ಜ. 22ಕ್ಕೆ ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಶ್ರೀಗಳ ಜಯಂತ್ಯೋತ್ಸವ| ಗೌಡ ಸಮುದಾಯ ಭವನದಲ್ಲಿ ಪೂರ್ವಸಿದ್ಧತಾ ಸಭೆ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಜ.೨೨ ರಂದು ನಡೆಯಲಿರುವ ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವದ ಪೂರ್ವ ಸಿದ್ದತೆ ಹಿನ್ನೆಲೆಯಲ್ಲಿ ಸೋಮವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ತುರ್ತು ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು. ಮುಂದೆ ಆಗಬೇಕಾಗಿರುವ ಸಿದ್ಧತೆಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಜಂಯತ್ಯೋತ್ಸವ ಸಮಿತಿ ಸಂಚಾಲಕ ದಿನೇಶ್ ಮೆದು, ಒಕ್ಕಲಿಗ […]










