ಪಿಯು ಪರೀಕ್ಷೆ: ನಿಂತಿಕಲ್ಲು ಕೆ.ಎಸ್. ಗೌಡ ಪಿಯು ಕಾಲೇಜಿಗೆ ಶೇ. 100 ಫಲಿತಾಂಶ

ಪುತ್ತೂರು: ಇತ್ತೀಚೆಗೆ ನಡೆದ ಪದವಿ ಪೂರ್ವ ಪರೀಕ್ಷೆಯಲ್ಲಿ ನಿಂತಿಕಲ್ಲು ಕೆ.ಎಸ್. ಗೌಡ ಪಿಯು ಕಾಲೇಜು ಶೇ. 100 ಫಲಿತಾಂಶ ಪಡೆದುಕೊಂಡಿದೆ. ಕಾಲೇಜಿನಲ್ಲಿ ವಿಜ್ಞಾನಶಾಸ್ತ್ರ ಹಾಗೂ ವಾಣಿಜ್ಯಶಾಸ್ತ್ರ ವಿಭಾಗಗಳಿದ್ದು, ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ವಾಣಿಜ್ಯಶಾಸ್ತ್ರ ವಿಭಾಗದ ರಿಫಾಷ್ ಶೇಖ್ ಐ.ಎಫ್. ಅವರು 584 (ಶೇ. 97.33) ಅಂಕ ಗಳಿಸಿ, ಕಾಲೇಜಿಗೆ ಪ್ರಥಮ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಂಪ್ಯೂಟರ್ ಸೈನ್ಸ್ 100, ಬ್ಯುಸಿನೆಸ್ ಸ್ಟಡೀಸ್  100, ಅರ್ಥ ಶಾಸ್ತ್ರ 98, ಲೆಕ್ಕ […]

ಪಿಯು ಪರೀಕ್ಷೆ: ನಿಂತಿಕಲ್ಲು ಕೆ.ಎಸ್. ಗೌಡ ಪಿಯು ಕಾಲೇಜಿಗೆ ಶೇ. 100 ಫಲಿತಾಂಶ Read More »

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಆರೋಗ್ಯದಲ್ಲಿ ಏರುಪೇರಾಗಿ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಗೆ  ದಾಖಲಿಸಲಾಗಿದೆ. ಅವರು ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿಂದೆ ಏಪ್ರಿಲ್​ ತಿಂಗಳಿನಲ್ಲೂ ಅವರು ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಪತಿ ಪರವಾಗಿ ಪಲ್ಲವಿ ಮತಪ್ರಚಾರದಲ್ಲಿ ಭಾಗಿಯಾಗಿ ಪತಿಯ ಆರೋಗ್ಯದ ಬಗ್ಗೆ ಹೇಳಿಕೊಂಡಿದ್ದರು. ಅನಾರೋಗ್ಯ ಉಂಟಾಗಿದ್ದರೂ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಅವರಿಗೆ ವಿಶ್ರಾಂತ್ರಿಯಿಲ್ಲದೆ ಆರೋಗ್ಯದಲ್ಲಿ ಏರುಪೇರು

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು Read More »

ಬೆಟ್ಟಂಪಾಡಿ: SPYSS ಸಮಿತಿಯ ಪುತ್ತೂರಿನ 11 ನೇ ಶಾಖೆ ಆರಂಭ

ಪುತ್ತೂರು: ಬೆಟ್ಟಂಪಾಡಿ ಶ್ರೀ ಕ್ಷೇತ್ರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ದಿ SPYSS ಸಮಿತಿಯ ಪುತ್ತೂರಿನ 11 ನೇ ಶಾಖೆಯನ್ನು ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ತಾಲೂಕು ಶಿಕ್ಷಕರ ಮತ್ತು ಆತ್ಮೀಯ ಬಂಧುಗಳ ಸಹಕಾರದಲ್ಲಿ ಪ್ರಾರಂಭಿಸಲಾಯಿತು. ಮುಖ್ಯ ಶಿಕ್ಷಕಿ ಆಶಾಲತಾ ಪ್ರಾಸ್ತಾವಿಕ ಮಾತನಾಡಿದರು. ಸುರೇಶ್ ವಾಗ್ಲೆ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಟ್ಟಂಪಾಡಿ ಅನುವಂಶಿಯ ಮೋಕ್ತೇಸರರು ವಿನೋದ್ ಕುಮಾರ್ ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಿದರು. ಶಿವಾನ್ವಿತ ಮತ್ತು ಪ್ರಣತಿ ಪ್ರಾರ್ಥಿಸಿ,ಸಂಧ್ಯ ನಿರೂಪಿಸಿ, ಸಂತೋಷ ಸ್ವಾಗತಿಸಿ, ನಮಿತಾ ವಂದಿಸಿದರು.

ಬೆಟ್ಟಂಪಾಡಿ: SPYSS ಸಮಿತಿಯ ಪುತ್ತೂರಿನ 11 ನೇ ಶಾಖೆ ಆರಂಭ Read More »

ಬಲ್ನಾಡು: SPYSS ಸಮಿತಿಯ ಪುತ್ತೂರಿನ 10ನೇ ಶಾಖೆ ಆರಂಭ

ಪುತ್ತೂರು: ಪುತ್ತೂರಿನ ಕಾರಣಿಕದ ದೈವಬೀಡು ಬಲ್ನಾಡು ಶ್ರೀ ದಂಡ ನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ SPYSS ಸಮಿತಿಯ ಪುತ್ತೂರಿನ 10 ನೇ ಶಾಖೆಯನ್ನು ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ತಾಲೂಕು ಶಿಕ್ಷಕರ ಮತ್ತು ಆತ್ಮೀಯ ಬಂಧುಗಳ ಸಹಕಾರದಲ್ಲಿ ವಿದ್ಯುಕ್ತವಾಗಿ ಪ್ರಾರಂಭಿಸಲಾಯಿತು. ಶ್ರೀ ದಂಡನಾಯಕ ಉಳ್ಳಾಳ್ತಿ ದೇವಸ್ಥಾನ ವ್ಯವಸ್ಥಾಪನಾ ಮಂಡಳಿ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ದೀಪಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಭಗವಾನ್ ದಾಸ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ದಂಡನಾಯಕ ಉಳ್ಳಾಳ್ತಿ ದೇವಸ್ಥಾನ ಕಾಂತಿಲ ವ್ಯವಸ್ಥಾಪನಾ ಮಂಡಳಿಯ ಮಾಧವ ಗೌಡ ಅತಿಥಿಯಾಗಿ ಭಾಗವಹಿಸಿದರು.

ಬಲ್ನಾಡು: SPYSS ಸಮಿತಿಯ ಪುತ್ತೂರಿನ 10ನೇ ಶಾಖೆ ಆರಂಭ Read More »

ಕದನ ವಿರಾಮ: ಪುತ್ತೂರಿನಲ್ಲಿ ಉತ್ತಮ ಮತದಾನ

ಪುತ್ತೂರು: ಚುನಾವಣೆಯ ಹಣಾಹಣಿ ಮುಕ್ತಾಯಗೊಂಡಿದೆ. ಇನ್ನೇನಿದ್ದರೂ ಮತ ಎಣಿಕೆಯಂದಿನ ಧಾವಂತ. ಅಲ್ಲಿವರೆಗೆ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದೊಳಗೆ ಭದ್ರವಾಗಿರಲಿದೆ. ಪುತ್ತೂರು ತಾಲೂಕಿನಲ್ಲಿ ಸಂಜೆ 6 ಗಂಟೆಯವರೆಗೆ ಒಟ್ಟು ಶೇ. 79.98ರಷ್ಟು ಮತದಾನವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಇದು ಹೆಚ್ಚಿನ ಮತದಾನ ಎಂದು ಅಂದಾಜಿಸಲಾಗಿದೆ‌. ಬೆಳಿಗ್ಗೆಯಿಂದಲೇ ಮತಗಟ್ಟೆಗಳಲ್ಲಿ ಬಿಡುವಿಲ್ಲದೆ ಮತದಾನವಾಗಿದೆ. ಹೆಚ್ಚಿನ ಮತಗಟ್ಟೆಗಳಲ್ಲಿ ಉದ್ದನೆಯ ಸಾಲು ಇತ್ತು. ಆದ್ದರಿಂದ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗುತ್ತದೆ ಎಂದು ಮಧ್ಯಾಹ್ನದ ಹೊತ್ತಿಗೆ ಸೂಚನೆ ಲಭ್ಯವಾಗಿತ್ತು.

ಕದನ ವಿರಾಮ: ಪುತ್ತೂರಿನಲ್ಲಿ ಉತ್ತಮ ಮತದಾನ Read More »

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಮತದಾನ

ಪುತ್ತೂರು : ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಮಂಗಳೂರಿನಲ್ಲಿ ಮತದಾನ ಮಾಡಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಮಂಗಳೂರಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು ಎಂದು ಸಂದೇಶ ನೀಡಿದ್ದಾರೆ.

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಮತದಾನ Read More »

ಮತ ಚಲಾಯಿಸಿದ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ

ಪುತ್ತೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಶ್ರೀ ಸಂಸ್ಥಾನದ ಸ್ವಾಮೀಜಿಯವರು ಅವರೊಂದಿಗೆ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಅವರು ತಮ್ಮ ಮತ ಚೀಟಿಯನ್ನು ಪ್ರದರ್ಶಿಸಿ ಮತದಾನ ಮಾಡುವಂತೆ ಸಂದೇಶ ನೀಡಿದರು.

ಮತ ಚಲಾಯಿಸಿದ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ Read More »

ಸುಳ್ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಿರೇಬಂಡಾಡಿ ಕ್ಷೇತ್ರಕ್ಕೆ ಭೇಟಿ

ಪುತ್ತೂರು: ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ  ಅವರು ಬೂತ್ ಪ್ರವಾಸದ ಮಧ್ಯೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಕ್ಷೇತ್ರದ ಹಿರೇಬಂಡಾಡಿ ಬೂತಿಗೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಅಲ್ಲಿನ ಕಾರ್ಯಕರ್ತರ ಜತೆ ಫೋಟೊ ಕ್ಲಿಕ್ಕಿಸಿಕೊಂಡರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸುಳ್ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಿರೇಬಂಡಾಡಿ ಕ್ಷೇತ್ರಕ್ಕೆ ಭೇಟಿ Read More »

ಒಬ್ಬರ ಮತ ಇನ್ನೊಬ್ಬರಿಂದ ಚಲಾವಣೆ: ಮಾತಿನ ಚಕಮಕಿ | ಮತದಾನ ಅವಕಾಶ ಕಳೆದುಕೊಂಡ ಮತದಾರ

ಕಡಬ: ತಾಲೂಕಿನ‌ 102 ನೆಕ್ಕಿಲಾಡಿ ಗ್ರಾಮದ ಕರ್ಮಾಯಿ ಶಾಲಾ 101ನೇ ಮತಗಟ್ಟೆಯಲ್ಲಿ ಸಾದಿಕ್ ಎಂಬವರು ಸಾದಿಕ್ ಕೆ ಎಂಬವರ ಮತವನ್ನು ಚಲಾಯಿಸಿದ್ದು, ಸ್ವಲ್ಪ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಯಿತು. ಇಬ್ಬರ ತಂದೆಯ ಹೆಸರು ಅಬೂಬಕ್ಕರ್ ಆಗಿದ್ದುದೇ ಗೊಂದಲಕ್ಕೆ ಕಾರಣ. ಸ್ವಲ್ಪ ಹೊತ್ತು ಅಧಿಕಾರಿಗಳು ಗಲಬಿಲಿಗೊಂಡರು. ಮತಗಟ್ಟೆಯ ಅಧಿಕಾರಿಗಳ ಎಡವಟ್ಟಿನಿಂದ ಈ ಪ್ರಮಾದ ನಡೆದಿದ್ದು. ಸಾಧಿಕ್ ಕೆ ಎಂಬವರಿಗೆ ಮತದಾನದ ಅವಕಾಶ ಇಲ್ಲದಂತಾಯಿತು. ಸ್ಥಳದಲ್ಲಿ ಮಾತಿನ ಚಕಮಕಿ, ವಾಗ್ಯುದ್ದ ನಡೆಯಿತು. ಎಷ್ಟೇ ಚರ್ಚೆ ನಡೆದರು ಸಾದಿಕ್ ಕೆ ಅವರಿಗೆ

ಒಬ್ಬರ ಮತ ಇನ್ನೊಬ್ಬರಿಂದ ಚಲಾವಣೆ: ಮಾತಿನ ಚಕಮಕಿ | ಮತದಾನ ಅವಕಾಶ ಕಳೆದುಕೊಂಡ ಮತದಾರ Read More »

ಕೈಕೊಟ್ಟ ಮತಯಂತ್ರದಿಂದ ಮತದಾನ ವಿಳಂಬ

ಕಡಬ: ಕಡಬ ತಾಲೂಕಿನಲ್ಲಿ ಮುಂಜಾನೆಯಿಂದಲೇ ಬಿರುಸಿನ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಅಲ್ಲಲ್ಲಿ ಮತಯಂತ್ರ ಕೆಟ್ಟು ಹೋಗಿ  ಮತದಾನ ಸ್ವಲ್ಪ ಮಟ್ಟಿನ‌ ವಿಳಂಬವಾಗಿತ್ತು. ಕೊಯಿಲ ಗ್ರಾಮದ ಸಬಳೂರು ಸರಕಾರಿ ಶಾಲೆಯಲ್ಲಿನ ಮತಕೇಂದ್ರದಲ್ಲಿ ಮತಯಂತ್ರ ಕೈಕೊಟ್ಟು ಸುಮಾರು ಅರ್ಧ ಗಂಟೆ ಹೊತ್ತು ಮತದಾರರು ಹಾಗೂ ಮತಗಟ್ಟೆಯ ಅಧಿಕಾರಿಗಳು ಚಡಪಡಿಸುವಂತಾಗಿತ್ತು. ಮತದಾನ ಮಾಡಲು ಬಂದವರ ಸರತಿ ಸಾಲು ಹನುಮಂತನ ಬಾಲದಂತೆ ಉದ್ದವಾಗುತ್ತಾ ಹೊಯಿತು. ಮತಯಂತ್ರ ದುರಸ್ತಿಯಾದ ಬಳಿಕ  ಮತದಾನ ಸಲೀಸಾಗಿ ನಡೆಯಿತು. ಇದೇ ಪರಿಸ್ಥಿತಿ ತಾಲೂಕಿನ ಬಲ್ಯ ಗ್ರಾಮದ ಬಲ್ಯ ಮತಗಟ್ಟೆ

ಕೈಕೊಟ್ಟ ಮತಯಂತ್ರದಿಂದ ಮತದಾನ ವಿಳಂಬ Read More »

error: Content is protected !!
Scroll to Top