ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಪ್ರವೀಣ್ ದೇರಾಜೆ ಪ್ರಥಮ

ಪುತ್ತೂರು: ಮಂಗಳವಾರ ಬೆಂಗಳೂರಿನಲ್ಲಿ  ನಡೆದ   ರಾಷ್ಟ್ರ ಮಟ್ಟದ ಮಾಸ್ಟರ್ ಅಥ್ಲೆಟಿಕ್ ನಲ್ಲಿ ಪ್ರವೀಣ್ ದೇರಾಜೆ ಅವರು 400 ಮೀ ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ, ಅವರು ದೇರಾಜೆ ಕುಶಾಲಪ್ಪ ಗೌಡರ ಪುತ್ರ

ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಪ್ರವೀಣ್ ದೇರಾಜೆ ಪ್ರಥಮ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ

ಪುತ್ತೂರು: ಏ.10 ರಿಂದ ನಡೆಯಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ ಮಂಗಳವಾರ ನಡೆಯಿತು. ದರ್ಬೆಯಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಬೊಳುವಾರಿನ ಆಂಜನೇಯ ಮಂತ್ರಾಲಯದ ಬಳಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ಡಾ.ಸುಧಾ ಎಸ್.ರಾವ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು.

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಜನಜಾಗೃತಿ ಸಭೆ | ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಜನಜಾಗೃತಿ ಸಭೆ ಪುತ್ತೂರು ಧರ್ಮಸ್ಥಳ ಸಭಾಭವನದಲಿ ನಡೆಯಿತು. ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಮಾಜಿ ಜಿಲ್ಲಾ ಜನಜಾಗೃತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ ಉದ್ಘಾಟಿಸಿದರು ಜನ ಜಾಗೃತಿ ಕಾರ‍್ಯಕ್ರಮದ ವಾರ್ಷಿಕ ವರದಿಯನ್ನು ತಾಲೂಕು ಯೋಜನಾಧಿಕಾರಿ ಆನಂದ ಕೆ. ಮಂಡಿಸಿದರು. ನಂತರ ಜನಜಾಗೃತಿ ಪ್ರಾದೇಶಿಕ ವಿಭಾಗದ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಜನ ಜಾಗೃತಿ ಕರ‍್ಯಕ್ರಮದ ಬಗ್ಗೆ ೨೦೨೩-೨೪ ಸಾಲಿನ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಜನಜಾಗೃತಿ ಸಭೆ | ಪದಾಧಿಕಾರಿಗಳ ಆಯ್ಕೆ Read More »

ಪಾನ್ – ಆಧಾರ್ ಲಿಂಕ್ ಆಗಿದೆಯೇ? ಪರಿಶೀಲಿಸಲು ಇಲ್ಲಿದೆ ನೋಡಿ ಲಿಂಕ್ | ಹೀಗೆ ಮಾಡಿ ಆಧಾರ್ – ಪಾನ್ ಕಾರ್ಡ್ ಲಿಂಕ್… | ಪಾನ್- ಆಧಾರ್ ಲಿಂಕ್ ಗಡು ಜೂನ್ 30ರವರೆಗೆ ವಿಸ್ತರಣೆ

ಪುತ್ತೂರು: ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವ ಕೊನೆ ದಿನವನ್ನು ಕೇಂದ್ರ ಸರಕಾರ ವಿಸ್ತರಣೆ ಮಾಡಿದೆ. ಜೂನ್ 30ರವರೆಗೆ ದಿನ ವಿಸ್ತರಿಸಿ ಆದೇಶ ಹೊರಡಿಸಿದ್ದು, ಜುಲೈ 1ರಿಂದ ಕಡ್ಡಾಯ ಎಂದು ತಿಳಿಸಿದೆ. ನಿಮ್ಮ ಪಾನ್ – ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಅಥವಾ ಆಗಿಲ್ಲವೇ ಎಂದು ಮೊದಲಾಗಿ ತಿಳಿದುಕೊಳ್ಳಬೇಕು. ಅದಕ್ಕಾಗಿ ಇಲ್ಲಿ ನೀಡಿರುವ ಲಿಂಕ್ ಅನ್ನು ಬಳಸಿಕೊಳ್ಳಿ. https://eportal.incometax.gov.in/iec/foservices/#/pre-login/link-aadhaar-status ಈ ಲಿಂಕನ್ನು ಪ್ರೆಸ್ ಮಾಡಿದರೆ, ಸಿಗುವ ಪೋರ್ಟಲ್ ನಲ್ಲಿ ಆಧಾರ್ ಹಾಗೂ ಪಾನ್ ಕಾರ್ಡಿನ

ಪಾನ್ – ಆಧಾರ್ ಲಿಂಕ್ ಆಗಿದೆಯೇ? ಪರಿಶೀಲಿಸಲು ಇಲ್ಲಿದೆ ನೋಡಿ ಲಿಂಕ್ | ಹೀಗೆ ಮಾಡಿ ಆಧಾರ್ – ಪಾನ್ ಕಾರ್ಡ್ ಲಿಂಕ್… | ಪಾನ್- ಆಧಾರ್ ಲಿಂಕ್ ಗಡು ಜೂನ್ 30ರವರೆಗೆ ವಿಸ್ತರಣೆ Read More »

ಲೋಕಾಯುಕ್ತ ದಾಳಿ ಪ್ರಕರಣ : ಮಾಡಾಳ್ ವಿರೂಪಾಕ್ಷಪ್ಪ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಲು ಮಾ.28 ರಂದು ಆದೇಶ ಹೊರಡಿಸಿದೆ. ಜಾಮೀನು ರದ್ದಾದ ನಂತರ ನಿನ್ನೆ ಸಂಜೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.ಆರೋಪಿ ಶಾಸಕರ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 1ರ ವರೆಗೆ

ಲೋಕಾಯುಕ್ತ ದಾಳಿ ಪ್ರಕರಣ : ಮಾಡಾಳ್ ವಿರೂಪಾಕ್ಷಪ್ಪ ಪೊಲೀಸ್ ಕಸ್ಟಡಿಗೆ Read More »

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 26 ರ ರಾತ್ರಿ ಕೆಯ್ಯೂರು ಗ್ರಾಮದಲ್ಲಿ ಸಂಭವಿಸಿದೆ. ಶೇಷಪ್ಪ ಪೂಜಾರಿ (75) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೇಷಪ್ಪ ಪೂಜಾರಿಯವರ ಅಳಿಯ ಗೋಪಾಲ ಪೂಜಾರಿ ತನ್ನ ಅತ್ತೆ, ಹೆಂಡತಿ, ಮಕ್ಕಳೊಂದಿಗೆ ಕೆಯ್ಯೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಗೆ ಹೋಗಿದ್ದು, ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದ ಶೇಷಪ್ಪ ಪೂಜಾರಿಯವರು ಮನೆಯ ಗೋಡೆಗೆ ಅಡ್ಡವಾಗಿ ಹಾಕಿದ ತೆಂಗಿನ ಮರದ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಆಧಾರ್‌ ಪಾನ್‌ ಗಡುವು ಜೂನ್‌ 30 ರವರೆಗೆ ವಿಸ್ತರಣೆ

ಮಂಗಳೂರು : ಪಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಿಸಲು ಇರುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ 2023ರ ಜೂನ್ 30ರವರೆಗೂ ವಿಸ್ತರಿಸಿದೆ. ಈ ಮೊದಲು 1 ಸಾವಿರ ರೂ ದಂಡ ಸಹಿತವಾಗಿ ಆಧಾರ್ ಹಾಗೂ ಪಾನ್ ಕಾರ್ಡ್ ಜೋಡಣೆಗೆ 2023ರ ಮಾರ್ಚ್ 31ರವರೆಗೆ ಸಮಯ ನೀಡಲಾಗಿತ್ತು. ಕೊನೆಯ ದಿನ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧದ ಜನರ ಆಕ್ರೋಶ ತೀವ್ರಗೊಂಡಿತ್ತು. ಜತೆಗೆ ಜೋಡಣೆಗೆ ವೇದಿಕೆಯಾಗಿರುವ ಆದಾಯ ತೆರಿಗೆ ಪೋರ್ಟಲ್‌ನಲ್ಲಿನ ಈ ವಿಭಾಗ ತೆರೆದುಕೊಳ್ಳುತ್ತಲೇ ಇರಲಿಲ್ಲ. ಈ ತಾಂತ್ರಿಕ ದೋಷದ

ಆಧಾರ್‌ ಪಾನ್‌ ಗಡುವು ಜೂನ್‌ 30 ರವರೆಗೆ ವಿಸ್ತರಣೆ Read More »

ಆಧಾರ್- ಪಾನ್ ಲಿಂಕ್ ಆಗದಿದ್ದರೆ ದಂಡ ಬಡವರಿಗೆ ಹೊರೆ | ರಾಜೀವ್ ಚಂದ್ರಶೇಖರ್ ಜೊತೆ ಮಾತುಕತೆ ನಡೆಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಆಧಾರ್ – ಪಾನ್ ಲಿಂಕ್ ಆಗದೇ ಇರುವವರು 1 ಸಾವಿರ ರೂ. ದಂಡ ಪಾವತಿಸಬೇಕು ಎಂಬ ಆದೇಶ ಬಡವರಿಗೆ ಹೊರೆಯಾಗಿ ಪರಿಣಮಿಸಿತ್ತು. ಈ ಸಮಸ್ಯೆಯ ಬಗ್ಗೆ ಶಾಸಕ ಸಂಜೀವ ಮಠಂದೂರು ಅವರು ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ರಾಜೀವ್ ಚಂದ್ರಶೇಖರ್ ಅವರ ಗಮನ ಸೆಳೆದಿದ್ದಾರೆ. ಸರಿಯಾದ ಮಾಹಿತಿ ಇರದೇ ಆಧಾರ್ – ಪಾನ್ ಕಾರ್ಡ್ ಲಿಂಕ್ ಮಾಡದೇ ಇರುವ ಬಡವರಿಗೆ ಇನ್ನೊಂದು ಅವಕಾಶ ಮಾಡಿಕೊಡಬೇಕು ಎಂದು ಸಚಿವರ ಗಮನಕ್ಕೆ ತಂದಿದ್ದಾರೆ. ಆಧಾರ್ – ಪಾನ್ ಕಾರ್ಡ್

ಆಧಾರ್- ಪಾನ್ ಲಿಂಕ್ ಆಗದಿದ್ದರೆ ದಂಡ ಬಡವರಿಗೆ ಹೊರೆ | ರಾಜೀವ್ ಚಂದ್ರಶೇಖರ್ ಜೊತೆ ಮಾತುಕತೆ ನಡೆಸಿದ ಶಾಸಕ ಸಂಜೀವ ಮಠಂದೂರು Read More »

ಅದಾನಿ ಮತ್ತು ವಾದ್ರಾ ಜೊತೆಯಿರುವ ಫೋಟೋ ಉಲ್ಲೇಖಿಸಿ ಸ್ಮೃತಿ ಇರಾನಿ ವಾಗ್ದಾಳಿ

ದೆಹಲಿ: ಉದ್ಯಮಿ ಗೌತಮ್ ಅದಾನಿ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.ಕೇಂದ್ರ ಸಚಿವೆ ಸ್ಮೃತಿ ಇರಾನಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ವಾಗ್ದಾಳಿ ನಡೆಸಿದ್ದು, ಗೌತಮ್ ಅದಾನಿ ಜೊತೆಗಿನ ರಾಬರ್ಟ್ ವಾದ್ರಾ ಅವರ ಹಳೆಯ ಫೋಟೋವನ್ನು ಬಹಿರಂಗಪಡಿಸಿರುವ ಸ್ಮೃತಿ ಇರಾನಿ ಇದು ಏನೆಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ಅದಾನಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನೆ ಮುಂದುವರಿದಿರುವಂತೆಯೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಂದು

ಅದಾನಿ ಮತ್ತು ವಾದ್ರಾ ಜೊತೆಯಿರುವ ಫೋಟೋ ಉಲ್ಲೇಖಿಸಿ ಸ್ಮೃತಿ ಇರಾನಿ ವಾಗ್ದಾಳಿ Read More »

ತಿರುಪತಿ ತಿರುಮಲ ದೇವಸ್ಥಾನಂ ಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ ಆರ್‌ಬಿಐ

ತಿರುಪತಿ: ಹುಂಡಿ ಮತ್ತು ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಲ್ಲಿ ವಿದೇಶಿ ಕೊಡುಗೆ ಕಾಯ್ದೆಯ (ಎಫ್‌ಸಿಆರ್‌ಎ) ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ ಗೆ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ 10ಕೋಟಿ ರೂಪಾಯಿ ದಂಡ ವಿಧಿಸಿದ್ದು, ಅಧಿಕಾರಿಗಳ ಚೌಕಾಶಿ ಬಳಿಕ 3 ಕೋಟಿ ರೂ ದಂಡ ಕಟ್ಟಲಾಗಿದೆ ಎಂದು ಹೇಳಲಾಗಿದೆ. ಕಳೆದ ಮೂರು ವರ್ಷಗಳಿಂದ ಟಿಟಿಡಿ ತನ್ನ ಎಫ್‌ಸಿಆರ್‌ಎ ನೋಂದಣಿಯನ್ನು ನವೀಕರಿಸಲು ಪ್ರಯತ್ನಿಸುತ್ತಿದೆ. ತಿರುಮಲದ ವೆಂಕಟೇಶ್ವರ ದೇವಸ್ಥಾನದ ವ್ಯವಹಾರಗಳನ್ನು ನಿರ್ವಹಿಸುವ ಟಿಟಿಡಿ ಮತ್ತು ರಾಜ್ಯ ಸರ್ಕಾರವು ಎಫ್‌ಸಿಆರ್‌ಎ

ತಿರುಪತಿ ತಿರುಮಲ ದೇವಸ್ಥಾನಂ ಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ ಆರ್‌ಬಿಐ Read More »

error: Content is protected !!
Scroll to Top