ಹಿಂಜಾವೇ ಕಾರ್ಯಕ್ರಮವೊಂದರಲ್ಲಿ ದ್ವೇಷಪೂರಿತ ಭಾಷಣ ಮಾಡಿರುವುದು ನಮ್ಮ ಸಮುದಾಯಕ್ಕೆ ನೋವು ತಂದಿದೆ : ಧರ್ಮಗುರು ವಂ.ಲಾರೆನ್ಸ್ ಮಸ್ಕರೇನಸ್

ಪುತ್ತೂರು: ಇತ್ತೀಚೆಗೆ ನಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕ್ರಮವೊಂದಲ್ಲಿ ಡಾ.ಎಂ.ಕೆ.ಪ್ರಸಾದ್ ಅವರು ಕ್ರೈಸ್ತರು ನಡೆಸುವ ಸಂಸ್ಥೆಗಳ ಹೆಸರನ್ನು ಉಲ್ಲೇಖಿಸಿ ದ್ವೇಷಪೂರಿತ ಭಾಷಣ ಮಾಡಿರುವುದು ಸಮುದಾಯಕ್ಕೆ ನೋವಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಾಯಿದೇ ದೇವುಸ್  ಶಿ್ಕ್ಷಣ ಸಂಸ್ಥೆಗಳ ಸಂಚಾಲಕ, ಧರ್ಮಗುರು ವಂ.ಲಾರೆನ್ಸ್ ಮಸ್ಕರೇನಸ್ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾ.25 ರಂದು ವಾಟ್ಸ್ ಆಫ್‍ನಲ್ಲಿ ಪ್ರಚಾರವಾದ ಹಿಂದೂ ಜಾಗರಣ ವೇದಿಕೆಯ ಕಾರ್ಯಕ್ರಮದ ಭಾಷಣದಲ್ಲಿ ಡಾ.ಎಂ.ಕೆ.ಪ್ರಸಾದ್ ಅವರು ಕ್ರೈಸ್ತ ಸಮುದಾಯದ ವಿರುದ್ಧ ನೇರವಾಗಿ ಸಮಾಜದಲ್ಲಿ ಅಶಾಂತಿ […]

ಹಿಂಜಾವೇ ಕಾರ್ಯಕ್ರಮವೊಂದರಲ್ಲಿ ದ್ವೇಷಪೂರಿತ ಭಾಷಣ ಮಾಡಿರುವುದು ನಮ್ಮ ಸಮುದಾಯಕ್ಕೆ ನೋವು ತಂದಿದೆ : ಧರ್ಮಗುರು ವಂ.ಲಾರೆನ್ಸ್ ಮಸ್ಕರೇನಸ್ Read More »

ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು, ಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ: ರಾಜಕೀಯ ಪ್ರವೇಶದ ಬಗ್ಗೆ ನಟ ಸುದೀಪ್ ಸ್ಪಷ್ಟನೆ

ಬೆಂಗಳೂರು: ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಿಲ್ಲುತ್ತೇನೆ. ಅವರಿಗೆ ನನ್ನ ಬೆಂಬಲ ಇದೆ ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ. ಈ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲವನ್ನು ಬಹಿರಂಗವಾಗಿ ಘೋಷಿಸಿದ್ದಾರೆ. ಬೆಂಗಳೂರಿನ ಹೋಟೆಲ್‌ ಅಶೋಕದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರೀತಿಯ ವ್ಯಕ್ತಿಯ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಲು ಬಂದಿದ್ದೇನೆ. ಸಿನಿಮಾಗೆ ಎಂಟ್ರಿ ಕೊಟ್ಟಾಗ ಯಾರೂ ಗಾಡ್ ಫಾದರ್ ಇರಲಿಲ್ಲ. ನಾನು ಸಿನಿಮಾ ‌ಎಂಟ್ರಿ‌ ಕೊಟ್ಟಾಗ ಬೊಮ್ಮಾಯಿ

ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು, ಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ: ರಾಜಕೀಯ ಪ್ರವೇಶದ ಬಗ್ಗೆ ನಟ ಸುದೀಪ್ ಸ್ಪಷ್ಟನೆ Read More »

ಚುನಾವಣೆಗೆ ಸಂಬಂಧಿಸಿ ಕರ್ತವ್ಯ ನಿರ್ವಹಿಸಲು ನಾಲ್ಕು ಸಿಆರ್ ಪಿಎಫ್‍ ಕಂಪೆನಿಗಳು ಜಿಲ್ಲೆಗೆ

ಪುತ್ತೂರು: ದ.ಕ.ಜಿಲ್ಲಾ ಘಟಕದ ವ್ಯಾಪ್ತಿಯಲ್ಲಿ 2023 ರ ಚುನಾವಣೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸಲು  4 ಸಿಆರ್ ಪಿಎಫ್ ಕಂಪೆನಿಗಳು ಆಗಮಿಸಿದ್ದು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಚೆಕ್ ಪೋಸ್ಟ್, ಸ್ಟ್ರಾಂಗ್ ರೂಮ್, ರೂಟ್ ,ಮಾರ್ಚ್‍, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕಂಪೆನಿಗಳು ಕರ್ತವ್ಯ ನಿರ್ವಹಿಸಲಿವೆ. ಇನ್ನಷ್ಟು ಹೆಚ್ಚಿನ ಸಿಆರ್ ಪಿಎಫ್ ಕಂಪೆನಿಗಳು ಜಿಲ್ಲೆಗೆ ಆಗಮಿಸಲಿವೆ ಎಂದು ತಿಳಿದು ಬಂದಿದೆ.

ಚುನಾವಣೆಗೆ ಸಂಬಂಧಿಸಿ ಕರ್ತವ್ಯ ನಿರ್ವಹಿಸಲು ನಾಲ್ಕು ಸಿಆರ್ ಪಿಎಫ್‍ ಕಂಪೆನಿಗಳು ಜಿಲ್ಲೆಗೆ Read More »

ಇಂದು ರಾತ್ರಿ ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ

ಪುತ್ತೂರು: ಸುಳ್ಯ ತಾಲೂಕಿನ  ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ ಏ.5 ಬುಧವಾರ ರಾತ್ರಿ ನಡೆಯಲಿದೆ. ಬುಧವಾರ ಮಧ್ಯಾಹ್ನ 12.30 ಕ್ಕೆ ಕಟ್ಟಬೀಡಿನಿಂದ ಪೂರ್ವ ಸಂಪ್ರದಾಯದಂತೆ ಭಂಡಾರ ಹೊರಡುವುದು. ನೇತ್ರಾದಿ ಗರಡಿಯಲ್ಲಿ ದರ್ಶನ. ರಾತ್ರಿ 8 ಕ್ಕೆ ಬೈದೇರುಗಳು ಗರಡಿ ಇಳಿಯುವುದು. ರಾತ್ರಿ 2 ಕ್ಕೆ ಕಿನ್ನಿದಾರು ಗರಡಿ ಇಳಿಯುವುದು. ಪ್ರಾತಃಕಾಲ 3 .30 ಕ್ಕೆ ಎಣ್ಮೂರು ಕಟ್ಟಬೀಡಿಗೆ ಬೈದೇರುಗಳು ಹಾಲು ಕುಡಿಯಲು ಬಂದು ಬೀಡಿಗೆ ಕಾಣಿಕೆ ಅರ್ಪಿಸುವುದು. 5 ಕ್ಕೆ ಕೋಟಿ-ಚೆನ್ನಯರ ದರ್ಶನ ರಂಗಸ್ಥಳದಲ್ಲಿ (ಸೇಟು) ಬೈದೇರುಗಳ

ಇಂದು ರಾತ್ರಿ ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ Read More »

ನೈತಿಕ ಪೊಲೀಸ್‌ ಗಿರಿ : ಹಿಂದೂ ಯುವತಿಯೊಂದಿಗೆ ಮಾತನಾಡಿದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಮಂಗಳೂರು : ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ ಗಿರಿ ಘಟನೆ ಎ. 5 ರಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ್ದಕ್ಕಾಗಿ ಆತನ ಮೇಲೆ ಗ್ಯಾಂಗ್‌ವೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸಂತ್ರಸ್ತನನ್ನು ಮೊಹಮ್ಮದ್ ಜಹೀರ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವಕನನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಕೃತ್ಯದ ಹಿಂದೆ ಬಜರಂಗದಳದ ಕಾರ್ಯಕರ್ತರು ಇರಬಹುದು ಎಂದು ಶಂಕಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನೈತಿಕ ಪೊಲೀಸ್‌ ಗಿರಿ : ಹಿಂದೂ ಯುವತಿಯೊಂದಿಗೆ ಮಾತನಾಡಿದ ಮುಸ್ಲಿಂ ಯುವಕನ ಮೇಲೆ ಹಲ್ಲೆ Read More »

ಅಶೋಕ್ ಕುಮಾರ್ ರೈ ರಾಜಕೀಯ ಶ್ರೇಯಸ್ಸಿಗಾಗಿ ಬನ್ನೂರು ಶನೀಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ

ಪುತ್ತೂರು: ಅಶೋಕ್ ಕುಮಾರ್ ರೈ ಅವರ ರಾಜಕೀಯ ಶ್ರೇಯಸ್ಸಿ ಗಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರ ದ ಕಾಂಗ್ರೆಸ್ ಟಿಕೆಟ್ ಗೊಂದಲ ನಿವಾರಣೆ ಗಾಗಿ ಅಶೋಕ್ ಕುಮಾರ್ ರೈ ಅಭಿಮಾನಿಗಳು ಬನ್ನೂರುರವರು ಬನ್ನೂರು ಗ್ರಾಮದ ಶನಿಶ್ವರ ದೇವರ ಸನ್ನಿಧಿ ಯಲ್ಲಿ ಬುಧವಾರ ಬೆಳಿಗ್ಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಶನಿಶ್ವರ ದೇವರ ಸನ್ನಿಧಿಯ ಅರ್ಚಕ  ದಿನೇಶ್ ಸಾಲಿಯಾನ್ ವಿಶೇಷ ಪ್ರಾರ್ಥನೆ ನೆರವೇರಿಸಿದರು ನವೀನ್ ರೈ ಬನ್ನೂರು ಅವರ ನೇತೃತ್ವ ದಲ್ಲಿ ನಡೆದ ವಿಶೇಷ ಪ್ರಾರ್ಥನೆ ಸಂದರ್ಭ

ಅಶೋಕ್ ಕುಮಾರ್ ರೈ ರಾಜಕೀಯ ಶ್ರೇಯಸ್ಸಿಗಾಗಿ ಬನ್ನೂರು ಶನೀಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ Read More »

ಏ.6 ರಿಂದ 8 : ಪುಣ್ಚಪ್ಪಾಡಿ  ಶಾಲೆಯಲ್ಲಿ ಬಣ್ಣದ ಬಣ್ಣ ಮಕ್ಕಳ ಶಿಬಿರ | ಹಿರಿಯ ಶಿಕ್ಷಣ ಚಿಂತಕ ಕಲಾನಿಧಿ ಗೋಪಾಡ್ಕರ್ ಅವರಿಂದ ಉದ್ಘಾಟನೆ

ಪುತ್ತೂರು : ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ ಜ.ಪಂ ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಚೇರಿ ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುಣ್ಚಪ್ಪಾಡಿ ಸಂಯುಕ್ತ ಆಶ್ರಯದಲ್ಲಿ ಬಣ್ಣದ ಬಣ್ಣ ಎಂಬ ವಿಶಿಷ್ಟ ಮಕ್ಕಳ ಶಿಬಿರ ಏ.6 ರಿಂದ 8ರ ತನಕ ಪುಣ್ಚಪ್ಪಾಡಿ  ಶಾಲೆಯಲ್ಲಿ ನಡೆಯಲಿದೆ. ಕರ್ನಾಟಕದ ಹಿರಿಯ ಶಿಕ್ಷಣ ಚಿಂತಕ, ಮಂಗಳೂರು ಸ್ವರೂಪ ಅಧ್ಯಯನ ಕೇಂದ್ರದ ಸಂಚಾಲಕ ಕಲಾನಿಧಿ ಗೋಪಾಡ್ಕರ್ ಉದ್ಘಾಟಿಸಲಿದ್ದು ಹಿರಿಯ ರಂಗ ಲೇಖಕ,

ಏ.6 ರಿಂದ 8 : ಪುಣ್ಚಪ್ಪಾಡಿ  ಶಾಲೆಯಲ್ಲಿ ಬಣ್ಣದ ಬಣ್ಣ ಮಕ್ಕಳ ಶಿಬಿರ | ಹಿರಿಯ ಶಿಕ್ಷಣ ಚಿಂತಕ ಕಲಾನಿಧಿ ಗೋಪಾಡ್ಕರ್ ಅವರಿಂದ ಉದ್ಘಾಟನೆ Read More »

ಕೋವಿ ಠೇವಣಿದಾರರಿಗೆ ದ.ಕ.ಜಿಲ್ಲಾಧಿಕಾರಿಯಿಂದ ಸಿಹಿ ಸುದ್ದಿ |  ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ

ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆ ಘೊಷಣೆಯಾದ ಹಿನ್ನಲೆಯಲ್ಲಿ ರೈತರು ಸೇರಿದಂತೆ ಎಲ್ಲರೂ ತಮ್ಮ ಪರವಾನಗಿಯುಳ್ಳ ಕೋವಿ/ಆಯುಧಗಳನ್ನು ಸಮೀಪದ ಠಾಣೆಯಲ್ಲಿ ಠೇವಣಿ ಇಡಬೇಕಾಗುವ ಆದೇಶ ರಾಜ್ಯದೆಲ್ಲೆಡೆ ಜ್ಯಾರಿಯಾಗಿದೆ. ಆದರೆ ದ.ಕ.ಜಿಲ್ಲಾಧಿಕಾರಿ ಮಾತ್ರ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅದೇನೆಂದರೆ ಠೇವಣಿ ಇಡುವ ವಿಚಾರದಲ್ಲಿ ಕೆಲ ಸಡಿಲಿಕೆಯನ್ನು  ಮಾಡಿದ್ದಾರೆ. ಚುನಾವಣೆ ಸಂದರ್ಭ ಸಾರ್ವಜನಿಕ ಶಾಂತಿ ಮತ್ತು ಶಿಸ್ತುಪಾಲನಾ ಮುಂಜಾಗ್ರತ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶ ಹೊರಡಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶಸ್ತ್ರಾಸ್ತ್ರ ಡೆಪಾಸಿಟ್ ಮಾಡುವಂತೆ ರಾಜ್ಯದಲ್ಲಿ ಆದೇಶ ಮಾಡಲಾಗಿದೆ. ಆದರೆ ಈ ಆದೇಶದಿಂದಾಗಿ

ಕೋವಿ ಠೇವಣಿದಾರರಿಗೆ ದ.ಕ.ಜಿಲ್ಲಾಧಿಕಾರಿಯಿಂದ ಸಿಹಿ ಸುದ್ದಿ |  ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ Read More »

ಕೃಷಿ ವಿಜ್ಞಾನಿ ಬೆಳುವಾಯಿಯ ಡಾ| ಎಲ್. ಸಿ. ಸೋನ್ಸ್ ನಿಧನ

ಪುತ್ತೂರು : ಕೃಷಿಯಲ್ಲಿ ನಾನಾ ಆವಿಷ್ಕಾರಗಳಲ್ಲು ಮಾಡಿರುವ ಕೃಷಿ ವಿಜ್ಞಾನಿ ಮೂಡುಬಿದಿರೆ ಬೆಳುವಾಯಿಯ ಡಾ| ಎಲ್. ಸಿ. ಸೋನ್ಸ್ ಅವರು ನಿಧನರಾಗಿದ್ದಾರೆ. ಭಾರತದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ಪದವಿಗಳನ್ನು ಪಡೆದು ಅಮೆರಿಕದ ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಸೋನ್ಸ್‌ರು ಕರ್ನಾಟಕದ ಕೃಷಿ ಚರಿತ್ರೆಯಲ್ಲಿ ದಾಖಲಾರ್ಹ ಹೆಸರ. ಡಾ| ಲಿವಿಂಗ್‌ಸ್ಟನ್ ಚಂದ್ರಮೋಹ ಸೋನ್ಸ್ ಕರ್ನಾಟಕದ ಕೃಷಿಕರ ಪಾಲಿಗೆ ಚರಿತ್ರಾರ್ಹ ಮಾದರಿಯೇ ಆಗಿದ್ದರು.ಸೋನ್ಸ್ ಪ್ರಪಂಚದ ಕೃಷಿಯನ್ನು ನೋಡಿದವರು. ಅದೇ ಉದ್ದೇಶದಿಂದ ದೇಶ ಸುತ್ತಿದವರು. ಕೋಶ ಓದಿದವರು, ಬೀಜ, ಹವಾಮಾನ,

ಕೃಷಿ ವಿಜ್ಞಾನಿ ಬೆಳುವಾಯಿಯ ಡಾ| ಎಲ್. ಸಿ. ಸೋನ್ಸ್ ನಿಧನ Read More »

ಏ.5 ರಿಂದ 7 : ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ಸಮರ್ಪಣೆಯಾದ ಹೊರೆಕಾಣಿಕೆ

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಏ.5 ರಿಂದ 7 ರ ತನಕ ನಡೆಯುವ ಜಾತ್ರೋತ್ಸವದ ಅಂಗವಾಗಿ ಹೊರೆಕಾಣಿಕೆ ಸಮರ್ಪಣೆ ಮಂಗಳವಾರ ನಡೆಯಿತು. ಸಂಜೆ ಕೊಡಿಪಾಡಿ ಶಾಲೆ, ಆನಾಜೆ, ಅರ್ಕ, ಓಜಾಲ, ಹನಿಯೂರು, ಪಲ್ಲತ್ತಾರು ಮೂಲಕ ಹಸಿರುವಾಣಿ ಮೆರವಣಿಗೆ ಸಾಗಿ ಬಂದ ಮೆರವಣಿಗೆಗೆ ಚೆಂಡೆ, ವಾದ್ಯಗಳು, ಮುತ್ತು ಕೊಡೆಗಳು ಮೆರೆಗು ನೀಡಿತು. ಬಳಿಕ ತೆಂಕಿಲ ಧೀಶಕ್ತಿ ಮಹಿಳಾ ಯಕ್ಷ ಬಳಗದಿಂದ ಹಲಸಿನಮಕ್ಕಿ ನರಸಿಂಹ ಶಾಸ್ತ್ರೀ ವೀರಚಿತ “ಶ್ರೀರಾಮ ದರ್ಶನ” ಯಕ್ಷಗಾನ ತಾಳಮದ್ದಳೆ ಜರಗಿತು. ರಾತ್ರಿ ಶ್ರೀ ಮಹಾಗಣಪತಿ

ಏ.5 ರಿಂದ 7 : ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ಸಮರ್ಪಣೆಯಾದ ಹೊರೆಕಾಣಿಕೆ Read More »

error: Content is protected !!
Scroll to Top