ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಮಾ.25 ರಿಂದ 27 ರ ತನಕ ನಡೆಯುವ ಬಡಗನ್ನೂರು ಗ್ರಾಮದ ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ  ಬಿಡುಗಡೆ  ಮಾಡಲಾಯಿತು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಾಸ್ಥಾನದಲ್ಲಿ ಬಿಡುಗಡೆ ಮಾಡಿದರು.   ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಭಜನ ಮಂದಿರ ಪುನಃ ಪ್ರತಿಷ್ಠಾ ಮಹೋತ್ಸವದ ಅಧ್ಯಕ್ಷ ಶ್ರೀನಿವಾಸ ಗೌಡ ಕನ್ನಾಯ, […]

ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಉಪ್ಪಿನಂಗಡಿ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಮುರಳಿ ಮೋಹನ್ ಚೂಂತಾರು ಭೇಟಿ

ಉಪ್ಪಿನಂಗಡಿ : ಉಪ್ಪಿನಂಗಡಿ ಗೃಹರಕ್ಷಕ ದಳದ ವಾರದ ಕವಾಯತಿಗೆ ಜಿಲ್ಲಾ ಸಮಾದೇಷ್ಟರಾದ ಡಾ. ಮುರಳಿ ಮೋಹನ್ ಚೂಂತಾರುರವರು ಭೇಟಿ ನೀಡಿ ವಾರದ ಕವಾಯತು ವೀಕ್ಷಣೆ ಮಾಡಿದರು ಚುನಾವಣಾ ಪೂರ್ವ ಸಿದ್ಧತಾ ಸಭೆ :-ಕವಾಯತು ಮುಗಿದ ನಂತರ ಗೃಹರಕ್ಷಕ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿದರು.. ಮುಂಬರುವ ವಿಧಾನ ಸಭಾ ಚುನಾವಣೆಗೆ ಎಲ್ಲಾ ಗೃಹರಕ್ಷಕರು ಕಡ್ಡಾಯವಾಗಿ ಹಾಜರಾಗಬೇಕು ಹಾಗೂ ಚುನಾವಣೆ ಕರ್ತವ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳಿಗೆ ಅಂಚೆ ಮತದಾನದ ಮೂಲಕ ಮತ ಚಲಾವಣೆ ಮಾಡಲು ಇಲಾಖಾ ಮುಖಾಂತರ ವ್ಯವಸ್ಥೆ ಮಾಡಲಾಗುವುದು

ಉಪ್ಪಿನಂಗಡಿ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಮುರಳಿ ಮೋಹನ್ ಚೂಂತಾರು ಭೇಟಿ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಿಎಫ್ಐ ಕಾರ್ಯಕರ್ತ ತುಫೈಲ್ ಎನ್.ಐ.ಎ ವಶ

ಪುತ್ತೂರು: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ, ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತ, ಮಡಿಕೇರಿಯ ಎಂ.ಎಚ್‌. ತುಫೈಲ್‌ ಎಂಬಾತನನ್ನು ಎನ್.ಐ.ಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ತಿಳಿದುಬಂದಿದೆ. ತುಫೈಲ್‌ ವಿರುದ್ದ ಲುಕೌಟ್ ನೊಟೀಸ್ ಜಾರಿ ಮಾಡಿದ್ದು, ಮಾಹಿತಿ ನೀಡಿದವರಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್.ಐ.ಎ ಘೋಷಣೆ ಮಾಡಿತ್ತು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಬಗ್ಗೆ ತನಿಖೆ ನಡೆಸಿದ್ದ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಿಎಫ್ಐ ಕಾರ್ಯಕರ್ತ ತುಫೈಲ್ ಎನ್.ಐ.ಎ ವಶ Read More »

ಬೂತ್ ಜೀತೇಗಾ ತೋ, ದೇಶ್ ಜೀತೇಗಾ | ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ಹಿನ್ನೆಲೆಯ ಕೃತಜ್ಞತಾ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಬೂತ್ ಮಟ್ಟದಲ್ಲಿ ಜಯ ಪಡೆದರೆ ಮಾತ್ರ ನಾವು ದೇಶದಲ್ಲಿ ಜಯ ಗಳಿಸಬಹುದು ಎಂದು ಅಮಿತ್ ಶಾ ಹೇಳಿದ್ದಾರೆ. ಅದರಂತೆ ಆರ್ಯಾಪು ಗ್ರಾಮ ಪಂಚಾಯತ್ ಬೂತ್ ಮಟ್ಟದಲ್ಲಿ ನಾವು ಜಯ ಗಳಿಸಿದ್ದು, ಇದು ರಾಜ್ಯ ಮತ್ತು ರಾಷ್ಟ್ರಕ್ಕೆ ದಿಕ್ಸೂಚಿಯಾಗಿರಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಆರ್ಯಾಪು ಗ್ರಾಮ ಪಂಚಾಯತಿನ ಉಪಚುನಾವಣೆಯಲ್ಲಿ ಜಯ ಗಳಿಸಿದ ಯತೀಶ್ ದೇವ ಅವರ ಮನೆಯಲ್ಲಿ ಏರ್ಪಡಿಸಿದ್ದ ಅಭಿನಂದನೆ ಹಾಗೂ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಮೆಂಬರ್ ಆಫ್ ಪಾರ್ಲಿಮೆಂಟ್ ಅವರಿಗೂ ಎಂ.ಪಿ.

ಬೂತ್ ಜೀತೇಗಾ ತೋ, ದೇಶ್ ಜೀತೇಗಾ | ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ಹಿನ್ನೆಲೆಯ ಕೃತಜ್ಞತಾ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು Read More »

ಇಂದು (ಮಾ.5) : ಬೈಂದೂರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಭವತಿ ಭೀಕ್ಷಾಂ ದೇಹಿ ಅಭಿಯಾನದ ಮೂಲಕ ನಿಧಿ ಸಂಗ್ರಹ

ಪುತ್ತೂರು : ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಪತ್ ಭಾಂದವ ಈಶ್ವರ್ ಮಲ್ಪೆ ಅವರ ಸಹಕಾರದಲ್ಲಿ ಸೇವೆ ಎಂಬ ಯಜ್ಞದಲ್ಲಿ ಮಾ.5 ಭಾನುವಾರ ಬೈಂದೂರು ಸಮೀಪದ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಭವತಿ ಭೀಕ್ಷಾಂ ದೇಹಿ ಅಭಿಯಾನ ನಡೆಸಿ ನಿಧಿ ಸಂಗ್ರಹ ನಡೆಸಲಿದೆ. ಮಂಗಳೂರು ತಾಲ್ಲೂಕಿನ  ಬಿಂದು ಅವರ ಮಗು ಗೌರವ್ ಎಂಬ 14 ವರ್ಷದ ಬಾಲಕ ಕರುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಸುಮಾರು 15 ಲಕ್ಷ ರೂಪಾಯಿ ಅಗತ್ಯವಿರುತ್ತದೆ.

ಇಂದು (ಮಾ.5) : ಬೈಂದೂರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಭವತಿ ಭೀಕ್ಷಾಂ ದೇಹಿ ಅಭಿಯಾನದ ಮೂಲಕ ನಿಧಿ ಸಂಗ್ರಹ Read More »

ಅರಿಯಡ್ಕ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು : ಅರಿಯಡ್ಕ ಗ್ರಾಮದ ನೂತನ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ಸ್ಥಳೀಯ ಗ್ರಾಮಸ್ಥರ ಆಶೋತ್ತರಗಳನ್ನು ಈಡೇರಿಸುವ ಕೇಂದ್ರವಾಗಿದ್ದು, ಗ್ರಾಪಂ ಮೂಲಕ ಹಲವಾರು ಯೋಜನೆಗಳು ಜನಸಾಮಾನ್ಯರನ್ನು ತಪುಲುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಹಾಗೂ ಊರ ಗ್ರಾಮಸ್ಥರು

ಅರಿಯಡ್ಕ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ Read More »

ಕುರಿಯ: ದತ್ತು ಶಾಲೆಗೆ ಹೊಸ ಗತ್ತು

ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು ಕುರಿಯ ಶಾಲೆಯನ್ನು ದತ್ತು ತೆಗೆದುಕೊಂಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಪುತ್ತೂರು: ಕುರಿಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯನ್ನು ಬೂಡಿಯಾರ್ ರಾಧಾಕೃಷ್ಣ ರೈ ಅವರು ದತ್ತು ತೆಗೆದುಕೊಂಡಿದ್ದಾರೆ. ಶಾಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಯೋಜನೆಯ ಮೊದಲ ಕಾರ್ಯಕ್ರಮವಾಗಿ ನೂತನ ಕೊಠಡಿಗೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ಮೂಡಿಬಂದಿತು. ಇದರೊಂದಿಗೆ ಶಾಸಕ ಸಂಜೀವ ಮಠಂದೂರು ಅವರು ನೀಡಿರುವ ಸ್ಮಾರ್ಟ್

ಕುರಿಯ: ದತ್ತು ಶಾಲೆಗೆ ಹೊಸ ಗತ್ತು Read More »

ಪ್ರೇರಣಾದಲ್ಲಿ ಸಿಎ ಓರಿಯಂಟೇಷನ್ ತರಗತಿ

ಏಪ್ರಿಲ್ 1ರಿಂದ ಸಿಎ ತರಗತಿ ಆರಂಭ ಪುತ್ತೂರು: ಇಲ್ಲಿನ ಪ್ರೇರಣಾ ಸಂಸ್ಥೆಯಲ್ಲಿ ಸಿಎ ಓರಿಯಂಟೇಷನ್ ತರಗತಿ ಮಾರ್ಚ್ 4ರಂದು ನಡೆಯಿತು. ಭಾರತದ ಅತ್ಯುನ್ನತ ಪರೀಕ್ಷೆಗಳಲ್ಲಿ ಒಂದಾದ ಸಿಎ ಪರೀಕ್ಷೆಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ತರಬೇತುಗೊಳಿಸುವ ಹಿನ್ನೆಲೆಯಲ್ಲಿ ಪ್ರೇರಣಾ ಸಂಸ್ಥೆ ಸಿಎ ಓರಿಯಂಟೇಷನ್ ತರಗತಿಯನ್ನು ಹಮ್ಮಿಕೊಂಡಿತ್ತು. ನುರಿತ ಉಪನ್ಯಾಸಕರಿಂದ ಸಿಎ ಫೌಂಡೇಷನ್ ಕೋರ್ಸಿನ ಬಗ್ಗೆ ತರಬೇತಿ ನೀಡಲಾಯಿತು. ಏಪ್ರಿಲ್ 1ರಿಂದ ಸಿಎ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ನಿಟ್ಟಿನಲ್ಲಿ ತರಬೇತಿ ನಡೆಯಲಿದೆ. ಪ್ರೇರಣಾ ಸಂಸ್ಥೆಯ ನಿರ್ದೇಶಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ

ಪ್ರೇರಣಾದಲ್ಲಿ ಸಿಎ ಓರಿಯಂಟೇಷನ್ ತರಗತಿ Read More »

ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ | ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ 127 ಫಲಾನುಭವಿಗಳ ಅರ್ಜಿಗಳು ಇತ್ಯರ್ಥ

ಪುತ್ತೂರು: ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಪುತ್ತೂರು ಆಡಳಿತ ಸೌಧದ ತಹಸೀಲ್ದಾರ್ ನ್ಯಾಯಾಲಯದಲ್ಲಿ ಶನಿವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಒಟ್ಟು 127 ಫಲಾನುಭವಿಗಳ ಅರ್ಜಿಗಳು ಸಭೆಯಲ್ಲಿ ಇತ್ಯರ್ಥವಾಯಿತು. ಸಭೆಯಲ್ಲಿ ತಹಸೀಲ್ದಾರ್ ರಮೇಶ್ ಬಾಬು, ಬಗರ್ ಹುಕುಂ ಸಮಿತಿಯ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಭಟ್, ತಾಲೂಕು ಆಡಳಿತದ ಅಧಿಕಾರಿಗಳು ಹಾಜರಿದ್ದರು.

ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ | ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ 127 ಫಲಾನುಭವಿಗಳ ಅರ್ಜಿಗಳು ಇತ್ಯರ್ಥ Read More »

ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ 14ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ  14 ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಭಜನಾ ಮಂದಿರದ ಅಧ್ಯಕ್ಷ ಪ್ರದೀಪ್ ಕೃಷ್ಣ ಬಂಗಾರಡ್ಕ,  ಉಪಾಧ್ಯಕ್ಷ ಗೋಪಾಲಕೃಷ್ಣ ಬಂಗಾರಡ್ಕ, ಕಾರ್ಯದರ್ಶಿ-ಕಿಟ್ಟಣ್ಣ ರೈ ಬಂಗಾರಡ್ಕ ಹಾಗೂ ಊರಿನ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 14ನೇ ವಾರ್ಷಿಕೋತ್ಸವ ಸಮಾರಂಭ ಮಾ.30 ರಂದು ನಡೆಯಲಿದ್ದು, ಅರ್ಧ ಏಕಾಹ ಭಜನೆ, ಸಾಮೂಹಿಕ ಶ್ರೀ ರಾಮ ಕಲ್ಪೋಕ್ತ ಪೂಜೆ ಹಾಗೂ ರಾತ್ರಿ ರಂಗಪೂಜೆ ನಡೆಯಲಿದೆ.

ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ 14ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top