ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಬಿಗಿ ಪಟ್ಟುಗಳಿಂದಾಗಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಖ್ಯಮಂತ್ರಿ ಆಯ್ಕೆಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ನಿನ್ನೆ ದಿಲ್ಲಿಗೆ ತೆರಳಿರುವ ಡಿಕೆಶಿ ಕೊಡುವುದಾದರೆ ಮುಖ್ಯಮಂತ್ರಿ ಹುದ್ದೆ ಕೊಡಿ, ಇಲ್ಲವಾದರೆ ಯಾವ ಹುದ್ದೆಯೂ ಬೇಡ, ಸಾಮಾನ್ಯ ಶಾಸಕನಾಗಿ ಇರುತ್ತೇನೆ ಎಂದು ಖಡಕ್‌ ಆಗಿ ಹೇಳಿದ ನಂತರ ಖರ್ಗೆ ಸೇರಿ ಹೈಕಮಾಂಡ್‌ ನಾಯಕರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.ಶಾಸಕರ ಒಲವು ಸಿದ್ದರಾಮಯ್ಯ ಕಡೆಗಿದೆ. ಆದರೆ ಪಕ್ಷವನ್ನು ಗೆಲ್ಲಿಸುವಲ್ಲಿ ಡಿಕೆಶಿ ಕೂಡ ಅಪಾರ ಶ್ರಮ ಹಾಕಿದ್ದಾರೆ. ಈ ಪೈಕಿ ಯಾರು ಮುನಿಸಿಕೊಂಡರೂ […]

ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಾಹಿತ್ಯ ಸಮ್ಮೇಳನ ಸ್ಮರಣ ಸಂಚಿಕೆ ಬಿಡುಗಡೆ

ಪುತ್ತೂರು: ಆಧುನಿಕ ತಂತ್ರಜ್ಞಾನ ಹೊಸ ಪೀಳಿಗೆಯನ್ನು ಸಂಪೂರ್ಣ ಆವರಿಸಿಕೊಂಡಿದೆ. ಇದು ಸಾಹಿತ್ಯ ಕ್ಷೇತ್ರಕ್ಕೂ ತಟ್ಟಿದೆ. ಶೈಕ್ಷಣಿಕ ವಿಚಾರಗಳಿಗೂ ವಿದ್ಯಾರ್ಥಿಗಳು ತಂತ್ರಾಂಶಗಳನ್ನು ಅವಲಂಬಿಸಿಕೊಳ್ಳುವಂತಾಗಿದೆ. ಇದು ಮುಂದಿನ ದಿನಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ಹೊಡೆತವಾಗಿದ್ದು, ಯುವ ಸಮೂಹ ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗುವಂತೆ ಮಾಡಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ. ಹೊಸ ತಲೆಮಾರು ಸಾಹಿತ್ಯ ಚಟುವಟಿಕೆಗಳಿಗೆ ಹೇಗೆ ಸ್ಪಂದಿಸುತ್ತದೆ ಹಾಗೂ ಸ್ವೀಕರಿಸುತ್ತದೆ ಎನ್ನುವ ಬಗ್ಗೆಯೂ ಅರಿತುಕೊಳ್ಳುವುದು ಅತ್ಯಗತ್ಯ ಎಂದು ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಹೇಳಿದರು. ಬಪ್ಪಳಿಗೆಯ

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಾಹಿತ್ಯ ಸಮ್ಮೇಳನ ಸ್ಮರಣ ಸಂಚಿಕೆ ಬಿಡುಗಡೆ Read More »

ಕಡಬ ಕಾಂಗ್ರೇಸ್‌ನಲ್ಲಿ ಗರಿಗೆದರಿದ ಅಧಿಕಾರದ ಕನಸುಗಳು | ಕಾರ್ಯಕರ್ತರಲ್ಲಿ ಹೊಸ ಹುರುಪು

ಕಡಬ: ರಾಜ್ಯದಲ್ಲಿ ಬಿಜೆಪಿ ಸೋತು  ಕಾಂಗ್ರೇಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಕಡಬ ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದ್ದು, ಹೊಸ ಹೊಸ ಕನಸುಗಳು ಚಿಗುರೊಡೆಯಲು ಪ್ರಾರಂಭವಾಗಿದೆ. ತಾಲೂಕು ಕೇಂದ್ರವಾಗಿರುವ ಕಡಬಕ್ಕೆ ನಿಗಮ ಮಂಡಳಿ ಅಥವಾ ಎಂ.ಎಲ್‌ಸಿ ಸ್ಥಾನಗಳನ್ನು ನೀಡಿ ಪಕ್ಷ ಬಲವರ್ಧನೆಗೆ ಅವಕಾಶ ನೀಡಬೇಕು ಎನ್ನುವ ಹಕ್ಕೊತ್ತಾಯಗಳು ಕೇಳಿ ಬರುತ್ತಿವೆ. ಒಂದು ಕಾಲದಲ್ಲಿ ಕಡಬ ಕಾಂಗ್ರೇಸ್‌ನ ಭದ್ರಕೋಟೆಯಾಗಿತ್ತು. ಆದರೆ ಕಳೆದ 30 ವರ್ಷಗಳಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ  ಕಾಂಗ್ರೇಸ್‌ನ ಶಾಸಕರನ್ನು ಕಾಣಲು ಸಾಧ್ಯವಾಗದೆ

ಕಡಬ ಕಾಂಗ್ರೇಸ್‌ನಲ್ಲಿ ಗರಿಗೆದರಿದ ಅಧಿಕಾರದ ಕನಸುಗಳು | ಕಾರ್ಯಕರ್ತರಲ್ಲಿ ಹೊಸ ಹುರುಪು Read More »

ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ | ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ, ಈ ಗೆಲುವು ನನ್ನದಲ್ಲ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಗೆಲುವಾಗಿದೆ. ಪಕ್ಷಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ದುಡಿಯಬೇಕಾಗಿದ್ದು, ನಾಳೆಯಿಂದಲೇ ತಳಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮತ್ತೆ ಆರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಹೇಳಿದರು. ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ,ಜನರ ಸಮಸ್ಯೆಗಳನ್ನು ಬೂತ್‌ಮಟ್ಟದಲ್ಲೇ ಅರಿಯುವ

ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ | ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ Read More »

ರಾಮಕುಂಜ ಮತಗಟ್ಟೆಯಲ್ಲಿ ಮತದಾನವಾದರೂ ಮತ ಎಣಿಕೆ ಯಿಲ್ಲ.

ರಾಮಕುಂಜ: ವಿಧಾನ ಸಭಾ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ಬಿಜೆಪಿ ಅಭ್ಯರ್ಥಿ ವಿಜಯಶಾಲಿಯಾದ ಮೇಲೆ ಸುಳ್ಯ ವಿಧಾನ ಸಭಾ ಕ್ಷೇತ್ರದ ರಾಮಕುಂಜ ಬೂತ್ ನಂ.6 ರಲ್ಲಿನ ಮತ ಎಣಿಕೆಯೇ ನಡೆಸಿಲ್ಲ ಎನ್ನುವ ಅಂಶ ಬೆಳಕಿಗೆ ಬಂದಿದೆ. ಮಾದರಿ ಮತ ಡಿಲೀಟ್ ಮಾಡದೇ ಅಧಿಕಾರಿಗಳು ಮಾಡಿರುವ ಎಡವಟ್ಟಿನ ಪರಿಣಾಮ ಬೂತ್‌ನಲ್ಲಿ 713 ಮತ ಚಲಾವಣೆಯಾದರೂ  ಇವಿಎಂನ ಮತ ಎಣಿಕೆಯಾಗದೆ ಬಾಕಿ ಉಳಿದಿರುವುದು  ಮತದಾರರ ಅಸಮಾಧಾನಕ್ಕೆ ಎಡೆಯಾಗಿದೆ.  ಅಧಿಕಾರಿಗಳ ಅಸಡ್ಡೆಯ ಪರಮಾವಧಿ ಇದಾಗಿದೆ ಎಂದು ಅಕ್ರೋಶ ವ್ಯಕ್ತವಾಗಿದೆ. ಬೂತ್‌ನಲ್ಲಿ ಮತದಾನ

ರಾಮಕುಂಜ ಮತಗಟ್ಟೆಯಲ್ಲಿ ಮತದಾನವಾದರೂ ಮತ ಎಣಿಕೆ ಯಿಲ್ಲ. Read More »

ಎಸ್ಸೆಸೆಲ್ಸಿ ಪೂರಕ ಪರೀಕ್ಷೆ ಅರ್ಜಿ, ಉತ್ತರ ಪತ್ರಿಕೆ ಸ್ಕ್ಯಾನ್ಡ್‌ ಪ್ರತಿ ಪಡೆಯಲು ದಿನಾಂಕ ವಿಸ್ತರಣೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನೋಂದಣಿ ಮಾಡಿಕೊಳ್ಳಲು ಮತ್ತು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಅವಧಿಯನ್ನು ಮೇ 18 ರವರೆಗೆ ವಿಸ್ತರಿಸಿದೆ. ಈ ಹಿಂದೆ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಮೇ 14, 2023 ಕೊನೆಯ ದಿನಾಂಕವಾಗಿತ್ತು. ಹಾಗೂ ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15, 2023 ಕೊನೆಯ ದಿನವಾಗಿದ್ದು, ಈಗ ಈ ದಿನಾಂಕವನ್ನು ಮೇ 18

ಎಸ್ಸೆಸೆಲ್ಸಿ ಪೂರಕ ಪರೀಕ್ಷೆ ಅರ್ಜಿ, ಉತ್ತರ ಪತ್ರಿಕೆ ಸ್ಕ್ಯಾನ್ಡ್‌ ಪ್ರತಿ ಪಡೆಯಲು ದಿನಾಂಕ ವಿಸ್ತರಣೆ Read More »

7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ಮತ್ತು ನೂತನ ವೇತನ ಶ್ರೇಣಿ ರಚಿಸುವ ಉದ್ದೇಶದಿಂದ ನಿವೃತ್ತ ಸಿ.ಎಸ್.ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ. ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. 2022ರ ನ. 19ರಂದು ವೇತನ ಆಯೋಗ ರಚನೆಯಾಗಿತ್ತು. ಆಯೋಗದ ಶಿಫಾರಸ್ಸು ಆಧರಿಸಲು ಮುಂದಿನ ಕ್ರಮ ಕೈಗೊಳ್ಳಲು 2023-24ನೇ ಸಾಲಿನಲ್ಲಿ ಹಣವನ್ನೂ

7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ Read More »

ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯ ನಿವೃತ್ತಿ

ಸೋತ ನೋವಿನಲ್ಲಿ ಸ್ಪರ್ಧೆಗೆ ಗುಡ್‌ ಬೈ ಹೇಳಿದ ಹಳೇ ಹುಲಿ ಮಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸತತ ಎರಡನೇ ಬಾರಿ ಸೋತಿರುವ ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ.‌ ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ರಮಾನಾಥ ರೈ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್‌ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ.

ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯ ನಿವೃತ್ತಿ Read More »

ರೆಂಜಿಲಾಡಿ ಎರಡು ಕಾಡಾನೆ ಪ್ರತ್ಯಕ್ಷ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಆನೆಗಳು ಪ್ರತ್ಯಕ್ಷಗೊಂಡು ಈ ಭಾಗದಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ರೆಂಜಿಲಾಡಿ ಗ್ರಾಮದ ಕಾನದಬಾಗಿಲು ಎಂಬಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಭಾನುವಾರ ಇಳಿ ಸಂಜೆ ಮರಿ ಆನೆಯೊಂದಿಗೆ ದೊಡ್ಡ ಆನೆ ಸಂಚರಿಸುತ್ತಿರುವುದನ್ನು ಸ್ಥಳೀಯರು ಕಂಡಿದ್ದಾರೆ. ಕಾಡಾನೆಗಳು ಅರಣ್ಯ ಪ್ರದೇಶದಲ್ಲಿ ಮುಂದೆ ಸಾಗಿದೆ ಎಂದು ತಿಳಿಸಿದ್ದಾರೆ. ಕಾಡಾನೆ ಸಂಚರಿಸುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಕಳೆದ ಎರಡು ತಿಂಗಳ

ರೆಂಜಿಲಾಡಿ ಎರಡು ಕಾಡಾನೆ ಪ್ರತ್ಯಕ್ಷ Read More »

ರೈಲ್ವೇ ನಿಲ್ದಾಣದಲ್ಲಿ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳ್ಳತನ : ಸಾರ್ವಜನಿಕರಿಂದ ಆರೋಪಿಗಳನ್ನು ಹಿಡಿಯಲು ಕಾರ್ಯಾಚರಣೆ | ಆರೋಪಿಗಳು ಪರಾರಿ

ಪುತ್ತೂರು: ಪುತ್ತೂರು ರೈಲ್ವೇ ನಿಲ್ದಾಣದ ಬಳಿ ನಿಲ್ಲಿಸಲಾಗಿದ್ದ ಬೈಕ್ ನಿಂದ ಪೆಟ್ರೋಲ್ ಕಳ್ಳತನ ಮಾಡುತ್ತಿದ್ದವರನ್ನು ಸಾರ್ವಜನಿಕರು ಬೆಟ್ಟಿದ ಘಟನೆ ಮಂಗಳವಾರ ನಡೆದಿದೆ. ರೈಲ್ವೇ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದ ಸಂದರ್ಭ ಸಾರ್ವಜನಿಕರು ಗಮನಿಸಿ ಆರೋಪಿಗಳನ್ನು ಹಿಡಿಯಲೆತ್ನಿಸಿದಾಗ ಆರೋಪಿಗಳು ಕೂದಲೆಳೆ ಅಂತರದಲ್ಲಿ ಪರಾರಿಯಾಗಿದ್ದಾರೆ. ಹಲವು  ಸಮಯಗಳಿಂದ ರೈಲ್ವೇ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದು, ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲು ಕಾದು ಕುಳಿತಿದ್ದರು. ಆದರೆ ಚಾಣಾಕ್ಷ ಕಳ್ಳರು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರೈಲ್ವೇ ನಿಲ್ದಾಣದಲ್ಲಿ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳ್ಳತನ : ಸಾರ್ವಜನಿಕರಿಂದ ಆರೋಪಿಗಳನ್ನು ಹಿಡಿಯಲು ಕಾರ್ಯಾಚರಣೆ | ಆರೋಪಿಗಳು ಪರಾರಿ Read More »

error: Content is protected !!
Scroll to Top