ನಾಳೆ (ಫೆ.27) : ಶಾಂತಿಗೋಡು ಹಿ.ಪ್ರಾ.ಶಾಲೆಯಲ್ಲಿ “ಉಚಿತ ಕಾನೂನು ಅರಿವು-ನೆರವು  ಕಾರ್ಯಕ್ರಮ”

ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ನೇತೃತ್ವದಲ್ಲಿ ಹುಬ್ಬಳ್ಳಿ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕೋಶ, ನರಿಮೊಗರು ಗ್ರಾಪಂ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ “ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಹಾಗೂ ಕಾನೂನು ಮಾಹಿತಿ ಸಮೀಕ್ಷೆ ಫೆ.27 ಸೋಮವಾರ ಬೆಳಿಗ್ಗೆ 9.30 ಕ್ಕೆ ಶಾಂತಿಗೋಡು ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ. ನರಿಮೊಗರು ಗ್ರಾಪಂ ಅಧ್ಯಕ್ಷೆ ವಿದ್ಯಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಎ.ಪಿ. ಅಧ್ಯಕ್ಷತೆ ವಹಿಸುವರು. ಮುಖ್ಯ […]

ನಾಳೆ (ಫೆ.27) : ಶಾಂತಿಗೋಡು ಹಿ.ಪ್ರಾ.ಶಾಲೆಯಲ್ಲಿ “ಉಚಿತ ಕಾನೂನು ಅರಿವು-ನೆರವು  ಕಾರ್ಯಕ್ರಮ” Read More »

ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ, ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ಧಾರ್ಮಿಕ ಸಭೆ, ಸನ್ಮಾನ

ಕಡಬ: ಕುದ್ಮಾರು ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ಫೆ. 25ರಂದು ಸಂಜೆ ಧಾರ್ಮಿಕ ಸಭೆ ನಡೆಯಿತು. ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ದೈವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್ ಕೆ.ಎನ್. ಕಾರ್ಲಾಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರದೀಪ್ ಆರ್. ಗೌಡ ಅರುವಗುತ್ತು ಉದ್ಘಾಟಿಸಿದರು. ಇದೇ ಸಂದರ್ಭ ಭಾರತೀಯ ಭೂಸೇನೆಯ ಮಾಜಿ ಸುಬೇದಾರ್ ರವಿಚಂದ್ರ ಮಾರ್ಕಜೆ, ಭಾರತೀಯ ಭೂಸೇನೆಯ

ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ, ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ಧಾರ್ಮಿಕ ಸಭೆ, ಸನ್ಮಾನ Read More »

ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ | ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ

ಪುತ್ತೂರು : ಬನ್ನೂರಿನ ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಹಸಿರುವಾಣಿ ಮೆರವಣಿಗೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠದೂರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರಿಗೆ ಭಗವಾಧ್ವಜ ನೀಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ  ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನ ಕಾಯಿ ಹೊಡೆದು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಪುರಸಭಾ ಸದಸ್ಯ ಪಿ ಜಿ ಜಗನ್ನಿವಾಸ ರಾವ್, ಮುರಳಿ ಕೃಷ್ಣಭಟ್ ಹಸಂತಡ್ಕ,ಜಯಾನಂದ ವಕೀಲರು, ಸುಬ್ರಹ್ಮಣ್ಯ

ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ | ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ Read More »

ಎಸ್‌ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಅರ್ಪಿಸುವ ಕಲೋಪಾಸನಾ-2023 ಕ್ಕೆ ಚಾಲನೆ

ಪುತ್ತೂರು : ಕಲೆ ಜೀವಂತವಿರಬೇಕಾದರೆ, ಉಳಿಯಬೇಕಾದರೆ ಕಲಾ ಪೋಷಕರು, ಅಭಿಮಾನಿಗಳು, ಕಲಾವಿದರ ಕೂಡುವಿಕೆ ಅಗತ್ಯ. ಇದರಿಂದ ಕಲೋತ್ಸವ ನಡೆಯಲು ಸಾಧ್ಯ ಎಂದು ಮಂಗಳೂರು ಕೆಎಂಸಿಯ ಎಂಡಿ ಡಾ.ಎಂ.ಚಕ್ರಪಾಣಿ ಅಭಿಪ್ರಾಯಪಟ್ಟರು. ಅವರು ಶನಿವಾರ ಸಂಜೆ ಎಸ್‌ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ವತಿಯಿಂದ ಮೂರು ದಿನಗಳ ಕಾಲ ನಡೆಯುವ 19ನೇ ವರ್ಷದ ಸಾಂಸ್ಕೃತಿಕ ಕಲಾಸಂಭ್ರಮ ಕಲೋಪಾಸನಾ-2023 ನ್ನು ಎಸ್‌ಡಿಪಿ ರೆಮಿಡೀಸ್ ರಿಸರ್ಚ್ ಸೆಂಟರ್ ಆವರಣದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ನಾಡಿನ ಉತ್ತಮ ಕಲಾವಿದರನ್ನು ಕರೆಸಿ ಸಂಗೀತ, ಯಕ್ಷಗಾನ

ಎಸ್‌ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಅರ್ಪಿಸುವ ಕಲೋಪಾಸನಾ-2023 ಕ್ಕೆ ಚಾಲನೆ Read More »

ಫೆ.28 : ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ | ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ

ಪುತ್ತೂರು : ಕರ್ನಾಟಕ ರಾಜ್ಯ ಎಸ್ ಡಿಎಂಸಿ ಜಿಲ್ಲಾ ಸಮನ್ವಯ ವೇದಿಕೆ ವತಿಯಿಂದ ದ,ಕ.ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಎಸ್‍ಡಿಎಂಸಿಯ 21ನೇ ವರ್ಷಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ ಫೆ.28 ಮಂಗಳವಾರ ಮಾಣಿ ನೆರಳಕಟ್ಟೆ ಜಯಪ್ರಿಯ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ರಾಜ್ಯ ಎಸ್‍ಡಿಎಂಸಿ ಸಮನ್ವಯ ವೇದಿಕೆ ಅಧ್ಯಕ್ಷ  ಮೊಯಿದೀನ್‍ ಕುಟ್ಟಿ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ

ಫೆ.28 : ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ | ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ Read More »

ಕಬಕ: ಸಂಪೂರ್ಣ ಸುರಕ್ಷಾ ನೋಂದಾವಣೆಗೆ ಚಾಲನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಬಕ ಒಕ್ಕೂಟದ ಸಂಪೂರ್ಣ ಸುರಕ್ಷಾ ಇದರ ನೋಂದಾವಣೆಯ ಉದ್ಘಾಟನೆ ಶುಭಶ್ರೀ ಸಂಘದ ಸದಸ್ಯೆ ಜಾನಕಿ ಅವರ ಮನೆಯಲ್ಲಿ ನಡೆಯಿತು. ಜಾನಕಿ ಅವರು ನೋಂದಾವಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಒಕ್ಕೂಟದ ಉಪಕಾರ್ಯದರ್ಶಿ ಮನೋಹರ್, ಕಾಮನ್ ಸರ್ವೀಸ್ ಸೆಂಟರ್‍ನ ವಿ.ಎಲ್.ಇ. ರಮ್ಯ, ಸೇವಾಪ್ರತಿನಿಧಿ ಎನ್. ರಾಧಾಕೃಷ್ಣ ಗೌಡ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಬಕ: ಸಂಪೂರ್ಣ ಸುರಕ್ಷಾ ನೋಂದಾವಣೆಗೆ ಚಾಲನೆ Read More »

ಕುಂಜೂರುಪಂಜ: ಸಂಪೂರ್ಣ ಸುರಕ್ಷಾ ನೋಂದಾವಣೆಗೆ ಚಾಲನೆ

ಪುತ್ತೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ವಲಯದ ಕುಂಜೂರುಪಂಜ ಒಕ್ಕೂಟದ ಶ್ರೀ ಭ್ರಮಾರಿ ಸಂಘದಲ್ಲಿ 2023 – 24ನೇ ಸಾಲಿನ ಸಂಪೂರ್ಣ ಸುರಕ್ಷಾ ನೋಂದಾವಣೆಗೆ ಚಾಲನೆ ನೀಡಲಾಯಿತು. ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ವಸಂತಿ ಅವರು ದೀಪ ಬೆಳಗಿಸಿ, ಸಂಪೂರ್ಣ ಸುರಕ್ಷಾ ನೋಂದಾವಣೆಗೆ ಚಾಲನೆ ನೀಡಿದರು. ಸೇವಾಪ್ರತಿನಿಧಿ ಆಶಾಲತಾ ಅವರು ಸಂಪೂರ್ಣ ಸುರಕ್ಷಾದ  ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ  ಉಪಾಧ್ಯಕ್ಷೆ ಉಮಾವತಿ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕುಂಜೂರುಪಂಜ: ಸಂಪೂರ್ಣ ಸುರಕ್ಷಾ ನೋಂದಾವಣೆಗೆ ಚಾಲನೆ Read More »

ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅನಾವರಣಗೊಳಿಸಿದರು. ಸ್ವಾತಂತ್ಯ್ರೋತ್ತರ ಕರ್ನಾಟಕದ ಅಂದರೆ ಅಂದಿನ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾಗಿದ್ದವರು ಕೆ. ಸಿ. ರೆಡ್ಡಿ. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಾಣ ಮಾಡಿದವರು. ಅದೇ ರೀತಿ ಕರ್ನಾಟಕಕ್ಕೆ ಮೊದಲ ಮುಖ್ಯಮಂತ್ರಿಯಾದವರು ಕೆ.ಸಿ. ರೆಡ್ಡಿಯವರು. 1902-1976 ರವರೆಗೆ ಜೀವಿಸಿದ್ದ ಅವರು, ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದವರು. ಚೆಂಗಲರಾಯ ರೆಡ್ಡಿ ಎನ್ನುವ ಹೆಸರಿನಲ್ಲಿ ಮೈಸೂರು

ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಕಂಚಿನ ಪ್ರತಿಮೆ ಅನಾವರಣ Read More »

ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿಯಿಂದ 2 ಎಗೆ ವರ್ಗಾಯಿಸಬೇಕು | ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಬಂಟರ ಸಂಘಗಳ ಒಕ್ಕೂಟದಿಂದ ಬೇಡಿಕೆ ಸಲ್ಲಿಕೆ

ಮಂಗಳೂರು : ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿ ಯಿಂದ 2ಎಗೆ ವರ್ಗಾಯಿಸಬೇಕು ಎಂಬ ಬೇಡಿಕೆಯ ಮನವಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ. ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಉತ್ತರ ನೀಡಲಿದ್ದೇವೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‍ ಶೆಟ್ಟಿ ಹೇಳಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಶುಕ್ರವಾರ ಮಂಗಳೂರಿನ ಬಂಟ್ಸ್ ಹಾಸ್ಟೇಲ್‍ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಲ್ಲಾ ಸಮಾಜಕ್ಕೂ ನಿಗಮ, ಸರಕಾರದಿಂದ ಸೌಲಭ್ಯ ದೊರೆಯುತ್ತಿದೆ.

ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿಯಿಂದ 2 ಎಗೆ ವರ್ಗಾಯಿಸಬೇಕು | ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಬಂಟರ ಸಂಘಗಳ ಒಕ್ಕೂಟದಿಂದ ಬೇಡಿಕೆ ಸಲ್ಲಿಕೆ Read More »

ಬೇಡಿಕೆ ಈಡೇರದ ಹಿನ್ನಲೆ | ಮಾ.1 ರಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಎಲ್ಲಾ ಇಲಾಖೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ

ಪುತ್ತೂರು : ಕರ್ನಾಟಕ ರಾಜ್ಯ ಸರಕಾರಿ  ನೌಕರರ ವೇತನ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜ್ಯಾರಿಗೊಳಿಸಲು ಸರಕಾರವನ್ನು ಒತ್ತಾಯಿಸಿ ರಾಜ್ಯಾದ್ಯಮತ ಮಾ.1 ರಿಂದ ಸರಕಾರಿ ನೌಕರರು ನಡೆಸುವ ಅನಿರ್ಧಿಷ್ಟಾವಧಿ ಮುಷ್ಕರದ ಹಿನ್ನಲೆಯಲ್ಲಿ ಪುತ್ತೂರು ತಾಲೂಕಿನಲ್ಲೂ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ಶಿವಾನಂದ ಆಚಾರ್ಯ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ 2023-24ನೇ ಸಾಲಿನ ಬಜೆಟ್‍ ಮಂಡನೆ ವೇಳೆ ಸರಕಾರಿ

ಬೇಡಿಕೆ ಈಡೇರದ ಹಿನ್ನಲೆ | ಮಾ.1 ರಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಎಲ್ಲಾ ಇಲಾಖೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ Read More »

error: Content is protected !!
Scroll to Top