ಮಾನಸಿಕ, ದೈಹಿಕ ದೃಢತೆಗೆ ಈಜು, ಕ್ರೀಡೆ ಸಹಕಾರಿ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಪಾರ್ಥ ವಾರಣಾಸಿ
ಪುತ್ತೂರು: ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ದೃಢತೆಯನ್ನು ಸಾಧಿಸಲು ಈಜು ಅಥವಾ ಇನ್ನಿತರ ಕ್ರೀಡಾ ಚಟುವಟಿಕೆಗಳು ತುಂಬಾ ಸಹಕಾರಿಯಾಗುತ್ತವೆ ಎಂದು ಈಜು ತರಬೇತುದಾರ, ಸರ್ಫ್ ಲೈವ್ ಸೇವಿಂಗ್ ಇಂಡಿಯಾದ ನಿರ್ದೇಶಕ ಪಾರ್ಥ ವಾರಣಾಸಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನರಗಳ ಪುನಶ್ಚೇತನದ ಮೂಲಕ ಜೀವ ಉಳಿಸುವ ಕೌಶಲ್ಯ ಎನ್ನುವ ವಿಷಯದ ಬಗ್ಗೆ ಮಾತನಾಡಿದ ಇವರು […]









