ಕಾರು-ಖಾಸಗಿ ಶಾಲಾ ವಾಹನ ಡಿಕ್ಕಿ

ಪುತ್ತೂರು : ಕಾರು ಹಾಗೂ ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಮಂಜಲ್ಪಡ್ಡು ಎಂಬಲ್ಲಿ ಇಂದು ನಡೆದಿದೆ. ಅಪಘಾತದ ಪರಿಣಾಮ ಕಾರಿನ ಮುಂಭಾಗ ಜಖಂ ಗೊಂಡಿದ್ದು ಏರ್ ಬ್ಯಾಗ್ ತೆರೆದುಕೊಂಡಿದೆ. ಈ ಸಂದರ್ಭ ಹಿಂಬದಿ ಇದ್ದ ಪಿಕಪ್ ವಾಹನಕ್ಕೆ ಇನೋವ ಕಾರು ಕೂಡ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರು-ಖಾಸಗಿ ಶಾಲಾ ವಾಹನ ಡಿಕ್ಕಿ Read More »

ಜ.24 : ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ.

ಪುತ್ತೂರು : ಬೊಳುವಾರಿನಲ್ಲಿರುವ ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಜ.24 ರಂದು 9ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀ ದುರ್ಗಾ ಉಳ್ಳಾಲ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕ್ಷೇತ್ರದ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2016 ರಿಂದ ನಮ್ಮ ದೇವಸ್ಥಾನದ ಜೊತೆಯಾಗಿ ಶ್ರೀ ದುರ್ಗಾ ಉಳ್ಳಾಳ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನವನ್ನು ಪ್ರಾರಂಭ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಚೆಂಡೆ, ಮದ್ದಳೆ, ಭಾಗವತಿಕೆ, ನೃತ್ಯ

ಜ.24 : ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ. Read More »

4 ಲಕ್ಷ ರೂ.ಗೆ ಬಾಲಕನ ಮಾರಾಟ | ನಾಲ್ವರ ಬಂಧನ

ಬೆಳಗಾವಿ : ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿದ ಘಟನೆ ಹುಕ್ಕೇರಿ ತಾಲೂಕಿನ ಸುಲ್ತಾನಪುರದಲ್ಲಿ ನಡೆದಿದೆ. ಸುಲ್ತಾನಪುರ ಮೂಲದ ಸದಾಶಿವ ಶಿವಬಸಪ್ಪ ಮಗದುಮ್ (ಮಗುವಿನ ಮಲತಂದೆ), ಭಡಗಾಂವ್​ ಮೂಲದ, ಸದ್ಯ ಸುಲ್ತಾನಪುರದಲ್ಲಿ ವಾಸವಿರುವ ಲಕ್ಷ್ಮಿ ಬಾಬು ಗೋಲಭಾವಿ, ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್, ಅಂಬೇಡ್ಕರ್ ನಗರದ ನಿವಾಸಿ ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಳಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ ಬಂಧಿತ ಆರೋಪಿಗಳು ಎನ್ನಲಾಗಿದೆ. ಶಿವಬಸಪ್ಪ

4 ಲಕ್ಷ ರೂ.ಗೆ ಬಾಲಕನ ಮಾರಾಟ | ನಾಲ್ವರ ಬಂಧನ Read More »

ಗಿರಾಕಿಗಳ ಹಣದಿಂದ ಮಟ್ಕಾ, ಜೂಜಾಟ ನಡೆಸಿದ ಆರೋಪಿಯ ಬಂಧನ

ಸುಳ್ಯ: ಪಾನ್ ಬೀಡ ಅಂಗಡಿಯೊಂದರಲ್ಲಿ ಓರ್ವ ವ್ಯಕ್ತಿ ಮಟ್ಕಾ, ಜೂಜಾಟ ಆಡುತ್ತಿದ್ದ ವೇಳೆ ಸುಳ್ಯ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪಿಯನ್ನು ಕಲ್ಲುಗುಂಡಿ ಸಂಪಾಜೆ ಗ್ರಾಮ ಸುಳ್ಯ ನಿವಾಸಿ ಮಹಮ್ಮದ್ ಮುಸ್ತಕ್ ಎನ್ನಲಾಗಿದೆ. ಕಲ್ಲುಗುಂಡಿ ಪೇಟೆಯ ಚರ್ಚ್ ಬಳಿ ಸಮೀಪ ಹೊಟೇಲ್ ಬದಿಯಲ್ಲಿರುವ ಪಾನ್ ಬೀಡ ಅಂಗಡಿಯೊಂದರ ವ್ಯಕ್ತಿ ಜನರಿಂದ ಹಣವನ್ನು ಪಣವಾಗಿರಿಸಿಕೊಂಡು ಮಟ್ಕಾ ಜೂಜಾಟ ನಡೆಸುತಿರುವ ಬಗ್ಗೆ ಮಾಹಿತಿ ಮೂಲಕ ಜ. 20 ರಂದು ರಾತ್ರಿ ಸುಳ್ಯ

ಗಿರಾಕಿಗಳ ಹಣದಿಂದ ಮಟ್ಕಾ, ಜೂಜಾಟ ನಡೆಸಿದ ಆರೋಪಿಯ ಬಂಧನ Read More »

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ

ಪೆರ್ನಾಜೆ : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರಿನಲ್ಲಿ  ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ (ಮಾಸ್ಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ) ವಿದುಷಿ ಚೈತನ್ಯ ಕೋಟೆ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ  ಅತೀ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ, ‌ಪ್ರಥಮ ರಾಂಕ್‍ ಗಳಿಸಿ ಜ. 18, 2025 ಶನಿವಾರದಂದು ವಿಶ್ವವಿದ್ಯಾಲಯದಲ್ಲಿ ನಡೆದ 7,8 ಮತ್ತು 9 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿರುತ್ತಾರೆ. ಇವರು

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ Read More »

ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಭರ್ತಿ ಒಂದು ವರ್ಷ

ಹಿಂದು ಪಂಚಾಂಗ ಪ್ರಕಾರ ಜ.11ರಂದೇ ಅಯೋಧ್ಯೆಯಲ್ಲಿ ವಾರ್ಷಿಕೋತ್ಸವ ಆಚರಣೆ ಅಯೋಧ್ಯೆ : ಅಯೋಧ್ಯೆಯಲ್ಲಿ ಹೊಸ ಮಂದಿರ ನಿರ್ಮಾಣವಾಗಿ ಬಾಲರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರ್ತಿಯಾಯಿತು. 2024ರ ಪುಷ್ಯ ಮಾಸದ ಶುಕ್ಲ ಪಕ್ಷದ ಕೂರ್ಮ ದ್ವಾದಶಿ ದಿನದಂದು ಅಂದರೆ, 2024ರ ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯನ್ನು ಪೂರ್ಣಗೊಳಿಸಲಾಗಿತ್ತು. ಮೈಸೂರಿನ ಶಿಲ್ಪಿ ಅರುಣ್‌ ರಾಜ್‌ ಈ ಆಕರ್ಷಕ ಮೂರ್ತಿಯನ್ನು ಕೆತ್ತಿದ್ದಾರೆ. 2025ರಲ್ಲಿ ಅಯೋಧ್ಯೆ ರಾಮ ಪ್ರಾಣ

ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಭರ್ತಿ ಒಂದು ವರ್ಷ Read More »

ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಪುತ್ತೂರು  : ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಪುತ್ತೂರಿನ  ಬನ್ನೂರು, ಕರ್ಮಲ ನಿವಾಸಿಯಾಗಿರುವ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ ಜುಲೈ-ಆಗಸ್ಟ್ 2024ರಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ  ಭಾಗವಹಿಸಿದ್ದಾರೆ. ಪ್ರಸ್ತುತವಾಗಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಸುನಾದ ಸಂಗೀತ ಕಲಾ ಶಾಲೆ ಪುತ್ತೂರು

ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ Read More »

ಸೈಫ್‌ ಅಲಿ ಖಾನ್‌ ಪರಿವಾರದ 15 ಸಾವಿರ ಕೋ. ರೂ. ಆಸ್ತಿ ಸರಕಾರಕ್ಕೆ?

100ಕ್ಕೂ ಅಧಿಕ ಭವ್ಯ ಮಹಲುಗಳು, ಕಟ್ಟಡಗಳು ಕೇಂದ್ರದ ಪಾಲಾಗುವ ಸಾಧ್ಯತೆ ಮುಂಬಯಿ : ಕೆಲದಿನಗಳ ಹಿಂದಷ್ಟೇ ಮನೆಯಲ್ಲಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಈಗ ಚೇತರಿಸುತ್ತಿರುವ ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರಿಗೆ ಈಗ ಇನ್ನೊಂದು ಸಂಕಷ್ಟ ಎದುರಾಗಿದೆ. ಅವರ ಮನೆತನದ ಬರೋಬ್ಬರಿ 15,000 ಕೋ. ರೂ. ಮೌಲ್ಯದ ಆಸ್ತಿ ಈಗ ಕೇಂದ್ರ ಸರಕಾರದ ಪಾಲಾಗುವ ಭೀತಿ ತಲೆದೋರಿದೆ. ಸೈಫ್‌ ಅಲಿ ಖಾನ್‌ ತಂದೆ ಮಾಜಿ ಕ್ರಿಕೆಟಿಗ ದಿವಂಗತ ಮನ್ಸೂರ್‌ ಅಲಿ ಖಾನ್‌ ಪಟೌಡಿ ಮಧ್ಯಪ್ರದೇಶದ ಭೋಪಾಳದ

ಸೈಫ್‌ ಅಲಿ ಖಾನ್‌ ಪರಿವಾರದ 15 ಸಾವಿರ ಕೋ. ರೂ. ಆಸ್ತಿ ಸರಕಾರಕ್ಕೆ? Read More »

ಕಾಲೇಜು ವಿದ್ಯಾರ್ಥಿನಿ ಭೂ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕಿ

ಪುತ್ತೂರು  :  ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ಗೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಬ್ಯಾಂಕ್ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಗೊಂಡಿರುವ  ಈಕೆ ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನಲ್ಲಿ  ಅಂತಿಮ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಆಯ್ಕೆಗೊಂಡ ಅವರು ಭೂ ಅಭಿವೃದ್ಧಿ ಬ್ಯಾಂಕ್‌ಗೆ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ ಎನ್ನಲಾಗಿದೆ. ಕೃಷಿ ಪೂರಕ ವ್ಯವಸ್ಥೆಯ ಈ ಸಹಕಾರಿ ಬ್ಯಾಂಕಿನ ಮೆಟ್ಟಲು ಏರಿದ ಮೊದಲ ಕಾಲೇಜು ವಿದ್ಯಾರ್ಥಿನಿ ಸ್ವಾತಿ ರೈ ಆರ್ತಿಲ.

ಕಾಲೇಜು ವಿದ್ಯಾರ್ಥಿನಿ ಭೂ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕಿ Read More »

ರಾಜ್ಯದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ

ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಆಯುಷ್ಮಾನ್‌ನಡಿ ಉಚಿತ ಚಿಕಿತ್ಸೆ ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತವಾಗಿ ನೀಡಲು ಸರಕಾರ ನಿರ್ಧರಿಸಿದೆ. ಮೂಳೆ ಕ್ಯಾನ್ಸರ್, ಥಲಸ್ಸೆಮಿಯಾ, ಅಪ್ಲಾಸ್ಟಿಕ್ ರಕ್ತಹೀನತೆ ಮತ್ತು ಇತರ ಎಂಟೋಲಾಜಿಕಲ್ ಸಂಬಂಧಿತ ಅಸ್ವಸ್ಥತೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಮೂಳೆ ಅಸ್ಥಿಮಜ್ಜೆ (bone marrow transplant (BMT) ಕಸಿ ಅಗತ್ಯವಿದೆ. ಪ್ರಸ್ತುತ ಈ ಚಿಕಿತ್ಸೆ ಬಹಳ ದುಬಾರಿಯಾಗಿದ್ದು, ಬಡವರ ಕೈಗೆಟುಕುವುದಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 20-40 ಲಕ್ಷ

ರಾಜ್ಯದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ Read More »

error: Content is protected !!
Scroll to Top