ಅಕ್ಷಯ ಕಾಲೇಜಿನಲ್ಲಿ “Maths Shortcut tricks and Tips for Competitive Exam” ಮಾಹಿತಿ ಕಾರ್ಯಾಗಾರ

ಪುತ್ತೂರು: ಇಲ್ಲಿನ ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸಂಪ್ಯ ಅಧೀನದಲ್ಲಿ ಕಾರ‍್ಯನಿರ್ವಹಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇನ್ವಿಕ್ತ ಕಾಮರ್ಸ್ ಅಸೋಸಿಯೇಶನ್ ವತಿಯಿಂದ “Maths Shortcut tricks and Tips for Competitive Exam” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ‍್ಯಗಾರ ಮೇ.26ರಂದು ನಡೆಯಿತು. ಕಾರ‍್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ವೇತ ಜೆ ರಾವ್ ಆಗಮಿಸಿ “Maths Shortcut tricks and Tips for Competitive Exam” ಎಂಬ ವಿಷಯದ ಕುರಿತು ಕಾರ‍್ಯಗಾರವನ್ನು […]

ಅಕ್ಷಯ ಕಾಲೇಜಿನಲ್ಲಿ “Maths Shortcut tricks and Tips for Competitive Exam” ಮಾಹಿತಿ ಕಾರ್ಯಾಗಾರ Read More »

ಕರುಣಾಕರ ಪೂಜಾರಿ ಪಟ್ಟೆ ನಿಧನ

ಪುತ್ತೂರು: ಬೆಳಂದೂರು ಗ್ರಾಪಂ ಮಾಜಿ ಅಧ್ಯಕ್ಷ ಕರುಣಾಕರ ಪೂಜಾರಿ ಪಟ್ಟೆ ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನರಾದರು. ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿ, ಸವಣೂರು ಸ.ಉ.ಹಿ. ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯಾಗಿದ್ದು, ವೃತ್ತಿಯಲ್ಲಿ ಪಿಡಬ್ಲ್ಯೂಡಿ ಗುತ್ತಿಗೆದಾರರಾಗಿದ್ದರು. ಮೃತರು ತಾಯಿ, ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಕರುಣಾಕರ ಪೂಜಾರಿ ಪಟ್ಟೆ ನಿಧನ Read More »

ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಉದ್ಯೋಗದಿಂದ ಬಿಡುಗಡೆ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು.ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ದ.ಕ.ಸಂಸದ ನಳಿನ್‌ ಕುಮಾರ್ ಕಟೀಲ್‌ ಅವರು ಭರವಸೆ

ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಉದ್ಯೋಗದಿಂದ ಬಿಡುಗಡೆ Read More »

ಬರಿದಾಗಿದೆ ಐತಿಹಾಸಿಕ ಕೆದ್ದೊಟ್ಟೆ ಕೆರೆ

ಮಹಾ  ಭಾರತದ ಕುಂತಿ ನಡೆದಾಡಿದ ಮಹಾ ಸರೋವರ  ಮೀನು, ಹಕ್ಕಿ, ಕೃಷಿ ಬದುಕಿನ ಮೂಲಾಧಾರವಾಗಿರುವ ಕಡಬ ತಾಲೂಕಿನ ಕುಂತೂರು ಗ್ರಾಮದ  ಕೆದ್ದೊಟ್ಟೆ ಕೆರೆ ಈ ಬಾರಿಯ ಬೇಸಿಗೆಯ ಝಳಕ್ಕೆ ಬರಿದಾಗಿದೆ.     ಈ ಭಾಗದ ರೈತರ ಕೃಷಿ ಬದುಕಿನ ನೀರು ಯಾವ ಬರಗಾಲದಲ್ಲೂ ಇಲ್ಲಿ ನೀರು ಆರಿಲ್ಲ. ಹತ್ತಕ್ಕೂ ಹೆಚ್ಚು ಪಂಪ್‌ಸೆಟ್‌ಗಳು ನೀರೆತ್ತಿದರೂ ಕೆರೆ ಬತ್ತುತ್ತಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪರಿಯ ಸನ್ನಿವೇಶ ನಿರ್ಮಾಣವಾಗಿದ್ದರೂ ಕೆರೆ ಬರಿದಾದ ಉದಾಹರಣೆಗಳು ಇಲ್ಲ ಆದರೆ ಈ ಬಾರಿ ಮಾತ್ರ

ಬರಿದಾಗಿದೆ ಐತಿಹಾಸಿಕ ಕೆದ್ದೊಟ್ಟೆ ಕೆರೆ Read More »

ಮೇ 27 – ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ, ಧಾರ್ಮಿಕ ಸಭೆ

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್, ಸ್ವಸಹಾಯ ಸಂಘಗಳ ಒಕ್ಕೂಟ ಬೆಳಂದೂರು ಇದರ ಆಶ್ರಯದಲ್ಲಿ ಶ್ರೀ ಸದಾಶಿವ ದೇವಸ್ಥಾನ ಅಗಳಿ ಇದರ ಸಹಕಾರದೊಂದಿಗೆ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮವು ಮೇ 27ರಂದು ಅಗಳಿ ಶ್ರೀ ಸದಾಶಿವ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ ಶ್ರೀ ಕಲ್ಪೋಕ್ತ ಶನೈಶ್ಚರ ಪೂಜೆ, ಮಹಾಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬೆಳಿಗ್ಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಗಳಿ ಶ್ರೀ ಸದಾಶಿವ

ಮೇ 27 – ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ, ಧಾರ್ಮಿಕ ಸಭೆ Read More »

ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಅಭಿವಂದನಮ್-2023

ಪುತ್ತೂರು: ಮಕ್ಕಳ ಸಾಧನೆಯ ಹಿಂದೆ ಶಿಕ್ಷಕರ ಪರಿಶ್ರಮ ಹೆಚ್ಚಿನ ಮಹತ್ವ ಪಡೆಯುತ್ತದೆ. ಸಾಧನೆಗೆ ಬುದ್ಧಿವಂತಿಕೆಯ ಜೊತೆಗೆ ಸತತ ಪರಿಶ್ರಮ ಅಗತ್ಯ ಎಂದು ಸಮಾಜ ಸೇವಾ ಕಾರ್ಯಕರ್ತ ಯತೀಶ್ ಆರ್ವಾರ್ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಸನ್ಮಾನ “ಅಭಿವಂದನಮ್-2023” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಾವು ನಮಗೋಸ್ಕರ ಮಾತ್ರವಲ್ಲದೇ ದೇಶಕ್ಕೋಸ್ಕರ ಬದುಕಬೇಕು. ಕೃಷ್ಣಂ ವಂದೇ ಜಗದ್ಗುರುಮ್ ಎಂಬ ನಂಬಿಕೆ ಇರುವ ನಾವು ಆಧ್ಯಾತ್ಮಿಕ ಹಾಗೂ ಧಾರ್ಮಿಕ ಭಾವನೆಗಳನ್ನು ಜೀವನದಲ್ಲಿ

ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಅಭಿವಂದನಮ್-2023 Read More »

ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಯೋಜನಾಧಿಕಾರಿಯಾಗಿ ಶಶಿಧರ್ ಎಮ್.

ಪುತ್ತೂರು: ಶ್ರೀಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿಟ್ರಸ್ಟ್ ತಾಲೂಕಿನ ನೂತನ ಯೋಜನಾಧಿಕಾರಿಯಾಗಿ ಶಶಿಧರ್ ಎಮ್ ಆಯ್ಕೆಯಾಯಾಗಿದ್ದಾರೆ. ತಾಲೂಕಿನ ಹಿಂದಿನ ಯೋಜನಾಧಿಕಾರಿಯಾಗಿ ಸೇವೆಸಲ್ಲಿಸಿದ ಆನಂದ ಕೆ.ಅವರಿಂದ ಜವಾಬ್ದಾರಿ ಪಡದುಕೊಂಡರು. ತಾಲೂಕಿನಲ್ಲಿ 2 ವಷ೯ ಸೇವೆ ನೀಡಿದ ಆನಂದ ಕೆ. ಯೋಜನೆಯ ಆದೇಶದಂತೆ ಧಮ೯ಸ್ಥಳ ಕೇಂದ್ರ ಕಛೇರಿಯ ಗುಂಪು ಲೆಕ್ಕಪರಿಶೋಧನಾ ವಿಭಾಗಕ್ಕೆ ಯೋಜನಾಧಿಕಾರಿಯಾಗಿ ವಗಾ೯ವಣೆಗೊಂಡಿದ್ದಾರೆ.   ನೂತನ ಯೋಜನಾಧಿಕಾರಿ ಶಶಿಧರ್ ಎಮ್ ಮೂಲತ: ಬೆಳ್ತಂಗಡಿತಾಲೂಕಿನ ಬಂಗಾಡಿಯವರಾಗಿದ್ದು, ಯೋಜನೆಯಲ್ಲಿ 18 ವಷ೯ಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆಸಲ್ಲಿಸಿದ್ದು, ಪ್ರಸ್ತುತ ಮೈಸೂರು ಜಿಲ್ಲೆ, ಎಚ್

ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಯೋಜನಾಧಿಕಾರಿಯಾಗಿ ಶಶಿಧರ್ ಎಮ್. Read More »

ಜೆ.ಇ.ಇ. ಆರ್ಕಿಟೆಕ್ಚರ್ 2023- ಅಂಬಿಕಾ ಕಾಲೇಜಿಗೆ ರಾಷ್ಟ್ರಮಟ್ಟದಲ್ಲಿ 284ನೇ ರ್ಯಾಂಕ್

ಪುತ್ತೂರು: ಆರ್ಕಿಟೆಕ್ಚರ್ ಹಾಗೂ ಪ್ಲಾನಿಂಗ್ ಕೋರ್ಸುಗಳಿಗೆ ನಡೆಸಲಾಗುವ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾಗಿದ್ದು, ಪುತ್ತೂರಿನ ಪ್ರತಿಷ್ಠಿತ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಶ್ಯಮಂತ್ ಕುಮಾರ್ ಸಿ ಕೆ ಬಿ.ಆರ್ಕ್ ವಿಭಾಗದಲ್ಲಿ 284ನೇ ರ್ಯಾಂಕ್ (99.5612 ಪರ್ಸಂಟೈಲ್) ಗಳಿಸಿದ್ದಾರೆ. ಈ ಮೂಲಕ ಅದ್ಭುತ ಸಾಧನೆಯನ್ನು ಮಾಡಿದ್ದಾರೆ. ಅಲ್ಲದೆ ಬಿ ಪ್ಲಾನಿಂಗ್  ವಿಭಾಗದಲ್ಲಿ 775ನೇ ರ್ಯಾಂಕ್ ಗಳಿಸಿದ್ದು ಅವರ ಸಾಧನೆಗೆ ಕಾಲೇಜಿನ ಸಂಚಾಲಕರು, ಕೋಶಾಧಿಕಾರಿಗಳು, ಆಡಳಿತ ಮಂಡಳಿ, ಪ್ರಿನ್ಸಿಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಹರ್ಷ ವ್ಯಕ್ತಪಡಿಸಿದ್ದಾರೆ.

ಜೆ.ಇ.ಇ. ಆರ್ಕಿಟೆಕ್ಚರ್ 2023- ಅಂಬಿಕಾ ಕಾಲೇಜಿಗೆ ರಾಷ್ಟ್ರಮಟ್ಟದಲ್ಲಿ 284ನೇ ರ್ಯಾಂಕ್ Read More »

ಬಿಜೆಪಿ ವಿಜಯೋತ್ಸವದಲ್ಲಿ ಭಾಗಿ: ಗ್ರಾಪಂ ಸಿಬ್ಬಂದಿ ಅಮಾನತು

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದಲ್ಲಿ ಭಾಗಿಯಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿದ್ದ ನಾಗೇಶ್ ಅಮಾನತಾದ ಸಿಬ್ಬಂದಿ. ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ನಡೆದ ವಿಜಯೋತ್ಸವದಲ್ಲಿ ನಾಗೇಶ್ ಭಾಗಿಯಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಉಜಿರೆ ಪಿಡಿಓ ಪ್ರಕಾಶ್ ಶೆಟ್ಟಿ ಈ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ವಿಜಯೋತ್ಸವದಲ್ಲಿ ಭಾಗಿ: ಗ್ರಾಪಂ ಸಿಬ್ಬಂದಿ ಅಮಾನತು Read More »

1500 ರೂ. ಇದ್ದ ಅಂಕಪಟ್ಟಿ ನೈಜತೆ ಪರಿಶೀಲನೆ ಶುಲ್ಕ 500 ರೂ.ಗೆ ಇಳಿಕೆ: ಶಾಸಕ ಅಶೋಕ್ ರೈ ಕಾರ್ಯಕ್ಕೆ ಶ್ಲಾಘನೆ

ಪುತ್ತೂರು: ಅಂಕಪಟ್ಟಿ ನೈಜತೆ ಪರಿಶೀಲನೆಯ ದುಬಾರಿ ಶುಲ್ಕ ಉದ್ಯೋಗ ಆಕಾಂಕ್ಷಿತರಿಗೆ ಹೊರೆಯಾಗಿ ಪರಿಣಮಿಸಿದ್ದು, ಶುಲ್ಕವನ್ನು ಕಡಿತ ಮಾಡುವಂತೆ ಶಾಸಕ ಅಶೋಕ್ ಕುಮಾರ್ ರೈ ಒತ್ತಾಯ ಮಾಡಿದ್ದರ ಫಲವೆಂಬಂತೆ ಮಂಗಳೂರು ವಿಶ್ವವಿದ್ಯಾಲಯ ಶುಲ್ಕದಲ್ಲಿ ವಿನಾಯಿತಿ ನೀಡಿದೆ. ಗುರುವಾರ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಇದುವರೆಗೆ ಒಂದು ಅಂಕಪಟ್ಟಿಗೆ 1500 ರೂ. ಶುಲ್ಕ ವಿಧಿಸಲಾಗುತ್ತಿತ್ತು. ಅಂದರೆ ಎಲ್ಲಾ ಅಂಕಪಟ್ಟಿಗೆ ಒಟ್ಟು 13500 ರೂ. ಶುಲ್ಕ ಪಾವತಿಸಬೇಕಾಗಿತ್ತು. ಗ್ರಾಮೀಣ ಭಾಗದ ಬಡ ಉದ್ಯೋಗ ಆಕಾಂಕ್ಷಿತರು

1500 ರೂ. ಇದ್ದ ಅಂಕಪಟ್ಟಿ ನೈಜತೆ ಪರಿಶೀಲನೆ ಶುಲ್ಕ 500 ರೂ.ಗೆ ಇಳಿಕೆ: ಶಾಸಕ ಅಶೋಕ್ ರೈ ಕಾರ್ಯಕ್ಕೆ ಶ್ಲಾಘನೆ Read More »

error: Content is protected !!
Scroll to Top