ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ‌ಸ್ವಾಗತ

ಪುತ್ತೂರು: ಪುತ್ತೂರಿಗೆ ಆಗಮಿಸಿದ ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ ಸ್ವಾಗತ ನೀಡಲಾಯಿತು. ತಾಲೂಕು ಯುವಜನ ಒಕ್ಕೂಟ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ನೇತೃತ್ವದಲ್ಲಿ ಕಬಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಬಕ ಗ್ರಾಪಂ ಅಧ್ಯಕ್ಷ ವಿನಯ್ ಕಲ್ಲೇಗ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ಬಳಿಕ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪಕ್ಕೆ ಜಾಥಾದಲ್ಲಿ ತೆರಳಲಾಯಿತು.

ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ‌ಸ್ವಾಗತ Read More »

ಪುತ್ತೂರಿನಲ್ಲಿ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ: ಡಿ.ವಿ.ಸದಾನಂದ ಗೌಡರಿಗೆ ಆಮಂತ್ರಣ

ಪುತ್ತೂರು: ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣವನ್ನು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಅವರ ಬೆಂಗಳೂರಿನ ನಿವಾಸದಲ್ಲಿ ನೀಡಲಾಯಿತು. ಆಮಂತ್ರಣವನ್ನು ದೇವರ ಮುಂದೆ ಇಟ್ಟು ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಎಂ.ಪಿ ಉಮೇಶ್, ಯು.ಪಿ. ರಾಮಕೃಷ್ಣ ಉಪಸ್ಥಿತರಿದ್ದರು.

ಪುತ್ತೂರಿನಲ್ಲಿ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ: ಡಿ.ವಿ.ಸದಾನಂದ ಗೌಡರಿಗೆ ಆಮಂತ್ರಣ Read More »

ಬದಲಾಗುವ ಪ್ರಕೃತಿ ; ಬದಲಾಗಬೇಕಾದ ನಾವು

ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತಾನೆ ಎಂಬಲ್ಲಿಗೆ ನಾವೂ ಬದಲಾಗಬೇಕು ಅನ್ನುವುದು ಆಶಯ ಪ್ರಕೃತಿ ಕಾಲಕಾಲಕ್ಕೆ ಬದಲಾಗುತ್ತಾ ಹೋಗುತ್ತದೆ. ಯಾವುದೂ ಹಿಂದಿನಂತೆ ಇರುವುದಿಲ್ಲ. ಬದಲಾವಣೆಯೇ ಜಗದ ನಿಯಮ ಎಂದು ಮತ್ತೆ ಮತ್ತೆ ಸಾಬೀತು ಆಗುತ್ತಾ ಹೋಗಿದೆ.ಇವತ್ತು ಬೇಟೆಯಾಡುವ ಪ್ರಾಣಿ ನಾಳೆ ತಾನೇ ಬೇಟೆ ಆಗುತ್ತದೆ. ಇವತ್ತು ಅಧಿಕಾರ ಚಲಾಯಿಸುವ ಪ್ರಭುತ್ವ ನಾಳೆ ಬೀದಿಗೆ ಬಂದಿರುತ್ತದೆ. ಇವತ್ತು ಅಹಂಕಾರದಿಂದ ಮೇಲೆ ಏರಿದವನು ನಾಳೆ ಇಳಿಯುತ್ತಾನೆ ಅನ್ನುವುದೂ ಜಗತ್ತಿನ ನಿಯಮವೇ ಆಗಿದೆ. ಅಹಂಕಾರ ಎಲ್ಲಿಯೂ ಗೆದ್ದಿರುವ ಉದಾಹರಣೆ ಇಲ್ಲ. ತಲೆಗೆ ಹಾಕಿದ

ಬದಲಾಗುವ ಪ್ರಕೃತಿ ; ಬದಲಾಗಬೇಕಾದ ನಾವು Read More »

ಫೆಮಾ ಉಲ್ಲಂಘನೆ : ಮಂಗಳೂರಿನ ಉದ್ಯಮಿಯ ಕೋಟಿಗಟ್ಟಲೆ ರೂ. ಆಸ್ತಿ ಜಪ್ತಿ

ವಿದೇಶಗಳಲ್ಲಿ ಫ್ಲ್ಯಾಟ್‌ ಸೇರಿ ಅಪಾರ ಆಸ್ತಿ ಖರೀದಿ ಮಂಗಳೂರು : ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಮಂಗಳೂರಿನ ಉದ್ಯಮಿಯೊಬ್ಬರ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿ ಜಾರಿ ನಿರ್ದೇಶನಾಲಯ(ಇಡಿ) ಆದೇಶ ಹೊರಡಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ 17 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಮಂಗಳೂರಿನ ಮುಕ್ಕ ಗ್ರೂಪ್ ಆಫ್ ಕಂಪನಿಸ್‌ನ ಮೊಹಮ್ಮದ್ ಹ್ಯಾರಿಸ್ ಹೆಸರಿನಲ್ಲಿದ್ದ 17.34 ಕೋಟಿಯ ಸ್ಥಿರಾಸ್ತಿ ಜಪ್ತಿ ಮಾಡಲಾಗಿದೆ. ಆದಾಯ ತೆರಿಗೆ

ಫೆಮಾ ಉಲ್ಲಂಘನೆ : ಮಂಗಳೂರಿನ ಉದ್ಯಮಿಯ ಕೋಟಿಗಟ್ಟಲೆ ರೂ. ಆಸ್ತಿ ಜಪ್ತಿ Read More »

ಅಜ್ಞಾತ ಸ್ಥಳದಲ್ಲಿ ಸ್ಯಾಂಟ್ರೊ ರವಿ ವಿಚಾರಣೆ

ಇಂದು ನ್ಯಾಯಾಲಯಕ್ಕೆ ಹಾಜರು ಬೆಂಗಳೂರು: ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ, ಅತ್ಯಾಚಾರ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರುವ ಸ್ಯಾಂಟ್ರೊ ರವಿಯನ್ನು ಕರ್ನಾಟಕ ಪೊಲೀಸರು ಗುಜರಾತ್​ನಿಂದ ಬೆಂಗಳೂರಿಗೆ ವಿಮಾನದಲ್ಲಿ ಕರೆತಂದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಣ್ಣುತಪ್ಪಿಸಿ ರವಿಯನ್ನು ಪೊಲೀಸರು ಹೊರಗೆ ಕರೆದೊಯ್ದಿದ್ದಾರೆ. ನಿಲ್ದಾಣದ ಒಂದು ದ್ವಾರದಲ್ಲಿ ಎಲ್ಲರಿಗೂ ಕಾಣಿಸುವಂತೆ, ಮತ್ತೊಂದು ದ್ವಾರದಲ್ಲಿ ಗೌಪ್ಯವಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ವಿಮಾನ ನಿಲ್ದಾಣದ ಭದ್ರತಾಪಡೆಯ ಗೇಟ್‌ನಿಂದ ಹೊರಗೆ ಕರೆದೊಯ್ಯಲಾಗಿದೆ.ರಾಯಚೂರು, ಮಂಡ್ಯ ಹಾಗೂ ಮೈಸೂರು

ಅಜ್ಞಾತ ಸ್ಥಳದಲ್ಲಿ ಸ್ಯಾಂಟ್ರೊ ರವಿ ವಿಚಾರಣೆ Read More »

ಮಹಿಳಾ ಕ್ರಿಕೆಟರ್‌ ಶವ ಕಾಡಿನಲ್ಲಿ ಪತ್ತೆ

ಸಾವಿನ ಸುತ್ತ ಹಲವು ಅನುಮಾನ ಭುವನೇಶ್ವರ: ಒಡಿಶಾದ ಉದಯೋನ್ಮುಖ ಕ್ರಿಕೆಟ್ ಆಟಗಾರ್ತಿಯೊಬ್ಬರ ಶವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದೆ.ಕ್ರಿಕೆಟ್ ಆಟರ್ಗಾತಿ ರಾಜಶ್ರೀ ಸ್ವೈನಿ ಅವರ ಶವ ಕಟಕ್ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಜ.11ರಿಂದ ರಾಜಶ್ರೀ ನಾಪತ್ತೆಯಾಗಿದ್ದರು. ರಾಜಶ್ರೀ ಅವರ ತರಬೇತಿದಾರರು ಗುರುವಾರ ಕಟಕ್‌ನ ಮಂಗಳಬಾಗ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಗುರ್ಡಿ ಜಾಟಿಯಾ ಪೊಲೀಸ್ ಠಾಣೆಯಲ್ಲಿ ರಾಜಶ್ರೀ ಅವರ ಸಾವಿನ ಕುರಿತು ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ.

ಮಹಿಳಾ ಕ್ರಿಕೆಟರ್‌ ಶವ ಕಾಡಿನಲ್ಲಿ ಪತ್ತೆ Read More »

ಮೀಸಲಾತಿ ಎಂಬ ಜೇನುಗೂಡಿಗೆ ಕಲ್ಲು ಹೊಡೆದ ಬಳಿಕ…

ರಾಜಕೀಯ ಲಾಭಕ್ಕೆ ಅಸ್ತ್ರ ; ಸಂವಿಧಾನ ಆಶಯ ಬುಡಮೇಲು ಮೀಸಲಾತಿ ಸಂವಿಧಾನಿಕವಾಗಿ ಜಾರಿಯಾಗಿರುವ ಒಂದು ವ್ಯವಸ್ಥೆ. ಇದು ಕೆಳವರ್ಗದ ಜನರನ್ನು ಸಮಾಜದ ಎಲ್ಲ ರಂಗದಲ್ಲೂ ಪಾಲ್ಗೊಳ್ಳುವಂತೆ ಮಾಡಿ ತಾರತಮ್ಯ ಹೋಗಲಾಡಿಸುವ ಉದ್ದೇಶ ಹೊಂದಿದೆ. ಇದು ಸ್ವಲ್ಪಮಟ್ಟಿಗೆ ಯಶಸ್ವಿಯೂ ಆಗಿದೆ. ಆದರೆ ಇತ್ತೀಚೆಗೆ ಸರ್ಕಾರ ಈ ಮೀಸಲಾತಿ ಎಂಬ ಜೇನುಗೂಡನ್ನು ಕೆದಕಲು ಹೋಗಿ ಇರಲಾರದೆ ಇರುವೆ ಬಿಟ್ಟುಕೊಂಡಂತೆ ಆಗಿದೆ. ಇಂದು ಸಮಾಜದ ಹಲವಾರು ಪಂಗಡಗಳು ಮೀಸಲಾತಿ ವಿರುದ್ಧ ಧ್ವನಿ ಎತ್ತಲು ಶುರುಮಾಡಿವೆ.“ಮೀಸಲಾತಿ ಕುರಿತು ವೈಜ್ಞಾನಿಕವಾದ ಸ್ಪಷ್ಟ ನೀತಿ ರೂಪಿಸದ

ಮೀಸಲಾತಿ ಎಂಬ ಜೇನುಗೂಡಿಗೆ ಕಲ್ಲು ಹೊಡೆದ ಬಳಿಕ… Read More »

ಜಲಸಿರಿ ಯೋಜನೆಯ ಕಾಮಗಾರಿ | ಶಾಸಕರ ನೇತೃತ್ವದಲ್ಲಿ ಪರಿಶೀಲನಾ ಸಭೆ

ಪುತ್ತೂರು: ಜಲಸಿರಿ ಯೋಜನೆಯ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕಾಮಗಾರಿ ನಿರ್ವಹಿಸಬೇಕಾದ ಜವಾಬ್ದಾರಿ ಜಲಸಿರಿ ಯೋಜನೆಯ ಅಧಿಕಾರಿಗಳಿಗಿದೆ. ಕಾಮಗಾರಿ ನಡೆಸಿದಲ್ಲಿ ಹಿಂದಿನಂತೆ ರಸ್ತೆಯ ಪುನರ್‍ ನಿರ್ಮಾಣ, ಮುಂದೆ ಕಾಮಗಾರಿ ಆಗಬೇಕಾದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿ ನಿರ್ವಹಿಸುವಂತೆ ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದರು. ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ಜ. 13ರಂದು ನಡೆದ ಜಲಸಿರಿ ಯೋಜನೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಒಟ್ಟು 62 ದೂರುಗಳು ಜಲಸಿರಿ ಯೋಜನೆಯ

ಜಲಸಿರಿ ಯೋಜನೆಯ ಕಾಮಗಾರಿ | ಶಾಸಕರ ನೇತೃತ್ವದಲ್ಲಿ ಪರಿಶೀಲನಾ ಸಭೆ Read More »

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ವಿವೇಕಾನಂದ ಜಯಂತಿ ಆಚರಣೆ | ಖಾಲಿಯಾದ ವ್ಯಕ್ತಿತ್ವಗಳಿಗೆ ಸತ್ವ ತುಂಬಲು ಆದರ್ಶ ಪುರುಷರು ಬೇಕು : ರಾಕೇಶ್ ಕಮ್ಮಜೆ

ಪುತ್ತೂರು: ಹಳೆಯ ಮನೆಗಳ ಭಿತ್ತಿಗಳಲ್ಲಿ ಅನೇಕಾನೇಕ ಮಾದರಿಯೆನಿಸುವ ವ್ಯಕ್ತಿಗಳ ಫೋಟೋಗಳಿರುತ್ತಿದ್ದವು. ಆದರೆ ಹೊಸ ಮನೆಗಳನ್ನು ಕಟ್ಟಿಕೊಂಡಂತೆಲ್ಲ ಗೋಡೆಗಳು ಖಾಲಿಯಾಗುತ್ತಿವೆ. ಅತಿಯಾದ ಮೊಬೈಲ್ ಬಳಕೆಯಿಂದ ಗ್ರಂಥಾಲಯಗಳು ಖಾಲಿಯಾಗುತ್ತಿವೆ. ಪರಿಣಾಮವಾಗಿ ನಮ್ಮ ಜ್ಞಾನವೂ ಖಾಲಿಯಾಗಿ ವ್ಯಕ್ತಿತ್ವಗಳೂ ಖಾಲಿಯೆನಿಸುತ್ತಿವೆ. ಹೀಗೆ ಖಾಲಿಯಾದ ವ್ಯಕ್ತಿತ್ವಗಳನ್ನು ತುಂಬಿಕೊಳ್ಳುವುದಕ್ಕೆ ಸ್ವಾಮಿ ವಿವೇಕಾನಂದರoತಹ ವ್ಯಕ್ತಿತ್ವಗಳ ಆದರ್ಶಗಳು ಬೇಕಾಗಿವೆ ಎಂದು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಗುರುವಾರ ಆಯೋಜಿಸಲಾದ ಸ್ವಾಮಿ ವಿವೇಕಾನಂದ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ವಿವೇಕಾನಂದ ಜಯಂತಿ ಆಚರಣೆ | ಖಾಲಿಯಾದ ವ್ಯಕ್ತಿತ್ವಗಳಿಗೆ ಸತ್ವ ತುಂಬಲು ಆದರ್ಶ ಪುರುಷರು ಬೇಕು : ರಾಕೇಶ್ ಕಮ್ಮಜೆ Read More »

ಸ್ತ್ರೀ ಸ್ವಾತಂತ್ರ್ಯದ ಅರಿವಿನ ಕೊರತೆ ನೀಗಿಸಬೇಕಿದೆ: ರಾಜಶ್ರೀ ಎಸ್ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ತ್ರೀ ಸಬಲೀಕರಣದ ಕಾರ್ಯಾಗಾರ

ಪುತ್ತೂರು: ಸ್ತ್ರೀ ಸ್ವಾತಂತ್ರ್ಯದ  ಅರಿವಿನ ಕೊರತೆ ನಮ್ಮ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳಲ್ಲಿ ಒಂದಾಗಿದೆ. ಆದ್ದರಿಂದ ಈ ಬಗೆಗಿನ ಅರಿವನ್ನು ಹೆಣ್ಣುಮಕ್ಕಳಲ್ಲಿ ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೊಜ ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟಿನ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಿಶ್ವ ಹಿಂದೂ ಪರಿಷತ್, ದುರ್ಗಾ ವಾಹಿನಿ ಪುತ್ತೂರು ಹಾಗೂ ಅಂಬಿಕಾ ವಿದ್ಯಾಲಯದ ಸಹಯೋಗದೊಂದಿಗೆ ನಡೆದ ಸ್ತ್ರೀ ಸಬಲೀಕರಣದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಸನಾತನ ಸಂಸ್ಕೃತಿಯಲ್ಲಿ,

ಸ್ತ್ರೀ ಸ್ವಾತಂತ್ರ್ಯದ ಅರಿವಿನ ಕೊರತೆ ನೀಗಿಸಬೇಕಿದೆ: ರಾಜಶ್ರೀ ಎಸ್ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ತ್ರೀ ಸಬಲೀಕರಣದ ಕಾರ್ಯಾಗಾರ Read More »

error: Content is protected !!
Scroll to Top