ಸಾಯಲು ಹೊರಟಿದ್ದ ಅವರ ಬದುಕನ್ನು ಆ ಸಿನೆಮಾ ಬದಲಾಯಿಸಿತ್ತು

ಸಾಧು ಕೋಕಿಲಾ ಎಂಬ ಮಲ್ಟಿ ಟ್ಯಾಲೆಂಟೆಡ್ ಸ್ಟಾರ್ ಕಲಾವಿದ ಕನ್ನಡದ ಹೆಮ್ಮೆ ಈ ವ್ಯಕ್ತಿಯ ಬಹು ಆಯಾಮದ ಪ್ರತಿಭೆಗಳ ಬಗ್ಗೆ ನನಗೆ ಭಾರಿ ಅಚ್ಚರಿ ಮತ್ತು ಅಭಿಮಾನ. ಭಾರತದ ಅತ್ಯಂತ ವೇಗದ ಕೀಬೋರ್ಡ್ ಪ್ಲೇಯರಗಳಲ್ಲಿ ಅವರು ಕೂಡ ಒಬ್ಬರು. ಕರ್ನಾಟಕದ ಅತ್ಯಂತ ಹೆಚ್ಚು ಬೇಡಿಕೆಯ ಹಾಸ್ಯನಟ, ಅತಿ ಶ್ರೇಷ್ಠ ಸಂಗೀತ ನಿರ್ದೇಶಕ, ಒಳ್ಳೆಯ ಗಾಯಕ, ಯಶಸ್ವಿ ಸಿನೆಮಾ ನಿರ್ದೇಶಕ, ಹಲವು ರಿಯಾಲಿಟಿ ಶೋಗಳ ಸೆಲೆಬ್ರಿಟಿ ಜಡ್ಜ್‌, ಸಮಾಜ ಸೇವಕ, ರಾಜಕಾರಣಿ… ಹೀಗೆ ಅವರ ಪ್ರೊಫೈಲ್ ವಿಸ್ತಾರ ಆಗುತ್ತ […]

ಸಾಯಲು ಹೊರಟಿದ್ದ ಅವರ ಬದುಕನ್ನು ಆ ಸಿನೆಮಾ ಬದಲಾಯಿಸಿತ್ತು Read More »

ಶೈಕ್ಷಣಿಕ ಅವಧಿ ಮೇ 29ರಿಂದ ಆರಂಭ | ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ | 2023-24ನೇ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ

ಪುತ್ತೂರು: 2023-24ನೇ ಸಾಲಿನ ಶೈಕ್ಷಣಿಕ ಅವಧಿ ಮೇ.29 ರಿಂದ ಆರಂಭವಾಗಲಿದೆ. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಆಯುಕ್ತರು ಸೂಚನೆ ನೀಡಿದ್ದು, ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಕೆಗಳು ಮಾ.29 ರಿಂದ ಆರಂಭಗೊಳ್ಳುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. 2023-24ನೇ ಮೊದಲ ಶೈಕ್ಷಣಿಕ ಅವಧಿ ಮೇ. 29ರಿಂದ ಅಕ್ಟೋಬರ್ 7 ರ ತನಕ,

ಶೈಕ್ಷಣಿಕ ಅವಧಿ ಮೇ 29ರಿಂದ ಆರಂಭ | ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ | 2023-24ನೇ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ Read More »

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ : ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಏ. 6 ರವರೆಗೆ ವಿಸ್ತರಿಸಿದೆ. ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮುಖಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಇನ್ನೊಂದು ಅರ್ಜಿಗೆ ಆಕ್ಷೇಪಣೆ

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ : ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ Read More »

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಏ. 1 ರಂದು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಎಂಬಾತನೇ ಬಂಧಿತ ಆರೋಪಿ. ಆರೋಪಿಯನ್ನು ಬೆಂಗಳೂರಿನ ಅತ್ತಿಬೆಲೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆ : 92 ರೂ. ಇಳಿಕೆ

ದೆಹಲಿ : ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಿದ್ದು, 92 ರೂಪಾಯಿ ಇಳಿಕೆ ಮಾಡಿದೆ.ಏ. 1 ನೂತನ ಆರ್ಥಿಕ ವರ್ಷದ ಆರಂಭವಾಗಿದ್ದು, ಇಂದಿನಿಂದ ಬೇರೆ ಬೇರೆ ಹೊಸ ನಿಯಮಗಳು ಜಾರಿಯಾಗಿದ್ದು, ಕಾರುಗಳ ದರ ದುಬಾರಿಯಾಗಲಿದೆ. ಔಷಧಗಳ ಬೆಲೆ ಇಳಿಕೆಯಾಗಲಿದ್ದು, ಹೊಸ ತೆರಿಗೆ ಪದ್ಧತಿ ಜಾರಿಯಾಗಲಿದೆ. ಇನ್ನು ಇಂದಿನಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 92 ರೂ ಇಳಿಕೆ ಮಾಡಿದೆ. ಆದರೆ ಗೃಹ ಬಳಕೆಯ 14.2 ಕೆಜಿ ಅಡುಗೆ

ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆ : 92 ರೂ. ಇಳಿಕೆ Read More »

ಸ್ಯಾಂಕಿ ಟ್ಯಾಂಕ್‌ ರಸ್ತೆ ಅಗಲೀಕರಣ : ಪ್ರತಿಭಟಿಸಿದ್ದ ಜಟ್ಕಾಗೆ ಪೊಲೀಸ್ ನೋಟಿಸ್

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ಯೋಜನೆ ಸಂಬಂಧ ಭೂ ಸಾರಿಗೆ ಪ್ರಾಧಿಕಾರ (ಬಿಎಂಎಲ್‌ಟಿಎ) ಒಪ್ಪಿಗೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದರು, ಒಮ್ಮೆಲೇ ಯೋಜನೆ ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಜಟ್ಕಾ ಓಆರ್‌ಗ್ ನ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ತೀವ್ರ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಯೋಜನೆಗೆ ಬಿಬಿಎಂಪಿ ಬ್ರೇಕ್ ಹಾಕಿತ್ತು. ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ (ಬಿಎಂಎಲ್‌ಟಿಎ) ಒಪ್ಪಿಗೆ ನೀಡಿದ ನಂತರವೇ ಈ

ಸ್ಯಾಂಕಿ ಟ್ಯಾಂಕ್‌ ರಸ್ತೆ ಅಗಲೀಕರಣ : ಪ್ರತಿಭಟಿಸಿದ್ದ ಜಟ್ಕಾಗೆ ಪೊಲೀಸ್ ನೋಟಿಸ್ Read More »

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 30ರಂದು ಇಚ್ಲಂಪಾಡಿ ಗ್ರಾಮದ ಮೊಂಟೆತಡ್ಕ ಎಂಬಲ್ಲಿ ಸಂಭವಿಸಿದೆ. ರೆನೀಶ ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರ ತಮ್ಮ ಎರಡು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಮನೆಯಲ್ಲಿ ರೆನೀಶನು ಒಬ್ಬರೇ ವಾಸವಾಗಿದ್ದರು. ಇಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದು, ಮಾ. 30 ರಂದು ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದು, ರಾತ್ರಿ ಸುಮಾರು 12.00 ಗಂಟೆಯ ಸಮಯಕ್ಕೆ ಚಿಕ್ಕಪ್ಪನ ಮಗ ಜಿತಿನ್ ಗೆ ದೂರವಾಣಿ ಮೂಲಕ, ನನ್ನ ಮರಣಕ್ಕೆ ನಾನೆ

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ Read More »

ಶಿಕ್ಷಕ ವೆಂಕಟೇಶ್ ಪ್ರಸಾದ್ ಗೆ ರಾಷ್ಟ್ರಮಟ್ಟದ ಅಥ್ಲೆಟಿಕ್ಟ್ ನಲ್ಲಿ ಕಂಚಿನ ಪದಕ

ಪುತ್ತೂರು: ಕರ್ನಾಟಕ ಮಾಸ್ಟರ್ಸ್ ಆತ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್  27ರಿಂದ 30ರವರೆಗೆ ನಡೆದ  42ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ, ಪುತ್ತೂರು ತಾಲೂಕು, ದರ್ಬೆತ್ತಡ್ಕದ  ವೆಂಕಟೇಶ್ ಪ್ರಸಾದ್  45ರ ವಯೋಮಾನದ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಗಳಿಸಿರುತ್ತಾರೆ. ಅವರು ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜು ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದಾರೆ.

ಶಿಕ್ಷಕ ವೆಂಕಟೇಶ್ ಪ್ರಸಾದ್ ಗೆ ರಾಷ್ಟ್ರಮಟ್ಟದ ಅಥ್ಲೆಟಿಕ್ಟ್ ನಲ್ಲಿ ಕಂಚಿನ ಪದಕ Read More »

ಪೆರ್ನೆ-ಕರೆಕೋಡಿ-ಪೆಜಕ್ಕೊಡೆ-ಅಗರ್ತಬೈಲು-ಗುಂಡಿ ರಸ್ತೆ ಕಾಂಕ್ರಿಟೀಕರಣ ಮುಕ್ತಾಯ ಹಂತ | ಶಾಸಕ ಮಠಂದೂರು ಅವರಿಗೆ ಅಭಿನಂದನೆ ಸಲ್ಲಿಸಿದ ಊರವರು

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರ ಅನುದಾನದಲ್ಲಿ ಬಿಳಿಯೂರು ಗ್ರಾಮದ ಬೂತ್ ಸಂಖ್ಯೆ 31ರ ಪೆರ್ನೆ. ಕೆರೆ ಕೋಡಿ ಪೆಜಕ್ಕೊಡೆ ಪದ ಬರಿ ಅಗರ್ತ ಬೈಲು ಗುಂಡಿ ರಸ್ತೆ ಕಾಂಕ್ರಿಟೀಕರಣ ಮುಂಕ್ತಾ ಹಂತದಲ್ಲಿದೆ. ಈ ಸಂಪರ್ಕ ರಸ್ತೆಗೆ ಆ ಭಾಗದ ಜನರ ಬೇಡಿಕೆಯಂತೆ ಶಾಸಕರು  25 ಲಕ್ಷ ಅನುದಾನ ಮಂಜೂರುಗೊಳಿಸಿದ್ದರು. ಈ ಕಾಮಗಾರಿಗೆ ಅನುದಾನ ಒದಗಿಸಿಕೊಟ್ಟ ಜನಪ್ರಿಯ ಶಾಸಕರಿಗೆ ಈ ಭಾಗದ ಜನತೆ ಅಭಿನಂದನೆ ಸಲ್ಲಿಸಿದ್ದು, ಈ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ

ಪೆರ್ನೆ-ಕರೆಕೋಡಿ-ಪೆಜಕ್ಕೊಡೆ-ಅಗರ್ತಬೈಲು-ಗುಂಡಿ ರಸ್ತೆ ಕಾಂಕ್ರಿಟೀಕರಣ ಮುಕ್ತಾಯ ಹಂತ | ಶಾಸಕ ಮಠಂದೂರು ಅವರಿಗೆ ಅಭಿನಂದನೆ ಸಲ್ಲಿಸಿದ ಊರವರು Read More »

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡ್ನೂರು ಗ್ರಾಮದ ಎಲ್ಕಾಜೆ ಎಂಬಲ್ಲಿ ಮಾ.31 ರಂದು ಸಂಭವಿಸಿದೆ. ಯಮುನಾ(72) ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರು ರಕ್ತದ ಒತ್ತಡ ಮತ್ತು ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಪುತ್ತೂರಿನ ವೈದ್ಯರಲ್ಲಿ ಔಷಧಿ ಮಾಡಿಸಿದರೂ ಗುಣಮುಖವಾಗದೇ ಇದ್ದಾಗ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರದಂದು ಮನೆಯ ಅಡುಗೆ ಕೋಣೆಯ ಛಾವಣಿಗೆ ಸೀರೆಯನ್ನು ಕುಣಿಕೆ ಮಾಡಿ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top