ಇಂಟರ್ ನೆಟ್ ನಿರ್ಬಂಧ ವಿಸ್ತರಿಸಿದ ಪಂಜಾಬ್

ಚಂಡೀಗಢ: ಸಿಖ್ ಸಮುದಾಯದ ತೀವ್ರಗಾಮಿ ಹಾಗೂ ಖಲಿಸ್ತಾನ ಬೆಂಬಲಿಗ ಅಮೃತ್ ಪಾಲ್ ಸಿಂಗ್‌ ನ ಸಹಚರರನ್ನು ಬಂಧಿಸಿದ್ದ ಹಿನ್ನೆಲೆಯಲ್ಲಿ ಮಾ.19 ರ ಮಧ್ಯಾಹ್ನ 12 ಗಂಟೆಯವರೆಗೆ ಇಂಟರ್‌ನೆಟ್‌ ನಿರ್ಭಂದಿಸಿತ್ತು, ಈಗ ಸೋಮವಾರದವರೆಗೂ ಮೊಬೈಲ್ ಇಂಟರ್ ನೆಟ್ ಹಾಗೂ ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸಿಖ್ ಸಮುದಾಯದ ತೀವ್ರಗಾಮಿ ಹಾಗೂ ಖಲಿಸ್ತಾನ ಬೆಂಬಲಿಗ ಅಮೃತ್ ಪಾಲ್ ಸಿಂಗ್ ಗೆ ಶೋಧಕಾರ್ಯಾಚರಣೆ ಮುಂದುವರೆದಿದೆ.ಪೊಲೀಸ್ ಅಧಿಕಾರಿಗಳು ಶೋಧಕಾರ್ಯಾಚರಣೆ ಬಗ್ಗೆ ಮಾತನಾಡಿದ್ದು, ಶೀಘ್ರವೇ ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ. ಬ್ಯಾಂಕಿಂಗ್ ಸೇವೆಗಳಿಗೆ ಆಸ್ಪತ್ರೆ ಸೇವೆಗಳು ಹಾಗೂ […]

ಇಂಟರ್ ನೆಟ್ ನಿರ್ಬಂಧ ವಿಸ್ತರಿಸಿದ ಪಂಜಾಬ್ Read More »

ಅಕ್ರಮ ಗಣಿಗಾರಿಕೆ: 5.21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಬೆಂಗಳೂರು: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಬೆಂಗಳೂರು ವಲಯ ಕಚೇರಿಯು ಮಿನರಲ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ಅದರ ಅಧಿಕಾರಿಗಳಿಗೆ ಸೇರಿದ 5.21 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.ಅಧಿಕಾರಿಗಳ ಪ್ರಕಾರ, ಜಪ್ತಿ ಮಾಡಲಾದ ಆಸ್ತಿಗಳು ಆರೋಪಿಗಳ ಒಡೆತನದ ಆರು ಸ್ಥಿರಾಸ್ತಿಗಳ ರೂಪದಲ್ಲಿವೆ. ವಿಶೇಷ ತನಿಖಾ ತಂಡ ಮತ್ತು ಕರ್ನಾಟಕ ಲೋಕಾಯುಕ್ತ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇ.ಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ತನಿಖೆ

ಅಕ್ರಮ ಗಣಿಗಾರಿಕೆ: 5.21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ Read More »

ಪಂಜದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಸಮಾವೇಶ | ದೇಶವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿಯ ಗುರಿ: ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ | ಆರೋಪಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ: ಸಚಿವ ಅಂಗಾರ

ಸುಳ್ಯ: ಭಾರತವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿ ಸರಕಾರದ ಉದ್ದೇಶ ಎಂದು ಕೇಂದ್ರ ಪ್ರವಾಸೋದ್ಯಮ, ಬಂದರು, ಹಡಗು ಮತ್ತು ಜಲ ಮಾರ್ಗಗಳ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ ಹೇಳಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಭಾನುವಾರ ಪಂಜ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಈಗ ವಿಶ್ವದ ಶ್ರೇಷ್ಠ ದೇಶವಾಗಿ ಬೆಳೆಯುತಿದೆ. ಎಂದ ಅವರು, ಈ ಹಿಂದೆ ವಾಜಪೇಯಿ ಸರಕಾರ ಹಾಗು ಈಗ

ಪಂಜದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಸಮಾವೇಶ | ದೇಶವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿಯ ಗುರಿ: ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ | ಆರೋಪಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ: ಸಚಿವ ಅಂಗಾರ Read More »

ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಸವಣೂರು : ಕಡಬ ತಾಲೂಕಿನ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಶನಿವಾರ ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಗೊನೆ ಮುಹೂರ್ತ.ಮಾಡಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.

ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ Read More »

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ

ಪುತ್ತೂರು: ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು. ಏ.2 ಹಾಗೂ 3 ರಂದು ವಾರ್ಷಿಕ ಜಾತ್ರೋತ್ಸವ, ದೈವಗಳ ನೇಮೋತ್ಸವದ ಅಂಗವಾಗಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರದಲ್ಲಿದ್ದ ಪ್ಲಾಸ್ಟಿಕ್, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸುವ ಕಾರ್ಯವನ್ನು ಶ್ರಮದಾನ ಮೂಲಕ ಮಾಡಿದರು. ಶ್ರಮದಾನದಲ್ಲಿ ಯುವಕ ಮಂಡಲದ ಸದಸ್ಯರಾದ ಶಿವಪ್ರಸಾದ್ ಕೈಂದಾಡಿ, ಪ್ರಭಾತ್ ಸಾರಕರೆ, ವರುಣ್ ಶಾಂತಿಗೋಡು, ಪ್ರವೀಣ್ ಬೊಳ್ಳೆಕ್ಕು, ಕಾರ್ತಿಕ್ ಕುಕ್ಯಾನ, ಶಶಿ ಕುಮಾರ್ ಓಲಾಡಿ, ಭಾಸ್ಕರ ಓಲಾಡಿ, ವಿನೋದ್ ಓಲಾಡಿ, ಹರ್ಷಿತ್ ಬಂಡಶಾಲೆ,

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ Read More »

ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನ

ಬೆಂಗಳೂರು : ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ದಿಲ್ಲಿಯ ಎಐಸಿಸಿ ಕಚೇರಿಯಿಂದ ಮಾತಾಡುತ್ತಿದ್ದೇವೆ ಎಂದು ಟಿಕೆಟ್ ಆಕಾಂಕ್ಷಿಗಳಿಗೆ ಕರೆ ಮಾಡಿ ವಂಚಿಸಲು ಯತ್ನಿಸಿದ್ದಾರೆ. 8287309623 ಮೊಬೈಲ್ ನಂಬರ್​​ನಿಂದ ಅಪರಿಚಿತ ವ್ಯಕ್ತಿಗಳು ಆಕಾಂಕ್ಷಿಗಳಿಗೆ ಕರೆ ಮಾಡಿ ಹಣ ಸುಲಿಯಲು ಯತ್ನಿಸಿದ್ದಾರೆ. 2 ಮತ್ತು 3ನೇ ಸ್ತರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚಕರು ಕರೆ ಮಾಡಿ ವಿಧಾನಸಭಾ ಚುನಾವಣೆ ಸ್ಪರ್ಧೆ ಸಂಬಂಧ ಪಟ್ಟಿ ಸಿದ್ಧಗೊಂಡಿದೆ. ಚುನಾವಣೆ ಪಟ್ಟಿಯಲ್ಲಿ ನಿಮ್ಮ

ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನ Read More »

ಕ್ರೀಡೆಗೆ ಪ್ರೋತ್ಸಾಹ ಕೊಡುವ ಮೂಲಕ ಯುವಕರು ಸಾಧಕರಾಗಬೇಕು: ಶಾಸಕ ಮಠಂದೂರು | ಆದಿ ದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ

ಪುತ್ತೂರು : ಆದಿ ದ್ರಾವಿಡ ಸಮಾಜ ಒಂದು ಕಾರ್ಯಕ್ರಮದ ಮೂಲಕ ಅಂಬೇಡ್ಕರ್ ನೆನಪುಗಳನ್ನು ಮೆಲುಕು ಹಾಕುತ್ತಾ ಈ ದೇಶದ ಇತಿಹಾಸ, ಪರಂಪರೆ, ಹಿಂದೂ ಸಂಸ್ಕೃತಿಗೆ  ಕೊಟ್ಟ ಕೊಡುಗೆಗಳ ಆಧಾರದಲ್ಲಿ ಸಮಾಜಕ್ಕೆ ಸರಕಾರ ಹಲವು ಸವಲತ್ತು ಕೊಟ್ಟಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹಾ ಕ್ರೀಡೆಗಳನ್ನು ಆಯೋಜಿಸಿ ಮನೋರಂಜನೆ ಕೊಡುವ ಕೆಲಸ ಮಾಡಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಮೂಲಕ ಯುವಕರು ಸಾಧಕರಾಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಕೊಟ್ಟಿಗೆ ಪೆರ್ಲ ವಡೆದರ ಆಶ್ರಯದಲ್ಲಿ  ಆದಿ

ಕ್ರೀಡೆಗೆ ಪ್ರೋತ್ಸಾಹ ಕೊಡುವ ಮೂಲಕ ಯುವಕರು ಸಾಧಕರಾಗಬೇಕು: ಶಾಸಕ ಮಠಂದೂರು | ಆದಿ ದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ Read More »

ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ಮನಸ್ತಾಪ: ರಾಹುಲ್ ಗಾಂಧಿ ವಿರುದ್ಧ ಮೋದಿ ವಾಗ್ದಾಳಿ

ದೆಹಲಿ : ಭಾರತದಲ್ಲಿ ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರು ಕಂಗಾಲಾಗಿದ್ದಾರೆ. ಹೀಗಾಗಿ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಿರಂತರ ದಾಳಿ ನಡೆಸುತ್ತಿದ್ದಾರೆ ಎಂದು ಪ್ರದಾನಿ ನರೇಂದ್ರ ಮೋದಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯನ್ನು ಕುಟುಕಿದ್ದಾರೆ. ಲಂಡನ್‌ನಲ್ಲಿ ರಾಹುಲ್ ಗಾಂಧಿ ಭಾರತದಲ್ಲಿ ಪ್ರಜಾಪ್ರಭುತ್ವ ದಾಳಿಗೆ ತುತ್ತಾಗುತ್ತಿದೆ ಎಂದು ನೀಡಿರುವ ಹೇಳಿಕೆ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಮೋದಿ ತೀಕ್ಷ್ಣ ವಾಗ್ದಾಳಿ ನಡೆಸಿದರು. ದೇಶ ಅತ್ಯಂತ ಆತ್ಮವಿಶ್ವಾಸದಲ್ಲಿ ಇರುವ ಸಂದರ್ಭದಲ್ಲಿ ಇಡೀ ವಿಶ್ವದ ಬೌದ್ಧಿಕ ಸಮುದಾಯ ಭಾರತದ ಬಗ್ಗೆ

ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ಮನಸ್ತಾಪ: ರಾಹುಲ್ ಗಾಂಧಿ ವಿರುದ್ಧ ಮೋದಿ ವಾಗ್ದಾಳಿ Read More »

ನಾಳೆ (ಮಾ.20) : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಖೋ-ಖೋ ಪಂದ್ಯಾಟ

ಪುತ್ತೂರು : ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ಖೋ ಖೋ ಪಂದ್ಯಾಟವು ಮಾರ್ಚ್ 20 ಸೋಮವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ಪೂರ್ವಾಹ್ನ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ರಾಷ್ಟ್ರೀಯ ಖೋ ಖೋ ತರಬೇತುದಾರ ಕಾರ್ತಿಕ್.ಎನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ

ನಾಳೆ (ಮಾ.20) : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಖೋ-ಖೋ ಪಂದ್ಯಾಟ Read More »

ಪೊದೆಯ ಮಧ್ಯೆ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ

ಮಂಗಳೂರು : ಮಂಗಳೂರಿನ ಪಂಪ್‌ವೆಲ್‌-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದ ಪೊದೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟಿದ್ದ ದೇವರ ವಿಗ್ರಹಗಳು ಪತ್ತೆಯಾಗಿವೆ. ಶಾರಾದಾ ದೇವಿಯ 2.5 ಇಂಚು ಉದ್ದದ, ಗಣಪತಿಯ 1 ಇಂಚು ಉದ್ದದ, ಲಕ್ಷ್ಮೀ ದೇವಿಯ 2 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಈ ವಿಗ್ರಹಗಳ ವಾರಸುದಾರರು ಇದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಮಂಗಳೂರು ಪೂರ್ವ

ಪೊದೆಯ ಮಧ್ಯೆ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ Read More »

error: Content is protected !!
Scroll to Top