ಪುತ್ತೂರಿನ ಶಾಲೆಗಳ ಅಭಿವೃದ್ಧಿ ರಾಜ್ಯಕ್ಕೆ ಮಾದರಿ | ಶಾಸಕ ಸಂಜೀವ ಮಠಂದೂರು ಕ್ರಮವನ್ನು ಶ್ಲಾಘಿಸಿದ ಕೆ.ಎಸ್. ಈಶ್ವರಪ್ಪ
ಪುತ್ತೂರು: ಪುತ್ತೂರಿನಲ್ಲಿ ಸರಕಾರಿ ಶಾಲೆಗಳನ್ನು ಉತ್ತಮ ರೀತಿಯಲ್ಲಿ ಶಾಸಕ ಸಂಜೀವ ಮಠಂದೂರು ಅಭಿವೃದ್ಧಿ ಮಾಡಿದ್ದಾರೆ. ಅದೇ ಕ್ರಮವನ್ನು ಮಾದರಿಯಾಗಿಟ್ಟುಕೊಂಡು ರಾಜ್ಯದಲ್ಲಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಲು ಪ್ರಯತ್ನಿಸಲಾಗುವುದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿ ಆರಂಭಗೊಂಡ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಶನಿವಾರ ಸುಳ್ಯದ ಮೂಲಕ ಪುತ್ತೂರಿಗೆ ಆಗಮಿಸಿದ್ದು, ಪುತ್ತೂರು ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಸಮೀಪದ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿದ ಕ್ರಮವನ್ನು, ಅವರಿಂದಲೇ […]










