ಫೆ. 10 – 12: 5ನೇ ಕೃಷಿಯಂತ್ರ ಮೇಳ 2023, ಕನಸಿನ ಮನೆ ಬೃಹತ್ ಪ್ರದರ್ಶನ

ಪುತ್ತೂರು: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಕ್ಯಾಂಪ್ಕೋ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಇದರ ಆಶ್ರಯದಲ್ಲಿ ‘5ನೇ ಕೃಷಿ ಯಂತ್ರ ಮೇಳ-2023 ಹಾಗೂ ಕನಸಿನ ಮನೆ’ ಬೃಹತ್ ಪ್ರದರ್ಶನ ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಫೆ. 10ರಿಂದ 12ರವರೆಗೆ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ನಾಲ್ಕು ಯಂತ್ರಮೇಳಗಳು ಈ ವಿದ್ಯಾ […]

ಫೆ. 10 – 12: 5ನೇ ಕೃಷಿಯಂತ್ರ ಮೇಳ 2023, ಕನಸಿನ ಮನೆ ಬೃಹತ್ ಪ್ರದರ್ಶನ Read More »

ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಿ

ಪರೀಕ್ಷೆ ಒಂದು ಸಮಸ್ಯೆ ಅಲ್ಲ, ಅದೊಂದು ಅವಕಾಶ ನನಗೆ ಒಂದು ಬಹು ದೊಡ್ಡ ಕನಸಿದೆ. ಮಕ್ಕಳು ಪರೀಕ್ಷೆಗೆ ಹೋಗುವಾಗ ಜಾತ್ರೆಗೆ, ಸಾಂತ್‌ಮಾರಿಗೆ, ಉತ್ಸವಕ್ಕೆ ಹೋಗುವಷ್ಟೆ ಖುಷಿಯಿಂದ ಹೋಗಬೇಕು ಎಂದು. ಆದರೆ ಇಂದು ಹಾಗಾಗುತ್ತಿಲ್ಲ. ಪರೀಕ್ಷೆ ಒಂದು ಯುದ್ಧ ಎಂದು ನಾವೆಲ್ಲರೂ ಅವರ ತಲೆಗೆ ತುರುಕುತ್ತಿದ್ದೇವೆ. ಪರಿಣಾಮವಾಗಿ ಪರೀಕ್ಷೆ ಮುಗಿಯುವತನಕ ಮನೆಗಳಲ್ಲಿ ಅಘೋಷಿತವಾದ ಕರ್ಫ್ಯೂ ಘೋಷಣೆ ಆಗಿರುತ್ತದೆ. ಈ ಹೊತ್ತಲ್ಲಿ ಮನೆಗೆ ಯಾರಾದರೂ ಅತಿಥಿಗಳು ಬಂದರೂ ಕಣ್ಣು ಕೆಂಪು ಮಾಡಿ ಸ್ವಾಗತ ಮಾಡುವ ಪರಿಸ್ಥಿತಿ ಇಂದು ಇದೆ. ಮಕ್ಕಳ

ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಿ Read More »

ನಟ ಜಗ್ಗೇಶ್‍ಗೆ ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವದ ಆಮಂತ್ರಣ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜ. 22ರಂದು ನಡೆಯಲಿರುವ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣವನ್ನು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರಿಗೆ ನೀಡಲಾಯಿತು. ಶಾಸಕ ಸಂಜೀವ ಮಠಂದೂರು ಅವರ ಆಪ್ತ ಸಹಾಯಕ ವಸಂತ್ ಅವರು ಜಗ್ಗೇಶ್ ಅವರಿಗೆ ಆಮಂತ್ರಣ ನೀಡಿ, ಸಮಾರಂಭಕ್ಕೆ ಆಹ್ವಾನಿಸಿದರು. ಸಮಾರಂಭದಲ್ಲಿ ಭಾಗವಹಿಸಲಿರುವ ಮುಖ್ಯ ಅತಿಥಿಗಳ ಪೈಕಿ ಜಗ್ಗೇಶ್ ಅವರು ಕೂಡ ಒಬ್ಬರು. ಸಮಾರಂಭದಲ್ಲಿ ಪಾಲ್ಗೊಳ್ಳಲು ಪುತ್ತೂರಿಗೆ ಆಗಮಿಸಲಿರುವ ಜಗ್ಗೇಶ್ ಅವರು ನಂತರ

ನಟ ಜಗ್ಗೇಶ್‍ಗೆ ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವದ ಆಮಂತ್ರಣ Read More »

ಜಯಂತ್ಯೋತ್ಸವ ಸಂಸ್ಮರಣೆ : ಜ. 21ರಂದು ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮಕ್ಕೆ ಮುನ್ನದಿನವಾದ ಜ. 21ರಂದು ಸಂಜೆ 3.30ಕ್ಕೆ ದರ್ಬೆ ದುಗ್ಗಣ್ಣ ದೇರಣ್ಣ ಸಭಾಭವನದ ಬಳಿಯಿಂದ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಸಂಜೆ 3.30ಕ್ಕೆ ಸರಿಯಾಗಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ಸಿಗಲಿದೆ. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರು ತೆಂಗಿನಕಾಯಿ ಒಡೆದು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಜಯಂತ್ಯೋತ್ಸವ ಸಂಸ್ಮರಣೆ : ಜ. 21ರಂದು ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆಯಂದು ನಡೆಯಲಿದೆ ಭವ್ಯ ಶೋಭಾಯಾತ್ರೆ | ಶೋಭಾಯಾತ್ರೆಯಲ್ಲಿ ಭಾಗವಹಿಸಲಿವೆ ವೈವಿಧ್ಯಮಯ ಸ್ತಬ್ಧಚಿತ್ರಗಳು

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜ. 22ರಂದು ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಪೂರ್ವಭಾವಿಯಾಗಿ ಭವ್ಯ ಶೋಭಾಯಾತ್ರೆ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ದರ್ಬೆ ವೃತ್ತದಿಂದ ದೇವರಮಾರು ಗದ್ದೆಯವರೆಗೆ ನಡೆಯಲಿರುವ ಶೋಭಾಯಾತ್ರೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಜೊತೆಯಲ್ಲಿ ಮಹಾಸಂಸ್ಥಾನದ ಎಲ್ಲಾ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಮೆರವಣಿಗೆ ಆಕರ್ಷಕವಾಗಿ ಮೂಡಿಬರುವಂತಾಗಲು ವಿವಿಧ ಸ್ತಬ್ದಚಿತ್ರಗಳು ಮೆರುಗು ನೀಡಲಿವೆ. ಸ್ತಬ್ಧಚಿತ್ರಗಳ್ಯಾವುವು:ಮುಂಭಾಗದಿಂದ ಶೋಭಾಯಾತ್ರೆಯ ಮಾಹಿತಿಯನ್ನು ಸಾರುತ್ತಾ,

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆಯಂದು ನಡೆಯಲಿದೆ ಭವ್ಯ ಶೋಭಾಯಾತ್ರೆ | ಶೋಭಾಯಾತ್ರೆಯಲ್ಲಿ ಭಾಗವಹಿಸಲಿವೆ ವೈವಿಧ್ಯಮಯ ಸ್ತಬ್ಧಚಿತ್ರಗಳು Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ: ವಾಹನ ಪಾರ್ಕಿಂಗಿಗೆ ಸ್ಥಳ ನಿಗದಿ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಸಮಾರಂಭಕ್ಕೆ ರಾಜ್ಯಾದ್ಯಂತ ಜನರು ಆಗಮಿಸುವ ಹಿನ್ನೆಲೆಯಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆಗೆ ಜಾಗದ ವ್ಯವಸ್ಥೆ ಮಾಡಲಾಗಿದೆ. ಉಪ್ಪಿನಂಗಡಿ, ಬೆಳ್ತಂಗಡಿ, ಕಡಬ ಭಾಗದಿಂದ ಬರುವವರು ಪುತ್ತೂರು “ಎಪಿಎಂಸಿ ಮೈದಾನದಲ್ಲಿ ” ವಾಹನಗಳನ್ನು ಪಾರ್ಕ್ ಮಾಡಬಹುದು.ಸುಳ್ಯ ಭಾಗದಿಂದ ಬರುವವರು “ಕಿಲ್ಲೆ ಮೈದಾನ ಹಾಗೂ ಗೌಡ ಸಮುದಾಯ ಭವನದ ಎದುರು” ವಾಹನ ಪಾರ್ಕ್ ಮಾಡಲು ಅವಕಾಶ ಮಾಡಲಾಗಿದೆ. ಮಂಗಳೂರು, ಉಡುಪಿ ಭಾಗದಿಂದ ಬರುವವರು “ಬೈಪಾಸ್ ರಸ್ತೆಯಲ್ಲಿರುವ

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ: ವಾಹನ ಪಾರ್ಕಿಂಗಿಗೆ ಸ್ಥಳ ನಿಗದಿ Read More »

ಜ. 21ರಿಂದ 23: ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ಜಾತ್ರೆ, ನೂತನ ರಥ ಸಮರ್ಪಣೆ

ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ನೂತನ ರಥ ಸಮರ್ಪಣೆ, 108 ತೆಂಗಿನಕಾಯಿ ಮಹಾಗಣಪತಿ ಹೋಮ ಜ. 20ರಿಂದ 23ರವರೆಗೆ ನಡೆಯಲಿದೆ.ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಜ. 14ರಂದು ಗೊನೆ ಮುಹೂರ್ತ ನಡೆದಿದ್ದು, 15ರಂದು ನೂತನ ರಥ ಆಗಮಿಸಿದೆ. ಜ. 21ರಂದು ಬೆಳಿಗ್ಗೆ 7.30ಕ್ಕೆ ದೇವತಾ ಪ್ರಾರ್ಥನೆ ನಡೆದು, 8ರಿಂದ 108 ತೆಂಗಿನಕಾಯಿ ಮಹಾಗಣಪತಿ ಹೋಮ, ನಾಗನಕಟ್ಟೆಯಲ್ಲಿ ಕಲಶಾಭಿಷೇಕ, ತಂಬಿಲ ಸೇವೆ,

ಜ. 21ರಿಂದ 23: ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ಜಾತ್ರೆ, ನೂತನ ರಥ ಸಮರ್ಪಣೆ Read More »

ಕದ್ರಿ ದೇವಸ್ಥಾನದಲ್ಲೂ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಬ್ಯಾನರ್‌

ದೇವಸ್ಥಾನದ ಆಡಳಿತ ಮಂಡಳಿಯಿಂದ ಬ್ಯಾನರ್‌ ತೆರವು ಮಂಗಳೂರು : ಕರಾವಳಿಯಲ್ಲಿ ಅನ್ಯ ಧರ್ಮೀಯರಿಗೆ ಹಿಂದುಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲಿಕ್ಕೆ ಅವಕಾಶ ಕೊಡುತ್ತಿರುವುದಕ್ಕೆ ಪ್ರತಿರೋಧ ಮುಂದುವರಿದಿದೆ. ಇತ್ತೀಚೆಗೆ ಮಂಗಳರಿನ ಕಾವೂರು ಜಾತ್ರೆ ಸಂದರ್ಭದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಬ್ಯಾನರ್ ಅಳವಡಿಕೆಯಾಗಿತ್ತು. ಇದೀಗ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲೂ ಇದೇ ರೀತಿಯ ಬ್ಯಾನರ್ ಹಾಕಲಾಗಿದೆ. ಆದರೆ ಬ್ಯಾನರ್ ಅಳವಡಿಸಿದ ಕೆಲವೇ ಗಂಟೆಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಬ್ಯಾನರನ್ನು ತೆರವುಗೊಳಿಸಿದೆ.ಕದ್ರಿ ದೇವಸ್ಥಾನದಲ್ಲಿ ಜ.15ರಿಂದ ಜ.25ರವರೆಗೆ ವಾರ್ಷಿಕ ಜಾತ್ರೆ ನಡೆಯುತ್ತಿದ್ದು, ವಿಶ್ವ

ಕದ್ರಿ ದೇವಸ್ಥಾನದಲ್ಲೂ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಬ್ಯಾನರ್‌ Read More »

ಮೂವರು ಅನಾಥ ಸಹೋದರಿಯರು ಸಾಮೂಹಿಕ ಆತ್ಮಹತ್ಯೆ

9 ದಿನಗಳ ಬಳಿಕ ಹೊರ ಜಗತ್ತಿಗೆ ತಿಳಿಯಿತು ದಾರುಣ ಘಟನೆ ತುಮಕೂರು: ಅನಾಥರಾಗಿದ್ದ ಮೂವರು ಸಹೋದರಿಯರು ಮನೆಯಲ್ಲಿ ನೇಣು ಬಿಗಿದುಕೊಂಡು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ. 9 ದಿನಗಳ ಹಿಂದೆಯೇ ಈ ದಾರುಣ ಘಟನೆ ನಡೆದಿದ್ದು, ಕೊಳೆತ ವಾಸನೆ ಬಂದ ಬಳಿಕ ಸ್ಥಳೀಯರು ಗಮನಿಸಿದಾಗ ಗುರುವಾರ ಸಂಜೆ ಪ್ರಕರಣ ಬೆಳಕಿಗೆ ಬಂದಿದೆ.ಮೃತ ಸಹೋದರಿಯರನ್ನು ಬರಕನಹಾಲ್ ತಾಂಡ್ಯದ ರಂಜಿತಾ(24), ಚಂದನಾ(21 ) ಮತ್ತು ಬಿಂದು(18) ಎಂದು ಗುರುತಿಸಲಾಗಿದೆ.10

ಮೂವರು ಅನಾಥ ಸಹೋದರಿಯರು ಸಾಮೂಹಿಕ ಆತ್ಮಹತ್ಯೆ Read More »

ಅಶೋಕ್ ಕುಮಾರ್ ರೈ ಬಿಜೆಪಿ ಸದಸ್ಯನೇ ಅಲ್ಲವೆಂದ ಬಿಜೆಪಿ ಮುಖಂಡರು | 6 ವರ್ಷ ಹಿಂದೆಯೇ ಫಿಕ್ಸ್ ಆಗಿತ್ತೇ ಕಾಂಗ್ರೆಸ್ ಸೇರುವ ಪ್ಲಾನ್

ಪುತ್ತೂರು: ಕಾಂಗ್ರೆಸಿನ ಪುತ್ತೂರು ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರ ಹೆಸರು ಗಟ್ಟಿಯಾಗಿ ಕೇಳಿಬರುತ್ತಿರುವ ನಡುವೆಯೇ, ಅಶೋಕ್ ಕುಮಾರ್ ರೈ ಅವರು ಕಳೆದ 6 ವರ್ಷಗಳಿಂದ ಬಿಜೆಪಿ ಸದಸ್ಯತನವನ್ನೇ ನವೀಕರಿಸಿಲ್ಲ ಎಂಬ ಮಾಹಿತಿಯನ್ನು ಪುತ್ತೂರು ಬಿಜೆಪಿ ಪ್ರಮುಖರು ಖಾತ್ರಿ ಪಡಿಸಿದ್ದಾರೆ. ಅಶೋಕ್ ಕುಮಾರ್ ರೈ ಅವರು ಶಾಸಕ ಆಕಾಂಕ್ಷಿ ಅಭ್ಯರ್ಥಿ ಎನ್ನುವುದು ಕೆಲ ವರ್ಷಗಳಿಂದಲೇ ಪ್ರಚಲಿತದ್ದಲ್ಲಿತ್ತು. ಇದರಲ್ಲೇನು ಹೊಸತನವಿಲ್ಲ. ಆದರೆ ಏಕಾಏಕೀ ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿದ್ದಾರೆ ಎಂದರೆ ಹಲವರ ಹುಬ್ಬು ಗಂಟ್ಟಿಕ್ಕುವಂತೆ ಮಾಡಿತ್ತು. ಇದೀಗ ಇದಕ್ಕೂ

ಅಶೋಕ್ ಕುಮಾರ್ ರೈ ಬಿಜೆಪಿ ಸದಸ್ಯನೇ ಅಲ್ಲವೆಂದ ಬಿಜೆಪಿ ಮುಖಂಡರು | 6 ವರ್ಷ ಹಿಂದೆಯೇ ಫಿಕ್ಸ್ ಆಗಿತ್ತೇ ಕಾಂಗ್ರೆಸ್ ಸೇರುವ ಪ್ಲಾನ್ Read More »

error: Content is protected !!
Scroll to Top