ಮಣಿಕ್ಕರ ಶಾಲೆ: ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು

ಪುತ್ತೂರು: ಶತಮಾನದ ಕಡೆಗೆ ಹೋಗಬೇಕಿದ್ದರೆ ನಾವು ಶಾಲಾ ಅಭಿವೃದ್ಧಿಗಾಗಿ ನಾವು ಏನು ಮಾಡಬೇಕು ಎಂಬ ಯೋಚನೆಗೆ ಪೂರಕವಾಗಿ ಸ್ಮಾರ್ಟ್ ಕ್ಲಾಸ್ ಗಳನ್ನು ಶಾಲೆಗಳಿಗೆ ಒದಗಿಸಲಾಗುತ್ತಿದೆ. ಜತೆಗೆ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನೀಡಲಾಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಮಣಿಕ್ಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು. ಈ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವುದರಿಂದ ಮುಂದೆ ಹೆತ್ತವರು […]

ಮಣಿಕ್ಕರ ಶಾಲೆ: ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು Read More »

ಪಾಕಿಸ್ಥಾನದಲ್ಲಿ ಪ್ರಬಲ ಭೂಕಂಪ : 9 ಸಾವು

ದಿಲ್ಲಿ, ಉತ್ತರ ಪ್ರದೇಶದಲ್ಲೂ ಕಂಪಿಸಿದ ಭೂಮಿ ಇಸ್ಲಾಮಾಬಾದ್ : ಪಾಕಿಸ್ಥಾನ ಮತ್ತು ಅಫ್ಘಾನಿಸ್ತಾನದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿ ಪಾಕಿಸ್ಥಾನದ ವಾಯವ್ಯ ಖೈಬರ್ ಪಖ್ತೂನ್‌ಕ್ವಾ ಪ್ರಾಂತ್ಯದ ಸ್ವಾತ್ ಕಣಿವೆ ಪ್ರದೇಶದಲ್ಲಿ ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ. 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದಿಲ್ಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಈ ಭೂಕಂಪದಿಂದ ಅನುಭವವಾಗಿದೆ. ಇಲ್ಲೂ ಪ್ರಬಲವಾದ ಕಂಪನ ಸಂಭವಿಸಿದೆ.ಮಂಗಳವಾರದಂದು 6.6 ತೀವ್ರತೆಯ ಭೂಕಂಪವು ಪಾಕಿಸ್ಥಾನ ಮತ್ತು ಅಫ್ಘಾನಿಸ್ಥಾನದ ಬಹುಭಾಗವನ್ನು ತಲ್ಲಣಗೊಳಿಸಿದೆ. ಭಯಭೀತರಾದ ನಿವಾಸಿಗಳು ಮನೆಗಳು ಮತ್ತು ಕಚೇರಿಗಳಿಂದ

ಪಾಕಿಸ್ಥಾನದಲ್ಲಿ ಪ್ರಬಲ ಭೂಕಂಪ : 9 ಸಾವು Read More »

ಯುಗದ ಆದಿ – ನೂತನ ವರ್ಷದ ಬುನಾದಿ

ಶೋಭಾಕೃತ್ ನಾಮ ಸಂವತ್ಸರದ ಶುಭಾಗಮನ ನಮ್ಮೆಲ್ಲ ಓದುಗ ಪ್ರಭುಗಳಿಗೆ ಚಾಂದ್ರಮಾನ ಯುಗಾದಿ ಹಬ್ಬದ ಶುಭಾಶಯಗಳು. ಹಿಂದೂಗಳು ತಮ್ಮ ವರ್ಷದ ಮೊದಲ ದಿನವಾಗಿ ಆಚರಣೆ ಮಾಡುವ ದಿನ ಇದು. ಅಂತೆಯೇ ಇಂದು ಒಂದು ಸಂವತ್ಸರ ಕಳೆದು ಹೋಗಿ ಶೋಭಾಕೃತ್ ಸಂವತ್ಸರ ಹೊಸ್ತಿಲು ದಾಟಿ ಬಂದಿದೆ. ಪ್ರಕೃತಿಯ ದೃಷ್ಟಿಯಿಂದಲೂ ಯುಗಾದಿಯೆ ವರ್ಷದ ಆರಂಭ ಬ್ರಿಟಿಷ್ ಕ್ಯಾಲೆಂಡರ್ ಪ್ರಕಾರ ನಾವು ಜನವರಿ 1ರಂದು ಆಚರಿಸುವ ಹೊಸ ವರ್ಷ ಪ್ರಕೃತಿಗೆ ಪೂರಕವಿಲ್ಲ. ಆಗ ತೀವ್ರವಾದ ಶಿಶಿರದ ದಟ್ಟ ಪ್ರಭಾವದಿಂದ ಎಲೆಗಳೆಲ್ಲ ಉದುರಿಹೋಗಿ ಗಿಡ

ಯುಗದ ಆದಿ – ನೂತನ ವರ್ಷದ ಬುನಾದಿ Read More »

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ಉಚಿತ ಪ್ರಯಾಣ

ಹಾಲ್‌ ಟಿಕೆಟ್‌ ತೋರಿಸಿದರೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟಿಲ್ಲದೆ ಪ್ರಯಾಣಿಸಬಹುದು ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರೀಕ್ಷೆ ಬರೆಯಲಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸುವ ಕೊಡುಗೆ ನೀಡಿದೆ.ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಪರೀಕ್ಷೆ ಮಾ.31ರಿಂದ ಆರಂಭವಾಗಲಿದ್ದು, ಏ.15ರವರೆಗೆ ನಡೆಯಲಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ‘ಪರೀಕ್ಷಾ ಪ್ರವೇಶ ಪತ್ರವನ್ನು’ ತೋರಿಸಿ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಪ್ರಯಾಣಿಸಬಹುದು ಎಂದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ಉಚಿತ ಪ್ರಯಾಣ Read More »

ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್

ಪುತ್ತೂರು : ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್ ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕಿನ ಏನೆಕಲ್ ನಿವಾಸಿಯಾಗಿರುವ ಇವರು, ಏನೆಕಲ್ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ‌ ದೈಹಿಕ ಶಿಕ್ಷಣ ಶಿಕ್ಷಕರಾಗಿ, ಅನೇಕ ವಿದ್ಯಾರ್ಥಿಗಳನ್ನು ಕ್ರೀಡಾಪಟುಗಳಾಗಿ ತಯಾರುಗೊಳಿಸಿದ್ದರು. ಶಿವರಾಮ ಏನೆಕಲ್ ಅವರು ಏನೆಕಲ್ಲು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿಗಳ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ರೋಟರಿ ಸಂಸ್ಥೆ ಸುಬ್ರಹ್ಮಣ್ಯದ ಪೂರ್ವಾಧ್ಯಕ್ಷ ಹಾಗೂ 3181 ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್, ಜಿಲ್ಲಾ ಕಬಡ್ಡಿ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ತಾಲೂಕು,

ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್ Read More »

ಇಂದು ಬಲೆರಾವು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಲೋಕಾರ್ಪಣೆ | ತ್ರಿವಳಿ ತಾಲೂಕಿನ ಕೊಂಡಿ ಈ ಸೇತುವೆ

ಪುತ್ತೂರು: ಶಾಂತಿಗೋಡು ಗ್ರಾಮದ ಬಲೆರಾವು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ ಪೂರ್ಣಗೊಂಡಿದ್ದು, ಮಾ. 22ರ ಬುಧವಾರ ಲೋಕಾರ್ಪಣೆಗೊಳ್ಳಲಿದೆ. ಬಲ್ಲೇಗಳೇ ತುಂಬಿದ ಊರು ಬಲೆರಾವು. ತೀರಾ ಹಿಂದುಳಿದ ಪ್ರದೇಶ ಎನ್ನುವುದು ಹೆಸರಿನಿಂದಲೇ ತಿಳಿದುಬರುವ ಸತ್ಯ. ಇದೀಗ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಊರಿನ ಚಿತ್ರಣವನ್ನೇ ಬದಲಾಯಿಸಲಿದೆ. ಇದರೊಂದಿಗೆ ರಸ್ತೆ ಅಭಿವೃದ್ಧಿ, ಶಾಲೆಗಳಿಗೆ ಮೂಲಭೂತ ಸೌಕರ್ಯ ಸೇರಿದಂತೆ ಶಾಂತಿಗೋಡು ಗ್ರಾಮಕ್ಕೆ ಪುತ್ತೂರು ಶಾಸಕರು ಭರಪೂರ ಅನುದಾನವನ್ನು ಮಂಜೂರುಗೊಳಿಸಿದ್ದಾರೆ. ಬಲೆರಾವು ಪ್ರದೇಶದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಸೇತುವೆ ಸಹಿತ ಕಿಂಡಿ

ಇಂದು ಬಲೆರಾವು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಲೋಕಾರ್ಪಣೆ | ತ್ರಿವಳಿ ತಾಲೂಕಿನ ಕೊಂಡಿ ಈ ಸೇತುವೆ Read More »

ತುಮಕೂರಿನಲ್ಲಿ ಬೈಕ್ ಅಪಘಾತ: ಸುಳ್ಯದ ಯುವಕ ಸ್ಥಳದಲ್ಲೇ ಸಾವು

ಸುಳ್ಯ: ತುಮಕೂರು ಟೋಲ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಸುಳ್ಯದ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಯುವಕನನ್ನು ಸುಳ್ಯ ತಾಲೂಕಿನ ಕೇರ್ಪಳ ನಿವಾಸಿ ಪ್ರಜ್ವಲ್ (25) ಎಂದು ಗುರುತಿಸಲಾಗಿದೆ. ಇವರು ಸುಳ್ಯದಲ್ಲಿ ರಿಕ್ಷಾ ಚಾಲಕರಾಗಿರುವ ರಮೇಶ್ ಅವರ ಪುತ್ರ. ಪ್ರಜ್ವಲ್ ತುಮಕೂರಿನಲ್ಲಿ ಟೋಲ್ ಸೂಪರ್ ವೈಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ರವಿವಾರ ತಡರಾತ್ರಿ ಟೋಲ್ ಸಮೀಪವೇ ಬೈಕ್ ಸ್ಕಿಡ್ ಆಗಿ, ಅಪಘಾತ ಸಂಭವಿಸಿತ್ತು. ಪ್ರಜ್ವಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ‌. ಮೃತ ಪ್ರಜ್ವಲ್ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ತುಮಕೂರಿನಲ್ಲಿ ಬೈಕ್ ಅಪಘಾತ: ಸುಳ್ಯದ ಯುವಕ ಸ್ಥಳದಲ್ಲೇ ಸಾವು Read More »

ಏ. 10ರಿಂದ ಐತಿಹಾಸಿಕ ಪುತ್ತೂರು ಜಾತ್ರೆ | ಮಾ. 25ರಂದು ಆಹ್ವಾನ ಪತ್ರಿಕೆ ವಿತರಣೆ, ಮಾ. 9ರಂದು ಹಸಿರು ಹೊರೆಕಾಣಿಕೆ

ಪುತ್ತೂರು: ಹತ್ತೂರ ಭಕ್ತರಿಂದ ಆರಾಧನೆ ಪಡೆದುಕೊಳ್ಳುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ ಏ. 10ರಿಂದ 20ರವರೆಗೆ ನಡೆಯಲಿದೆ. ಪುತ್ತೂರು ಜಾತ್ರೆಯ ಹಿನ್ನೆಲೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮಾಹಿತಿ ನೀಡುತ್ತಾ, ಏ. 1ರಂದು ಗೊನೆ ಮುಹೂರ್ತ ನಡೆಯಲಿದೆ. ಬೆಳಿಗ್ಗೆ ಪ್ರಾರ್ಥನೆ ನಡೆದು 9.35ರ ವೃಷಭ ಲಗ್ನದಲ್ಲಿ ಜಾತ್ರೆಗೆ ಗೊನೆ ಕಡಿಯಲಾಗುವುದು. ಏ. 10ರಂದು ಬೆಳಿಗ್ಗೆ 9.25ರ ವೃಷಭ ಲಗ್ನದಲ್ಲಿ ಧ್ವಜಾರೋಹಣ ನಡೆದು, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಅಂಕುರಾರ್ಪಣೆ, ಬಲಿ ಹೊರಟು ಉತ್ಸವ,

ಏ. 10ರಿಂದ ಐತಿಹಾಸಿಕ ಪುತ್ತೂರು ಜಾತ್ರೆ | ಮಾ. 25ರಂದು ಆಹ್ವಾನ ಪತ್ರಿಕೆ ವಿತರಣೆ, ಮಾ. 9ರಂದು ಹಸಿರು ಹೊರೆಕಾಣಿಕೆ Read More »

ನಾಳೆ (ಮಾ.22) : ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳಿಕೆಗಾಗಿ ಹಕ್ಕೊತ್ತಾಯ ಸಭೆ

ಪುತ್ತೂರು: ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನ, ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ, ದ.ಕ.ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇದ್ರಗಳ ಒಕ್ಕೂಟ ಹಾಗೈ ಎಸ್ ಡಿಎಂಸಿ ಸಮನ್ವಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳೀಕೆಗಾಗಿ ಹಕ್ಕೊತ್ತಾಯ ಸಭೆಯನ್ನು ಮಾ.22 ಬುಧವಾರ ಪುತ್ತೂರು ಲಯನ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿದೆ. ರಾಷ್ಟ್ರೀಯ ರಾಜಕೀಯ ಪಕ್ಷಗಳ ಕಚೇರಿಗಳಿಗೆ ಭೇಟಿ ಮಾಡಿ ಅವರು ತಮ್ಮ ಚುನಾವಣಾ ಪ್ರಣಾಳಕೆಯಲ್ಲಿ ಮಕ್ಕಳ ಬೇಡಿಕೆಗಳನ್ನು ಅಳವಡಿಸಿಕೊಂಡು ಮುಂದಿನ ದಿನಗಳಲ್ಲಿ ಅವುಗಳನ್ನು ಅನುಷ್ಠಾನಕ್ಕೆ ತರುವಂತೆ ಮತ್ತು ಮಕ್ಕಳಿಗೆ

ನಾಳೆ (ಮಾ.22) : ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳಿಕೆಗಾಗಿ ಹಕ್ಕೊತ್ತಾಯ ಸಭೆ Read More »

ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ, ನೋಂದಣಿ ಶಿಬಿರ

ಪುತ್ತೂರು: ಭಾರತೀಯ ಅಂಚೆ ಇಲಾಖೆ ಹಾಗೂ ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಆಶ್ರಯದಲ್ಲಿ ಮಾರ್ಚ್ 21ರಂದು ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ ಮತ್ತು ಹೊಸ ಆಧಾರ್ ಕಾರ್ಡ್ ನೊಂದಣಿ ಶಿಬಿರ ಉದ್ಘಾಟನೆಗೊಂಡಿತು. ಶಿಬಿರದಲ್ಲಿ ಆಧಾರ್ ಪರಿಷ್ಕರಣೆ, ಮಕ್ಕಳ ಆಧಾರ್ ಅಪ್’ಡೇಟ್, ಹೊಸ ಆಧಾರ್ ಮತ್ತು ಪುತ್ತೂರು ತಾಲೂಕು ಬದಲು ಕಡಬ ತಾಲೂಕು ಎಂಬ ಬದಲಾವಣೆ ಮಾಡಲು ಅವಕಾಶ ಇದೆ. ಈ ಬದಲಾವಣೆಗೆ ರೇಷನ್ ಕಾರ್ಡ್, ಫೋಟೋ, ಆಧಾರ್ ಕಾರ್ಡ್ ಅಗತ್ಯ.

ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ, ನೋಂದಣಿ ಶಿಬಿರ Read More »

error: Content is protected !!
Scroll to Top