ಪ್ರತಿಭಟನೆ ಎಂಬ ನಾಟಕದ ಮೂಲಕ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ : ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ

ಪುತ್ತೂರು: ಬ್ಯಾನರ್ ವಿಷಯದಲ್ಲಿ ಬಿಜೆಪಿಯವರು ಪ್ರತಿಭಟನೆ ಎಂಬ ನಾಟಕದ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಬಿ.ವಿಶ್ವನಾಥ ರೈ ಆರೋಪಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಿಂದ ಬಿಜೆಪಿ ವಿಲವಿಲ ಒದ್ದಾಡುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಬಿಜೆಪಿ ನಾಯಕರು ಹತಾಶರಾಗಿ ಏನೇನೋ ಹೇಳಲು ಹೊರಟಿದ್ದಾರೆ.ಯಾರಿಗೂ ಚಪ್ಪಲಿ ಹಾಕುವ ದುಸ್ಥಿತಿ ನಮಗೆ ಬಂದಿಲ್ಲ ಎಂದರು. ಆದರೂ ಚಪ್ಪಲಿ ಹಾಕಿರುವ ಸಂಗತಿ ಖಂಡನೀಯ ಎಂದ ಅವರು, […]

ಪ್ರತಿಭಟನೆ ಎಂಬ ನಾಟಕದ ಮೂಲಕ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ : ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ Read More »

ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್ ಹ್ಯಾಕ್​ : ಓರ್ವ ಸಿಐಡಿ ವಶಕ್ಕೆ

ಬೆಂಗಳೂರು : ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ರಾಜೇಗೌಡ ಬಂಧಿತ ಆರೋಪಿ. ಇನ್ನು ಆರೋಪಿಯನ್ನು ಸೆರೆ ಹಿಡಿಯಲು ಸಿಐಡಿ ಎಸ್​ಪಿ ಎಂ.ಡಿ ಶರತ್ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತ್ತು. ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್​ನಲ್ಲಿನ ಲೋಪವನ್ನು ತಿಳಿದುಕೊಂಡ ಆರೋಪಿ, ಆ ಲೋಪದ ಮೂಲಕ ತೆರಿಗೆ ಕಟ್ಟಿದ್ದವರಿಗೆ ಸಲ್ಲಬೇಕಿದ್ದ ರೀ ಫಂಡ್ಸ್​ ಹಣವನ್ನು​ ತನ್ನ ಖಾತೆಗೆ ಜಾಮಾ ಮಾಡಿಕೊಳ್ಳುತ್ತಿದ್ದನು. ಹೀಗೆ ಆದಾಯ ತೆರಿಗೆ ಇಲಾಖೆಗೆ ಬರೋಬ್ಬರಿ 1,41,84,360 ರೂ. ಹಣವನ್ನು ವಂಚಿಸಿರುವುದು

ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್ ಹ್ಯಾಕ್​ : ಓರ್ವ ಸಿಐಡಿ ವಶಕ್ಕೆ Read More »

ದೇಗುಲ ಪ್ರವೇಶಕ್ಕೆ ಮುನ್ನ ದಿ ಕೇರಳ ಸ್ಟೋರಿ ಬ್ಯಾನರ್ ದರ್ಶನ

ಮುಂದಿನ ಜನಾಂಗ ಮೂಕಾಂಬಿಕೆ ದರ್ಶನ ಪಡೆಯಬೇಕಾದರೆ ದಿ ಕೇರಳ ಸ್ಟೋರಿ ನೋಡಿ ಎಂಬ ಒಕ್ಕಣೆ ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ದಿ ಕೇರಳ ಸ್ಟೋರಿ ಸಿನೆಮಾ ನೋಡಿ ಎಂದು ಹೇಳುವ ಬ್ಯಾನರ್​ ಇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಇಂಗ್ಲಿಷ್​ ಮತ್ತು ಮಲಯಾಳಂ ಭಾಷೆಯಲ್ಲಿ ಬರೆದಿರುವ ಬ್ಯಾನರ್​ಗಳನ್ನು ಇರಿಸಲಾಗಿದ್ದು, ಕೊಲ್ಲೂರಿಗೆ ಬರುವ ಪ್ರವಾಸಿಗರ ಗಮನ ಸೆಳೆಯಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲೂ ಈ ಬ್ಯಾನರ್​ಗಳು ವೈರಲ್​ ಆಗಿದೆ. ಕೊಲ್ಲೂರಿಗೆ ಬರುವ ಕೇರಳದ ಭಕ್ತರ ಗಮನ ಸೆಳೆಯಲೆಂದೇ ಇಲ್ಲಿ ಈ ಬ್ಯಾನರ್‌

ದೇಗುಲ ಪ್ರವೇಶಕ್ಕೆ ಮುನ್ನ ದಿ ಕೇರಳ ಸ್ಟೋರಿ ಬ್ಯಾನರ್ ದರ್ಶನ Read More »

ಕರ್ನಾಟಕ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ

ಪುತ್ತೂರು: ಕರ್ನಾಟಕದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿದ್ದ ಅರುಣ್ ಶ್ಯಾಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪುತ್ತೂರು ಮೂಲದವರಾಗಿರುವ ಅರುಣ್ ಶ್ಯಾಮ್ ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಹೈಕೋರ್ಟ್ನ ಹಿರಿಯ ನ್ಯಾಯವಾದಿಯಾಗಿರುವ ಅರುಣ್ ಶ್ಯಾಮ್ ಅವರನ್ನು ಎರಡೂವರೆ ವರ್ಷಗಳ ಹಿಂದೆ ಬಿಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ನೇಮಕ ಮಾಡಲಾಗಿತ್ತು. ಇದೀಗ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್‌ಗೆ ಬಹುಮತ ದೊರೆಯುÄತ್ತಿದ್ದಂತೆ ತಮ್ಮ ಸ್ಥಾನಕ್ಕೆ

ಕರ್ನಾಟಕ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ Read More »

ಶ್ರೀ ಬ್ರಹ್ಮ ಮೊಗೇರ ದೈವಸ್ಥಾನ ಕಾಮಜಾಲು – ಕಲತ ಕಾರ್ಣಿಕ ತುಳು ಭಕ್ತಿ ಗೀತೆ ಬಿಡುಗಡೆ

ಪುತ್ತೂರು : ಕಾಮಜಾಲು ಶ್ರೀ ಬ್ರಹ್ಮ ಮೊಗೇರ ದೈವಸ್ಥಾನದಲ್ಲಿ ” ಕಲತ ಕಾರ್ಣಿಕ ” ಎಂಬ ಬ್ರಹ್ಮ ಮೊಗೇರ ದೈವಗಳ ಭಕ್ತಿಗೀತೆಯನ್ನು ಸೋಮವಾರ ಬಿಡುಗಡೆಗೊಳಿಸಲಾಯಿತು. ದೈವಸ್ಥಾನದ ಆಡಳಿತ ಸಮಿತಿಯ ಸರ್ವ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಊರ ಪರವೂರ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಹಾಡಿನ ಕಲಾವಿದರನ್ನು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಶ್ರೀ ಬ್ರಹ್ಮ ಮೊಗೇರ ದೈವಸ್ಥಾನ ಕಾಮಜಾಲು – ಕಲತ ಕಾರ್ಣಿಕ ತುಳು ಭಕ್ತಿ ಗೀತೆ ಬಿಡುಗಡೆ Read More »

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ!

ಬೆಂಗಳೂರು; ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಲಿ ಸಿಎಂ ಆಗೋದು ಬಹುತೇಕ ಖಚಿತ ಎನ್ನಲಾಗಿದೆ. ದೆಹಲಿಯಲ್ಲಿ ತಮ್ಮ ಆಪ್ತ ಶಾಸಕರ ಜೊತೆ ಸಿದ್ದು ಸಭೆ ನಡೆಸಿದ ಬೆನ್ನಲ್ಲೇ ಸಿದ್ದರಾಮಯ್ಯ ನೂತನ ಸಿಎಂ ಆಗೋದು ಖಚಿತ ಎನ್ನಲಾಗಿದೆ. ಇನ್ನು ಸಿದ್ದರಾಮಯ್ಯ ನೂತನ ಸಿಎಂ ಎಂಬುವುದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕೆಲವೇ ಹೊತ್ತಲ್ಲೇ ಉತ್ತರ ಸಿಗಲಿದೆ ಎಂದು ಹೇಳಲಾಗಿದೆ.

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ! Read More »

ಚಾರ್ವಾಕ: ಟ್ರಾನ್ಸ್ ಫಾರ್ಮರಿನಲ್ಲಿ ವಿದ್ಯುತ್ ಶಾಕ್, ಲೈನ್ ಮ್ಯಾನಿಗೆ ಗಾಯ

ಕಡಬ; ಕಡಬ ತಾಲೂಕಿನ ಚಾರ್ವಾಕ ಗ್ರಾಮದಲ್ಲಿ ಮೆಸ್ಕಾಂ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಗೊಳಪಟ್ಟು, ಕಂಬದಿಂದ ಎಸೆಯಲ್ಪಟ್ಟು ಗಾಯಗೊಂಡ ಘಟನೆ ಸೋಮವಾರ  ನಡೆದಿದೆ. ಮೆಸ್ಕಾಂ ಲೈನ್ ಮ್ಯಾನ್ ಎಡಮಂಗಲ‌ ನಿವಾಸಿ ನಾರಾಯಣ ಪಿ ಎಂಬವರು ಗಾಯಗೊಂಡವರು. ಚಾರ್ವಾಕದ ಎಣ್ಮೂರಿನಲ್ಲಿ ವಿದ್ಯುತ್ ಟ್ರಾನ್ಸ್ ಫರ್ಮರ್ ನಲ್ಲಿ  ಸಮಸ್ಯೆ ಇದೆ ಎಂದು ಗ್ರಾಹಕರು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ  ಅಲ್ಲಿ ತೆರಳಿ ಟ್ರಾನ್ಸ್ ಫಸರ್ಮರ್ ಏರಿ ಫ್ಯೂಸ್ ಹಾಕುತ್ತಿದ್ದಾಗ ವಿದ್ಯುತ್ ಶಾಕ್ ಗೆ ಒಳಗಾಗಿ ಕೆಳಗೆ  ಎಸೆಯಲ್ಪಟ್ಟಿದ್ದಾರೆ. ತಕ್ಷಣ  ಗಾಯಳುವನ್ನು 

ಚಾರ್ವಾಕ: ಟ್ರಾನ್ಸ್ ಫಾರ್ಮರಿನಲ್ಲಿ ವಿದ್ಯುತ್ ಶಾಕ್, ಲೈನ್ ಮ್ಯಾನಿಗೆ ಗಾಯ Read More »

ನಳಿನ್, ಡಿವಿ ಅವಹೇಳನ ಮಾಡಿ ಬ್ಯಾನರ್ ಹಾಕಿದವರ ಬಂಧನ | ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹಾಗೂ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿದ ಬ್ಯಾನರ್ ಹಾಕಿ, ಅದಕ್ಕೆ ಚಪ್ಪಲಿ ಹಾರ ಹಾಕಿದ್ದ ಇಬ್ಬರನ್ನು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನರಿಮೊಗರು ಗ್ರಾಮದ ಸಹೋದರರಾದ ವಿಶ್ವನಾಥ್ ಹಾಗೂ ಮಾಧವ ಎಂದು ಗುರುತಿಸಲಾಗಿದೆ. ಪುತ್ತೂರು ನಗರಸಭೆ ಆಯುಕ್ತ ಮಧು ಎಸ್. ಮನೋಹರ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು. ಬಿಜೆಪಿ ನಾಯಕರಾದ ನಳಿನ್ ಕುಮಾರ್  ಕಟೀಲ್ ಹಾಗೂ ಡಿವಿ ಸದಾನಂದ ಗೌಡ

ನಳಿನ್, ಡಿವಿ ಅವಹೇಳನ ಮಾಡಿ ಬ್ಯಾನರ್ ಹಾಕಿದವರ ಬಂಧನ | ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು Read More »

ಪಿಯು ಫಲಿತಾಂಶ: ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ

ಸುಳ್ಯ: ಪಿಯು ಪರೀಕ್ಷೆಯಲ್ಲಿ ಇಲ್ಲಿನ ಪಂಜ ಸರಕಾರಿ ಪದವಿ ಪೂರ್ವ ಕಾಲೇಜು ಶೇ. 100 ಫಲಿತಾಂಶ ದಾಖಲಿಸಿದೆ. ಈ ಮೂಲಕ ಜಿಲ್ಲೆಯಲ್ಲೇ ಶೇ. 100 ಫಲಿತಾಂಶ ದಾಖಲಿಸಿದ ಏಕೈಕ ಸರಕಾರಿ ಪದವಿ ಪೂರ್ವ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಒಟ್ಟು 43 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಕಲಾ ಹಾಗೂ ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಇದರಲ್ಲಿ 8 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದ ದಿವ್ಯ ಕೆ.ಎಲ್.

ಪಿಯು ಫಲಿತಾಂಶ: ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ Read More »

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ | ಗ್ರಾಮಸ್ಥರ ಪಟ್ಟು : ಅಧಿಕಾರಿಗಳು ಪೆಚ್ಚು

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸರಕಾರ ನೀಡಿದ ಗ್ಯಾರೆಂಟಿ ಕಾರ್ಡ್ ಇದೀಗ ಅಧಿಕಾರಿಗಳನ್ನು ಹೊಸ ಇಕ್ಕಟ್ಟಿಗೆ ಸಿಲುಕಿಸಿದೆ. ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಎಂಬಲ್ಲಿ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಆವಾಜ್ ಹಾಕಿದ್ದು, ಅಧಿಕಾರಿಗಳು ಹ್ಯಾಪ್ ಮೋರೆ ಹಾಕಿಕೊಂಡು ಹಿಂದೆ ಬಂದಿದ್ದಾರೆ. ಚುನಾವಣಾ ಸಂದರ್ಭ ಕಾಂಗ್ರೆಸ್ ನಾಯಕರು ಭರವಸೆ ನೀಡಿದಂತೆ – ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಬಿಲ್ ಕಟ್ಟೋದು ಬೇಡ ಎಂದು ಹೇಳಿಕೆ ನೀಡುತ್ತಿದ್ದರು. ಇದರ ಜೊತೆಗೆ ಬಡ ಕುಟುಂಬದ ಮಹಿಳೆಯರಿಗೆ ಮಾಸಿಕ ನೆರವು, ಸಿಲಿಂಡರ್

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ | ಗ್ರಾಮಸ್ಥರ ಪಟ್ಟು : ಅಧಿಕಾರಿಗಳು ಪೆಚ್ಚು Read More »

error: Content is protected !!
Scroll to Top