ಜ. 22: ದಕ್ಷಿಣ ಕನ್ನಡದಲ್ಲಿ ಸಂಘಟನೆ ಮಾಡಿದ್ದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ

ಪುತ್ತೂರು: 1979ರಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ದಕ್ಷಿಣ ಕನ್ನಡಕ್ಕೆ ಬಂದಿದ್ದರು. ಆಗ ಒಕ್ಕಲುತನ ಮಾಡುತ್ತಿದ್ದ ಮನೆಗಳಲ್ಲಿ ನಿಂತು, ಇಲ್ಲಿನ ಕೃಷಿ ಕಾರ್ಯದ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದರು. ಸಂಘಟನೆಯ ಕಾರ್ಯಕ್ಕೂ ಚಾಲನೆ ನೀಡಿ, ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನ ನಿರ್ಮಾಣಕ್ಕೆ, ಕೊಂಬೆಟ್ಟು ಐಟಿಐ ನಿರ್ಮಾಣಕ್ಕೆ ಕಾರಣಕರ್ತರಾದರು. ಅವರ ಈ ಎಲ್ಲಾ ಕೆಲಸಗಳನ್ನು ನೆನಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಜ. 22ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ […]

ಜ. 22: ದಕ್ಷಿಣ ಕನ್ನಡದಲ್ಲಿ ಸಂಘಟನೆ ಮಾಡಿದ್ದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ Read More »

ಮದ್ಯ ಸೇವನೆ ವಯೋಮಿತಿ ಇಳಿಸಲು ಚಿಂತನೆ

ಈ ನಿಯಮ ಜಾರಿಗೆ ಬಂದರೆ ಹದಿಹರೆಯದವರಿಗೂ ಸಿಗುತ್ತದೆ ಮದ್ಯ ಬೆಂಗಳೂರು: ಮದ್ಯ ಖರೀದಿ ಮತ್ತು ಸೇವನೆಯ ವಯಸ್ಸಿನ ಮಿತಿಯನ್ನು ಇಳಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಕರ್ನಾಟಕ ಅಬಕಾರಿ ಕಾಯ್ದೆ 1965ರ ಪ್ರಕಾರ ಮದ್ಯ ಖರೀದಿಸುವ ವಯಸ್ಸು 21 ವರ್ಷ ಇದೆ. ಈಗ ಈ ಮಿತಿಯನ್ನು 18 ವರ್ಷಕ್ಕೆ ಇಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಅಬಕಾರಿ ಇಲಾಖೆ ಜ.9ರಂದು ಕರಡು ಪ್ರಕಟಿಸಿದ್ದು, 30 ದಿನಗಳಲ್ಲಿ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು

ಮದ್ಯ ಸೇವನೆ ವಯೋಮಿತಿ ಇಳಿಸಲು ಚಿಂತನೆ Read More »

ಅವರ ಸಿನೆಮಾ, ಬದುಕು, ರಾಜಕೀಯ ಎಲ್ಲವೂ ವರ್ಣರಂಜಿತ

ತಮಿಳುನಾಡಿನ ಚಹರೆಯನ್ನೇ ಬದಲಾಯಿಸಿದ ಮಹಾನಾಯಕ! ತಮಿಳುನಾಡಿನ ಸಿನಿಮಾ ರಂಗ, ರಾಜಕೀಯ ಮತ್ತು ಸಾಂಸ್ಕೃತಿಕ ಅಸ್ಮಿತೆಯ ಚಹರೆಯನ್ನು ಬದಲಾಯಿಸಿದ ಓರ್ವ ವ್ಯಕ್ತಿ ಇದ್ದರೆ ಅದು ಎಂ.ಜಿ. ರಾಮಚಂದ್ರನ್. ಅವರ ಬದುಕಿನ ಪ್ರತಿ ಪುಟವೂ ಅವರ ಸಿನೆಮಾಗಳ ಹಾಗೆ ವರ್ಣರಂಜಿತ ಮತ್ತು ಸ್ಫೂರ್ತಿದಾಯಕ ಸಂಗತಿ. ಅನಾಥ ಬಾಲ್ಯದ ಅಸಹಾಯಕತೆ ನಿಮಗೆ ಆಶ್ಚರ್ಯ ಆಗಬಹುದು ಏಕೆಂದರೆ ಎಂ.ಜಿ.ಆರ್. ಹುಟ್ಟಿದ್ದು ತುಳುನಾಡಿನಲ್ಲಿ ಅಲ್ಲ. ಅವರು ಹುಟ್ಟಿದ್ದು ಶ್ರೀಲಂಕಾದಕ್ಯಾಂಡಿಯಲ್ಲಿ. ಅದೂ ಮಲಯಾಳಿ ಕುಟುಂಬದಲ್ಲಿ. ಎರಡೂವರೆ ವರ್ಷ ಪ್ರಾಯದಲ್ಲಿ ಅಪ್ಪನನ್ನು ಕಳೆದುಕೊಂಡಾಗ ತನ್ನ ಇಬ್ಬರು ಗಂಡು

ಅವರ ಸಿನೆಮಾ, ಬದುಕು, ರಾಜಕೀಯ ಎಲ್ಲವೂ ವರ್ಣರಂಜಿತ Read More »

ಮೊರಾರ್ಜಿ ವಸತಿ ಶಾಲೆಯ 80 ಮಕ್ಕಳು ಅಸ್ವಸ್ಥ

ಕೆಟ್ಟು ಹೋದ ಆಹಾರ ಸೇವನೆ ಶಂಕೆ ಶಿವಮೊಗ್ಗ: ಇಲ್ಲಿನ ಗೋಂದಿಚಟ್ನ ಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ಸೋಮವಾರ ಮಧ್ಯಾಹ್ನದ ಊಟ ಮುಗಿಸಿದ ಬಳಿಕ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಕ್ಕಳು ಅಸ್ವಸ್ಥಗೊಳ್ಳಲು ಆಹಾರ ಕಾರಣವೇ ಅಥವಾ ನೀರು ಕಾರಣವೇ ಎನ್ನುವುದು ಸ್ಪಷ್ಟವಾಗಿಲ್ಲ. ಮಧ್ಯಾಹ್ನದ ಚಪಾತಿ, ಅನ್ನ ಸಾಂಬಾರು ಸೇವಿಸಿದ ಬಳಿಕ ಮಕ್ಕಳಲ್ಲಿ ವಾಂತಿ ಮತ್ತು ಬೇಧಿ ಆರಂಭವಾಗಿದೆ.ಸುಮಾರು 250ಕ್ಕೂ ಹೆಚ್ಚು ಮಕ್ಕಳಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಮಧ್ಯಾಹ್ನ ಚಪಾತಿ

ಮೊರಾರ್ಜಿ ವಸತಿ ಶಾಲೆಯ 80 ಮಕ್ಕಳು ಅಸ್ವಸ್ಥ Read More »

ಮತ್ತೆ ಬಂದ ಮಾಸ್ಕ್‌, ಸ್ಯಾನಿಟೈಸರ್‌, ಸೋಷಿಯಲ್‌ ಡಿಸ್ಟನ್ಸ್‌

ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯಗೊಳಿಸಿ ಆದೇಶ ತಿರುವನಂತಪುರ : ಕೊರೊನ ವೈರಸ್‌ನ ಹೊಸ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗುವ ಅಪಾಯದಲ್ಲಿರುವುದರಿಂದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹೇಳಿದೆ. ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ ಸಮಾರಂಭಗಳಲ್ಲಿ ಜನರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಪಾಲಿಸುವಂತೆ ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಜನರಿಗೆ ನಿರ್ದೇಶನ ನೀಡಿದೆ. ಇದಲ್ಲದೆ

ಮತ್ತೆ ಬಂದ ಮಾಸ್ಕ್‌, ಸ್ಯಾನಿಟೈಸರ್‌, ಸೋಷಿಯಲ್‌ ಡಿಸ್ಟನ್ಸ್‌ Read More »

ಗ್ಯಾಸ್‌ ಸಿಲಿಂಡರ್‌ ತುಂಬಿಸಿಕೊಡಲಿದೆ ಕಾಂಗ್ರೆಸ್‌

ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಪುಕ್ಕಟೆ ಕೊಡುಗೆ ಬೆಂಗಳೂರು: ಮತದಾರರನ್ನು ಸೆಳೆಯಲು 200 ಯುನಿಟ್‌ ತನಕ ಉಚಿತ ವಿದ್ಯುತ್‌ ಕೊಡುವ ಭರವಸೆ ನೀಡಿದ್ದ ಕಾಂಗ್ರೆಸ್‌ ಇದೀಗ ಎರಡನೇ ಕೊಡುಗೆಯಾಗಿ ಮಹಿಳಾ ಮತದಾರರ ಮನಗೆಲ್ಲುವ ಸಲುವಾಗಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಕೊಡುವ ಇನ್ನೊಂದು ಆಕರ್ಷಕ ಪುಕ್ಕಟೆ ಕೊಡುಗೆಯ ಘೋಷಣೆ ಮಾಡಿದೆ.ಸೋಮವಾರ ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಎಂಬ ಯೋಜನೆಯನ್ನು

ಗ್ಯಾಸ್‌ ಸಿಲಿಂಡರ್‌ ತುಂಬಿಸಿಕೊಡಲಿದೆ ಕಾಂಗ್ರೆಸ್‌ Read More »

“ಪ್ರಭೋ ಶಕ್ತಿಮನ್ ಹಿಂದು ರಾಷ್ಟ್ರಾಂಗ ಭೂತಾ” | `ಪಂಚವಟಿ’ ಲೋಕಾರ್ಪಣೆ | ಶಿಸ್ತಿನ ಸಿಪಾಯಿಗಳ ಶಿಸ್ತುಬದ್ಧ ಕಾರ್ಯಾಲಯ

ಪುತ್ತೂರು: ಮುನಿ ಪುಂಗವರ ತಪಸ್ಸಿನ ಕೇಂದ್ರ ಪಂಚವಟಿಗೆ ಪೌರಾಣಿಕ ಮಹತ್ವ. ಪುತ್ತೂರಿನ ಆರ್.ಎಸ್.ಎಸ್. ಶಿಸ್ತುಬದ್ಧ ಸಿಪಾಯಿಗಳ ಕಾರ್ಯಾಲಯ ಪಂಚವಟಿಗೆ ಐತಿಹಾಸಿಕ ಮಹತ್ವ. ಸೋಮವಾರ ನಡೆದ ಶಿಸ್ತಿನ ಸಮಾರಂಭದಲ್ಲಿ ಪಂಚವಟಿ ಲೋಕಾರ್ಪಣೆಗೊಂಡಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ್ ಅವರು ಬೌದ್ಧಿಕಲ್ಲಿ ತಿಳಿಸಿದಂತೆ, “ಪುತ್ತೂರು ಜಿಲ್ಲೆಯ ಆರ್.ಎಸ್.ಎಸ್ ಕಾರ್ಯಾಲಯ ದೇಶಕ್ಕೆ ಮಾದರಿಯಾಗಿ ನಿಂತಿದೆ”. ಹಿಂದೆ ಪಂಚವಟಿ ಇದ್ದ ಜಾಗದಲ್ಲೇ ಹೊಸ ಕಟ್ಟಡ ತಲೆಎತ್ತಿದೆ. ಎರಡಂತಸ್ತಿನ ಬೃಹತ್ ಕಟ್ಟಡ, ಆರ್.ಎಸ್.ಎಸ್. ಕಾರ್ಯಚಟುವಟಿಕೆಗಳಿಗೆ ತೆರೆದುಕೊಂಡಿದೆ. ಕೇಶವಸ್ಮೃತಿ ಸಂವರ್ಧನ ಸಮಿತಿಯಡಿ

“ಪ್ರಭೋ ಶಕ್ತಿಮನ್ ಹಿಂದು ರಾಷ್ಟ್ರಾಂಗ ಭೂತಾ” | `ಪಂಚವಟಿ’ ಲೋಕಾರ್ಪಣೆ | ಶಿಸ್ತಿನ ಸಿಪಾಯಿಗಳ ಶಿಸ್ತುಬದ್ಧ ಕಾರ್ಯಾಲಯ Read More »

ಭಜನೆ, ಭಜಕರ ನಿಂದಿಸಿದ ಸಂಜೀವ ಪೂಜಾರಿ ಅಮಾನತು: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ

ಪುತ್ತೂರು: ಭಜನೆ, ಭಜಕರ ನಿಂದಿಸಿ ಹಿಂದೂ ಸಮಾಜದ, ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ಅಮಾನತುಗೊಳಿಸಿ ಶಿಸ್ತು ಪ್ರಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಭಜನೆ ಹಾಗೂ ಭಜಕರನ್ನು ಸಾಮಾಜಿಕ ಜಾಲತಾಣದ ನಿಂದಿಸಿ ಅವಮಾನಿಸಿದ್ದ ಸಂಜೀವ ಪೂಜಾರಿ, ಈ ಹಿಂದೆಯೂ ಹಲವಾರು ಬಾರಿ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದರು. ಕಡಬ ತಾಲೂಕಿನ ಹಿರೇಬಂಡಾಡಿ ಗ್ರಾಮಸಭೆಯಲ್ಲಿ ರೈತರ ಪ್ರಶ್ನೆಗೆ ಉಡಾಫೆಯಾಗಿ ಉತ್ತರಿಸಿದ್ದರು. ಇದು ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿ, ಇಲಾಖೆಗೂ ದೂರು ನೀಡಲಾಗಿತ್ತು.

ಭಜನೆ, ಭಜಕರ ನಿಂದಿಸಿದ ಸಂಜೀವ ಪೂಜಾರಿ ಅಮಾನತು: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ Read More »

ಸಿ.ಎ. ಗ್ರೂಪ್ ೧ ಪರೀಕ್ಷೆ ತೇರ್ಗಡೆ

ಅಂಬಿಕಾ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿನಿ ಸ್ವರ್ಣಾ ಶೆಣೈ ಪುತ್ತೂರು: ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ಕಳೆದ ನವೆಂಬರ್-ಡಿಸೆAಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ ೧ ವಿಭಾಗದ ಪರೀಕ್ಷೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಸ್ವರ್ಣಾ ಶೆಣೈ ಅವರು ರ್ತೇಡೆ ಹೊಂದಿದ್ದಾರೆ. ತನ್ಮೂಲಕ ಮುಂದಿನ ಹಂತದ ಗ್ರೂಪ್ 2 ಪರೀಕ್ಷೆಗಳನ್ನು ಎದುರಿಸುವುದಕ್ಕೆ ಅರ್ಹರಾಗಿದ್ದಾರೆ. ಇವರು ಪುತ್ತೂರಿನ ನೆಲ್ಲಿಕಟ್ಟೆ ನಿವಾಸಿಗಳು ಹಾಗೂ ಶೆಣೈ ಬ್ರರ‍್ಸ್

ಸಿ.ಎ. ಗ್ರೂಪ್ ೧ ಪರೀಕ್ಷೆ ತೇರ್ಗಡೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ: ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಪೂರ್ವಭಾವಿಯಾಗಿ ಜ. 16ರಂದು ಸಮಿತಿ ಕಾರ್ಯಾಲಯದಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರ ಅಧ್ಯಕ್ಷತೆಯಲ್ಲಿ ಸಿದ್ಧತಾ ಸಭೆ ನಡೆಯಿತು. ಶಾಸಕ ಸಂಜೀವ ಮಠಂದೂರು, ಬೆಳ್ಳಾರೆ ಜ್ಞಾನಗಂಗಾ ವಿದ್ಯಾಸಂಸ್ಥೆ ಸಂಚಾಲಕ ಎಂ.ಪಿ. ಉಮೇಶ್, ಸಾಜ ರಾಧಾಕೃಷ್ಣ ಆಳ್ವ, ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಸಂಸ್ಮರಣಾ ಸಮಿತಿಯ ಜಿಲ್ಲಾ ಸಂಚಾಲಕ ಚಿದಾನಂದ ಬೈಲಾಡಿ, ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ನಾಗೇಶ್ ಕೆಡೆಂಜಿ ಮೊದಲಾದವರು

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ: ಪೂರ್ವಭಾವಿ ಸಭೆ Read More »

error: Content is protected !!
Scroll to Top