ಬೆಂಗಳೂರು ವಿವಿ ಬಿಕಾಂ ಪಠ್ಯದಲ್ಲಿ ಅಪ್ಪು ಪಾಠ

ಪುನೀತ್‌ ರಾಜ್‌ಕುಮಾರ್‌ ಕುರಿತಾದ ಅಧ್ಯಾಯ ಪಠ್ಯ ಪುಸ್ತಕಕ್ಕೆ ಸೇರ್ಪಡೆ ಬೆಂಗಳೂರು: ಕಳೆದ ವರ್ಷ ನಿಧನರಾದ ಕನ್ನಡ ಚಿತ್ರರಂಗದ ಕಣ್ಮಣಿ ಪುನೀತ್‌ ರಾಜಕುಮಾರ್ ಜೀವನಗಾಥೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ರಾಜ್ಯ ಸರ್ಕಾರ ಸರ್ಕಾರ ಸೇರಿಸಿದೆ.ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದ ನೀನೇ ರಾಜಕುಮಾರ ಕೃತಿಯ ಒಂದು ಅಧ್ಯಾಯ ‘ಲೋಹಿತ ಎಂಬ ಮರಿಮುದ್ದʼ ಎಂಬ ಆಯ್ದ ಭಾಗವನ್ನು ಬಿಕಾಂ 3ನೇ ಸೆಮಿಸ್ಟರ್‌ನಲ್ಲಿ ಪಠ್ಯವಾಗಿ ಸೇರ್ಪಡೆಗೊಳಿಸಲಾಗಿದೆ.ನಟನೆ ಜೊತೆಗೆ ಸರಳತೆ, ಸಮಾಜಮುಖಿ ಕಾರ್ಯಗಳಿಂದ ಸ್ಫೂರ್ತಿಯಾಗಿದ್ದ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ […]

ಬೆಂಗಳೂರು ವಿವಿ ಬಿಕಾಂ ಪಠ್ಯದಲ್ಲಿ ಅಪ್ಪು ಪಾಠ Read More »

ಕಗ್ಗದ ಸಂದೇಶ- ಪರಿಮಳ ಬೀರಿ ಬಾಡಿ ಹೋಗುವ ಹೂಮಾಲೆಯಂತೆ ಬದುಕು…

ನೋಡುನೋಡುತ ಲೋಕಸಹವಾಸ ಸಾಕಹುದು|ಬಾಡುತಿಹ ಹೂಮಾಲೆ ಗೂಢವಿಹ ಕಜ್ಜಿ||ತೋಡದಿರು ಬಾಳ್ವೆಯಾಳವನು; ಮೇಲ್ಮೇಲೆ ನೀ|ನೋಡಾಡು ಹಗುರದಿಂ– ಮಂಕುತಿಮ್ಮ||ಈ ಸೃಷ್ಟಿಯನ್ನು ನೋಡುತ್ತ ನೋಡುತ್ತ ಇದರ ಸಹವಾಸ ನಮಗೆ ಸಾಕೋ ಸಾಕು ಎನಿಸುತ್ತದೆ. ನೋಡಲು ಸುಂದರವಾಗಿದ್ದರೂ ಸ್ವಲ್ಪ ಹೊತ್ತಿನಲ್ಲಿ ಬಾಡುವ ಹೂಮಾಲೆಯಂತೆ; ಚರ್ಮದೊಳಗೆ ರಹಸ್ಯವಾಗಿರುವ ಕಜ್ಜಿಯಂತೆ ಬದುಕು. ಮೇಲ್ನೋಟಕ್ಕೆ ಸುಂದರವಾಗಿ ಕಂಡರೂ ಆಳವಾಗಿ ನೋಡಿದರೆ ಬೇಸರವುಂಟಾಗುತ್ತದೆ. ಆದ್ದರಿಂದ ಬಾಳಿನ ಆಳಕ್ಕೆ ಹೋಗದೆ ಮೇಲ್ಮೇಲೆ ಹಗುರವಾಗಿ ನೋಡುತ್ತ ಓಡಾಡು ಎಂದು ಮಾನ್ಯ ಡಿವಿಜಿಯವರು ಬದುಕಿನ ರಹಸ್ಯವನ್ನು ಈ ಮುಕ್ತಕದಲ್ಲಿ ತಿಳಿಸಿದ್ದಾರೆ.ಮೇಲ್ಮೇಲೆ ನೋಡುವಾಗ ಜೀವನ ಬಹಳ

ಕಗ್ಗದ ಸಂದೇಶ- ಪರಿಮಳ ಬೀರಿ ಬಾಡಿ ಹೋಗುವ ಹೂಮಾಲೆಯಂತೆ ಬದುಕು… Read More »

ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧಕ್ಕೆ ಸಿದ್ಧ: ಚೀನಾ

ಬೀಜಿಂಗ್‌: ‘ಭಾರತದೊಂದಿಗೆ ‘ಸ್ಥಿರ ಮತ್ತು ಉತ್ತಮ ಬೆಳವಣಿಗೆ’ಯ ದ್ವಿಪಕ್ಷೀಯ ಸಂಬಂಧವನ್ನು ಹೊಂದಲು ಚೀನಾ ಸಿದ್ಧವಿದೆ’ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್‌ ಯಿ ಭಾನುವಾರ ಹೇಳಿದರು. ‘2020ರಿಂದ ಈಚೆಗೆ ಚೀನಾ–ಭಾರತ ಮಧ್ಯೆ ಉಲ್ಬಣಿಸಿರುವ ಗಡಿ ವಿವಾದ ಸಂಬಂಧ ಗಡಿಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಎರಡೂ ದೇಶಗಳು ಬದ್ಧವಾಗಿದೆ’ ಎಂದೂ ಹೇಳಿದರು. ಅಂತರರಾಷ್ಟ್ರೀಯ ಸ್ಥಿತಿಗತಿ ಮತ್ತು ಚೀನಾದ ವಿದೇಶಾಂಗ ಸಂಬಂಧ 2022 ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ‘ಭಾರತ ಹಾಗೂ ಚೀನಾವು ಯಾವಾಗಲೂ ರಾಜತಾಂತ್ರಿಕ ಮತ್ತು ಸೇನಾಮಟ್ಟದ ಸಂಪರ್ಕವನ್ನು

ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧಕ್ಕೆ ಸಿದ್ಧ: ಚೀನಾ Read More »

ನೇಪಾಳದಲ್ಲಿ ಭಾರತದ ವ್ಯಕ್ತಿಯ ಹತ್ಯೆ

ಕಠ್ಮಂಡು: ‘ದಕ್ಷಿಣ ಭಾಗದ ನೇಪಾಳದಲ್ಲಿ ಐವರು ಅನಾಮಧೇಯ ಬಂದೂಕುಧಾರಿಗಳು ಭಾರತದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ’ ಎಂದು ಪೊಲೀಸರು ಶನಿವಾರ ತಿಳಿಸಿದರು. ‘ಶಿವ ಪೂಜನ್‌ ಯಾದವ್‌ (45) ಹತ್ಯೆಯಾದ ವ್ಯಕ್ತಿ. ಮಹಾಗಧಿಮಯಿ ನಗರಸಭೆಯಲ್ಲಿ ಯಾದವ್‌ ಅವರ ಹತ್ಯೆ ಮಾಡಲಾಗಿದೆ. ಎರಡು ಬೈಕ್‌ಗಳಲ್ಲಿ ಬಂದ ಐವರು ಬಂದೂಕುಧಾರಿ ವ್ಯಕ್ತಿಗಳು ಯಾದವ್ ಅವರ ಮೇಲೆ ಗುಂಡು ಹಾರಿಸಿದರು. ಇದರ ಪರಿಣಾಮ ಯಾದವ್‌ ಅವರು ಗಂಭೀರವಾಗಿ ಗಾಯಗೊಂಡರು’ ಎಂದು ಪೊಲೀಸರು ವಿವರಿಸಿದರು. ‘ಘಟನೆ ನಡೆದ ತಕ್ಷಣದಲ್ಲಿ ಯಾದವ್‌ ಅವರನ್ನು ಹತ್ತಿರ

ನೇಪಾಳದಲ್ಲಿ ಭಾರತದ ವ್ಯಕ್ತಿಯ ಹತ್ಯೆ Read More »

ಕೋವಿಡ್ ಬಗ್ಗೆ ಹೆಚ್ಚು ಜಾಗರೂಕರಾಗಲು ‘ಮನ್ ಕಿ ಬಾತ್’ನಲ್ಲಿ ಮೋದಿ ಸಲಹೆ

ನವದೆಹಲಿ: ‘ಕೊರೊನಾ ವೈರಸ್‌ನ ಸೋಂಕು ಅನೇಕ ರಾಷ್ಟ್ರಗಳಲ್ಲಿ ಹರಡುತ್ತಿದೆ. ಹೀಗಾಗಿ ಜನರು ಕೋವಿಡ್‌–19ಗೆ ಸಂಬಂಧಿಸಿ ಹೆಚ್ಚು ಜಾಗರೂಕತೆ ವಹಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು. ಈ ವರ್ಷದ ಕೊನೆಯ ‘ಮನ್‌ ಕಿ ಬಾತ್‌’ನಲ್ಲಿ ಈ ವಿಷಯ ಕುರಿತು ಮಾತನಾಡಿದ ಅವರು, ‘ಕ್ರಿಸಮಸ್, ಹೊಸ ವರ್ಷಾಚರಣೆ ಅಥವಾ ರಜಾಕಾಲದ ಅಂಗವಾಗಿ ಸಾಕಷ್ಟು ಜನರು ಪ್ರವಾಸಕ್ಕೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮಾಸ್ಕ್‌ ಧರಿಸುವುದು, ಕೈಗಳನ್ನು ತೊಳೆದುಕೊಳ್ಳುವುದು ಸೇರಿದಂತೆ ಕೋವಿಡ್‌ಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದರು. ಸ್ಫೂರ್ತಿದಾಯಕ ವರ್ಷ

ಕೋವಿಡ್ ಬಗ್ಗೆ ಹೆಚ್ಚು ಜಾಗರೂಕರಾಗಲು ‘ಮನ್ ಕಿ ಬಾತ್’ನಲ್ಲಿ ಮೋದಿ ಸಲಹೆ Read More »

ಭಾರತದಲ್ಲಿ ಸಮುದಾಯ ಮಟ್ಟದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿ: ಸಿಸಿಎಂಬಿ

ಹೈದರಾಬಾದ್: ‘ಕೋವಿಡ್‌–19ಗೆ ಸಂಬಂಧಿಸಿ ಭಾರತದಲ್ಲಿ ಸಮುದಾಯ ಮಟ್ಟದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಯಾಗಿದೆ. ಹೀಗಾಗಿ, ಚೀನಾದಲ್ಲಿ ಈಗ ಆತಂಕಕ್ಕೆ ಕಾರಣವಾಗಿರುವ ವೈರಸ್‌ನ ಬಿಎಫ್‌.7 ಉಪತಳಿಯ ಸೋಂಕು ಭಾರತದಲ್ಲಿ ಗಂಭೀರ ಸ್ವರೂಪದ್ದಾಗಿರುವುದಿಲ್ಲ’ ವಿಜ್ಞಾನಿಗಳು ಹೇಳಿದ್ದಾರೆ. ‘ವೈರಸ್‌ನ ಯಾವುದೇ ರೂಪಾಂತರಿ ತಳಿಯಾದರೂ ಸರಿ ಎಲ್ಲರೂ ಕೋವಿಡ್‌ಗೆ ಸಂಬಂಧಿಸಿದ ಶಿಷ್ಟಾಚಾರವನ್ನು ಪಾಲಿಸುವುದು ಮುಖ್ಯ’ ಎಂದು ಸಿಎಸ್‌ಐಆರ್‌ನ ಅಂಗಸಂಸ್ಥೆಯಾದ ಸೆಂಟರ್‌ ಫಾರ್‌ ಸೆಲ್ಯುಲಾರ್ ಅಂಡ್‌ ಮಾಲೆಕ್ಯುಲಾರ್ ಬಯೋಲಜಿ (ಸಿಸಿಎಂಬಿ) ನಿರ್ದೇಶಕ ವಿನಯ್ ಕೆ. ನಂದಿಕೂರಿ ಹೇಳಿದ್ದಾರೆ. ‘ಕೊರೊನಾ ವೈರಸ್‌ನ ಎಲ್ಲ ರೂಪಾಂತರಿ ತಳಿಗಳು ವ್ಯಕ್ತಿಯ

ಭಾರತದಲ್ಲಿ ಸಮುದಾಯ ಮಟ್ಟದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿ: ಸಿಸಿಎಂಬಿ Read More »

ರಶ್ಯ: ವೃದ್ಧಾಶ್ರಮದಲ್ಲಿ ಬೆಂಕಿ ದುರಂತ 20 ಮಂದಿ ಮೃತ್ಯು

ಮಾಸ್ಕೊ: ರಶ್ಯದ ಸೈಬೀರಿಯಾ ಪ್ರಾಂತದ ಕೆಮೆರೊವೊ ನಗರದ ವೃದ್ಧಾಶ್ರಮದಲ್ಲಿ ಶುಕ್ರವಾರ ಸಂಭವಿಸಿದ ಬೆಂಕಿ ದುರಂತದಲ್ಲಿ 20 ಮಂದಿ ಮೃತಪಟ್ಟಿರುವುದಾಗಿ ತಾಸ್ ಸುದ್ಧಿಸಂಸ್ಥೆ ವರದಿ ಮಾಡಿದೆ. ಕಟ್ಟಡದ ಎರಡನೇ ಮಹಡಿ ಬೆಂಕಿಯಿಂದ ಸಂಪೂರ್ಣ ಸುಟ್ಟುಹೋಗಿದೆ. ಅಗ್ನಿಶಾಮಕ ಸಿಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ 20 ಮಂದಿ ಮೃತಪಟ್ಟಿದ್ದಾರೆ. ತಾಪಮಾನ ಕನಿಷ್ಟ ಮಟ್ಟಕ್ಕೆ ಇಳಿದಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ‘ತಾಸ್’ ವರದಿ ಮಾಡಿದೆ.

ರಶ್ಯ: ವೃದ್ಧಾಶ್ರಮದಲ್ಲಿ ಬೆಂಕಿ ದುರಂತ 20 ಮಂದಿ ಮೃತ್ಯು Read More »

ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವ ದಿ. 24ರಂದು ನಡೆಯಿತು. ಅಧ್ಯಕ್ಷತೆ ವಹಿಸಿದ್ಧ ಶಾಸಕ ಸಂಜೀವ ಮಠದೂರು ಮಾತನಾಡಿ,  364 ದಿನಗಳಲ್ಲಿ ಎಲ್ಲಾ ಸಿಗುವ ಒಂದು ದಿನವಂದರೆ ವಾರ್ಷಿಕೋತ್ಸವ. ಎಲ್ಲಾ ಮಕಳ ಪ್ರತಿಭೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ವರ್ಷದಲ್ಲಿ ಮಾಡಿರುವ ಸಾಧನೆಯನ್ನು, ಪ್ರತಿಭೆಯನ್ನು ಪ್ರದರ್ಶಿಸುವ ಅವಕಾಶ ವಾರ್ಷಿಕೋತ್ಸವದಲ್ಲಿ ಆಗುತ್ತದೆ.  ಒಂದು ಪಾರಂಪರಿಕ ಕಾಲೇಜು, 100 ವರ್ಷ ಇತಿಹಾಸ ಇರುವ ಕಾಲೇಜು, ಶಿವರಾಮ ಕಾರಂತರು ಓಡಾಡಿದ ನೆಲ, ಮೊಳಹಳ್ಳಿ ಶಿವರಾಯರ

ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ Read More »

ಮೌಲ್ಯಗಳು ಪ್ರತಿಯೊಬ್ಬನ ಬದುಕಿಗೂ ಆಧಾರ ಸ್ತಂಭ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಫ್ಯಾಕಲ್ಟಿ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಡಾ. ಗುರುರಾಜ ಕರಜಗಿ

ಪುತ್ತೂರು: ಬುದ್ಧಿಗೆ ಬೋಧಕವಾದ ವಿಚಾರಗಳು ಅಲ್ಪ ಸಮಯ ಮಾತ್ರ ಉಳಿದುಕೊಳ್ಳುತ್ತವೆ. ಆದರೆ ಮನಸ್ಸಿಗೆ ಬೋಧಕವಾದ ವಿಚಾರ ಶಾಶ್ವತವಾಗಿ ಉಳಿದುಕೊಳ್ಳುತ್ತವೆ. ಆದ್ದರಿಂದ ಮನಸ್ಸಿನಲ್ಲಿ ಅಚ್ಚೊತ್ತಬಹುದಾದ ಜೀವನ ಮೌಲ್ಯಗಳು ಪ್ರತಿಯೊಬ್ಬನಿಗೂ ಅತ್ಯಂತ ಅಗತ್ಯ. ಎಲ್ಲರ ಜೀವನದಲ್ಲೂ ಮೌಲ್ಯಗಳು ಮಹತ್ವದ ಪಾತ್ರ ವಹಿಸುತ್ತದೆ. ಅವುಗಳೇ ಬದುಕಿಗೆ ಆಧಾರ ಸ್ತಂಭಗಳಾಗಿವೆ. ನುಡಿದಂತೆ ನಡೆಯುವ, ನಡೆವಂತೆ ನುಡಿಯುವ ವ್ಯಕ್ತಿತ್ವ ಎಲ್ಲರಿಂದಲೂ ಗೌರವಕ್ಕೆ ಪಾತ್ರವಾಗುತ್ತದೆ ಎಂದು ಶಿಕ್ಷಣ ತಜ್ಞ, ಹಿರಿಯ ಪ್ರಾಧ್ಯಾಪಕ ಡಾ. ಗುರುರಾಜ ಕರಜಗಿ ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟಿನ ಬಪ್ಪಳಿಗೆ ಅಂಬಿಕಾ ಸಿ.ಬಿ.ಎಸ್.ಇ

ಮೌಲ್ಯಗಳು ಪ್ರತಿಯೊಬ್ಬನ ಬದುಕಿಗೂ ಆಧಾರ ಸ್ತಂಭ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಫ್ಯಾಕಲ್ಟಿ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಡಾ. ಗುರುರಾಜ ಕರಜಗಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

ಪುತ್ತೂರು: ಭಾರತದ ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್‌ ಅವರ ಜನ್ಮದಿನವನ್ನು ಡಿ. 22ರಂದು ರಾಷ್ಟ್ರೀಯ ಗಣಿತ ಶಾಸ್ತ್ರ ದಿನವಾಗಿ ಆಚರಿಸುತ್ತಿದ್ದು, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಗಣಿತ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ರಾಮಾನುಜನ್‌ ರವರ ವ್ಯಕ್ತಿತ್ವ ಹಾಗೂ ಸಾಧನೆಗಳ ಬಗ್ಗೆ ಉಪನ್ಯಾಸ, ವಿದ್ಯಾರ್ಥಿಗಳಿಗಾಗಿ ಸೆಮಿನಾರ್‌, ರಸಪ್ರಶ್ನೆ ಸ್ಪರ್ಧೆ ಕಾಲೇಜಿನಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ವಂ| ಲಾರೆನ್ಸ್‌ ಮಸ್ಕರೇಞಸ್‌ ಮಾತನಾಡಿ, ವಿದ್ಯಾರ್ಥಿಗಳು ಗಣಿತದಲ್ಲಿ ಮಹತ್ವದ ಸಾಧನೆಯನ್ನು ಮಾಡುವಂತೆ ಪ್ರೇರೇಪಿಸಿದರು. ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆ್ಯಂಟನಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ Read More »

error: Content is protected !!
Scroll to Top