ಸರಕಾರದಿಂದ ಕೋಟಿಗಟ್ಟಲೆ ರೂ. ಟೆಂಡರ್‌ ಹಗರಣ : ಡಿಕೆಶಿ 

ತರಾತುರಿಯಲ್ಲಿ ಟೆಂಡರ್‌ ಕರೆಯಲಾಗುತ್ತಿದೆ ಎಂದು ಆರೋಪ ಬೆಂಗಳೂರು : ಸರ್ಕಾರದ ಅವಧಿ ಕೆಲವೇ ದಿನಗಳಿರುವುದರಿಂದ ಎಲ್ಲ ಇಲಾಖೆಗಳಲ್ಲಿ ತರಾತುರಿಯಿಂದ ಟೆಂಡರ್ ಕರೆಯಲಾಗುತ್ತಿದೆ. 500 ಕೋಟಿ ರೂ. ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆರೋಪಿಸಿದ್ದಾರೆ.ಡಿಕೆಶಿ ಮನೆಯಲ್ಲಿ ಬುಧವಾರ ಬೆಳಗ್ಗೆ ಸುದ್ದಿಗೋಷ್ಠಿ ಕರೆದು ವಿವಿಧ ಇಲಾಖೆಗಳಲ್ಲಿ ಟೆಂಡರ್ ಗೋಲ್ಮಾಲ್ ಹೇಗೆ ನಡೆಯುತ್ತಿದೆ ಎಂಬ ವಿವರ ನೀಡಿದ್ದಾರೆ. ಸರ್ಕಾರ ಇನ್ನು ಒಂದು […]

ಸರಕಾರದಿಂದ ಕೋಟಿಗಟ್ಟಲೆ ರೂ. ಟೆಂಡರ್‌ ಹಗರಣ : ಡಿಕೆಶಿ  Read More »

ಶರವೂರು: ಮೊಟ್ಟೆ ಸಾಗಾಟದ ಟೆಂಪೋ ಪಲ್ಟಿ, ಚಾಲಕ ಗಂಭೀರ

ಪುತ್ತೂರು: ಆಲಂಗಾರು ಬಳಿಯ ಶರವೂರು ದೇವಸ್ಥಾನದ ಬಳಿಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಟೆಂಪೋವೊಂದು ಪಲ್ಟಿಯಾದ ಘಟನೆ ಫೆ. 15ರಂದು ಬೆಳಿಗ್ಗೆ ನಡೆದಿದೆ. ಆಲಂಗಾರು ಕಡೆಯಿಂದ ಶಾಂತಿಮೊಗರು ಕಡೆಗೆ ಬರುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಟೆಂಪೋದಲ್ಲಿದ್ದ ಚಾಲಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟೆಂಪೋದಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ.

ಶರವೂರು: ಮೊಟ್ಟೆ ಸಾಗಾಟದ ಟೆಂಪೋ ಪಲ್ಟಿ, ಚಾಲಕ ಗಂಭೀರ Read More »

ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಅಗೇಲು

ಪುತ್ತೂರು: ನರಿಮೊಗರು ಗ್ರಾಮದ ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಕಲ್ಲುರ್ಟಿ ದೈವದ ಅಗೇಲು ಸೇವೆ ನಡೆಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು. ಮೋನಪ್ಪ ಸಪಲ್ಯ ಅಗೇಲು ಸೇವೆಯನ್ನು ಹಾಗೂ ನಿತಿನ್ ಭಟ್ ದೇವರ ಪೂಜೆಯನ್ನು ನೆರವೇರಿಸಿದರು. ಜಗದೀಶ ಗೌಡ ಸಹಕರಿಸಿದರು.

ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಅಗೇಲು Read More »

ಸಂಟ್ಯಾರ್: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ನಿಡ್ಪಳ್ಳಿ ಗ್ರಾ.ಪಂ. ಸದಸ್ಯ ಮೃತ್ಯು

ಪುತ್ತೂರು: ಸಂಟ್ಯಾರ್ ಸಮೀಪದ ಬಳಕದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಮುರಳಿ ಭಟ್ ಎನ್ನುವವರು ಮೃತಪಟ್ಟಿದ್ದಾರೆ. ಮೃತರನ್ನು ನಿಡ್ಪಳ್ಳಿ ಗ್ರಾಮ ಪಂಚಾಯತಿಯ ಬಿಜೆಪಿ ಬೆಂಬಲಿತ ಸದಸ್ಯ ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಬೆಟ್ಟಂಪಾಡಿ ಕಡೆಗೆ ತೆರಳುವ ಕಾರು ಸಂಟ್ಯಾರ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ಸುಮಾರು 50 ಅಡಿಯ ತೋಟಕ್ಕೆ ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಮುರಳಿ ಭಟ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮುರಳಿ ಭಟ್ ಅವರ ಜೊತೆ

ಸಂಟ್ಯಾರ್: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ನಿಡ್ಪಳ್ಳಿ ಗ್ರಾ.ಪಂ. ಸದಸ್ಯ ಮೃತ್ಯು Read More »

ಆಮದು ಅಡಿಕೆ ಸುಂಕ ಹೆಚ್ಚಿಸಿದ ಕೇಂದ್ರ ಸರಕಾರ | ವಿದೇಶಿ ಅಡಿಕೆ ದರ 700 ರೂ. ಸಮೀಪಿಸಲಿದೆ! | ದೇಶಿಯ ಅಡಿಕೆ ಧಾರಣೆ ಹೆಚ್ಚುವ ಸುಳಿವು

ಪುತ್ತೂರು: ಅಮಿತ್ ಶಾ ಪುತ್ತೂರಿಗೆ ಆಗಮಿಸಿ ಏನೂ ಘೋಷಣೆ ಮಾಡಲಿಲ್ಲ ಎನ್ನುವ ಹೇಳಿಕೆಗಳ ಬೆನ್ನಲ್ಲೇ, ಅಡಿಕೆ ಬೆಳೆಗಾರರ ಪಾಲಿಗೆ ಮಹತ್ವದ್ದೆನ್ನಲಾದ ಅಧಿಸೂಚನೆ ಕೇಂದ್ರದಿಂದ ಹೊರಬಿದ್ದಿದೆ. ವಿದೇಶಗಳಿಂದ ಆಮದಾಗುತ್ತಿದ್ದ ಅಡಿಕೆ ಕೆ.ಜಿ.ಗೆ 100 ರೂ.ನಷ್ಟು ಸುಂಕ ಹೆಚ್ಚಿಸಿದ್ದು, ಮುಂದೆ ವಿದೇಶಿ ಅಡಿಕೆಗಳಿಗೆ ಕಡಿವಾಣ ಬೀಳುವುದು ಪಕ್ಕಾ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಹಳೆ ಅಡಿಕೆ 460 ರೂ.ನಿಂದ 500 ರೂವರೆಗೆ ಹಾಗೂ ಹೊಸಅಡಕೆಗೆ 400 ರೂ.ವರೆಗೆ ಧಾರಣೆ ಇದೆ. ಆದರೆ ವಿದೇಶಗಳಿಂದ ಆಮದಾಗುತ್ತಿದ್ದ ಅಡಿಕೆಗೆ ಆಮದು ಸುಂಕ ಕಡಿಮೆ ಇರುತ್ತಿದ್ದ

ಆಮದು ಅಡಿಕೆ ಸುಂಕ ಹೆಚ್ಚಿಸಿದ ಕೇಂದ್ರ ಸರಕಾರ | ವಿದೇಶಿ ಅಡಿಕೆ ದರ 700 ರೂ. ಸಮೀಪಿಸಲಿದೆ! | ದೇಶಿಯ ಅಡಿಕೆ ಧಾರಣೆ ಹೆಚ್ಚುವ ಸುಳಿವು Read More »

ನೆಲ್ಲಿಕಟ್ಟೆ ಪಾರ್ಕ್‌ನಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಸ್ಥಳೀಯರು | ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ

ಪುತ್ತೂರು : ನಗರದ ನೆಲ್ಲಿಕಟ್ಟೆಯಲ್ಲಿರುವ ಪಾರ್ಕ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡು ಸ್ಥಳೀಯರು ಎಚ್ಚೆತ್ತುಕೊಂಡು ಬೆಂಕಿ ನಂದಿಸಿದ ಪರಿಣಾಮ ಸಂಭವಿಸಬಹುದಾದ ಅಪಾಯ ತಪ್ಪಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಪಾರ್ಕ್‌ನಲ್ಲಿ ಎಲೆಕ್ಟ್ರಿಕ್ ವೈರ್ ತುಂಡಾಗಿ ಬಿದ್ದದ್ದರಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹತ್ತಿಕೊಂಡ ತಕ್ಷಣ ಜಾಗೃತರಾದ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಕಾರ್ಯಪ್ರವೃತ್ತರಾದರು. ಬಳಿಕ ಅಗ್ಮಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಸಂಪೂರ್ಣ ಬೆಂಕಿ ನಂದಿಸಿದರು. ಯಾವುದೇ ನಷ್ಟವಾಗಲಿ, ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ನೆಲ್ಲಿಕಟ್ಟೆ ಪಾರ್ಕ್‌ನಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಸ್ಥಳೀಯರು | ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ Read More »

ಪುಲ್ವಾಮಾ ದಾಳಿ ಹಿನ್ನಲೆಯಲ್ಲಿ ತನ್ನ ಹುಟ್ಟುಹಬ್ಬ ನಿರಾಕರಿಸಿದ ವಿದ್ಯಾರ್ಥಿನಿ  | ದೇಶಪ್ರೇಮ ಮೆರೆದು ಮಾದರಿಯಾದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ  ತನ್ವಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಒಂಬತ್ತನೆಯ ತರಗತಿ ವಿದ್ಯಾರ್ಥಿನಿ ತನ್ವಿ ವಿ. ತನ್ನ ದಿಟ್ಟ ನಿರ್ಧಾರದಿಂದಾಗಿ ಮಾದರಿ ಎನಿಸಿದ್ದಾಳೆ. ಫೆ. 14 ಆಕೆಯ ಜನ್ಮದಿನ. ಆದರೆ ನಾಲ್ಕು ವರ್ಷದ ಹಿಂದೆ ಅದೇ ದಿನದಂದು ಪುಲ್ವಾಮಾ ದಾಳಿಯಲ್ಲಿ ದೇಶದ ವೀರಯೋಧರು ಮರಣಿಸಿದ್ದು ಈಕೆಯ ಮನಸ್ಸಿನಲ್ಲಿ ಅಚ್ಚೊತ್ತಿದೆ. ಆ ಭಾವನೆ ಆಕೆ ದೊಡ್ಡವಳಾದಂತೆ ಮತ್ತಷ್ಟು ಗಾಢವಾಗಿದೆ. ಹಾಗಾಗಿ ಫೆ. 14 ರಂದು ತನಗೆ ಯಾವುದೇ ಸಂಭ್ರಮ ಇಲ್ಲ ಎಂದು ಆಕೆ

ಪುಲ್ವಾಮಾ ದಾಳಿ ಹಿನ್ನಲೆಯಲ್ಲಿ ತನ್ನ ಹುಟ್ಟುಹಬ್ಬ ನಿರಾಕರಿಸಿದ ವಿದ್ಯಾರ್ಥಿನಿ  | ದೇಶಪ್ರೇಮ ಮೆರೆದು ಮಾದರಿಯಾದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ  ತನ್ವಿ Read More »

ಪೂರ್ವಜರು ನೀಡಿದ ಔಷಧೀಯ ಜ್ಞಾನವನ್ನು ಯುವಪೀಳಿಗೆ ಅನುಸರಿಸಬೇಕಿದೆ- ಡಾ. ಸತ್ಯನಾರಾಯಣ ಭಟ್

ಪುತ್ತೂರು : ಪೂರ್ವಿಕರು ಕೊಟ್ಟ ಔಷಧೀಯ ಜ್ಞಾನವನ್ನು ಇಂದು ಯುವಜನಾಂಗ ಅರಿಯಬೇಕಿದೆ. ಆಟಿ ಅಮಾವಾಸ್ಯೆಯಿಂದ ಆರಂಭಿಸಿ ಬಲೀಂದ್ರ ಪೂಜೆಯವರೆಗೆ ಬಳಸಬೇಕಾದ ಪಾಲೆಯ ಮರವನ್ನು ಮರೆತು ಇನ್ಯಾವುದೋ ಇಂಗ್ಲೀಷ್ ಔಷಧಿಯತ್ತ ನಾವು ಗಮನಹರಿಸುತ್ತಿರುವುದು ಬೇಸರದ ಸಂಗತಿ ಎಂದು ಕಾರ್ಕಳ ಕರ್ನಾಟಕ ರಾಜ್ಯ ಔಷಧೀಯ ಗಿಡಮೂಲಿಕ ಪ್ರಾಧಿಕಾರದ ಜೀವವೈವಿಧ್ಯ ಮಂಡಳಿ ಸಂಚಾಲಕ ಡಾ.ಸತ್ಯನಾರಾಯಣ ಭಟ್ ಅಭಿಪ್ರಾಯಪಟ್ಟರು. ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ, ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿ?ನ (ಎಆರ್‌ಡಿಎಫ್) ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಹಾಗೂ ಮಂಗಳೂರು

ಪೂರ್ವಜರು ನೀಡಿದ ಔಷಧೀಯ ಜ್ಞಾನವನ್ನು ಯುವಪೀಳಿಗೆ ಅನುಸರಿಸಬೇಕಿದೆ- ಡಾ. ಸತ್ಯನಾರಾಯಣ ಭಟ್ Read More »

ವಸಂತ ಲಕ್ಷ್ಮೀ ಸಚ್ಚರಿಪೇಟೆ ಸೂರ್ಡೆಲ್ ನಿಧನ

ಪೆರ್ನಾಜೆ  : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆ ನಿವಾಸಿ ನಿವೃತ್ತ ಶಿಕ್ಷಕ  ಉದಯ  ಶಂಕರ ಭಟ್ ಸೂರ್ಡೆಲ್ ಪತ್ನಿ ವಸಂತ ಲಕ್ಷ್ಮೀ (62 ವ ) ಫೆ.12 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ತಾಯಿ ಶಾರದಮ್ಮ ಪೆರ್ನಾಜೆ, ಪತಿ ಉದಯಶಂಕರ ಭಟ್ ಸೂರ್ಡೆಲ್, ಸಹೋದರರಾದ ಸತ್ಯನಾರಾಯಣ ಭಟ್ ಪಿಲ್ಯಪೆರ್ನಾಜೆ, ಕುಮಾರ್ ಪೆರ್ನಾಜೆ,  ಉಪನ್ಯಾಸಕ ಮುರ್ಡೇಶ್ವರ ಕೃಷ್ಣ ಪ್ರಸಾದ್ ಪೆರ್ನಾಜೆ., ಸಹೋದರಿಯರಾದ ಸರಸ್ವತಿ ಪ್ರಕಾಶ್ ಕೋಟೆ ಸುಳ್ಯ ,ಪಾರ್ವತಿ ಜಯರಾಮ್ ಭಟ್ ಉಳ್ಳಿಂಜ,  ಶಂಕರಿ ಬಾಲಕೃಷ್ಣ

ವಸಂತ ಲಕ್ಷ್ಮೀ ಸಚ್ಚರಿಪೇಟೆ ಸೂರ್ಡೆಲ್ ನಿಧನ Read More »

ಪುತ್ತೂರು ಬ್ಲಾಕ್, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ನ ಬೂತ್ ಅಧ್ಯಕ್ಷರು – ಬಿ.ಎಲ್.ಎ.ಗಳ ತರಬೇತಿ ಶಿಬಿರ

ಪುತ್ತೂರು : ಕಾಂಗ್ರೆಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್ ಹಾಗೂ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ನ ಬೂತ್ ಅಧ್ಯಕ್ಷರ – ಬಿ.ಎಲ್.ಎ. ಗಳ ತರಬೇತಿ ಶಿಬಿರ ನಗರದ ಪುರಭವನದಲ್ಲಿ ಮಂಗಳವಾರ ನಡೆಯಿತು. ರಾಷ್ಟ್ರಗೀತೆಯೊಂದಿಗೆ ಆರಂಭಗೊಂಡ ತರಬೇತಿ ಶಿಬಿರವನ್ನು ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ನಡೆದ ತರಬೇತಿ ಶಿಬಿರದಲ್ಲಿ ತರಬೇತುದಾರ ಎಂ.ಜಿ.ಹೆಗಡೆ ತರಬೇತು ನೀಡಿ, ಬದಲಾವಣೆ ಜಗದ ನಿಯಮವಾಗಿದ್ದು, ಸಾಮಾಜಿಕ, ರಾಜಕೀಯವಾಗಿ ಬದಲಾವಣೆಗಳು ನಡೆಯುತ್ತಾ ಇರುತ್ತವೆ. ರಾಜಕೀಯ

ಪುತ್ತೂರು ಬ್ಲಾಕ್, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ನ ಬೂತ್ ಅಧ್ಯಕ್ಷರು – ಬಿ.ಎಲ್.ಎ.ಗಳ ತರಬೇತಿ ಶಿಬಿರ Read More »

error: Content is protected !!
Scroll to Top