ಮಾಸಾಶನ ಫಲಾನುಭವಿಗಳಿಗೆ ಮಾಹಿತಿ, ಕಾರ್ಯಾಗಾರ | ಫಿಲೋಮಿನಾದ ಎಂ.ಎಸ್.ಡಬ್ಲ್ಯೂ, ವಿಕಲಚೇತನರ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರ್ಯಾಪು ಗ್ರಾಪಂ ಆಯೋಜನೆ
ಪುತ್ತೂರು: ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಮಾಹಿತಿ ಮತ್ತು ಕಾರ್ಯಾಗಾರ ಸಭೆ ಆರ್ಯಾಪು ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಂಗಳೂರು, ಆರ್ಯಾಪು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಮನಸ್ವಿನಿ, ವಿಧವಾ ವೇತನದ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, […]










