ಕಾರ್ಪಾಡಿ ದೇವಳದ ಜೀರ್ಣೋದ್ಧಾರ ಹಿನ್ನೆಲೆ: ಬೈಲ್ವಾರು ಸಭೆ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಕಾರ್ಯ ಪ್ರಯುಕ್ತ ಒಳತ್ತಡ್ಕ, ಗೆಣಸಿನಕುಮೇರು, ಮೇಗಿನಪಂಜ, ಬಂಗಾರಡ್ಕ, ಕುಂಜೂರುಪಂಜ, ದೊಡ್ಡಡ್ಕ  ಭಾಗದ ಭಕ್ತಾಧಿಗಳ ಬೈಲ್ವಾರ್ ಸಭೆ  ದೇವಸ್ಯದ ಧರ್ಮಸ್ಥಳ ಸಭಾ ಭವನದಲ್ಲಿ ನಡೆಯಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ವ್ಯವಸ್ಥಾಪನಾ ಸಮತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ಜತೆ ಕಾರ್ಯದರ್ಶಿ ಗಿರೀಶ್ ಕಿನ್ನಿಜಾಲು, ಉಪಾಧ್ಯಕ್ಷ ನಾರಾಯಣ ನಾಯ್ಕ್ ಗೆಣಸಿನ ಕುಮೇರ್ ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರಾದ ರುಕ್ಮಯ ಕುಲಾಲ್ ಸ್ವಾಗತಿಸಿದರು.

ಕಾರ್ಪಾಡಿ ದೇವಳದ ಜೀರ್ಣೋದ್ಧಾರ ಹಿನ್ನೆಲೆ: ಬೈಲ್ವಾರು ಸಭೆ Read More »

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಗಡಿನಾಡ ಸಂಸ್ಕೃತಿ ಉತ್ಸವಕ್ಕೆ ಚಾಲನೆ

ಪುತ್ತೂರು: 75 ನೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ಸರಕಾರ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ನೃತ್ಯೋಪಾಸನಾ ಕಲಾಕೇಂದ್ರ ಆಯೋಜನೆಯಲ್ಲಿ ವಿವೇಕಾನಂದ ಮಹಾವಿದ್ಯಾಲಯದಲ್ಲಿ ನಡೆಯುವ ಗಡಿನಾಡ ಸಂಸ್ಕೃತಿ ಉತ್ಸವ – ಗೌರವ ಸನ್ಮಾನ, ವಿಚಾರಗೋಷ್ಠಿ, ಸಾಂಸ್ಕೃತಿಕ ಉತ್ಸವಗಳಿಗೆ ಜ. 26ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕರವರು ‘ಭಾರತದಲ್ಲಿನ ಮೂಲ ಚಿಂತನೆಗಳನ್ನು ನಾಶ ಮಾಡುವ ಪ್ರಯತ್ನ ನಡೆಯುತ್ತಲೇ ಇದೆ. ಆದರೂ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಗಡಿನಾಡ ಸಂಸ್ಕೃತಿ ಉತ್ಸವಕ್ಕೆ ಚಾಲನೆ Read More »

ನಮ್ಮ ಹೆಮ್ಮೆಯ ಗಣತಂತ್ರ, ಸ್ವತಂತ್ರ ಭಾರತ

ಜಗತ್ತಿನ ಅತ್ಯಂತ ವಿಸ್ತಾರವಾದ ಸಂವಿಧಾನ ಅಂಗೀಕಾರವಾದ ದಿನವಿದು ತಮಗೆಲ್ಲ ಭಾರತದ ಗಣರಾಜ್ಯ ಉತ್ಸವದ ಹಾರ್ದಿಕವಾದ ಶುಭಾಶಯಗಳು. ಜನವರಿ 26 ಭಾರತಕ್ಕೆ, ಭಾರತೀಯರಿಗೆ ಅತ್ಯಂತ ಪವಿತ್ರ ದಿನ. ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯದ ಹಬ್ಬಕ್ಕಿಂತ ಇದು ಹೆಚ್ಚು ಮುಖ್ಯವಾದುದು.ಆಗಸ್ಟ್ 15,1947ರಂದು ಬ್ರಿಟಿಷರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ನೀಡಿದಾಗ ನಮಗೆ ಪೂರ್ಣ ಪ್ರಮಾಣದ ಸ್ವರಾಜ್ಯವು ಸಿಕ್ಕಿರಲಿಲ್ಲ. ಆ ದಿನದಲ್ಲಿ ನಮಗೆ ರಾಜಕೀಯ ಸ್ವಾತಂತ್ರ್ಯ ಮಾತ್ರ ದೊರೆತಿತ್ತು. 1947-1950ರ ಅವಧಿಯಲ್ಲಿ ಭಾರತವನ್ನು ‘ರಿಪಬ್ಲಿಕ್ ದೇಶ’ ಎಂದು ಕರೆಯದೆ ‘ಡೊಮಿನಿಯನ್ ರಿಪಬ್ಲಿಕ್’ ಹೆಸರಿನಿಂದ ಕರೆಯುತ್ತಿದ್ದರು.

ನಮ್ಮ ಹೆಮ್ಮೆಯ ಗಣತಂತ್ರ, ಸ್ವತಂತ್ರ ಭಾರತ Read More »

ಜ.28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೂರ್ಯ ನಮಸ್ಕಾರ

ಪುತ್ತೂರು: ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿ ವತಿಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯಲ್ಲಿ ರಥಸಪ್ತಮಿ ಅಂಗವಾಗಿ ಜ. 28ರಂದು ಬೆಳಿಗ್ಗೆ 5ರಿಂದ 7 ಗಂಟೆಯವರೆಗೆ 108 ಸೂರ್ಯ ನಮಸ್ಕಾರ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ದೇವಳದ ಮುಖಮಂಟಪದಲ್ಲಿ ಅಖಂಡ ಸೂರ್ಯನಮಸ್ಕಾರ ನಡೆಯಲಿದೆ. ಕರ್ನಾಟಕ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ನೇತ್ರಾವತಿ ವಲಯದ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ

ಜ.28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೂರ್ಯ ನಮಸ್ಕಾರ Read More »

ಜಯಂತ್ಯೋತ್ಸವ ಸಂಸ್ಮರಣೆ: ಶಾಸಕರ ನೇತೃತ್ವದಲ್ಲಿ ದೇವರಮಾರು ಗದ್ದೆ ಶುಚಿತ್ವ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆಯ ಬಳಿಕ ದೇವರಮಾರು ಗದ್ದೆಯಲ್ಲಿ ಬಿದ್ದಿದ್ದ ಕಸ – ತ್ಯಾಜ್ಯವನ್ನು ಹೆಕ್ಕುವ ಮೂಲಕ ಶಾಸಕ ಸಂಜೀವ ಮಠಂದೂರು ಅವರು ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಜಯಂತ್ಯೋತ್ಸವ ಸಂಸ್ಮರಣೆ ಬಳಿಕ ದೇವರಮಾರು ಗದ್ದೆಯಲ್ಲಿ ತ್ಯಾಜ್ಯ ಎಲ್ಲೆಂದರಲ್ಲಿ ಬಿದ್ದಿತ್ತು. ಇದನ್ನು ಗಮನಿಸಿದ ಸಂಸ್ಮರಣಾ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಮತ್ತವರ ತಂಡ ತ್ಯಾಜ್ಯವನ್ನು ಹೆಕ್ಕಿದ್ದಾರೆ. ಬಳಿಕ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದಾರೆ. ಈ ಮೂಲಕ ದೇವಸ್ಥಾನದ ಆವರಣವನ್ನು ಶುಚಿಯಾಗಿಡುವ ಕೆಲಸ

ಜಯಂತ್ಯೋತ್ಸವ ಸಂಸ್ಮರಣೆ: ಶಾಸಕರ ನೇತೃತ್ವದಲ್ಲಿ ದೇವರಮಾರು ಗದ್ದೆ ಶುಚಿತ್ವ Read More »

ಸವಣೂರು ಮಾಲೆತ್ತಾರು, ಚೌಕಿಮಠ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಸವಣೂರು ಗ್ರಾಮ ದೈವ ಶಿರಾಡಿ, ರಕ್ತೇಶ್ವರಿ, ಮಹಿಷಂತ್ತಾಯ ದೈವಗಳ ದೈವಸ್ಥಾನ ಮಾಲೆತ್ತಾರು ಹಾಗೂ ಚೌಕಿಮಠ ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಜರಗಿತು. ಪೂರ್ವಾಹ್ನ ಮಾಲೆತ್ತಾರು ಶಿರಾಡಿ ದೈವಸ್ಥಾನದಲ್ಲಿ ಗಣಹೋಮ, ತಂಬಿಲ, ಸಂಜೆ ಚೌಕಿಮಠ ರಕ್ತೇಶ್ವರಿ ಮತ್ತು ಮಹಿಷಂತ್ತಾಯ ದೈವಸ್ಥಾನದಲ್ಲಿ ತಂಬಿಲ ಸೇವೆ ಜರಗಿತು. ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ನಾರಾಯಣ ಬಡೆಕಿಲ್ಲಾಯರವರು ಪೂಜಾ ವಿಧಿವಿಧಾನವನ್ನು ನೇರವೇರಿಸಿದರು. ಅರ್ಚಕ ಕಾರ್ತಿಕ್ ಬಡೆಕಿಲ್ಲಾಯ ಸಹಕರಿಸಿದರು. ದೈವಸ್ಥಾನದ ಆಡಳಿತದಾರರಾದ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಸವಣೂರು ಗ್ರಾಮ ದೈವ ಜೀರ್ಣೋದ್ಧಾರ ಸಮಿತಿಯ

ಸವಣೂರು ಮಾಲೆತ್ತಾರು, ಚೌಕಿಮಠ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ Read More »

ದೇಸೀಯ ಉತ್ಪನ್ನಗಳಿಗೆ ಬೆಂಬಲ ನೀಡಿದಾಗ ದೇಶ ಅಭಿವೃದ್ಧಿ | ಅಂಬಿಕಾ ಮಹಾವಿದ್ಯಾಲಯದಲ್ಲಿ ವೆಂಚುರಾ – ವಾಣಿಜ್ಯ ಸ್ಪರ್ಧೆ ಸಮಾರೋಪದಲ್ಲಿ ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ದೇಶದ ಬಗೆಗೆ ಅಭಿಮಾನವನ್ನು ಬೆಳೆಸುವಂತಹ ಕಾರ್ಯಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳು ಬೆಳೆಯಬೇಕು. ದೇಸೀಯ ಸಾಧಕರು, ಅವರ ಸಾಧನೆಗಳು ನಮ್ಮ ಆದರ್ಶವಾಗಬೇಕು. ನಮ್ಮನ್ನು ಆಕರ್ಷಿಸುವ ಅನೇಕ ವಿದೇಶೀ ಮೂಲದ ವಸ್ತುಗಳಿದ್ದರೂ ನಮ್ಮ ನೆಲದ ಉತ್ಪನ್ನಗಳಿಗೆ ನಾವು ಬೆಂಬಲ ನೀಡಬೇಕು. ದೇಶಕ್ಕೆ ಸಂಕಷ್ಟ ಒದಗಿದಾಗ ನೆರವಾಗುವವರು ನಮ್ಮವರೇ ಹೊರತು ಅನ್ಯರಲ್ಲ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ

ದೇಸೀಯ ಉತ್ಪನ್ನಗಳಿಗೆ ಬೆಂಬಲ ನೀಡಿದಾಗ ದೇಶ ಅಭಿವೃದ್ಧಿ | ಅಂಬಿಕಾ ಮಹಾವಿದ್ಯಾಲಯದಲ್ಲಿ ವೆಂಚುರಾ – ವಾಣಿಜ್ಯ ಸ್ಪರ್ಧೆ ಸಮಾರೋಪದಲ್ಲಿ ಸುಬ್ರಹ್ಮಣ್ಯ ನಟ್ಟೋಜ Read More »

ವ್ಯಕ್ತಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದು ಸ್ನಾತಕೋತ್ತರ ವಿದ್ಯಾರ್ಥಿಗಳ ಮುಖ್ಯಗುರಿ:ವಂ|ಡಾ|ಆ್ಯಂಟನಿ ಪ್ರಕಾಶ್ಮೊಂತೆರೋ

ಪುತ್ತೂರು: ಸಂತಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ವಂ| ಡಾ| ಆಂಟನಿಪ್ರಕಾಶ್ ಮೊಂತೆರೊರವರು“ವಿದ್ಯಾರ್ಥಿಗಳು ತಮ್ಮ ವರ್ತನೆ, ವ್ಯಕ್ತಿತ್ವ ಮತ್ತು ಭಾಷೆಯ ಮೇಲೆ ಮುಖ್ಯವಾಗಿ ಗಮನ ಹರಿಸಬೇಕು. ವಿದ್ಯಾರ್ಥಿಗಳು ಮಾನಸಿಕ, ದೈಹಿಕ ಮತ್ತು ಆಧ್ಯಾತ್ಮಿಕ ದೃಷ್ಟಿಕೋನಗಳನ್ನು ಅರ್ಥಪೂರ್ಣವಾಗಿ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ, ವಿದ್ಯಾರ್ಥಿಗಳು ಪಠ್ಯ,ಸಹಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಹೃದಯ, ಬುದ್ಧಿ ಮತ್ತು ದೇಹಕ್ಕೆ ತರಬೇತಿ ನೀಡುವತ್ತ ಗಮನ ಹರಿಸಬೇಕು” ಎಂದು ಹೇಳಿದರು. ಈ ಸಂರ್ಭದಲ್ಲಿ ಕಾಲೇಜಿನ

ವ್ಯಕ್ತಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದು ಸ್ನಾತಕೋತ್ತರ ವಿದ್ಯಾರ್ಥಿಗಳ ಮುಖ್ಯಗುರಿ:ವಂ|ಡಾ|ಆ್ಯಂಟನಿ ಪ್ರಕಾಶ್ಮೊಂತೆರೋ Read More »

ಅಂಗನವಾಡಿಗೆ ನೂತನ ಕಟ್ಟಡಭಾಗ್ಯ | ಶಾಸಕರ ಮುತುವರ್ಜಿಯಲ್ಲಿ ಹರಿದು ಬಂದ 1.44 ಕೋಟಿ ರೂ.

ಪುತ್ತೂರು: ಮಕ್ಕಳ ಭವಿಷ್ಯ ರೂಪಿಸುವ ಮೊದಲ ಶಾಲೆಯೇ ಅಂಗನವಾಡಿ. ಇಡೀಯ ಶಿಕ್ಷಣದ ಮೂಲಪಾಠವನ್ನು ನೀಡುವ ಅಂಗನವಾಡಿಗಳೇ ಪ್ರತಿಯೊಂದು ಮಗುವಿನ ಆರಂಭ. ಶಿಕ್ಷಣ ಮಾತ್ರವಲ್ಲ, ಪೌಷ್ಠಿಕ ಆಹಾರವೂ ಇಲ್ಲಿ ಲಭ್ಯ. ಹಾಗಿರುವಾಗ ಅಂಗನವಾಡಿ ಕಟ್ಟಡಗಳು ಹೇಗಿರಬೇಕು? ಸುವ್ಯವಸ್ಥಿತ ಕಟ್ಟಡ, ಮೂಲಸೌಕರ್ಯ, ಪೌಷ್ಠಿಕ ಆಹಾರ, ಪುಟಾಣಿಗಳ ಕಲಿಕೆಗೆ ಪೂರಕ ವ್ಯವಸ್ಥೆಗಳು ಮೂಲಭೂತವಾಗಿ ಬೇಕೇಬೇಕು. ಇವನ್ನು ಪೂರೈಸುವ ದೃಷ್ಟಿಯಿಂದ ಮೂಲಭೂತವಾಗಿ ಬೇಕಾಗಿರುವ ಕಟ್ಟಡ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಿರುವ ಶಾಸಕ ಸಂಜೀವ ಮಠಂದೂರು ಅವರು, ತನ್ನ ಶಾಸಕತ್ವದ ಅವಧಿಯಲ್ಲಿ 12 ಅಂಗನವಾಡಿ

ಅಂಗನವಾಡಿಗೆ ನೂತನ ಕಟ್ಟಡಭಾಗ್ಯ | ಶಾಸಕರ ಮುತುವರ್ಜಿಯಲ್ಲಿ ಹರಿದು ಬಂದ 1.44 ಕೋಟಿ ರೂ. Read More »

ಮೋದಿ ಸಾಕ್ಷ್ಯಚಿತ್ರ ವೀಕ್ಷಣೆ : ಜೆಎನ್‌ಯು ಕ್ಯಾಂಪಸ್‌ ಉದ್ವಿಗ್ನ

ಚಿತ್ರ ವೀಕ್ಷಿಸಿದವರ ಮೇಲೆ ಕಲ್ಲು ತೂರಾಟ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಗ್ರಸ್ತ ಸಾಕ್ಷ್ಯಚಿತ್ರ ವೀಕ್ಷಣೆ ಜೆಎನ್‌ಯು ಕ್ಯಾಂಪಸ್‌ನಲ್ಲಿ ಉದ್ವಿಗ್ನತೆ ಕಾರಣವಾಗಿದೆ. ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟದ ಆರೋಪ ಕೇಳಿ ಬಂದಿದೆ. ವಿಶ್ವವಿದ್ಯಾನಿಲಯದಲ್ಲಿ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಕೆಲವು ವಿದ್ಯಾರ್ಥಿಗಳ ಹಾಕಿಕೊಂಡ ಯೋಜನೆ ವಿಫಲವಾಗಿದೆ. ಸಾಕ್ಷ್ಯಚಿತ್ರ ವೀಕ್ಷಿಸದಂತೆ ತಡೆಯಲು ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಗಿತ್ತು ಫೋನ್‌ಗಳಲ್ಲಿ ಸಾಕ್ಷ್ಯಚಿತ್ರ ನೋಡುತ್ತಿದ್ದವರ ಮೇಲೆ ಎಬಿವಿಪಿಯವರು ಕಲ್ಲು ತೂರಿದ್ದಾರೆ ಎನ್ನಲಾಗಿದೆ.ಎಡಪಂಥೀಯ ಬೆಂಬಲಿಗರು ಇಬ್ಬರು ವಿದ್ಯಾರ್ಥಿಗಳನ್ನು ಹಿಡಿದಿದ್ದು

ಮೋದಿ ಸಾಕ್ಷ್ಯಚಿತ್ರ ವೀಕ್ಷಣೆ : ಜೆಎನ್‌ಯು ಕ್ಯಾಂಪಸ್‌ ಉದ್ವಿಗ್ನ Read More »

error: Content is protected !!
Scroll to Top