ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವಮಣಿ ಕಲಾ ಸಂಘದಿಂದ ಸಾಂಸ್ಕೃತಿಕ ಕಲಾಸಂಗಮ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಧನುಪೂಜೆ ಪ್ರಯುಕ್ತ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜ. 13ರಂದು ಸಂಜೆ 5.30ರಿಂದ ನೆಹರೂನಗರ ರಕ್ತೇಶ್ವರಿ ವಠಾರದ ಶಿವಮಣಿ ಕಲಾ ಸಂಘದಿಂದ ಸಾಂಸ್ಕೃತಿಕ ಕಲಾಸಂಗಮ ನಡೆಯಲಿದೆ. ಕಲಾಸಂಗಮದಲ್ಲಿ ಭಕ್ತಿಗಾನ ಭಜನಾಮೃತ, ಭಕ್ತಿರಸಮಂಜರಿ, ಸಾಂಪ್ರದಾಯಿಕ ನೃತ್ಯ, ಯಕ್ಷಗಾನ ನೃತ್ಯ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಸಂಚಾಲಕ ಮನುಕುಮಾರ್ ಶಿವನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವಮಣಿ ಕಲಾ ಸಂಘದಿಂದ ಸಾಂಸ್ಕೃತಿಕ ಕಲಾಸಂಗಮ Read More »

ಜ. 13ರಂದು ನಗರಸಭೆ ಬಜೆಟ್ ಪೂರ್ವಭಾವಿ ಸಭೆ

ಪುತ್ತೂರು: ನಗರಸಭೆಯ 2023-24ನೇ ಸಾಲಿನ ಆಯವ್ಯಯ ತಯಾರಿಕೆಯ ಪೂರ್ವಭಾವಿಯಾಗಿ ಜ. 13ರಂದು ಬೆಳಿಗ್ಗೆ 11.45ಕ್ಕೆ ಪುತ್ತೂರು ನಗರಸಭೆ ಸಭಾಭವನದಲ್ಲಿ ಸಭೆ ನಡೆಯಲಿದೆ.ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸುವರು. ಸ್ಥಳೀಯ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ನಗರಸಭೆ ಪ್ರಕಟಣೆ ತಿಳಿಸಿದೆ.

ಜ. 13ರಂದು ನಗರಸಭೆ ಬಜೆಟ್ ಪೂರ್ವಭಾವಿ ಸಭೆ Read More »

ಜ. 14: ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ

ಪುತ್ತೂರು: ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜ. 14ರಂದು ವರ್ಷಾವಧಿ ಉತ್ಸವ ನಡೆಯಲಿದೆ. ಜ. 7ರಂದು ಗೊನೆ ಮುಹೂರ್ತ ನಡೆದಿದ್ದು, ಜ. 14ರಂದು ಬೆಳಿಗ್ಗೆ 5ಕ್ಕೆ ಧನು ಪೂಜೆ ನಡೆಯಲಿದೆ. ಬೆಳಿಗ್ಗೆ 9ಕ್ಕೆ ಬೈಲಾಡಿ ಮನೆಯಲ್ಲಿ ಶ್ರೀ ವೆಂಕಟರಮಣ ದೇವರ ಮುಡಿಪು ಪೂಜೆ ನಡೆಯಲಿದೆ. ಬೆಳಿಗ್ಗೆ 8ರಿಂದ ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆ, ಗಣಪತಿ ಹವನ, ಕಲಶಪೂಜೆ, ಕಲಶಾಭಿಷೇಕ, ಶ್ರೀ ಸತ್ಯನಾರಾಯನ ದೇವರ ಪೂಜೆ, ಶ್ರೀ ವನದುರ್ಗಾ ದೇವಿ ಮಹಾಪೂಜೆ, ಶ್ರೀ ಶಾಸ್ತಾವು ದೇವರ ಮಹಾಪೂಜೆ, ಗುರುಪೂಜೆ,

ಜ. 14: ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ Read More »

ಚತುಷ್ಪಥ ಹೆದ್ದಾರಿ: ಶಾಸಕರ ಕಳಕಳಿ | ಪುತ್ತೂರು – ಉಪ್ಪಿನಂಗಡಿ ‘ಟ್ವಿನ್ ಸಿಟಿ’ ನಡುವಿನ 4 ಲೇನ್

ಪುತ್ತೂರು: ಒಂದೊಮ್ಮೆ ಉಪ್ಪಿನಂಗಡಿ ತಾಲೂಕು ಕೇಂದ್ರ. ಕ್ರಮೇಣ ತಾಲೂಕು ಕೇಂದ್ರ ಪುತ್ತೂರಿಗೆ ವರ್ಗವಾಯಿತು. ಹಾಗೆಂದು ಈ ಎರಡು ಪಟ್ಟಣಗಳ ನಡುವಿನ ಸಂಬಂಧ ಪ್ರತ್ಯೇಕಗೊಂಡಿಲ್ಲ. ಎರಡೂ ಪಟ್ಟಣಗಳು ಹುಬ್ಬಳ್ಳಿ – ಧಾರವಾಡ ಟ್ವಿನ್ ಸಿಟಿ ಮಾದರಿಯಲ್ಲಿ ಬೆಳೆಯುತ್ತಿದೆ. ಇದಕ್ಕೆ ಇನ್ನಷ್ಟು ಬಲ ತುಂಬುವ ದಿಶೆಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ವೇಗ ಪಡೆಯುತ್ತಿದೆ. ಜಿ.ಪಂ. ರಸ್ತೆಯಾಗಿದ್ದ ಸಂದರ್ಭ ಈ ರಸ್ತೆಯ ಅಗಲ ಕೇವಲ 5.5 ಮೀ. ಎದುರಿನಿಂದ ವಾಹನ ಬಂದರೆ, ಪಕ್ಕಕ್ಕೆ ಸರಿದು ನಿಲ್ಲಬೇಕಾದ ಪ್ರಮೇಯ. ಆದ್ದರಿಂದ ರಸ್ತೆಯನ್ನು ಪಿಡಬ್ಲ್ಯೂಡಿಗೆ

ಚತುಷ್ಪಥ ಹೆದ್ದಾರಿ: ಶಾಸಕರ ಕಳಕಳಿ | ಪುತ್ತೂರು – ಉಪ್ಪಿನಂಗಡಿ ‘ಟ್ವಿನ್ ಸಿಟಿ’ ನಡುವಿನ 4 ಲೇನ್ Read More »

ಶಬರಿಮಲೆಯ ಅರವಣ ಪಾಯಸ ಪ್ರಸಾದದಲ್ಲಿ ಕೀಟನಾಶಕ ಅಂಶ ಪತ್ತೆ

ಪ್ರಸಾದ ವಿತರಿಸದಂತೆ ಹೈಕೋರ್ಟ್‌ ಆದೇಶ ಶಬರಿಮಲೆ : ಕೇರಳದ ಪ್ರಸಿದ್ಧ ಶಬರಿಮಲೆ ದೇಗುಲದ ‘ಅರವಣ ಪ್ರಸಾದ’ದಲ್ಲಿ ಕೀಟನಾಶಕ ಅಂಶ ಪತ್ತೆಯಾದ ಬಳಿಕ ಅದರ ತಯಾರಿಕೆ ಹಾಗೂ ಮಾರಾಟಕ್ಕೆ ಕೇರಳ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಪ್ರಸಾದ ತಯಾರಿಕೆಯಲ್ಲಿ ಬಳಸಲಾಗುವ ಏಲಕ್ಕಿಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೀಟನಾಶಕ ಕಂಡು ಬಂದ ಹಿನ್ನೆಲೆಯಲ್ಲಿ ಪ್ರಸಾದವನ್ನು ಮಾರಾಟ ಮಾಡದಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ ಸೂಚಿಸಿದೆ. ಇದರಿಂದ ಆರೂವರೆ ಕೋಟಿ ರೂ. ಮೌಲ್ಯದ ಅರವಣ ಪ್ರಸಾದ ವ್ಯರ್ಥ ಆಗಲಿದೆ.ಪ್ರಸಾದ ತಯಾರಿಸಲು ಖರೀದಿಸುವ

ಶಬರಿಮಲೆಯ ಅರವಣ ಪಾಯಸ ಪ್ರಸಾದದಲ್ಲಿ ಕೀಟನಾಶಕ ಅಂಶ ಪತ್ತೆ Read More »

ರೈಲು ನಿಲ್ದಾಣದಲ್ಲಿ ಕುಸಿದು ಬಿದ್ದು ಸ್ವಾಮೀಜಿ ದೇಹಾಂತ್ಯ

ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ಸ್ವಾಮೀಜಿ ಬೆಂಗಳೂರು: ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬುಧವಾರ ರಾತ್ರಿ ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಅಸ್ತಂತರಾಗಿದ್ದಾರೆ. ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲು ಬೆಂಗಳೂರಿಗೆ ಆಗಮಿಸಿದ್ದರು.ವಾಪಸ್ ಯಾದಗಿರಿಗೆ ಹೋಗಲು ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಆಗಮಿಸಿದ ವೇಳೆ ನಡೆದುಕೊಂಡು ಹೋಗುತ್ತಿರುವಾಗಲೇ ಸ್ವಾಮೀಜಿ ಕುಸಿದು ಬಿದ್ದಿದ್ದಾರೆ. ಭಕ್ತರು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು

ರೈಲು ನಿಲ್ದಾಣದಲ್ಲಿ ಕುಸಿದು ಬಿದ್ದು ಸ್ವಾಮೀಜಿ ದೇಹಾಂತ್ಯ Read More »

ಫೆ.17ಕ್ಕೆ ರಾಜ್ಯ ಬಜೆಟ್‌ ಮಂಡನೆ

ಚುನಾವಣೆ ದೃಷ್ಟಿಯ ಯೋಜನೆ ನಿರೀಕ್ಷೆ ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ ಫೆ.17ರಂದು ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆ.ಬಜೆಟ್‌ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಭೇಟಿ ನೀಡಿದ ಮರುದಿನ ಅಂದರೆ ಜ.20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆ.ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗಲೇ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಲು ಮುಂದಾಗಿದ್ದು, ಇದು

ಫೆ.17ಕ್ಕೆ ರಾಜ್ಯ ಬಜೆಟ್‌ ಮಂಡನೆ Read More »

ತೀರ್ಥಹಳ್ಳಿ ಕಾಂಗ್ರೆಸ್‌ ಕಚೇರಿಯಲ್ಲಿ ಎನ್‌ಐಎ ಶೋಧ

ಶಂಕಿತ ಉಗ್ರ ಶಾರಿಕ್‌ ಕುಟುಂಬಕ್ಕೆ ಸೇರಿದ ಕಟ್ಟದಲ್ಲಿದೆ ಕಾಂಗ್ರೆಸ್‌ ಕಚೇರಿ ಶಿವಮೊಗ್ಗ: ತೀರ್ಥಹಳ್ಳಿಯಲ್ಲಿರುವ ಕಾಂಗ್ರೆಸ್‌ ಕಚೇರಿ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ನ ಮಾಜಿ ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮಂಗಳೂರು ಕುಕ್ಕರ್‌ ಸ್ಫೋಟ ಪ್ರಕರಣದ ಆರೋಪಿ ಮಹಮ್ಮದ್‌ ಶಾರೀಕ್‌ ಕುಟುಂಬದ ಆಸ್ತಿಯನ್ನು ಕಾಂಗ್ರೆಸ್‌ ಲೀಸ್‌ಗೆ ಪಡೆದಿರುವ ಕುರಿತು ವಿಚಾರಣೆ ನಡೆಸಲಾಗಿದೆ.ತೀರ್ಥಹಳ್ಳಿ ಪಟ್ಟಣದಲ್ಲಿರುವ ಕಾಂಗ್ರೆಸ್ ಕಚೇರಿ ಹಾಗೂ ಅದರ ಮೇಲೆ

ತೀರ್ಥಹಳ್ಳಿ ಕಾಂಗ್ರೆಸ್‌ ಕಚೇರಿಯಲ್ಲಿ ಎನ್‌ಐಎ ಶೋಧ Read More »

ತಂದೆ, ತಾಯಿ, ಗುರು- ನರೇಂದ್ರನನ್ನು ವಿವೇಕಾನಂದ ಮಾಡಿದ ಮೂರು ಮುತ್ತುಗಳು | ಇಂದು ವಿವೇಕ ಜಯಂತಿ- ರಾಷ್ಟ್ರೀಯ ಯುವ ದಿನ

ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ಸೂರ್ಯ ಆಚಾರ್ ವಿಟ್ಲ ಅವರು ರಚಿಸಿದ ಚುಕ್ಕಿಚಿತ್ರ. ಇಂದು (ಜನವರಿ 12) ವಿವೇಕ ಜಯಂತಿ. ಭಾರತದ ಕೇಸರಿಯ ಕೀರ್ತಿ ಪತಾಕೆಯನ್ನು ನವದಿಗಂತದಲ್ಲಿ ವಿಸ್ತರಿಸಿದ ಸ್ವಾಮಿ ವಿವೇಕಾನಂದರ ಹುಟ್ಟಿದ ಹಬ್ಬ.ಅದರ ಪ್ರಯುಕ್ತ ಜನವರಿ 12 ರಾಷ್ಟ್ರೀಯ ಯುವ ದಿನ. ದೇಶದ ಮಹಾನ್ ಶಕ್ತಿಯಾಗಿರುವ ಯುವ ಜನತೆ ಹಾಗೂ ಯುವ ಸಮುದಾಯಕ್ಕೆ ಭಾರಿ ಘನತೆಯನ್ನು ತಂದುಕೊಟ್ಟ ದಿನವಿದು.ವಿವೇಕಾನಂದರ ಮೇಲೆ ದಟ್ಟವಾದ ಪ್ರಭಾವ ಬೀರಿದ ಮೂರು ವಿಶೇಷ ಚೇತನಗಳ ಪರಿಚಯ ಮಾಡುವ ಉದ್ದೇಶದಿಂದ ಈ ಸಂಕ್ಷಿಪ್ತವಾದ

ತಂದೆ, ತಾಯಿ, ಗುರು- ನರೇಂದ್ರನನ್ನು ವಿವೇಕಾನಂದ ಮಾಡಿದ ಮೂರು ಮುತ್ತುಗಳು | ಇಂದು ವಿವೇಕ ಜಯಂತಿ- ರಾಷ್ಟ್ರೀಯ ಯುವ ದಿನ Read More »

ಸುಳ್ಯ: ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ ಗುರುವಾರ ಸುಳ್ಯದಲ್ಲಿ ನಡೆಯಿತು. ಮೀನುಗಾರಿಕಾ ಸಚಿವ ಎಸ್. ಅಂಗಾರ ಮಾತನಾಡಿ, ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ಎಲ್ಲರೂ ಜೊತೆಯಾಗಿ ಸಂಘಟನೆಯ ಕಾರ್ಯದಲ್ಲಿ ತೊಡಗಿಕೊಂಡಾಗ, ಪಕ್ಷ ತಳಮಟ್ಟದಿಂದಲೇ ಬಲಯುತಗೊಳ್ಳುತ್ತದೆ ಎಂದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರೈ ರಾಧಾಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

ಸುಳ್ಯ: ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ Read More »

error: Content is protected !!
Scroll to Top