ಬಡವರಿಗೆ ಒಳ್ಳೆಯ ಸೇವೆ ನೀಡಿ : ಶಾಸಕ ಅಶೋಕ್ ಕುಮಾರ್ ರೈ | ಸರಕಾರಿ ಸೇವೆಯಲ್ಲಿ ಸ್ಪಂದನೆ ನೀಡುವುದು ನನ್ನ ಕರ್ತವ್ಯ

ಪುತ್ತೂರು: ನಾನು ತುಂಬಾ ನಿರೀಕ್ಷೆಯಿಟ್ಟು ಶಾಸಕನಾಗಿ ಬಂದಿದ್ದು, ಸರಕಾರಿ ಸೇವೆಯಲ್ಲಿ ಸ್ಪಂದನೆ ನೀಡುವುದು ನನ್ನ ಕರ್ತವ್ಯವಾಗಿದೆ.. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ, ಬಡವರಿಗೆ ಒಳ್ಳೆಯ ಸೇವೆ ನೀಡುವಲ್ಲಿ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಇಂದಿನಿಂದಲೇ ತೊಡಗಿಕೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪುತ್ತೂರು ವಿಧಾನಸಭೆಯ ಶಾಸಕರಾಗಿ ಆಯ್ಕೆಯಾದ ಮೇಲೆ ಮೊದಲ ಬಾರಿ ನಗರಸಭೆಗೆ ಶುಕ್ರವಾರ ಭೇಟಿ ನೀಡಿ ಸಭೆಯೊಂದನ್ನು ನಡೆಸಿ ನಗರಭೆಯ ಕಾರ್ಯವೈಖರಿ ಬಗ್ಗೆ ಚರ್ಚಿಸಿದರು. ನನ್ನ ನಿರೀಕ್ಷೆಯನ್ನು ಬಡ ಜನರ ನಿರೀಕ್ಷೆ ಎಂದು […]

ಬಡವರಿಗೆ ಒಳ್ಳೆಯ ಸೇವೆ ನೀಡಿ : ಶಾಸಕ ಅಶೋಕ್ ಕುಮಾರ್ ರೈ | ಸರಕಾರಿ ಸೇವೆಯಲ್ಲಿ ಸ್ಪಂದನೆ ನೀಡುವುದು ನನ್ನ ಕರ್ತವ್ಯ Read More »

ಪುತ್ತೂರು ದೇವಾಂಗ ಸೇವಾ ಸಮಾಜದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

ಪುತ್ತೂರು: ದೇವಾಂಗ ಸೇವಾ ಸಮಾಜದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಲಯನ್ಸ್ ಪುತ್ತೂರು ಸೇವಾ ಮಂದಿರದಲ್ಲಿ  ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಂಗ ಸೇವಾ ಸಮಾಜದ ಅಧ್ಯಕ್ಷ ಎಂ ಎನ್ ಚೆಟ್ಟಿಯಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್, ನರಿಮೊಗರು ಗ್ರಾಪಂ ಪಿಡಿಒ ರವಿಚಂದ್ರ ಯು ಬಿಕಾಂ, ಎಂ.ಎ ಪಿ.ಡಿ.ಒ ನರಿಮೊಗ್ರು ಗ್ರಾಮ ಪಂಚಾಯತ್ ರವರು ಪಾಲ್ಗೊಂಡಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ದಿವಾಕರ ಶೆಟ್ಟಿ ಕುಂಬ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿರ್ಮಲಾರವರು ಪ್ರಾರ್ಥಿಸಿದರು, ವಿಧ್ಯಾ ಗಿರಿಧರ್

ಪುತ್ತೂರು ದೇವಾಂಗ ಸೇವಾ ಸಮಾಜದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ Read More »

ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನದಿಗೆ ಹಾರಿ ಆತ್ಮಹತ್ಯೆ

ಕಡಬ : ವ್ಯಕ್ತಿಯೊಬ್ಬರು ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಜಿಗಿದಿದ್ದಾರೆ ಎನ್ನಲಾಗಿದ್ದು, ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು, ಶವವನ್ನು ಮೇಲಕ್ಕೆತ್ತಲಾಗಿದೆ ಎಂದು  ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನದಿಗೆ ಹಾರಿ ಆತ್ಮಹತ್ಯೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ನಿತ್ಯ ಉತ್ಸವಕ್ಕೆ ತೆರೆ

ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀದೇವರ ಹೊರಾಂಗಣ ಉತ್ಸವಾದಿಗಳು ಶ್ರೀ ದೇವರ ಪತ್ತನಾಜೆ ಬಲಿ ಉತ್ಸವ ನಡೆದ ಬಳಿಕ ಒಳಾಂಗಣ ಪ್ರವೇಶಿಸುವುದರೊಂದಿಗೆ ಗುರುವಾರ ಸಂಪನ್ನಗೊಂಡಿತು. ಶುದ್ಧ ಷಷ್ಠಿಯ ದಿನವಾದ ಗುರುವಾರ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ಶ್ರೀ ದೇವರು ಒಳಾಂಗಣ ಪ್ರವೇಶಿಸಿದರು. ಕುಕ್ಕೆಯಲ್ಲಿ ಮಾತ್ರ ದೀಪಾವಳಿ ಅಮವಾಸ್ಯೆಯಂದು ಉತ್ಸವ ಆರಂಭವಾಗಿ ಜೇಷ್ಠ ಶುದ್ಧಷಷ್ಠಿಯಂದು ಕೊನೆಯ ಉತ್ಸವವು ನಡೆಯುತ್ತದೆ. ಈ ಬಾರಿ ಜೇಷ್ಠ ಶುದ್ಧಷಷ್ಠಿಯ  ದಿನವಾದ  ಗುರುವಾರ ರಾತ್ರಿ ಮಹಾಪೂಜೆಯ ಬಳಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ನಿತ್ಯ ಉತ್ಸವಕ್ಕೆ ತೆರೆ Read More »

ಮೇ 28: ಮುಂಡೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾರಂಭ

ಪುತ್ತೂರು: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ ಮುಂಡೂರು, ಯುವ ಒಕ್ಕಲಿಗ ಗೌಡ ಸೇವಾ ಸಂಘ ಗ್ರಾಮ ಸಮಿತಿ ಮುಂಡೂರು, ಮಹಿಳಾ ಘಟಕ ಮುಂಡೂರು ಹಾಗೂ ಒಕ್ಕಲಿಗ ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡೂರು ಇದರ ವಾರ್ಷಿಕ ಸಮಾರಂಭ ಮೇ.28ರಂದು ಪಜಿಮಣ್ಣು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಒಕ್ಕಲಿಗ ಗೌಡ ಗ್ರಾಮ ಸಮಿತಿಯ ಗೌರವ ಸಲಹೆಗಾರ ಲೋಕಪ್ಪ ಗೌಡ ಕರೆಮನೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗ್ರಾಮ ಸಮಿತಿ ಅಧ್ಯಕ್ಷ ರಮೇಶ

ಮೇ 28: ಮುಂಡೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾರಂಭ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಉತ್ಸವ

ಪುತ್ತೂರು: ದೈವಗಳಿಗೆ ಕೊನೆ ತಂಬಿಲ, ದೇವರ ನಿತ್ಯ ಉತ್ಸವದ ಕೊನೆ ದಿನ, ಯಕ್ಷಗಾನದ ಗೆಜ್ಜೆ ಬಿಚ್ಚಿಸುವುದು ಹೀಗೆ ನಾನಾ ವಿಧದ ಆಚರಣೆಗಳಿಗೆ ಪಾತ್ರವಾಗಿ, ತುಳುನಾಡಿನ ಸಂಪ್ರದಾಯದಲ್ಲಿ ವಿಶಿಷ್ಟ ಸ್ಥಾನಮಾನ ಪಡೆದಿರುವ ಪತ್ತನಾಜೆ ಉತ್ಸವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ ರಾತ್ರಿ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವ ನಡೆದು, ಬಳಿಕ ಪಲ್ಲಕ್ಕಿ ಉತ್ಸವ ಜರಗಿತು. ದೇವರ ಉತ್ಸವಾದಿಗಳು ನಡೆದು, ಬಳಿಕ ದೇವರು ಗರ್ಭಗುಡಿಯೊಳಗಾದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಉತ್ಸವ Read More »

ಚಾಲಕನ ನಿಯಂತ್ರಣ ತಪ್ಪಿ ಬೋರ್ ವೆಲ್ ಲಾರಿ ಪಲ್ಟಿ.

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಬೋರ್ ವೆಲ್ ಗಾಡಿ ಪಲ್ಟಿಯಾದ ಘಟನೆ ವಿಟ್ಲ ಪೆರುವಾಯಿ ಸಮೀಪದ ಮುಚ್ಚಿರಪದವು ಎಂಬಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬೋರ್ ವೆಲ್ ಗಾಡಿ ಹೊಂಡಕ್ಕೆ ಬಿದ್ದಿದೆ. ಅಪಘಾತದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಬೋರ್ ವೆಲ್ ಲಾರಿ ಪಲ್ಟಿ. Read More »

ಶಿಕ್ಷಣಾ ಇಲಾಖಾ ಅಧಿಕಾರಿ ಹಾಗೂ ಶಿಕ್ಷಕರ ಸಭೆ

ಪುತ್ತೂರು: ಶಿಕ್ಷಣ ಇಲಾಖೆಯ ಅಧಿಕಾರಿಗಳ ಹಾಗೂ ಶಿಕ್ಷಕರ ಸಭೆ ಗುರುವಾರ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ಶೈಕ್ಷಣಿಕ ವಿಷಯಗಳಿಗೆ ಸಂಬಂಧಿಸಿ ಚರ್ಚಿಸಲಾಯಿತು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಸಹಿತ  ಹಲವು ಮಂದಿ ಉಪಸ್ಥಿತರಿದ್ದರು

ಶಿಕ್ಷಣಾ ಇಲಾಖಾ ಅಧಿಕಾರಿ ಹಾಗೂ ಶಿಕ್ಷಕರ ಸಭೆ Read More »

ನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂಗೆ ಪಿಐಎಲ್ ಸಲ್ಲಿಕೆ

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಪಿಐಎಲ್ ನಲ್ಲಿ ಹೇಳಲಾಗಿದೆ. ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ಮೇ 18 ರಂದು  ಲೋಕಸಭೆಯ ಕಾರ್ಯದರ್ಶಿ ನೀಡಿದ ಹೇಳಿಕೆ ಮತ್ತು ರಾಷ್ಟ್ರಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು

ನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂಗೆ ಪಿಐಎಲ್ ಸಲ್ಲಿಕೆ Read More »

ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ. ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್‌ಐಗೆ ಸಂಬಂಧಿಸಿದಂತೆ ಹೇಳಿದ್ದೆವು. ಒಂದು ವೇಳೆ ಅವರು ಶಾಂತಿಗೆ ಭಂಗ ತಂದರೆ, ನಾವು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ,

ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್ Read More »

error: Content is protected !!
Scroll to Top