ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷಿದ್ಧ : ಶಾಸಕ ಸಂಜೀವ ಮಠಂದೂರು

ಪುತ್ತೂರು: ನಕ್ಸಲೈಟ್, ಭಯೋತ್ಪಾದನೆ, ಕಮ್ಯುನಿಸ್ಟ್ ಮೆಂಟಾಲಿಟಿ ಇರುವ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಆರ್ ಎಸ್ ಎಸ್ ಹಿನ್ನಲೆ ಹೊಂದಿರುವ ಹಿಂದೂ ಸಂಘಟನೆ ಭಜರಂಗದಳವನ್ನು ನಿಷೇಧ ಹೇಳಿಕೆ ಜತೆಗೆ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂಗಳನ್ನು ದಮನ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡಿರುವ ಹಿಂದೂಗಳನ್ನು ಮಟ್ಟ ಹಾಕುವುದು ಕಾಂಗ್ರೆಸ್ ನ ಉದ್ದೇಶವಾಗಿದೆ ಎಂದು ತಿಳಿಸಿದ ಅವರು, ಈಗಾಗಲೇ […]

ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷಿದ್ಧ : ಶಾಸಕ ಸಂಜೀವ ಮಠಂದೂರು Read More »

ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ವೃತ್ತಿ, ಉದ್ಯೋಗ ನೀಡುವ ಶಿಕ್ಷಣವನ್ನು ಅರಸಿ ಸೂಕ್ತವಾದುದನ್ನು ಆಯ್ಕೆ ಮಾಡುವ ಪರ್ವ ಕಾಲವಿದು. ಅವಕಾಶಗಳು ಕೈಬೀಸಿ ಕರೆಯುತ್ತಿದೆ. ಆದರೆ ಶಿಕ್ಷಣಾವಕಾಶಗಳ ಮಾಹಿತಿ ಕೊರತೆಯಾಗಬಾರದು.ಸರಿಯಾದ ಸಮಯದಲ್ಲಿ ಸರಿಯಾದ ಶಿಕ್ಷಣ ದೊರಕಿದಾಗ ಒಬ್ಬ ಸಾಮಾನ್ಯ ವ್ಯಕ್ತಿಯು ಅಸಾಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ.ಇಂತಹ ಸಮಯದಲ್ಲಿ ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ,ಅವಶ್ಯಕತೆಗೆ ಅನುಕೂಲವಾಗುವಂತಹ ಶಿಕ್ಷಣದ ಅವಕಾಶಗಳನ್ನು ಆಯ್ಕೆಮಾಡಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್,ಸೈನ್ಸ್ ಮತ್ತು ಕಾಮರ್ಸ್ ಇದರ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಶ ಭಟ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ

ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ Read More »

ದೇಶ ದ್ರೋಹದ ಸಂಘಟನೆಯ ದಮನಕ್ಕೆ ಮೇ 10 ಸಕಾಲ : ಕಲ್ಲಡ್ಕ ಪ್ರಭಾಕರ್ ಭಟ್ | 2040ರಲ್ಲಿ ಮುಸ್ಲಿಂ ರಾಷ್ಟ್ರ ಆಗಬೇಕು ಎಂಬ ಹುನ್ನಾರ ನಡೆಯುತ್ತಿರುವುದು ಆಘಾತಕಾರಿ : ಡಾ.ಎಂ.ಕೆ.ಪ್ರಸಾದ್

ಪುತ್ತೂರು: ಭಾರತದ ಇತಿಹಾಸ ಸಾವಿರಾರು ವರ್ಷ. ಈ ದೇಶ ಸುಮ್ಮನೆ ಬದುಕಿ ಬರಲಿಲ್ಲ. ಸಾಯುವವರನ್ನು ಬದುಕುವ ಹಾಗೆ ಮಾಡಿರುವ, ಜೀವನದ ದೃಷ್ಟಿ ನೀಡಿರುವ ದೇಶ ಭಾರತ, ಸಮಾಜ ಹಿಂದೂ ಎಂದು ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಬುಧವಾರ ಸಂಜೆ ಪುತ್ತಿಲ ಕೆರೆಮನೆ ಕಟ್ಟೆಯಲ್ಲಿ ನಡೆದ ಭಾರತ್ ಮಾತಾ ಪೂಜನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು. ಭಾರತದ ಮೂಲ ಚಿಂತನೆಯಿಂದ ಜಗತ್ತಿನ ಇತರ ದೇಶದವರು ಪೂಜನೀಯ ಭಾವನೆಯಿಂದ ನೋಡಿದರೆ ನಮ್ಮ ದೇಶದವರು ಭಾರತವನ್ನು ಪೂಜಿಸುತ್ತಾರೆ. ಭಾರತ ಆಧ್ಯಾತ್ಮಿಕ

ದೇಶ ದ್ರೋಹದ ಸಂಘಟನೆಯ ದಮನಕ್ಕೆ ಮೇ 10 ಸಕಾಲ : ಕಲ್ಲಡ್ಕ ಪ್ರಭಾಕರ್ ಭಟ್ | 2040ರಲ್ಲಿ ಮುಸ್ಲಿಂ ರಾಷ್ಟ್ರ ಆಗಬೇಕು ಎಂಬ ಹುನ್ನಾರ ನಡೆಯುತ್ತಿರುವುದು ಆಘಾತಕಾರಿ : ಡಾ.ಎಂ.ಕೆ.ಪ್ರಸಾದ್ Read More »

ಸುಳ್ಯ ಕ್ಷೇತ್ರ ಗೆದ್ದು ಖರ್ಗೆಗೆ ಉಡುಗೊರೆ; ಎಐಸಿಸಿ ಸದಸ್ಯ ಸುನಿಲ್ ಕೇದಾರ್

ಕಡಬ: ಹಲವು ವರ್ಷಗಳಿದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿಲ್ಲ. ಈ ಬಾರಿ ಈ ಕೊರತೆಯನ್ನು ಕ್ಷೇತ್ರದ ಮತದಾರರು ನೀಗಿಸುತ್ತಾರೆ. ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ನಿವಾರಣೆಯಾಗಿದ್ದು, ಕಾಂಗ್ರೆಸ್ ಗೆಲುವು ನಿಶ್ಚಿತ, ಇಲ್ಲಿ ಗೆಲುವು ದಾಖಲಿಸುವ ಮೂಲಕ ಎಐಸಿಸಿ ಅಧ್ಯಕ್ಷ ಕರ್ನಾಟಕದ ಮೇರು ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಕಾರ್ಯಕರ್ತರು ಹಾಗೂ ಮತದಾರರು ಉಡುಗೊರೆ ನೀಡಲಿದ್ದಾರೆ ಎಂದು ಎಐಸಿಸಿ ಸದಸ್ಯ ಮಹಾರಾಷ್ಟ್ರ ಮಾಜಿ ಸಚಿವ, ಸುಳ್ಯ ವಿಧಾನಸಭಾ ಕಾಂಗ್ರೆಸ್ ವೀಕ್ಷಕ ಸುನಿಲ್ ಕೇದಾರ್ ಹೇಳಿದರು. ಅವರು ಕಡಬದಲ್ಲಿ ಮಂಗಳವಾರ ಸುಳ್ಯ

ಸುಳ್ಯ ಕ್ಷೇತ್ರ ಗೆದ್ದು ಖರ್ಗೆಗೆ ಉಡುಗೊರೆ; ಎಐಸಿಸಿ ಸದಸ್ಯ ಸುನಿಲ್ ಕೇದಾರ್ Read More »

ಶಾಂತಿಗೋಡು ಗ್ರಾಮದಲ್ಲಿ ಬಿಜೆಪಿ ವತಿಯಿಂದ ಮತ ಯಾಚನೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ವತಿಯಿಂದ ಶಾಂತಿಗೋಡು ಗ್ರಾಮದಲ್ಲಿ ಬುಧವಾರ ಮತ ಯಾಚನೆ ಮಾಡಲಾಯಿತು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೇತೃತ್ವದಲ್ಲಿ ಶಾಂತಿಗೋಡು ಗ್ರಾಮದ ಕೈಂದಾಡಿ, ಶಾಂತಿಗೋಡು, ಕುಕ್ಯಾನ, ಕರ್ಪುತಮೂಳೆ, ಪಜಿರೋಡಿ ಮುಂತಾದ ಕಡೆಗಳಲ್ಲಿ ಮನೆ ಮನೆಗೆ ತೆರಳಿ ಮತ ಯಾಚಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಜಿಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಕ್ತಿಕೇಂದ್ರದ ಅಧ್ಯಕ್ಷ ಶ್ಯಾಮ್ ಭಟ್, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೋದ್ ಕರ್ಪುತಮೂಳೆ, ಕಾರ್ಯಕರ್ತರಾದ ಶಿವಪ್ರಸಾದ್ ಕೈಂದಾಡಿ, ವಿಘ್ನೇಶ್ ಕುಕ್ಯಾನ, ಹೊನ್ನಪ್ಪ

ಶಾಂತಿಗೋಡು ಗ್ರಾಮದಲ್ಲಿ ಬಿಜೆಪಿ ವತಿಯಿಂದ ಮತ ಯಾಚನೆ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಕೀಲರ ಸಂಘದ ಕಚೇರಿಗೆ ಭೇಟಿ | ಮತ ಯಾಚನೆ

ಪುತ್ತೂರು: ಪುತ್ತೂರು ಕೋರ್ಟು‌ಆವರಣದಲ್ಲಿರುವ ವಕೀಲರ ಸಂಘದ ಕಚೇರಿಗೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತ ಯಾಚಿಸಿದರು. ವಕೀಲರ ಜೊತೆ ಮಾತುಕತೆ ನಡೆಸಿದ ಅಶೋಕ್ ರೈಯವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೇಳಿಕೊಂಡರು. ಈ ಸಂದರ್ಭದಲ್ಲಿ ವಕೀಲರು ಆನಾಜೆಯಲ್ಲಿರುವ ನ್ಯಾಯಾಲಯ ಸಂಕೀರ್ಣದವರೆಗೆ ಸಿಟಿ ಬಸ್ ಸೌಕರ್ಯ ಕಲ್ಪಿಸಿದರೆ ಕಕ್ಷಿದಾರರಿಗೆ ಪ್ರಯೋಜನವಾಗಲಿದೆ. ಆನಾಜೆ ಕೋರ್ಟಿಗೆ ತೆರಳುವ ರಸ್ತೆಯನ್ನು ಅಗಲೀಕರಣ ಮಾಡಬೇಕು ಮತ್ತು ಸೋಲಾರ್ ಅಳವಡಿಕೆಯ ಕುರಿತು ಚರ್ಚಿಸಿದರು. ಶಾಸಕನಾಗಿ ಆಯ್ಕೆಯಾದಲ್ಲಿ ತಮ್ಮ ಬೇಡಿಕೆಗಳ ಕಡೆ ಹೆಚ್ಚು ಒತ್ತು

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಕೀಲರ ಸಂಘದ ಕಚೇರಿಗೆ ಭೇಟಿ | ಮತ ಯಾಚನೆ Read More »

ಪುತ್ತೂರು ಮೂಲದ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ

ಪುತ್ತೂರು: ಪುತ್ತೂರು ಮೂಲದ ಯುವತಿಯೋರ್ವಳು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸ್ನಾನತ್ತಾರು ಚಂದ್ರಶೇಖರ ರೈ ಹಾಗೂ ಸೋಮಾವತಿ ರೈ ದಂಪತಿ ಪುತ್ರಿ ಶ್ರುತಿ ಸಿ. ರೈ (22) ಆತ್ಮಹತ್ಯೆ ಮಾಡಿಕೊಂಡವರು. ಶ್ರುತಿ ಬೆಂಗಳೂರಿನಲ್ಲಿ ಎರಡು ವರ್ಷಗಳಿಂದ ಅನಿಮೇಷನ್ ಶಿಕ್ಷಣ ಪಡೆಯುತ್ತಿದ್ದು, ಶಿಕ್ಷಣ ಮುಗಿಸಿ ಕೆಲಸದ ಹುಡುಕಾಟದಲ್ಲಿದ್ದರು. ಅದಕ್ಕಾಗಿ ಅಲ್ಲಿಯೇ ವಾಸ್ತವ್ಯ ಹೂಡಿದ್ದರು. ತನ್ನ ಬಾಡಿಗೆ ರೂಂನಲ್ಲಿ ಕೆಲವು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,

ಪುತ್ತೂರು ಮೂಲದ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ Read More »

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕರಿಂದ ಹಲವೆಡೆ ಮತ ಯಾಚನೆ

ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಚಿಲ್ತಡ್ಕ ರವರು ಇಂದು ಉಕ್ಕುಡ ಶ್ರೀ ಶಾರದಾ ಪ್ರೋಸೆಸರ್ಸ್ ಹಾಗೂ ಚಂದಳಿಕೆ ಶ್ರೀ ವೆಂಕಟೇಶ್ವರ ಪ್ರೋಸೆಸರ್ಸ್ ಗೇರು ಬೀಜ ಕಾರ್ಖಾನೆಗಳಿಗೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಸಿಬ್ಬಂದಿಗಳಲ್ಲಿ ಮತ ಯಾಚಿಸಿದರು. ಈ ಸಂಧರ್ಭದಲ್ಲಿ  ರಾಜ್ಯ ಜೆಡಿಎಸ್ ವಕ್ತಾರೆ ಜೋಹರ ನಿಸಾರ್ ಅಹ್ಮದ್, ಗಧಾದರ್ ಮಲಾರ್, ಜಾಫರ್ ಖಾನ್, ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷ ಅಶ್ರಫ್ ಕಲ್ಲೆಗ, ರಫೀಕ್ ಮನಿಯಾರ್ ಮತ್ತಿತರರು ಉಪಸ್ಥಿತರಿದ್ದರು.

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕರಿಂದ ಹಲವೆಡೆ ಮತ ಯಾಚನೆ Read More »

ಮೇ 12 : ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ, ಪುನಃಪ್ರತಿಷ್ಠಾಪನೆ

ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ, ಪುನಃಪ್ರತಿಷ್ಠಾಪನೆ ಮೇ 12 ರಂದು ವೇ.ಮೂ.ಜಗದೀಶ್ ಭಟ್ ಭಟ್ರಪಾಡಿ ಅವರ ನೇತೃತ್ವದಲ್ಲಿ ನಡೆಯಲಿದೆ. ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ದಕ್ಷಿಣಾಮ್ನಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂಗಳವರು ಹಾಗೂ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಪರಮಾನುಗ್ರಹದಿಂದ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಬೆಳಿಗ್ಗೆ ಗಂಟೆ 8.22 ಕ್ಕೆ ಸಲುವ ವೃಷಭಲಗ್ನ ಸುಮುಹೂರ್ತದಲ್ಲಿ ತೊಟ್ಟಿಲಕಯದ ಜೀರ್ಣೋದ್ಧಾರ ಹಾಗೂ ನಃಪ್ರತಿಷ್ಠಾಪನೋತ್ಸವ ನಡೆಯಲಿದೆ ಎಂದು ಪ್ರಕಟಣೆ

ಮೇ 12 : ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ, ಪುನಃಪ್ರತಿಷ್ಠಾಪನೆ Read More »

ಮದ್ಯ ಮುಕ್ತ, ಆಮಿಷ ಮುಕ್ತ ಚುನಾವಣೆಗೆ ಜನಜಾಗೃತಿ ವೇದಿಕೆ ಆಗ್ರಹ | ಪತ್ರಿಕಾಗೋಷ್ಠಿಯಲ್ಲಿ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ

ಪುತ್ತೂರು: ಚುನಾವಣೆಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮದ್ಯ ಹಂಚುವುದಿಲ್ಲ, ಆಮಿಷ ಒಡ್ಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಬರಬೇಕು. ಪ್ರಜ್ಞಾವಂತ ನಾಗರಿಕರು ಮದ್ಯಪಾನದ ಮತ್ತು ಇತರ ಯಾವುದೇ ಆಮಿಷಕ್ಕೆ ಬಲಿಯಾಗಬಾರದು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿ, ಭಾರತೀಯ ರಾಜಕೀಯ ವ್ಯವಸ್ಥೆಯ ನೈತಿಕ ಅಧಃಪತನವು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮದ್ಯಪಾನಾದಿ ದುಶ್ಚಟಗಳ ವ್ಯಾಪಕತೆಗೆ ಕಾರಣವಾಗಿದೆ. ಹೆಂಡ ಹಂಚದೆ, ಆಮಿಷಗಳಿಲ್ಲದೆ ಚುನಾವಣೆಯೇ ಇಲ್ಲ ಎಂಬಂತಹ

ಮದ್ಯ ಮುಕ್ತ, ಆಮಿಷ ಮುಕ್ತ ಚುನಾವಣೆಗೆ ಜನಜಾಗೃತಿ ವೇದಿಕೆ ಆಗ್ರಹ | ಪತ್ರಿಕಾಗೋಷ್ಠಿಯಲ್ಲಿ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ Read More »

error: Content is protected !!
Scroll to Top