ಸರ್ವೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಸರ್ವೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಕಾರ್ಯಕ್ರಮ ಹಾಗೂ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಮಂಗಳವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ಮಕ್ಕಳ‌ ಪ್ರತಿಭಾ ಪ್ರದರ್ಶನಕ್ಕೆ ಶಿಕ್ಷಕರು ಒಂದೆಡೆ ಪ್ರಯತ್ನ ಮಾಡುತ್ತಿದ್ದರೆ, ಅದಕ್ಕೆ ಪೂರಕವಾಗಿ ಮೂಲಭೂತ‌ ಸೌಕರ್ಯಗಳನ್ನು ಒದಗಿಸುವ ಮೂಲಕ‌‌ ಶಾಲೆಯ ಅಭಿವೃದ್ಧಿ  ಕಾರ್ಯ ಸರಕಾರದಿಂದ ಆಗುತ್ತಿದೆ ಎಂದರು.  ಎಸ್ ಡಿ ಎಂ ಸಿ ಅಧ್ಯಕ್ಷ ಹನೀಫ್ ರೆಂಜಾಲಾಡಿ , ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ನಾಯ್ಕ್,, […]

ಸರ್ವೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ

ಅಧ್ಯಯನಕ್ಕೆ ಡಾ| ಮೋಹನ್‌ ಆಳ್ವ ನೇತೃತ್ವದ ಸಮಿತಿ ರಚನೆ ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಸರಕಾರ ಮಹತ್ವದ ನಿಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ.ಡಾ. ಎಂ. ಮೋಹನ್‌ ಆಳ್ವ ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಕೇಶವ ಬಂಗೇರ, ಡಾ. ಮಾಧವ ಕೊಣಾಜೆ, ಗಣೇಶ್‌ ಅಮೀನ್‌ ಸಂಕಮಾರ್‌, ಪೃಥ್ವಿ ಕವತ್ತಾರು ಮಣಿಪಾಲ, ವಸಂತ ಶೆಟ್ಟಿ ಉಡುಪಿ,

ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ Read More »

ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ

ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ ಹೊಸದಿಲ್ಲಿ : ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ‌ ಆರಂಭವಾಗಲಿದೆ‌. ಬುಧವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದು, ಇಂದು ರಾಷ್ಟ್ರಪತಿ ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಇಂದು ನಿರ್ಮಲಾ‌‌ ಸೀತಾರಾಮನ್ ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿ ಭಾಷಣದ ಬಳಿಕ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ‌.ಜಾಗತಿಕ ಆರ್ಥಿಕ ಹಿಂಜರಿತದ ಕಾರಣದಿಂದಾಗಿ ಹಣಕಾಸು ಸಚಿವರು ವಿತ್ತೀಯ

ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ Read More »

15 ಸಾವಿರ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ರದ್ದು

ಹೊಸ ಆಯ್ಕೆ ಪಟ್ಟಿ ರಚಿಸಲು ಸರಕಾರಕ್ಕೆ ಹೈಕೋರ್ಟ್‌ ಆದೇಶ ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ರಾಜ್ಯ ಸರ್ಕಾರ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಈ ಮಹತ್ವದ ಆದೇಶ ಹೊರಡಿಸಿದ್ದು, ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿ ಶಿಕ್ಷಕರಾಗುವ ಕನಸು ಕಾಣುತ್ತಿದ್ದವರಿಗೆ ಹೈಕೋರ್ಟ್ ಶಾಕ್ ನೀಡಿದೆ.ಅಭ್ಯರ್ಥಿಗಳ ಆಯ್ಕೆ

15 ಸಾವಿರ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ರದ್ದು Read More »

ಫೆ. 11ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ

ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ. 11ರಂದು ಪುತ್ತೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿಗೆ ಭೇಟಿ ನೀಡಲಿರುವ ಅಮಿತ್ ಶಾ ಅವರು, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆಯಲಿರುವ ಕೃಷಿ ಯಂತ್ರ ಮೇಳದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ಸಂಕಲ್ಪ ಅಭಿಯಾನ ಪುತ್ತೂರು ತಾಲೂಕಿನಾದ್ಯಂತ ನಡೆಯುತ್ತಿದ್ದು, ಫೆ. 11ರಂದು ಪುತ್ತೂರಿನಲ್ಲಿ ನಡೆಯಲಿರುವ ಅಭಿಯಾನದಲ್ಲಿ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಫೆ. 11ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ Read More »

ಪುತ್ತೂರಿನಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ

ಪುತ್ತೂರು : ಜೆಡಿಎಸ್ ಪಕ್ಷ ಜಾತ್ಯಾತೀತ ನೆಲೆಯಲ್ಲಿ ಜನಪರ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಪಕ್ಷವಾಗಿದ್ದು, ಮುಂದಿನ ದಿನಗಳಲ್ಲಿ ನಾಯಕರನ್ನು, ಕಾರ್ಯಕರ್ತರನ್ನು ಸೇರಿಸಿಕೊಂಡು ದ.ಕ ಜಿಲ್ಲೆಯಲ್ಲಿ ಪಕ್ಷವನ್ನು ಸಧೃಢವಾಗಿ ಸಂಘಟಿಸಲಾಗುವುದು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಪಕ್ಷದ ವತಿಯಿಂದ ಪಕ್ಷ ಸಂಘಟನೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದೆ ಎಂದು ಎಂದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು.ಅವರು ಸೋಮವಾರ ಪುತ್ತೂರು ಅಮರ್ ಕಾಂಪ್ಲೆಕ್ಸ್‌ನಲ್ಲಿ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ನಮ್ಮ ನಾಯಕ

ಪುತ್ತೂರಿನಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ Read More »

ವಿಜಯ ಸಂಕಲ್ಪ ಅಭಿಯಾನದ ಮೂಲಕ ಯೋಜನೆಗಳು ಪ್ರತೀ ಮನೆಗೆ ತಲುಪಬೇಕು : ಶಾಸಕ ಸಂಜೀವ ಮಠಂದೂರು

ವಿಟ್ಲ : ಕಮಲ ಕುಟುಂಬ ಮಿಲನ ಮತ್ತು ಕ್ರೀಡೋತ್ಸವ ಜ. 29ರಂದು ವಿಠಲ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು ಮಾತನಾಡಿ, ವಿಜಯ ಸಂಕಲ್ಪ ಅಭಿಯಾನದ ಮೂಲಕ ಪ್ರಧಾನಿ ಮೋದಿಯವರ ಯೋಜನೆಗಳು ಪ್ರತೀ ಮನೆಗೆ ತಲುಪಿಸುವ ಕಾರ್ಯ ಆಗಬೇಕು ಎಂದರು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ನಮ್ಮೆಲ್ಲ ಸದಸ್ಯರು ಒಂದೇ ಕುಟುಂಬದವರಂತೆ ಕ್ರೀಡೆಯಲ್ಲಿ ಭಾಗವಹಿಸುವ ಅವಕಾಶ ಇಂದಿನ ಕಾರ್ಯಕ್ರಮದಲ್ಲಿ ಸಿಕ್ಕಿದೆ ಎಂದರು. ಈ ಸಂದರ್ಭದಲ್ಲಿ

ವಿಜಯ ಸಂಕಲ್ಪ ಅಭಿಯಾನದ ಮೂಲಕ ಯೋಜನೆಗಳು ಪ್ರತೀ ಮನೆಗೆ ತಲುಪಬೇಕು : ಶಾಸಕ ಸಂಜೀವ ಮಠಂದೂರು Read More »

ಒಳಮೊಗ್ರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಪುತ್ತೂರು : ಒಳಮೊಗ್ರು ಗ್ರಾಮ ಪಂಚಾಯುತ್ ಸಾಮಾನ್ಯ ಸಭೆ ಸೋಮವಾರ ಗ್ರಾಪಂ ಸಭಾಂಗಣದಲ್ಲಿ ನಡೆಯಿತು.ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಅಕ್ರಮ ಸಕ್ರಮ ಯೋಜನೆಯಲ್ಲಿ ಜಾಗ ಮಂಜೂರಾತಿಗೊಳಿಸುವ ಸಂದರ್ಭ ಗ್ರಾಪಂ ರಸ್ತೆ ಇರುವ ಬಗ್ಗೆ ಹಾಗೂ ರಸ್ತೆಯು ಕನಿಷ್ಠ 6 ಮೀಟರ್ ಅಗಲ ಇರುವ ಬಗ್ಗೆ ನಕ್ಷೆಯಲ್ಲಿ ತೋರಿಸುವಂತೆ ತಹಶೀಲ್ದಾರ್‌ಗೆ ಪತ್ರ ಬರೆಯುವ ನಿರ್ಣಯ ಕೈಗೊಳ್ಳಲಾಯಿತು.ಹೆಣ್ಣು ಮಕ್ಕಳ ಶಾಲಾ ದಾಖಲಾತಿ ಪ್ರೋತ್ಸಾಹ ಮಾಡುವ ನಿಟ್ಟಿನಲ್ಲಿ ಗ್ರಾಪಂ ವ್ಯಾಪ್ತಿಯ ಶಾಲೆ ಮತ್ತು ಅಂಗನವಾಡಿಗಳಲ್ಲಿ ಹೊಸದಾಗಿ ದಾಖಲಾದ

ಒಳಮೊಗ್ರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ Read More »

ಜಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಹಿರಿಯ ಭೂವಿಜ್ಞಾನಿ ದಾವೂದ್
ಪುತ್ತೂರು ತಾ.ಪಂ.ನಲ್ಲಿ ಜಿಲ್ಲಾ ಅಂತರ್ಜಲ ಇಲಾಖೆಯಿಂದ ಅಂತರ್ಜಲ ಕಾರ್ಯಾಗಾರ

ಪುತ್ತೂರು : ಅಂತರ್ಜಲ ನಿರ್ದೇಶನಾಲಯ, ಬೆಂಗಳೂರು ಹಾಗೂ ಜಿಲ್ಲಾ ಅಂತರ್ಜಲ ಕಛೇರಿ ಜಂಟಿ ಆಶ್ರಯದಲ್ಲಿ ಮಳೆ ನೀರಿನ ಸಂಗ್ರಹಣೆ ಮತ್ತು ಮರುಬಳಕೆ, ಅಂತರ್ಜಲ ಸಂರಕ್ಷಣೆ, ಕಲುಷಿತತೆ ತಡೆಗಟ್ಟುವಿಕೆ, ತೆರೆದ/ ತ್ಯಕ್ತ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬೀಳದಂತೆ ನಿಯಂತ್ರಿಸುವ ಹಾಗೂ ಅಂತರ್ಜಲ ಅಭಿವೃದ್ಧಿ, ಸದ್ಭಳಕೆ ಕುರಿತ ಅಂತರ್ಜಲ ಕಾರ್ಯಾಗಾರ ಸೋಮವಾರ ತಾಪಂ ಸಭಾಂಗಣದಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಅಂತರ್ಜಲ ಇಲಾಖೆಯ ಹಿರಿಯ ಭೂವಿಜ್ಞಾನಿ ಶೇಕ್ ದಾವೂದ್, ಭೂಮಿಯ ಮೇಲಿರುವ ಎಲ್ಲಾ ಜೀವ ಸಂಕುಲಗಳಿಗೆ ನೀರೇ ಜೀವಾಳ. ನೀರಿನ

ಜಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಹಿರಿಯ ಭೂವಿಜ್ಞಾನಿ ದಾವೂದ್
ಪುತ್ತೂರು ತಾ.ಪಂ.ನಲ್ಲಿ ಜಿಲ್ಲಾ ಅಂತರ್ಜಲ ಇಲಾಖೆಯಿಂದ ಅಂತರ್ಜಲ ಕಾರ್ಯಾಗಾರ
Read More »

ಮಹಾತ್ಮ ಗಾಂಧೀಜಿ ಹುತಾತ್ಮ ದಿನ | ಪುತ್ತೂರು ಗಾಂಧೀ ಕಟ್ಟೆಯಲ್ಲಿ ಸೈರನ್, ಗಾಂಧಿ ಪ್ರತಿಮೆಗೆ ಗೌರವಾರ್ಪಣೆ

ಪುತ್ತೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ದಿನವಾದ ಸೋಮವಾರ ಪುತ್ತೂರಿನ ಗಾಂಧೀ ಕಟ್ಟೆಯಲ್ಲಿ ಗಾಂಧೀಜಿ ಅವರ ಪ್ರತಿಮೆಗೆ ಗೌರವಾರ್ಪಣೆ ಹಾಗೂ ಸೈರನ್ ಮೊಳಗಿಸುವ ಮೂಲಕ ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಅವರು ೧೯೩೪ರಲ್ಲಿ ಪುತ್ತೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಇಲ್ಲಿನ ಗಾಂಧೀಕಟ್ಟೆಯ ಬಳಿಯಲ್ಲಿದ್ದ ಅಶ್ವಥ ವೃಕ್ಷದ ಅಡಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಬಳಿಕ ಈ ಸ್ಥಳದಲ್ಲಿ ಗಾಂಧೀ ಕಟ್ಟೆ ಸಮಿತಿಯ ವತಿಯಿಂದ ಗಾಂಧೀ ಕಟ್ಟೆಯನ್ನು ನಿರ್ಮಿಸಲಾಗಿತ್ತು. ಈ ಸ್ಥಳದಲ್ಲಿ ಪ್ರತಿವರ್ಷವೂ ಗಾಂಧೀ ಜಯಂತಿ, ಸ್ವಾತಂತ್ರ್ಯೋತ್ಸವ ಗಾಂಧೀ ಹುತಾತ್ಮ

ಮಹಾತ್ಮ ಗಾಂಧೀಜಿ ಹುತಾತ್ಮ ದಿನ | ಪುತ್ತೂರು ಗಾಂಧೀ ಕಟ್ಟೆಯಲ್ಲಿ ಸೈರನ್, ಗಾಂಧಿ ಪ್ರತಿಮೆಗೆ ಗೌರವಾರ್ಪಣೆ Read More »

error: Content is protected !!
Scroll to Top