ಹೊರ್ಮುಜ್‌ ತೆರೆಯಲು ಸಿದ್ಧ, ಆದರೆ… : ಅಮೆರಿಕಕ್ಕೆ ಇರಾನ್‌ ಸಂದೇಶ

ಶಾಂತಿ ಮಾತುಕತೆಗೆ ಹೊಸ ದಾಳ ಉರುಳಿಸಿದ ಇರಾನ್‌ ಟೆಹ್ರಾನ್‌: ಅಮೆರಿಕ ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ ಮೂಲಕ ಅಮೆರಿಕಕ್ಕೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಇರಾನ್, ಪ್ರಮುಖವಾಗಿ ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಂತೆ ಕೋರಿದೆ. ಪ್ರಸ್ತುತ ನಡೆಯುತ್ತಿರುವ ಸಂಘರ್ಷವನ್ನು ತಕ್ಷಣವೇ ಕೊನೆಗೊಳಿಸಲು ಮತ್ತು ವಿಶ್ವದ ಪ್ರಮುಖ ವ್ಯಾಪಾರ ಮಾರ್ಗವಾದ ಹೊರ್ಮುಜ್ ಜಲಸಂಧಿಯನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ತಾವು ಸಿದ್ಧ ಎಂದು ಇರಾನ್ ತಿಳಿಸಿದೆ. […]

ಹೊರ್ಮುಜ್‌ ತೆರೆಯಲು ಸಿದ್ಧ, ಆದರೆ… : ಅಮೆರಿಕಕ್ಕೆ ಇರಾನ್‌ ಸಂದೇಶ Read More »

ಬಂಟ್ವಾಳ : ಚಲಿಸುತ್ತಿದ್ದ ರೈಲಿನಲ್ಲೇ ಹೆರಿಗೆ

ತುರ್ತು ಸಂದರ್ಭದಲ್ಲಿ ಯಶಸ್ವಿಯಾಗಿ ಸಹಜ ಹೆರಿಗೆ ಮಾಡಿಸಿದ ಸಹಪ್ರಯಾಣಿಕ ಮಹಿಳೆಯರು ಮಂಗಳೂರು: ಚಲಿಸುತ್ತಿದ್ದ ರೈಲಿನಲ್ಲೇ ಮಹಿಳೆಯೊಬ್ಬರಿಗೆ ಹೆರಿಗೆಯಾದ ಘಟನೆ ಬಂಟ್ವಾಳ ರೈಲು ನಿಲ್ದಾಣದಲ್ಲಿ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ಯಶವಂತಪುರಕ್ಕೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನಲ್ಲಿ ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ, ಸೂಕ್ತ ವೈದ್ಯಕೀಯ ನೆರವು ಸಿಗದ ಕಾರಣ ಸಹಪ್ರಯಾಣಿಕ ಮಹಿಳೆಯರೆ ಯಶಸ್ವಿಯಾಗಿ ಸಹಜ ಹೆರಿಗೆ ಮಾಡಿಸಿದ್ದಾರೆ. ಮೈಸೂರು ಮೂಲದ ಗರ್ಭಿಣಿಯೊಬ್ಬರು ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳುವ ರೈಲನ್ನೇರಿದ್ದರು. ರೈಲು ಬಿ.ಸಿ.ರೋಡ್ ಬಳಿ ತಲುಪುತ್ತಿದ್ದಂತೆ ಮಹಿಳೆಗೆ

ಬಂಟ್ವಾಳ : ಚಲಿಸುತ್ತಿದ್ದ ರೈಲಿನಲ್ಲೇ ಹೆರಿಗೆ Read More »

ಖಾಸಗಿ ಜಾಗಕ್ಕೆ ನುಗ್ಗಿ ಹಲ್ಲೆ : 8 ಮಂದಿ ವಿರುದ್ಧ ದೂರು

ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಖಾಸಗಿ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್‌ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಾದ ಪಿ.ಆರ್.ಮನೋಹರ ಎಂಬವರು ಏ.24ರಂದು ಮಧ್ಯಾಹ್ನ 12.30 ಗಂಟೆಗೆ ವಕೀಲೆ ಟಿಸ್ಮಿ ಮತ್ತು ಶಾಂತಲಾ ರಾಜೇಶ್ ಪ್ರಭು ಹಾಗೂ ಅವರ ಕೆಲಸದವರ ಜೊತೆಯಲ್ಲಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿರುವ ಅವರ ಪಟ್ಟಾ ಜಾಗಕ್ಕೆ ಭೇಟಿ ನೀಡಿದಾಗ

ಖಾಸಗಿ ಜಾಗಕ್ಕೆ ನುಗ್ಗಿ ಹಲ್ಲೆ : 8 ಮಂದಿ ವಿರುದ್ಧ ದೂರು Read More »

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಭೀತಿ ಸೃಷ್ಟಿಸಿದ ವ್ಯಕ್ತಿಯ ಬಂಧನ

ಒಂಟಿ ಮಹಿಳೆಯರು ಇರುವ ಮನೆಗಳಿಗೆ ಬಂದು ನೀರು ಕೇಳಿದ ಯುವಕ ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಹಾಡಹಗಲೇ ಮನೆಗೆ ಬಂದು ಮಹಿಳೆಯರೇ ಇರುವುದನ್ನು ಖಚಿತಪಡಿಸಿಕೊಂಡು ಒಳಗೆ ನುಗ್ಗಿ ಬಾಗಿಲ ಚಿಲಕ ಹಾಕಿ ಮನೆ ಮಂದಿಯನ್ನು ಭೀತಿಗೊಳಪಡಿಸಿದ್ದ ಅಪರಿಚಿತ ವ್ಯಕ್ತಿಯನ್ನು ಉಪ್ಪಿನಂಗಡಿಯ ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಭಾನುವಾರ ನಡೆದಿದೆ. ಇಲ್ಲಿನ ಬ್ಯಾಂಕ್ ರಸ್ತೆಯ ಬಳಿ ವೃದ್ಧೆಯೋರ್ವರು ಮಾತ್ರ ಮನೆಯಲ್ಲಿದ್ದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ವ್ಯಕ್ತಿ ವೃದ್ಧೆ ನೀರು ತರಲೆಂದು ಅಡುಗೆ ಕೋಣೆಗೆ ಹೋದ ವೇಳೆ

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಭೀತಿ ಸೃಷ್ಟಿಸಿದ ವ್ಯಕ್ತಿಯ ಬಂಧನ Read More »

ಚುನಾವಣೆ ನಡೆದ 3 ವರ್ಷದ ಬಳಿಕ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ

ಹೈಕೋರ್ಟ್‌ ಆದೇಶದಂತೆ ಮೇ 2ರಂದು ನಡೆಯಲಿದೆ ಮತಗಳ ಮರುಎಣಿಕೆ ಬೆಂಗಳೂರು: ಶೃಂಗೇರಿ ವಿಧಾನಸಭೆ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಚುನಾವಣೆ ನಡೆದ ಮೂರು ವರ್ಷಗಳ ಬಳಿಕ ನಡೆಯಲಿರುವುದು ರಾಜ್ಯಾದ್ಯಂತ ಕುತೂಹಲ ಮೂಡಿಸಿದೆ. ಹೈಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ಶೃಂಗೇರಿ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮೇ 2ರಂದು ಐಡಿಎಸ್‌ಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಕಾಲೇಜು ಆವರಣದಲ್ಲಿ ಮರುಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಮಗ್ರ ವ್ಯವಸ್ಥೆ ಮಾಡಿಕೊಂಡಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ

ಚುನಾವಣೆ ನಡೆದ 3 ವರ್ಷದ ಬಳಿಕ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ Read More »

ಚಾರ್ಮಾಡಿ ಘಾಟಿಯಲ್ಲಿ ಬಸ್‌ ಪಲ್ಟಿ : 25 ಮಂದಿಗೆ ಗಾಯ, ಐವರು ಗಂಭೀರ

ಧರ್ಮಸ್ಥಳದಲ್ಲಿ ಮದುವೆ ಮುಗಿಸಿ ಹಿಂದಿರುಗುತ್ತಿದ್ದಾಗ ಸಂಭವಿಸಿದ ಅಪಘಾತ ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವಿನಲ್ಲಿ ಭಾನುವಾರ ಸಂಜೆ ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಪಲ್ಟಿಯಾಗಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಕಿತ್ಸೆಗೆ ಮಂಗಳೂರಿನ ಆಸ್ಪತರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಮೂಡಿಗೆರೆಯತ್ತ ಸಾಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಧರ್ಮಸ್ಥಳದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಲ್ಲಿಂದ ಪ್ರಯಾಣಿಕರನ್ನು ಹೊತ್ತು ಮೂಡಿಗೆರೆಯತ್ತ ಖಾಸಗಿ ಬಸ್ಸು ಹೊರಟಿತ್ತು.

ಚಾರ್ಮಾಡಿ ಘಾಟಿಯಲ್ಲಿ ಬಸ್‌ ಪಲ್ಟಿ : 25 ಮಂದಿಗೆ ಗಾಯ, ಐವರು ಗಂಭೀರ Read More »

ಟ್ರಂಪ್‌ ಡಿನ್ನರ್‌ ಕೂಟದಲ್ಲಿ ಗುಂಡು ಹಾರಿಸಿದಾತ ಅರೆಸ್ಟ್‌

ವರದಿಗಾರರ ಔತಣಕೂಟದಲ್ಲಿ ಟ್ರಂಪ್‌ ದಂಪತಿ ಇರುವಾಗಲೇ ಗುಂಡು ಹಾರಾಟ ವಾಷಿಂಗ್ಟನ್‌: ಶ್ವೇತಭವನದ ಸಮೀಪ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವರದಿಗಾರರ ಔತಣಕೂಟದಲ್ಲಿ ಗುಂಡು ಹಾರಿಸದವನನ್ನು ಬಂಧಿಸಲಾಗಿದೆ. ಸೀಕ್ರೆಟ್ ಸರ್ವಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಅದ್ಭುತವಾಗಿ ಕೆಲಸ ಮಾಡಿದ್ದು, ಶಂಕಿತ ದಾಳಿಕೋರನನ್ನು ಬಂಧಿಸಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೊಂಡಿದ್ದಾರೆ. ಪತ್ರಕರ್ತರ ಜೊತೆಗಿನ ಡಿನ್ನರ್‌ ವೇಳೆ ನಡೆದ ಗುಂಡಿನ ದಾಳಿಯ ಬಗ್ಗೆ ಟ್ರಂಪ್‌ ತಮ್ಮ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಪ್ರತಿಕ್ರಿಯಿಸಿದ್ದಾರೆ.ಸೀಕ್ರೆಟ್ ಸರ್ವಿಸ್ ಮತ್ತು

ಟ್ರಂಪ್‌ ಡಿನ್ನರ್‌ ಕೂಟದಲ್ಲಿ ಗುಂಡು ಹಾರಿಸಿದಾತ ಅರೆಸ್ಟ್‌ Read More »

ಶಾಲೆಗಳಲ್ಲಿ ಕನ್ನಡ ದಿನ ಪತ್ರಿಕೆ ಓದು ಕಡ್ಡಾಯ

ಪ್ರತಿದಿನ ಕನಿಷ್ಠ 10 ನಿಮಿಷ ಪತ್ರಿಕೆ ಓದಿಸಲು ಶಿಕ್ಷಣ ಇಲಾಖೆ ಆದೇಶ ಬೆಂಗಳೂರು : ರಾಜ್ಯಾದ್ಯಂತ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನ ಪತ್ರಿಕೆಗಳನ್ನು ಓದುವುದನ್ನು ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ. ಇತ್ತೀಚಿನ

ಶಾಲೆಗಳಲ್ಲಿ ಕನ್ನಡ ದಿನ ಪತ್ರಿಕೆ ಓದು ಕಡ್ಡಾಯ Read More »

ಮತ್ತೆ ಮುರಿದು ಬಿದ್ದ ಸಂಧಾನ : ಅಮೆರಿಕ, ಪಾಕಿಸ್ತಾನಕ್ಕೆ ಮುಖಭಂಗ

ಅಮೆರಿಕ ಪ್ರತಿನಿಧಿಗಳನ್ನು ಭೇಟಿಯಾಗಲು ನಿರಾಕರಿಸಿ ನಿರ್ಗಮಿಸಿದ ಇರಾನ್‌ ನಿಯೋಗ ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಆಯೋಜನೆಯಾಗಿದ್ದ ಇರಾನ್-ಅಮೆರಿಕ ಸಂಧಾನ ಸಭೆ ಮತ್ತೆ ಮುರಿದುಬಿದ್ದಿದ್ದು, ಸಂಧಾನಕ್ಕಾಗಿ ಆಗಮಿಸಿದ್ದ ಅಮೆರಿಕ ಸರ್ಕಾರದ ನಿಯೋಗವನ್ನು ಭೇಟಿಯಾಗದೆ ಇರಾನ್ ನಿಯೋಗ ನಿರ್ಗಮಿಸಿದೆ. ಪಾಕಿಸ್ತಾನದಲ್ಲಿ ಅಮೆರಿಕಕ್ಕೆ ಜಾಗತಿಕ ಮುಜುಗರವಾಗಿದ್ದು, ಅಮೆರಿಕದ ಪ್ರತಿನಿಧಿಯನ್ನು ಭೇಟಿಯಾಗದೆ ಇರಾನ್ ನಿಯೋಗವು ಪಾಕಿಸ್ತಾನದಿಂದ ನಿರ್ಗಮಿಸಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ನಿಯೋಗ ಅಮೆರಿಕದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸದೆ ಶನಿವಾರ ಇಸ್ಲಾಮಾಬಾದ್‌ನಿಂದ ನಿರ್ಗಮಿಸಿತು. ಹೀಗಾಗಿ ಮಧ್ಯಸ್ಥಿಕೆ ವಹಿಸಿದ್ದ ಪಾಕಿಸ್ತಾನಕ್ಕೆ

ಮತ್ತೆ ಮುರಿದು ಬಿದ್ದ ಸಂಧಾನ : ಅಮೆರಿಕ, ಪಾಕಿಸ್ತಾನಕ್ಕೆ ಮುಖಭಂಗ Read More »

ಬೈಕ್‌ ಪಲ್ಟಿಯಾಗಿ ಗಾಯಗೊಂಡಿದ್ದ ಯುವಕ ಸಾವು

ಪುತ್ತೂರು : ಬೈಕ್ ಪಲ್ಟಿಯಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಹಿರೇಬಂಡಾಡಿ ನಿವಾಸಿ ಲಿಖಿತ್ ರೈ ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮುಂಜಾನೆ ಸಾವನ್ನಪ್ಪಿದ್ದಾರೆ. ಏಪ್ರಿಲ್ 22ರ ಸಂಜೆ ಕೊಯಿಲ-ಹಿರೇಬಂಡಾಡಿ ರಸ್ತೆಯ ಶಾಖಾಪುರ ಎಂಬಲ್ಲಿ ಲಿಖಿತ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿತ್ತು. ಈ ವೇಳೆ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಸಾರ್ವಜನಿಕರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಕೆಲವು ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಲಿಖಿತ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಬೈಕ್‌ ಪಲ್ಟಿಯಾಗಿ ಗಾಯಗೊಂಡಿದ್ದ ಯುವಕ ಸಾವು Read More »

error: Content is protected !!
Scroll to Top