ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ

ಪುತ್ತೂರು: ಶೈಕ್ಷಣಿಕ ಕಾರ್ಯಾಗಾರ ಹಾಗೂ ರಾಜ್ಯಮಟ್ಟದ ಕ್ರೀಡಾ ಸಾಧಕರಿಗೆ ಮತ್ತು ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಗರದ ಮಾಯಿದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಸನ್ಮಾನ ನೆರವೇರಿಸಿ ಮಾತನಾಡಿ, ವೃತ್ತಿ ಜೀವನದಲ್ಲಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ನಿವೃತ್ತಿಯಾದ ಮೇಲೆ ಸಮಾಜ ಗುರತಿಸುವ, ಗೌರವಿಸುವ ಕೆಲಸ ಮಾಡುತ್ತದೆ. ಮುಂಬರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಸವಾಲುಗಳಿದ್ದು, ಈ ಸವಾಲುಗಳನ್ನು ಸ್ವೀಕಾರ ಮಾಡಿಕೊಂಡು ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದರು. ಸುದಾನ ಶಾಲಾ ಸಂಚಾಲಕ […]

ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ Read More »

94ಸಿಗೆ ಪಂಚಾಯಿತಿ ದೃಡೀಕರಣ ಸಮಸ್ಯೆ ಪರಿಹಾರಕ್ಕೆ ಕ್ರಮ : ತಹಸೀಲ್ದಾರ್‌ರಿಂದ ಗ್ರಾಮಸ್ಥರಿಗೆ ಭರವಸೆ | ಪುತ್ತೂರು ತಹಸೀಲ್ದಾರ್ ಗ್ರಾಮ ವಾಸ್ತವ್ಯ

ಪುತ್ತೂರು: 94ಸಿ ಹಕ್ಕು ಪತ್ರಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭ ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಸರಿಪಡಿಸುವ ಕುರಿತು ಮೇಲಾಧಿಕಾರಿಗಳಿಗೆ ತಿಳಿಸಿ. ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಗ್ರೇಡ್-2 ತಹಸೀಲ್ದಾರ್ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಪುತ್ತೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶನಿವಾರ ಪುತ್ತೂರು ತಾಲೂಕಿನ ಬುಳೇರಿಕಟ್ಟೆಯಲ್ಲಿರುವ ಬಲ್ನಾಡು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು. ತಹಸೀಲ್ದಾರ್ ಜೆ. ಶಿವಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಲ್ನಾಡು ಗ್ರಾ.ಪಂ ಉಪಾಧ್ಯಕ್ಷೆ ಪರಮೇಶ್ವರಿ ಭಟ್ ಅವರು ವಿಷಯ ಪ್ರಸ್ತಾಪಿಸಿ  94ಸಿಯಲ್ಲಿ

94ಸಿಗೆ ಪಂಚಾಯಿತಿ ದೃಡೀಕರಣ ಸಮಸ್ಯೆ ಪರಿಹಾರಕ್ಕೆ ಕ್ರಮ : ತಹಸೀಲ್ದಾರ್‌ರಿಂದ ಗ್ರಾಮಸ್ಥರಿಗೆ ಭರವಸೆ | ಪುತ್ತೂರು ತಹಸೀಲ್ದಾರ್ ಗ್ರಾಮ ವಾಸ್ತವ್ಯ Read More »

ಬೋರ್‍ವೆಲ್ ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ವಿಟ್ಲ: ವಿಟ್ಲದ ಕಾಶಿಮಠದಲ್ಲಿ ನಡೆದ ಬೋರ್‍ವೆಲ್ ಲಾರಿ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಉಕ್ಕುಡ ಆಲಂಗಾರು ನಿವಾಸಿ ರಂಜಿತ್ (20) ಮೃತ ದುರ್ದೈವಿ. ವಿಟ್ಲ ಕಡೆಯಿಂದ ಉಕ್ಕುಡ ಕಡೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬಂದ ಬೋರ್‍ವೆಲ್ ಲಾರಿ ಢಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.

ಬೋರ್‍ವೆಲ್ ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಮಹಾದಾನ್ ಅಭಿಯಾನದ ಅಂಗವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ರಕ್ತದಾನ

ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ನೇತೃತ್ವದಲ್ಲಿ ಮಾ. 18ರಂದು ಪುತ್ತೂರು ಬ್ಲಡ್ ಬ್ಯಾಂಕಿನಲ್ಲಿ ರಕ್ತದಾನ ಶಿಬಿರ ನಡೆಯಿತು. ರೋಟರ್ಯಾಕ್ಟ್ ಜಿಲ್ಲೆ 3181 ಇದರ ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಕ್ತದಾನದ ಸಾಪ್ತಾಹಿಕ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ವರ್ಷ ಮಹಾದಾನ್ ಎನ್ನುವ ಹೆಸರಿನಲ್ಲಿ ಜಿಲ್ಲೆಯಾದ್ಯಂತ ರಕ್ತದಾನ ಹಮ್ಮಿಕೊಂಡಿದ್ದು, ಅಭಿಯಾನಕ್ಕೆ ಬೆಂಬಲವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ರಕ್ತದಾನ ನಡೆಸಿತು. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಉಮಾನಾಥ್ ಪಿ.ಬಿ., ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಸಭಾಪತಿ ಶ್ರೀಧರ್ ಕೆ., ಪ್ರಗತಿ

ಮಹಾದಾನ್ ಅಭಿಯಾನದ ಅಂಗವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ರಕ್ತದಾನ Read More »

ವಿಚಾರಣೆಗೆ ತೆರಳುತ್ತಿದ್ದಾಗ ಇಮ್ರಾನ್ ಖಾನ್ ಬೆಂಗಾವಲು ವಾಹನ ಪಲ್ಟಿ

ಇಸ್ಲಾಮಾಬಾದ್: ತೋಷಖಾನಾ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್‌ಗೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನ ಪಲ್ಟಿ ಹೊಡೆದ ಘಟನೆ ಶನಿವಾರ ನಡೆದಿದೆ.ಇಮ್ರಾನ್ ಖಾನ್ ಅವರು ಲಾಹೋರ್‌ನ ಜಮಾನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ತಮ್ಮ ಪಕ್ಷದ ಕಾರ್ಯಕರ್ತರ ಬೆಂಗಾವಲು ಪಡೆಯೊಂದಿಗೆ ಹೊರಟಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಇಮ್ರಾನ್ ಖಾನ್, ನನ್ನ ಎಲ್ಲಾ ಪ್ರಕರಣಗಳಲ್ಲಿ ನಾನು

ವಿಚಾರಣೆಗೆ ತೆರಳುತ್ತಿದ್ದಾಗ ಇಮ್ರಾನ್ ಖಾನ್ ಬೆಂಗಾವಲು ವಾಹನ ಪಲ್ಟಿ Read More »

ಬೊಳುವಾರಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಜಾಗಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ | ಹಿಂಜಾವೇ ನೇತೃತ್ವದಲ್ಲಿ ಮಾರ್ಚ್ 24ರಂದು ನಡೆಯಲಿದೆ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೇರಿದ ಬೊಳುವಾರಿನಲ್ಲಿ ಜಾಗವನ್ನು ಮರಳಿ ಪಡೆಯುವ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿರುವಂತೆ ಶಾಸಕ ಸಂಜೀವ ಮಠಂದೂರು ಅವರು ಶನಿವಾರ ಭೇಟಿ ನೀಡಿದರು. ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಕಾರಿಂಜದಲ್ಲಿ ನಡೆದ ಹೋರಾಟದ ಬಳಿಕ, ಶ್ರೀ ಕಾರಿಂಜೇಶ್ವರ ಸನ್ನಿಧಿಯ ಎರಡು ಕಿಲೋ ಮೀಟರ್ ಆಸುಪಾಸಿನಲ್ಲಿ ಗಣಿಗಾರಿಕೆ ನಡೆಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ಯಶಸ್ವಿ ಹೋರಾಟದ ಬಳಿಕ ಹಿಂದೂ ಜಾಗರಣ ವೇದಿಕೆ, ಪುತ್ತೂರಿನ ಬೊಳುವಾರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಮರಳಿ ಪಡೆಯುವ ಹೋರಾಟಕ್ಕೆ

ಬೊಳುವಾರಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಜಾಗಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ | ಹಿಂಜಾವೇ ನೇತೃತ್ವದಲ್ಲಿ ಮಾರ್ಚ್ 24ರಂದು ನಡೆಯಲಿದೆ ಧಾರ್ಮಿಕ ಕಾರ್ಯಕ್ರಮ Read More »

ನಿಂತಿದ್ದ ಸ್ಕೂಟರ್‌ಗೆ ಲಾರಿ ಢಿಕ್ಕಿ: ಇಬ್ಬರ ದುರ್ಮರಣ

ಮಂಗಳೂರು: ಅಪಘಾತ ವೃತ್ತ ಎಂದೇ ಹಣೆಪಟ್ಟಿ ಅಂಟಿಕೊಂಡಿರುವ ನಗರದ ನಂತೂರು ಸರ್ಕಲ್‌ನಲ್ಲಿ, ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು, ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂದು ತಿಳಿದು

ನಿಂತಿದ್ದ ಸ್ಕೂಟರ್‌ಗೆ ಲಾರಿ ಢಿಕ್ಕಿ: ಇಬ್ಬರ ದುರ್ಮರಣ Read More »

ಪುತ್ತೂರು ಬಿಜೆಪಿ ಪ್ರಣಾಳಿಕೆ ಸಂಗ್ರಹ ಅಭಿಯಾನ ಸಭೆ | ನೀರಿನ ಅಗತ್ಯತೆ ಪೂರೈಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ಜಾರಿ: ಶಾಸಕ ಮಠಂದೂರು

ಪುತ್ತೂರು: ಪುತ್ತೂರು ಕ್ಷೇತ್ರದ ನೀರಿನ ಅಗತ್ಯತೆಯನ್ನು ಪೂರೈಸುವ ನಿಟ್ಟಿನಲ್ಲಿ ಸಮಗ್ರ ಯೋಜನೆಯನ್ನು ಜಾರಿಗೆ ತಂದು ನೀರಿನ ಕೊರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. 2021ರ ಜನಗಣತಿ ಆಧಾರದಲ್ಲಿ ಜನಸಂಖ್ಯೆ 70 ಸಾವಿರದಿಂದ ಒಂದು ಲಕ್ಷದ ವರೆಗೆ ತಲುಪಿದಾಗ ಪುತ್ತೂರಿಗೆ ಎಷ್ಟು ನೀರು ಬೇಕಾದರೂ ಪೂರೈಸುವ ಕೆಲಸ ಆಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಬಿಜೆಪಿ ವತಿಯಿಂದ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನದದ ನಿಟ್ಟಿನಲ್ಲಿ ಟೌನ್‌ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಪುತ್ತೂರು

ಪುತ್ತೂರು ಬಿಜೆಪಿ ಪ್ರಣಾಳಿಕೆ ಸಂಗ್ರಹ ಅಭಿಯಾನ ಸಭೆ | ನೀರಿನ ಅಗತ್ಯತೆ ಪೂರೈಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ಜಾರಿ: ಶಾಸಕ ಮಠಂದೂರು Read More »

ಮಾರ್ಚ್ 26 ರಂದು ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ | ಕಾಮಗಾರಿ ಪರಿಶೀಲಿಸಿ ಶಾಸಕ ಸಂಜೀವ ಮಠಂದೂರು | ವಿವೇಕಾನಂದ ಕಾಲೇಜು ಸಂಪರ್ಕಿಸುವ ರೈಲ್ವೇ ಓವರ್ ಬ್ರಿಡ್ಜಿಗೆ ಶಿಲಾನ್ಯಾಸ

ಪುತ್ತೂರು: ಕಾಲಮಿತಿಯೊಳಗಡೆ ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಮುಕ್ತಾಯಗೊಳಿಸುತ್ತಿದ್ದು, ಮಾರ್ಚ್ ೨೬ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಶನಿವಾರ ರೈಲ್ವೇ ಅಂಡರ್ ಪಾಸ್ ಕಾಮಗಾರಿಯನ್ನು ಪರಿಶೀಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಉಪಸ್ಥಿತಿಯಲ್ಲಿ ರೈಲ್ವೇ ಅಂಡರ್ ಪಾಸ್ ಉದ್ಘಾಟನೆಗೊಳ್ಳಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ವಿನಂತಿಸಿದರು.ನಿಗದಿತ ಕಾಲಮಿತಿಯೊಳಗಡೆ ಅಂಡರ್ ಪಾಸ್ ಕಾಮಗಾರಿ ಮುಕ್ತಾಯಗೊಳ್ಳಲಿದೆ. ಬಹಳ ಬೇಡಿಕೆಯ ಈ ಯೋಜನೆಯ

ಮಾರ್ಚ್ 26 ರಂದು ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ | ಕಾಮಗಾರಿ ಪರಿಶೀಲಿಸಿ ಶಾಸಕ ಸಂಜೀವ ಮಠಂದೂರು | ವಿವೇಕಾನಂದ ಕಾಲೇಜು ಸಂಪರ್ಕಿಸುವ ರೈಲ್ವೇ ಓವರ್ ಬ್ರಿಡ್ಜಿಗೆ ಶಿಲಾನ್ಯಾಸ Read More »

ಬೆಂಗಳೂರು: ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ

ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದರು.ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಹಲವು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದ ಪ್ರಸಾದ್ ಹೆಗಡೆ, ಮಾಧ್ಯಮ ಲೋಕದಲ್ಲಿ ಅಪಾರ ಅನುಭವ ಹೊಂದಿದ್ದರು. ಸದ್ಯ ರಾಜ್ ನ್ಯೂಸ್ ನಲ್ಲಿ ಔಟ್ ಪುಟ್ ಚೀಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮುಗಿಸಿದ್ದ

ಬೆಂಗಳೂರು: ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ Read More »

error: Content is protected !!
Scroll to Top