಎಸ್ಆರ್ ಯೋಜನೆಗಳನ್ನು ರೂಪಿಸಲು ಕೂಡ ರತನ್ ಟಾಟಾ ಮಾದರಿಯಾಗಿ ನಿಂತಿದ್ದಾರೆ. ಟಾಟಾ

ಭಾರತದ ಉದ್ಯಮ ರಂಗದ ಶಕಪುರುಷ ರತನ್ ಟಾಟಾ Read More »

ಕಬಕ ಗ್ರಾಮದಲ್ಲಿ ಮೇಳೈಸಿದ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮದ ಐದನೇ ಸರಣಿ  “ಸಾಹಿತ್ಯ ಸಂಭ್ರಮ”

ಪುತ್ತೂರು: ವರ್ಷದಲ್ಲಿ ಒಂದು ಬಾರಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನಲ್ಲಿರುವ ಎಲ್ಲಾ ಸಾಹಿತಿಗಳಿಗೆ ಮತ್ತು ಕಲಾವಿದರಿಗೆ ವೇದಿಕೆ ನೀಡಲು ಹಾಗೂ  ಸಾಧಕರನ್ನು  ಸನ್ಮಾನಿಸಲು  ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ  ಪುತ್ತೂರು ತಾಲೂಕಿನ 32 ಗ್ರಾಮದಲ್ಲೂ ತಿಂಗಳಿಗೆ ಒಂದರಂತೆ  ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮವನ್ನು ಏರ್ಪಡಿಸಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಹಾಗೂ ಸಾಧಕರನ್ನ ಗುರುತಿಸುವ  ಕಾರ್ಯವನ್ನು ಹಮ್ಮಿಕೊಂಡಿದ್ದೇವೆ ಎಂದು ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಹೇಳಿದರು. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ

ಕಬಕ ಗ್ರಾಮದಲ್ಲಿ ಮೇಳೈಸಿದ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮದ ಐದನೇ ಸರಣಿ  “ಸಾಹಿತ್ಯ ಸಂಭ್ರಮ” Read More »

ಅಶಕ್ತರಿಗೆ ನೆರವಾಗಲು ನಿಧಿ ಸಂಗ್ರಹ ಅಭಿಯಾನ

ಪುತ್ತೂರು: ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ, ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್, ದ. ಕ ಕರ್ನಾಟಕ ಇವರ ನೇತೃತ್ವದಲ್ಲಿ ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಬ್ರಹ್ಮಕಲಶ ಸಂದರ್ಭದಲ್ಲಿ ಅಶಕ್ತರಿಗೆ ನೆರವಾಗಲು ನಿಧಿ ಸಂಗ್ರಹ ಅಭಿಯಾನ ನಡೆಸಲಾಯಿತು.  ಅಭಿಯಾನದಲ್ಲಿ ಒಟ್ಟಾದ ಮೊತ್ತ 20500 ರೂ.ವನ್ನು ಧರ್ಮಸ್ಥಳ ನಿಡ್ಲೆ ಗ್ರಾಮದ ದೀಪಿಕಾ ಅವರ ಚಿಕಿತ್ಸೆಗಾಗಿ ವಿತರಿಸಲಾಯಿತು.  ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಹಾಗೂ ಆಡಳಿತ ಮಂಡಳಿಯ ಚಂದ್ರಹಾಸ್ ಗುರಿಕಾರ, ಶಶೀಂದ್ರ ಜಂಕಲ ಹಾಗೂ ಟ್ರಸ್ಟಿನ ಗೌರವಾಧ್ಯಕ್ಷ ಉದಯ

ಅಶಕ್ತರಿಗೆ ನೆರವಾಗಲು ನಿಧಿ ಸಂಗ್ರಹ ಅಭಿಯಾನ Read More »

ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ

ಹುಬ್ಬಳ್ಳಿ : ಹುಬ್ಬಳ್ಳಿಯ ಬಂಡಿಗೆರೆಯಲ್ಲಿ 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೋರ್ವ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಏ. 2 ರಂದು ನಡೆದಿದೆ.ಮಾ. 30 ರಂದು ನಡೆದಿದ್ದ ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5

ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ Read More »

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು

ಮಂಗಳೂರು : ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾ. 30 ರಂದು ದೈವಾರಾಧ‌ನೆ ನಡೆಯುತ್ತಿದ್ದ ಸಂದರ್ಭ, ದೈವ ನರ್ತಕರಾದ ಕಾಂತು ಅಜಿಲ ಸ್ಥಳದಲ್ಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದರು. ಅವರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಒಂದು ಲಕ್ಷ ರೂ. ಆರ್ಥಿಕ ನೆರವನ್ನು ಏ. 2 ರಂದು ಘೋಷಣೆ ಮಾಡಿದೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು Read More »

ಜೆಡಿಎಸ್​​ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಲಿಂಗೇಗೌಡ

ಕಾಗೇರಿ ನಿವಾಸಕ್ಕೆ ಭೇಟಿ ನೀಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಶಿರಸಿ : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಜೆಡಿಎಸ್​ನ ಎಟಿ ರಾಮಸ್ವಾಮಿ, ಗುಬ್ಬಿ ಶ್ರೀನಿವಾಸ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಅರಸಿಕೆರೆ ಜೆಡಿಎಸ್​ ಶಾಸಕ ಶಿವಲಿಂಗೇಗೌಡ ಅವರು ಕೊನೆಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 400ಕ್ಕೂ ಅಧಿಕ ಮುಖಂಡರ ಜೊತೆ ಏ. 2 ರಂದು ಶಿರಸಿಯಲ್ಲಿರುವ ಸ್ಪೀಕರ್ ನಿವಾಸಕ್ಕೆ ಭೇಟಿ ನೀಡಿ ವಿಶ್ವೇಶ್ವರ

ಜೆಡಿಎಸ್​​ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಲಿಂಗೇಗೌಡ Read More »

error: Content is protected !!
Scroll to Top