ಹೊಸ ಮುಖಗಳ ಆಯ್ಕೆಗೆ ಮುಂದಾದ ಬಿಜೆಪಿ | ಕಾರ್ಯಕರ್ತರ ಅಸಮಾಧಾನ, ತಟಸ್ಥ ಧೋರಣೆಯ ಎಚ್ಚರಿಕೆ | ಅಭಿವೃದ್ಧಿ ಹರಿಕಾರ ಸಂಜೀವ ಮಠಂದೂರೇ ಅಭ್ಯರ್ಥಿಯಾಗಲೆಂದು ಒತ್ತಾಯ

ಪುತ್ತೂರು: ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲು ಇನ್ನೂ ವಿಳಂಬ ಮಾಡುತ್ತಿರುವ ಬಿಜೆಪಿ ವರಿಷ್ಠರ ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ತಾವಿರುವ ಹುದ್ದೆಗೆ ರಾಜೀನಾಮೆ ನೀಡಿ, ತಾವು ಫೀಲ್ಡಿಗೆ ಹೋಗುವುದೇ ಇಲ್ಲ ಎಂಬ ಅಸಮಾಧಾನವನ್ನು ಹೊರಹಾಕಿರುವ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಉಪ್ಪಿನಂಗಡಿ, ಬಜತ್ತೂರು, ಹಿರೇಬಂಡಾಡಿ ಭಾಗದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಂಜೀವ ಮಠಂದೂರು ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸಂಜೀವ ಮಠಂದೂರು ಅವರನ್ನು ಮತ್ತೊಮ್ಮೆ ಶಾಸಕ ಅಭ್ಯರ್ಥಿಯಾಗಿ ಘೋಷಿಸಬೇಕು. […]

ಹೊಸ ಮುಖಗಳ ಆಯ್ಕೆಗೆ ಮುಂದಾದ ಬಿಜೆಪಿ | ಕಾರ್ಯಕರ್ತರ ಅಸಮಾಧಾನ, ತಟಸ್ಥ ಧೋರಣೆಯ ಎಚ್ಚರಿಕೆ | ಅಭಿವೃದ್ಧಿ ಹರಿಕಾರ ಸಂಜೀವ ಮಠಂದೂರೇ ಅಭ್ಯರ್ಥಿಯಾಗಲೆಂದು ಒತ್ತಾಯ Read More »

ಪುತ್ತೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಪುತ್ತೂರು : ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟ್ಟಂಪಾಡಿಯ ಗುಮ್ಮಟಗದ್ದೆ ಎಂಬಲ್ಲಿ ಸಂಭವಿಸಿದೆ. ಪುಣ್ಯಶ್ರೀ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಎ. 4 ರಂದು ಇವರು ತನ್ನ ಇಬ್ಬರು ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದು, ಬಳಿಕ ಅಲ್ಲಿಯೇ ಇದ್ದರು. ಎ. 10 ರಂದು ರಾತ್ರಿ ಸುಮಾರು ಸಂಜೆ 3.55 ರ ವೇಳೆಗೆ ತನ್ನ ಪತಿ ಪುರುಷೋತ್ತಮ ರವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ನಂತರ ರಾತ್ರಿ ಸುಮಾರು 10.00 ಗಂಟೆಯ ವೇಳೆಗೆ ತಮ್ಮ ಮನೆಯ ಬಳಿಗೆ ಬಂದು

ಪುತ್ತೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ Read More »

ಏ.16 : ಅಣಿಲೆ ವೆಂಕಪ್ಪ ರೈ ಪ್ರಶಸ್ತಿ ಪ್ರದಾನ| ಈ ಬಾರಿ ನಾಲ್ವರಿಗೆ ಪ್ರಶಸ್ತಿ ಪ್ರದಾನ

ಪುತ್ತೂರು: ಮಾಡಾವು ನೂಜಿ ಡಾ. ಪಿ. ಬಿ. ರೈ ಪ್ರತಿಷ್ಠಾನದಿಂದ ನೀಡಲಾಗುವ ಅಣಿಲೆ ವೆಂಕಪ್ಪ ರೈ ಪ್ರಶಸ್ತಿ ಪ್ರದಾನ ಸಮಾರಂಭವು ಏ.16 ರಂದು ಬೆಳಗ್ಗೆ ದಂಬೆಕಾನ ಬಾಳಮೂಲೆ ಪಟ್ಟೆ ಮನೆಯಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ 100 ಕ್ಕೂ ಅಧಿಕ ಮಂದಿ ಸಮಾಜದ ವಿವಿಧ ಕ್ಷೇತ್ರಗಳ ಮೇರು ಸಾಧಕರು ಹಾಗೂ ತೆರೆಮರೆಯ ಸಾಧಕರನ್ನು ಗುರುತಿಸಿ ಪ್ರಶಸ್ತಿಯ ಗೌರವ ನೀಡಲಾಗಿದೆ ಎಂದರು. ಸಾಧಕರಾದ ದಂಬೆಕಾನ

ಏ.16 : ಅಣಿಲೆ ವೆಂಕಪ್ಪ ರೈ ಪ್ರಶಸ್ತಿ ಪ್ರದಾನ| ಈ ಬಾರಿ ನಾಲ್ವರಿಗೆ ಪ್ರಶಸ್ತಿ ಪ್ರದಾನ Read More »

ಅಕ್ರಮ ಎಸಗಿದ ಎಸ್‌ಐ ಅಭ್ಯರ್ಥಿಗಳ ಪಟ್ಟಿ ನೀಡಿ : ಹೈಕೋರ್ಟ್‌

ಬೆಂಗಳೂರು : ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಮತ್ತು ಲಿಖಿತ ಪರೀಕ್ಷೆ ರದ್ದುಪಡಿಸಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ 145 ಮಂದಿ ಅಭ್ಯರ್ಥಿಗಳ ಪೈಕಿ ಯಾರೆಲ್ಲಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಜೂ.15ರೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಎನ್‌.ವಿ. ಚಂದನ್‌, ವಸಂತ್‌ ನಾಯಕ್‌, ಆಶಾ ಸಣಕಲ್ಲ ಮತ್ತು ರಾಜೇಶ್ವರಿ ಸೇರಿದಂತೆ 145 ಮಂದಿ ಅಭ್ಯರ್ಥಿಗಳು ಪ್ರತ್ಯೇಕವಾಗಿ ಸಲ್ಲಿಸಿರುವ

ಅಕ್ರಮ ಎಸಗಿದ ಎಸ್‌ಐ ಅಭ್ಯರ್ಥಿಗಳ ಪಟ್ಟಿ ನೀಡಿ : ಹೈಕೋರ್ಟ್‌ Read More »

ಕಾಲೇಜು, ವಿಶ್ವವಿದ್ಯಾಲಯಗಳು ಶುಲ್ಕ ಸಂಗ್ರಹಿಸಲು ಯುಸಿಎಂಎಸ್ ಬಳಸಬೇಕು : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಶುಲ್ಕ ಸಂಗ್ರಹಣೆ ಮತ್ತು ಇತರ ಹಣಕಾಸು ಪ್ರಕ್ರಿಯೆಗಳಿಗಾಗಿ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಯನ್ನು ಕಟ್ಟುನಿಟ್ಟಾಗಿ ಬಳಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ವಿವಿಧ ಪ್ರಕ್ರಿಯೆಗಳನ್ನು ಕೈಗೊಳ್ಳಲು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಒಂದೇ ಡಿಜಿಟಲ್ ವೇದಿಕೆ ಒದಗಿಸುವ ಮಾರ್ಗವಾಗಿ UUCMS ಅನ್ನು ಕಳೆದ ವರ್ಷ ಜಾರಿಗೆ ತರಲಾಯಿತು. ಶಿಕ್ಷಣ ಇಲಾಖೆಯು ಈ ವ್ಯವಸ್ಥೆಯ ಅಡಿಯಲ್ಲಿ 10 ಮಾಡ್ಯೂಲ್‌ಗಳನ್ನು

ಕಾಲೇಜು, ವಿಶ್ವವಿದ್ಯಾಲಯಗಳು ಶುಲ್ಕ ಸಂಗ್ರಹಿಸಲು ಯುಸಿಎಂಎಸ್ ಬಳಸಬೇಕು : ರಾಜ್ಯ ಸರ್ಕಾರ ಆದೇಶ Read More »

ಅಂಬಿಕಾದಲ್ಲಿ ನಡೆದ ಬಾಲಸ್ತುತಿ ಸ್ಪರ್ಧೆ |  ಸುದೀಪ್ತಿ ಹಾಗೂ ವಿಖ್ಯಾತ್‌ಗೆ ’ಬಾಲಸ್ತುತಿ ರತ್ನ’ ಬಿರುದು ಪ್ರದಾನ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಮುನ್ನಡೆಯುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ವಿಷು ಹಬ್ಬದ ಪ್ರಯುಕ್ತ ಆಯೋಜಿಸಲಾದ ಹಿಂದೂ ಧಾರ್ಮಿಕ ಶ್ಲೋಕಗಳ ಕಂಠಪಾಠ ಸ್ಪರ್ಧೆ ಬಾಲಸ್ತುತಿ – 2023 4 ವರ್ಷದ ಮಕ್ಕಳ ವಿಭಾಗದಲ್ಲಿ ಸುದೀಪ್ತಿ ಹಾಗೂ 5ನೇ ವರ್ಷದ ಮಕ್ಕಳ ವಿಭಾಗದಲ್ಲಿ ವಿಖ್ಯಾತ್ ಪ್ರಥಮ ಸ್ಥಾನ ಗಳಿಸುವ ಮೂಲಕ ತಲಾ ಐದು ಸಾವಿರ ರೂಪಾಯಿ ಹಾಗೂ ಶಾರದಾಂಬೆಯ ಭಾವಚಿತ್ರ ಸಹಿತವಾದ ಪಾದುಕೆ ಬಹುಮಾನದೊಂದಿಗೆ ಬಾಲಸ್ತುತಿ ರತ್ನ ಬಿರುದಿಗೆ ಭಾಜನರಾಗಿದ್ದಾರೆ. ಸುದೀಪ್ತಿ ಪುತ್ತೂರಿನ

ಅಂಬಿಕಾದಲ್ಲಿ ನಡೆದ ಬಾಲಸ್ತುತಿ ಸ್ಪರ್ಧೆ |  ಸುದೀಪ್ತಿ ಹಾಗೂ ವಿಖ್ಯಾತ್‌ಗೆ ’ಬಾಲಸ್ತುತಿ ರತ್ನ’ ಬಿರುದು ಪ್ರದಾನ Read More »

ಡಿ ರೂಪಾ ವಿರುದ್ಧದ ನಿರ್ಬಂಧಕಾಜ್ಞೆ ತೆರವು : ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ

ಬೆಂಗಳೂರು : ಐಎಎಸ್ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಹೊರಡಿಸಿದ್ದ ನಿರ್ಭಂಧಕ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿದೆ. ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನ ಹೈಕೋರ್ಟ್ ಏಕಸದಸ್ಯ ಪೀಠ ತೆರವುಗೊಳಿಸಿ ಆದೇಶ ನೀಡಿದೆ. ಐಪಿಎಸ್ ಅಧಿಕಾರಿ ಡಿ.ರೂಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠವು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ತೆರವುಗೊಳಿಸಿ ಇಂದು ಆದೇಶಿಸಿದೆ. ಈಗ ರೂಪಾ ಮೌದ್ಗಿಲ್‌ ಅವರಿಗೆ

ಡಿ ರೂಪಾ ವಿರುದ್ಧದ ನಿರ್ಬಂಧಕಾಜ್ಞೆ ತೆರವು : ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ Read More »

ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ?!

ಬೆಂಗಳೂರು: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದಿರಲು ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ನಿರ್ಧರಿಸಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ- ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ- ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು

ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ?! Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮದ ಉದ್ಘಾಟನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶ ಮತ್ತು ಆಂತರಿಕ ಗುಣಮಟ್ಟ ಭರವಸೆಕೋಶಗಳ ಸಂಯುಕ್ತ ಆಶ್ರಯದಲ್ಲಿ ಯುನೈಟೆಡ್ ಸ್ಟೇಟ್ಸ್ ಮೂಲದ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತು ಇನ್ಶೂರೆನ್ಸ್ ಕಂಪನಿ ಓಪ್ಟಮ್ನ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಕಾಲೇಜಿನಲ್ಲಿ ಆಯೋಜಿಸಲಾಯಿತು. ಲಿಖಿತ ಪರೀಕ್ಷೆ ನಡೆಸುವ ಮೊದಲು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ಜು ಕಾಲೇಜಿನ ಪ್ರಾಂಶುಪಾಲ ವಂ ಡಾ| ಆಂಟೊನಿ ಪ್ರಕಾಶ್ ಮೊಂತೆರೊ ವಹಿಸಿ ಮಾತನಾಡಿ, ನೇಮಕಾತಿ ಕಾರ್ಯಕ್ರಮಗಳು ಅಭ್ಯರ್ಥಿಗಳಿಗೆ ತಮ್ಮ ಕೌಶಲ್ಯಗಳನ್ನು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮದ ಉದ್ಘಾಟನೆ Read More »

ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ | ಘೋಷಣೆಯಷ್ಟೇ ಬಾಕಿ

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ ಕೋಡಿಂಬಾಡಿ ಅಶೋಕ್ ಕುಮಾರ್ ರೈ ಅವರ ಹೆಸರು ಅಂತಿಮಗೊಂಡಿದೆ. ಇನ್ನು ಘೋಷಣೆಯಷ್ಟೇ ಬಾಕಿ. ಮುಂದಿನ ಒಂದೆರಡು‌ ದಿನದಲ್ಲಿ ಘೋಷಣೆಯೂ ಹೊರಬೀಳುವ ಸಾಧ್ಯತೆ ಇದೆ. ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸುಮಾರು ೧೪ ಮಂದಿಯ ಹೆಸರು ಮುಂಚೂಣಿಯಲ್ಲಿತ್ತು. ಇದರಲ್ಲಿ ಅಶೋಕ್ ಕುಮಾರ್ ರೈ ಹೆಸರು ಅಂತಿಮಗೊಂಡಿದೆ. ಶಕುಂತಳಾ ಶೆಟ್ಟಿ ಅವರ ಹೆಸರು ಕೊನೆಕ್ಷಣದಲ್ಲಿ ಕೇಳಿಬಂದಿತ್ತಾದರೂ, ಇದೀಗ ಅವರ ಹೆಸರು ಬದಿಗೆ ಸರಿದಿದೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ | ಘೋಷಣೆಯಷ್ಟೇ ಬಾಕಿ Read More »

error: Content is protected !!
Scroll to Top