ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಿಎಂ ಭೇಟಿ | ಕುಕ್ಕೆಯಲ್ಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಿದ ಸುಳ್ಯ ವಿಧಾನಸಭಾ ಅಭ್ಯರ್ಥಿ ಭಾಗೀರಥಿ ಮುರುಳ್ಯ

ಪುತ್ತೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಈ ಬಾರಿಯ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುಖ್ಯಮಂತ್ರಿಯನ್ನು ಭೇಟಿ ಮಾಡಿದರು. ಸುಳ್ಯ ಬಿಜೆಪಿ ಮುಖಂಡರ ಜತೆ ಸಿಎಂ.ಅವರನ್ನು ಭೇಟಿ ಮಾಡಿ ಸ್ವಾಗತಿಸಿದರು. ಸಚಿವ ಅಂಗಾರರ ಬದಲಿಗೆ ಸುಳ್ಯ ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಅವರನ್ನು ಮಂಗಳವಾರ ರಾತ್ರಿ ಘೋಷಣೆ ಮಾಡಲಾಗಿತ್ತು. ಅದರ ಬೆನ್ನಲ್ಲೆ ಸಿಎಂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ […]

ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಿಎಂ ಭೇಟಿ | ಕುಕ್ಕೆಯಲ್ಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಿದ ಸುಳ್ಯ ವಿಧಾನಸಭಾ ಅಭ್ಯರ್ಥಿ ಭಾಗೀರಥಿ ಮುರುಳ್ಯ Read More »

ಹಿಂದೂ ಕಾರ್ಯಕರ್ತರ ಧ್ವನಿಯ ವಿರುದ್ಧವಾಗಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೊರಟಿರುವುದು ವಿಷಾಧನೀಯ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಚುನಾವಣೆ ಜ್ವರ ಶುರುವಾಗಿದ್ದು, ಹಿಂದೂ ಸಮಾಜಕ್ಕೆ ಶಕ್ತಿ ನೀಡುವ ಯೋಚನೆಯಡಿ ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯ ಆಯ್ಕೆ ನಡೆಯಬೇಕಿತ್ತು. ಆದರೆ ಕಾರ್ಯಕರ್ತರ ಧ್ವನಿಯ ವಿರುದ್ಧವಾಗಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೊರಟಿರುವುದು ವಿಷಾಧನೀಯ ಎಂದು ಹಿಂದೂ ಮುಖಂಡ, ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಟಿಕೇಟ್ ವಂಚಿತರಾದ ಹಿನ್ನಲೆಯಲ್ಲಿ ಬುಧವಾರ ಸಂಜೆ ಸಾಲ್ಮರ ಕೊಟೇಚಾ ಹಾಲ್ ನಲ್ಲಿ ನಡೆದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಸಭೆಯಲ್ಲಿ ಅವರು

ಹಿಂದೂ ಕಾರ್ಯಕರ್ತರ ಧ್ವನಿಯ ವಿರುದ್ಧವಾಗಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೊರಟಿರುವುದು ವಿಷಾಧನೀಯ : ಅರುಣ್ ಕುಮಾರ್ ಪುತ್ತಿಲ Read More »

ಮಠಂದೂರು ಮನೆಗೆ ಆಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆತ್ತಿಕೊಂಡ ಕಾರ್ಯಕರ್ತರು | ಯಾವ ಭರವಸೆ ಮೇಲೆ ಬಿಜೆಪಿಯಲ್ಲಿ ಕೆಲಸ ಮಾಡಲಿ? | ಮಂಡಲ, ಜಿಲ್ಲೆಯ ಮುಖಂಡರಿಗೆ ಅಧಿಕಾರವೇ ಇಲ್ಲವೇ? ಹಾಗಿದ್ದರೆ ನೀವು ಇರುವುದಾದರೂ ಯಾಕೆ? | ಪ್ರಾಮಾಣಿಕ ಕೆಲಸಗಾರರಿಗೆ ಬೆಲೆ ಇಲ್ಲ ಏಕೆ?

ಪುತ್ತೂರು: ಬುಧವಾರ ಸಂಜೆ ಸಂಜೀವ ಮಠಂದೂರು ಅವರ ಮನೆಗಾಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹಾಗೂ ಕ್ಯಾ. ಗಣೇಶ್ ಕಾರ್ಣಿಕ್ ಅವರನ್ನು ಕಾರ್ಯಕರ್ತರು ತರಾಟೆಗೆತ್ತಿಕೊಂಡ ಘಟನೆ ನಡೆಯಿತು. ಮನೆಗೆ ಆಗಮಿಸುತ್ತಿದ್ದಂತೆ ದಾರಿಮಧ್ಯವೇ ತಡೆದ ಕಾರ್ಯಕರ್ತರು, ತಮ್ಮ ಆಕ್ರೋಶ ಹೊರಗೆಡವಿದರು. ಸಂಜೀವ ಮಠಂದೂರು ಅವರನ್ನು ಕಡೆಗಣಿಸಲು ಕಾರಣವೇನು ಎಂದು ಪ್ರಶ್ನಿಸಿದ ಕಾರ್ಯಕರ್ತರು, ಹಾಗಾದರೆ ಮಂಡಲ, ಜಿಲ್ಲೆಯ ಪದಾಧಿಕಾರಿಗಳ ನಿರ್ಣಯಕ್ಕೆ ಬೆಲೆ ಇಲ್ಲವೇ? ಬೆಲೆ ಇಲ್ಲ ಎಂದಾದರೆ ನೀವು ಆ ಹುದ್ದೆಯಲ್ಲಿ ಇರುವುದಾದರೂ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಜೀವ ಮಠಂದೂರು

ಮಠಂದೂರು ಮನೆಗೆ ಆಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆತ್ತಿಕೊಂಡ ಕಾರ್ಯಕರ್ತರು | ಯಾವ ಭರವಸೆ ಮೇಲೆ ಬಿಜೆಪಿಯಲ್ಲಿ ಕೆಲಸ ಮಾಡಲಿ? | ಮಂಡಲ, ಜಿಲ್ಲೆಯ ಮುಖಂಡರಿಗೆ ಅಧಿಕಾರವೇ ಇಲ್ಲವೇ? ಹಾಗಿದ್ದರೆ ನೀವು ಇರುವುದಾದರೂ ಯಾಕೆ? | ಪ್ರಾಮಾಣಿಕ ಕೆಲಸಗಾರರಿಗೆ ಬೆಲೆ ಇಲ್ಲ ಏಕೆ? Read More »

ಬಿಜೆಪಿ 2ನೇ ಪಟ್ಟಿ ಇಂದೇ ರಿಲೀಸ್: ಬಿ.ಎಸ್.ವೈ.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಜೆಪಿ ಬಿಡುಗಡೆ ಮಾಡಿದ್ದು, 2ನೇ ಪಟ್ಟಿಯನ್ನು ಬುಧವಾರ ರಾತ್ರಿಯೇ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಬಿಜೆಪಿ 125ರಿಂದ 130 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಳ್ಳಲಿದ್ದು, ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ತಿಳಿಸಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಟಿಕೇಟ್ ನೀಡುವುದು ಖಚಿತ ಎಂದು ವಿಶ್ವಾಸ

ಬಿಜೆಪಿ 2ನೇ ಪಟ್ಟಿ ಇಂದೇ ರಿಲೀಸ್: ಬಿ.ಎಸ್.ವೈ. Read More »

ತಪ್ಪಿದ ಟಿಕೆಟ್‌ – ಆರ್ ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಆರ್

ತಪ್ಪಿದ ಟಿಕೆಟ್‌ – ಆರ್ ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ Read More »

ಮಠಂದೂರಿಗೆ ಟಿಕೇಟ್ ನಿರಾಕರಣೆ : ಕಾರ್ಯಕರ್ತರ ಅಸಮಾಧಾನ | ಹೈಕಮಾಂಡ್ ಭಿನ್ನ ನಿಲುವೇ ಅಸಮಾಧಾನಕ್ಕೆ ಕಾರಣ | ಕಾರ್ಯಕರ್ತರು, ಮುಖಂಡರು, ರಾಜ್ಯ ನಾಯಕರು ಪರವಾಗಿದ್ದರೂ ಟಿಕೇಟ್ ನಿರಾಕರಣೆ ಏಕೆ?

ಪುತ್ತೂರು: ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಹೊರತಾಗಿಯೂ ಸಂಜೀವ ಮಠಂದೂರು ಅವರಿಗೆ ಟಿಕೇಟ್ ನಿರಾಕರಿಸಿರುವ ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಭಿನ್ನ ನಿಲುವಿನ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅಭಿವೃದ್ಧಿ ಕಾರ್ಯಗಳು ಮಾತ್ರವಲ್ಲ ಮುಂದಿನ 50 ವರ್ಷಗಳಲ್ಲಿ ಪುತ್ತೂರಿನ ಅವಶ್ಯಕತೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಆದರೆ ಇವ್ಯಾವುದನ್ನು ಲೆಕ್ಕಿಸದೇ, ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನು ಬಿಜೆಪಿ ವರಿಷ್ಠರು ನಿರ್ಲಕ್ಷಿಸಿದ್ದಾರೆ. ಕಾರಣವೇ ಇಲ್ಲದೇ, ಹಾಲಿ ಶಾಸಕರಿಗೆ ಟಿಕೇಟ್ ನಿರಾಕರಿಸಿರುವುದು ಸರಿಯಲ್ಲ. ಇದರ ಪರಿಣಾಮವನ್ನು ಚುನಾವಣೆಯಲ್ಲಿ ಎದುರಿಸಬೇಕಾಗುವ

ಮಠಂದೂರಿಗೆ ಟಿಕೇಟ್ ನಿರಾಕರಣೆ : ಕಾರ್ಯಕರ್ತರ ಅಸಮಾಧಾನ | ಹೈಕಮಾಂಡ್ ಭಿನ್ನ ನಿಲುವೇ ಅಸಮಾಧಾನಕ್ಕೆ ಕಾರಣ | ಕಾರ್ಯಕರ್ತರು, ಮುಖಂಡರು, ರಾಜ್ಯ ನಾಯಕರು ಪರವಾಗಿದ್ದರೂ ಟಿಕೇಟ್ ನಿರಾಕರಣೆ ಏಕೆ? Read More »

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ

ವಿಟ್ಲ : ಗೋಣಿ ಚೀಲ ಬದಲಿಸಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು‌ ಜೀತೋ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಕ್ಕುಡ ಸಮೀಪ ವಿಟ್ಲ ಪೋಲಿಸರು ಬಂಧಿಸಿದ್ದು, ವಾಹನ ಸಹಿತ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತನಾಗಿರುವ ವಾಹನದ ಚಾಲಕ ಕುದ್ದುಪದವು ಸುರುಳಿಮೂಲೆ ನಿವಾಸಿ ಅಲಿ ಎಂಬಾತನ ವಿಚಾರಣೆ ವೇಳೆ ಪಡಿತರ ಅಕ್ಕಿಯ ಮಾಫಿಯಾ ದಂಧೆ ಬಯಲಾಗಿದೆ.ಆರೋಪಿಯನ್ನು ವಿಚಾರಣೆ ನಡೆಸಿ ಆ ಬಳಿಕ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಅಡ್ಯನಡ್ಕ ಸಮೀಪದ ಮರಕ್ಕಿಣಿ ನಿವಾಸಿ JSW

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ Read More »

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಭೇಟಿ

ಮಂಗಳೂರು : ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡದ ವಿವಿಧ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಕುಟುಂಬಸಮೇತರಾಗಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು, ಮಂಜುನಾಥನ ದರ್ಶನ ಪಡೆಯಲಿದ್ದಾರೆ. ದೇವಾಲಯದಲ್ಲಿ ವಿಷೇಶ ಪೂಜೆ‌ ಸಲ್ಲಿಸಿದ ಬಳಿಕ ಧರ್ಮಸ್ಥಳದಿಂದ‌ ಕುಕ್ಕೆ‌ ಸುಬ್ರಹ್ಮಣ್ಯಕ್ಕೂ ಭೇಟಿ‌ ನೀಡಲಿದ್ದಾರೆ. ಇಂದು ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಗುರುವಾರ ಮುಂಜಾನೆ‌ ಕೊಲ್ಲೂರಿಗೂ ತೆರಳಲಿರುವ ಅವರು ನಂತರ ಕಟೀಲು ದೇಗುಲ ಮತ್ತು ಉಳ್ಳಾಲದ ಪುರಾಣ ಪ್ರಸಿದ್ದ ಸೋಮನಾಥ ದೇಗುಲಕ್ಕೆ

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಭೇಟಿ Read More »

ಶ್ವೇತಾಂಬಿಕಾ ಪಿ. ಅವರಿಗೆ ಪಿ.ಎಚ್.ಡಿ 

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ  ಶ್ವೇತಾಂಬಿಕಾ ಪಿ. ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ನೀಡಿದೆ. ಡಾ.ಎಂ.ಆರ್. ಮದ್ದಾನಿ ಅವರ ಮಾರ್ಗದರ್ಶನದಲ್ಲಿ ‘ಅ ಸ್ಟಡಿ ಒನ್ ದ ಇಫೆಕ್ಟಿವ್ನೆಸ್ ಓಫ್ ಪ್ಲಾಂಟ್ ಎಕ್ಸಟ್ರಾಕ್ಟಸ್ ಆಸ್ ಕೊರೋಸಿವ್ ಇನ್ಹಿಬಿಟರ್ಸ್ ಓನ್ ಮೈಲ್ಡ್ ಸ್ಟೀಲ್ ಆಂಡ್ ಅಲುಮಿನಿಯಂ’ ಎಂಬ ಪ್ರಬಂಧಕ್ಕಾಗಿ ರಸಾಯನ ಶಾಸ್ತ್ರದಲ್ಲಿ ಪಿಎಚ್‍ಡಿ ಪದವಿ ಲಭಿಸಿದೆ. ವಿಜಯಲಕ್ಷ್ಮಿ ಆರ್.ಭಟ್ ಹಾಗೂ ರಾಘವೇಂದ್ರ ಭಟ್ ಪೆರ್ನಾಜೆ ಅವರ ಪುತ್ರಿಯಾಗಿದ್ದು, ನವೀನ್ ಕುಮಾರ್ ಕೆ. ಅವರ ಪತ್ನಿ. 

ಶ್ವೇತಾಂಬಿಕಾ ಪಿ. ಅವರಿಗೆ ಪಿ.ಎಚ್.ಡಿ  Read More »

ಉಕ್ರೇನ್‌ಗೆ ಹೆಚ್ಚುವರಿ ನೆರವು ನೀಡುವಂತೆ ಕೋರಿ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಪ್ರಧಾನಿ ಮೋದಿಗೆ ಪತ್ರ

ದೆಹಲಿ : ರಷ್ಯಾ- ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಉಕ್ರೇನ್‌ ಉಪ ವಿದೇಶಾಂಗ ಸಚಿವೆ ಎಮಿನೆ ಜಪರೊವಾ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಖಾತೆ ಸಚಿವೆ ಮೀನಾಕ್ಷಿ ಲೇಖಿ ಅವರಿಗೆ ಈ ಪತ್ರವನ್ನು ಹಸ್ತಾಂತರಿಸಿದ್ದಾರೆ. ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ

ಉಕ್ರೇನ್‌ಗೆ ಹೆಚ್ಚುವರಿ ನೆರವು ನೀಡುವಂತೆ ಕೋರಿ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಪ್ರಧಾನಿ ಮೋದಿಗೆ ಪತ್ರ Read More »

error: Content is protected !!
Scroll to Top