ಮೋದಿ ನೇತೃತ್ವದ ಬಿಜೆಪಿ ಸರಕಾರದಿಂದ ಭ್ರಷ್ಟಾಚಾರ ಮುಕ್ತ ಆಡಳಿತ : ಶಾಸಕ ಮಠಂದೂರು | ನಿಡ್ಪಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ
ಪುತ್ತೂರು: ನಿಡ್ಪಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಪಂಚಾಯಿತಿ ಕಟ್ಟಡ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಭ್ರಷ್ಟಾಚಾರ ಮುಕ್ತ ಆಡಳಿತ ಮಾಡುತ್ತಿದೆ. ನಾಗರಿಕರ ಅರೋಗ್ಯಕ್ಕೆ ಮೊದಲ ಪ್ರಾಮುಖ್ಯತೆ ನೀಡುವುದರ ಜತೆಗೆ ಮೂಲಭೂತ ಸೌಕರ್ಯಗಳಾದ ಶಿಕ್ಷಣ, ರಸ್ತೆ ಅಭಿವೃದ್ಧಿ, ಹೀಗೆ ನೂರಾರು ಯೋಜನೆಗಳನ್ನು ಅನುಷ್ಠಾನ ಮಾಡಿದೆ. ಜಾಲಜೀವನ್ ಮಿಷನ್, ನರೇಗಾ ಸೇರಿದಂತೆ ಇನ್ನಿತರ ಯೋಜನೆಗಳಿಗೆ ಅನುದಾನ ನೀಡಿ ಅಂತರ್ಜಲ ಅಭಿವೃದ್ಧಿ, ಕಿಂಡಿ ಆನಣೆಕಟ್ಟು, […]










